ETV Bharat / state

ಮುಂದಿನ ಚುನಾವಣೆಗಿದು ದಿಕ್ಸೂಚಿ ಅಲ್ಲ, ಜನ ಬದಲಾವಣೆ ಬಯಸಿದ್ದಾರೆ: ಸಿದ್ದರಾಮಯ್ಯ - ಕಾಂಗ್ರೆಸ್​ನಲ್ಲಿ ನನ್ನ ವಿರೋಧಿಗಳಿಲ್ಲ ಎಂದ ಸಿದ್ದರಾಮಯ್ಯ

ಶಿಕ್ಷಕ ಹಾಗೂ ಪದವೀಧರ 4 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎರಡು ಕ್ಷೇತ್ರವನ್ನು ನಾವು ಗೆದ್ದುಕೊಂಡಿದ್ದೇವೆ. ನಮ್ಮದಲ್ಲದ ಎರಡು ಕ್ಷೇತ್ರವನ್ನು ಗೆದ್ದುಕೊಂಡ ಹಿನ್ನೆಲೆಯಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ಸಂಖ್ಯಾಬಲ ಹೆಚ್ಚಾಗಿದೆ. ಅಲ್ಲದೇ ಈ ಚುನಾವಣೆ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲದಿದ್ದರೂ, ಜನ ಬದಲಾವಣೆ ಬಯಸಿರುವುದಂತೂ ಸತ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah says there are no opponents in the Congress
ಸಿದ್ದರಾಮಯ್ಯ
author img

By

Published : Jun 16, 2022, 6:20 PM IST

Updated : Jun 16, 2022, 6:47 PM IST

ಬೆಂಗಳೂರು: ವಿಧಾನಪರಿಷತ್​ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ. ಆದ್ರೆ ಜನ ಬದಲಾವಣೆಯನ್ನು ಬಯಸಿದ್ದಾರೆ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಶಿಕ್ಷಕ ಹಾಗೂ ಪದವೀಧರ 4 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎರಡು ಕ್ಷೇತ್ರವನ್ನು ನಾವು ಗೆದ್ದುಕೊಂಡಿದ್ದೇವೆ. ನಮ್ಮದಲ್ಲದ ಎರಡು ಕ್ಷೇತ್ರವನ್ನು ಗೆದ್ದುಕೊಂಡ ಹಿನ್ನೆಲೆಯಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ಸಂಖ್ಯಾಬಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸೋಲಿನ ಭಯದಿಂದ ಶ್ರೀಕಂಠೇಗೌಡರು ಸ್ಪರ್ಧಿಸಿಲ್ಲ: ನಮ್ಮ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಸುಮಾರು 12,205 ಮತಗಳ‌ ಅಂತರದಿಂದ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ನಮ್ಮ ಸಮೀಪ ಅಭ್ಯರ್ಥಿ ಎಂ.ವಿ. ರವಿಶಂಕರ್ ಅವರಿಗೆ 33,848 ಮತಗಳು ಬಂದಿದ್ದು, ನಮ್ಮ ಅಭ್ಯರ್ಥಿಗೆ 46,073 ಮತಗಳು ಬಂದಿವೆ. ಜೆಡಿಎಸ್​ಗೆ 19,630 ಮತ ಬಂದಿದೆ. ಎರಡು ಬಾರಿ ಶ್ರೀಕಂಠೇಗೌಡ ಅವರು ಗೆದ್ದಿದ್ದರು. ಈ ಬಾರಿ ರಾಮು ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಬಹುಶಃ ಸೋಲಿನ ಭಯದಿಂದ ಶ್ರೀಕಂಠೇಗೌಡರು ಸ್ಪರ್ಧಿಸಿರಲಿಲ್ಲ ಎಂದು ಕಾಣುತ್ತೆ. ನಮ್ಮ ಪಕ್ಷದ ಅಭ್ಯರ್ಥಿಗಳು ಶಿಕ್ಷಕರ ಕ್ಷೇತ್ರದಿಂದ ಈ ಹಿಂದೆ ಗೆದ್ದಿದ್ದರು ಆದರೆ ಯಾವತ್ತೂ ದಕ್ಷಿಣ ಪದವೀಧರ ಕ್ಷೇತ್ರದಿಂದ ಗೆದ್ದಿರಲಿಲ್ಲ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಮತದಾರರಿಗೆ ಧನ್ಯವಾದ ಹೇಳಿದ ಸಿದ್ದು: ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಈ ಬಾರಿ ದಕ್ಷಿಣ ಪದವೀಧರ ಕ್ಷೇತ್ರದಿಂದ ಗೆದ್ದಿದ್ದು. ಜೆಡಿಎಸ್​ನವರು ಮತ್ತು ಬಿಜೆಪಿ ಅವರು ಇದನ್ನು ನಮ್ಮ ಭದ್ರಕೋಟೆ ಎಂದು ಹೇಳುತ್ತಿದ್ದರು. ಇಂಥಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನ ಅಭ್ಯರ್ಥಿ ಮಧು ಮಾದೇಗೌಡ ಅವರು ಗೆದ್ದಿದ್ದಾರೆ. ಅವರಿಗೆ ನಾನು ಅಭಿನಂದನೆಗಳನ್ನು ಹೇಳಲು ಬಯಸುತ್ತೇನೆ. ನಮ್ಮ ಅಭ್ಯರ್ಥಿಗೆ ಮತ ನೀಡಿದ ಪದವೀಧರ ಮತದಾರರಿಗೆ ಧನ್ಯವಾದಗಳು. 1 ಲಕ್ಷ 33 ಸಾವಿರ ಪದವೀಧರ ಮತದಾರರಿದ್ದರು. ನಮ್ಮ ಅಭ್ಯರ್ಥಿ ಇವರ ಮನ ಗೆಲ್ಲಲು ಯಶಸ್ವಿಯಾಗಿದ್ದಾರೆ. ನಮ್ಮ ಅಭ್ಯರ್ಥಿಯ ಗೆಲುವಿಗೆ ಸಂಘಟಿತ ಹೋರಾಟ ಕಾರಣ ಎಂದರು.

ಸಂಘಟಿತ ಹೋರಾಟದಿಂದ ಗೆಲುವು: ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಪದವೀಧರ ಮತದಾರರು ಮತ ಚಲಾಯಿಸಿದ್ದಾರೆ. ಈ ನಾಲ್ಕು ಜಿಲ್ಲೆಗಳ ಕಾರ್ಯಕರ್ತರು, ಪಕ್ಷದ ಅಧ್ಯಕ್ಷರುಗಳು, ಮಾಜಿ ಸಂಸದರು, ಶಾಸಕರು ಇವರೆಲ್ಲರ ಸಂಘಟಿತ ಹೋರಾಟದ ಮೂಲಕ ಚುನಾವಣೆ ಗೆದ್ದಿದ್ದೇವೆ. ಈ ಎಲ್ಲಾರಿಗೂ ನನ್ನ ಆತ್ಮೀಯ ಧನ್ಯವಾದಗಳು. ಇದೇ ರೀತಿ ಬೆಳಗಾವಿಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್‌ ಹುಕ್ಕೇರಿ ಅವರು ಮೊದಲ ಸುತ್ತಿನಲ್ಲೇ ಗೆಲುವಿನ ಕೋಟಾ ತಲುಪಿ ಗೆದ್ದಿದ್ದಾರೆ. ಚಲಾವಣೆಯಾದ 20,000 ಮತಗಳಲ್ಲಿ ನಮ್ಮ ಅಭ್ಯರ್ಥಿ 11,000 ಕ್ಕೂ ಅಧಿಕ ಮತ ಪಡೆದಿದ್ದಾರೆ. ಕಳೆದ ಎರಡು ಬಾರಿ ಅಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಶಹಾಪುರ್‌ ಅವರು ಗೆದ್ದಿದ್ದರು.

ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ ಬೆಳಗಾವಿ, ಬಿಜಾಪುರ, ಬಾಗಲಕೋಟೆ ಜಿಲ್ಲೆಗಳ ಎಲ್ಲಾ ಶಿಕ್ಷಕ ಬಂಧುಗಳಿಗೆ, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದಗಳು. ಉಳಿದ ಇನ್ನೆರಡು ಕ್ಷೇತ್ರಗಳಲ್ಲಿ ಸೋತಿದ್ದೇವೆ. ನಾವು ಈ ಮೊದಲು ನಾಲ್ಕೂ ಸ್ಥಾನಗಳಲ್ಲೂ ಇರಲಿಲ್ಲ. ಬಸವರಾಜ್‌ ಗುರಿಕಾರ್‌ ಅವರಿಗೆ ಸುಮಾರು 4,597 ಮತಗಳನ್ನು ಹಾಗೂ ಸುನೀಲ್‌ ಸಂಕ ಅವರಿಗೆ 10,122 ಮತಗಳನ್ನು ನೀಡಿದ್ದಾರೆ. ಇಲ್ಲಿ ನಮ್ಮ ಅಭ್ಯರ್ಥಿಗಳು ಸೋತಿದ್ದರೂ, ಇಷ್ಟು ಮತಗಳನ್ನು ನೀಡಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಹೇಳಿದರು.

ಬದಲಾವಣೆ ಬಯಸಿದ ಮತದಾರ: ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಕರು ಮತ್ತು ಪದವೀಧರ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂಬುದು ಈ ಫಲಿತಾಂಶದಿಂದ ಸ್ಪಷ್ಟವಾಗುತ್ತದೆ. ಬಿಜೆಪಿ ಪಕ್ಷ ನಾಲ್ಕೂ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂಬ ಜಂಭ ಹೊಡೆದಿದ್ದರು, ಮುಖ್ಯಮಂತ್ರಿಗಳೇ ಹೋಗಿ ಪ್ರಚಾರ ಮಾಡಿದ್ದರು. ನಮಗೆ ಸಂಪನ್ಮೂಲಗಳ ಕೊರತೆ ಇದ್ದಾಗ್ಯೂ ಪದವೀಧರರು ಮತ್ತು ಶಿಕ್ಷಕರು ನಮಗೆ ಆಶೀರ್ವಾದ ಮಾಡಿದ್ದಾರೆ. ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾದ ವಾತಾವರಣ ಇದೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ.

ಮತದಾರರಿಂದ ಕಾಂಗ್ರೆಸ್​ಗೆ ಆಶೀರ್ವಾದ: ದೇಶದ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರಗಳು ಅಧೋಗತಿಗೆ ತಂದಿವೆ. ರೈತರು, ಮಹಿಳೆಯರು, ಯುವಕರ ಸಮಸ್ಯೆಗಳು ಇಂದು ಬಹಳ ಬೃಹದಾಕಾರವಾಗಿ ಬೆಳೆಯುತ್ತಿದೆ. ಇದರಿಂದ ರಾಜಕೀಯ ಪ್ರಬುದ್ಧತೆ ಇರುವ ಮತದಾರರು ಕಾಂಗ್ರೆಸ್‌ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿಯೂ ಇದೇ ರೀತಿ ಜನ ಆಶೀರ್ವಾದ ಮಾಡುತ್ತಾರೆಂದು ಸ್ಪಷ್ಟವಾಗಿ ಕಾಣುತ್ತಿದೆ. ಬಿಜೆಪಿಯವರ ಕೋಮುವಾದ, ಧರ್ಮ ರಾಜಕಾರಣ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳು, ಸಂವಿಧಾನ ವಿರೋಧಿ ಕ್ರಮಗಳು, ಸೇಡಿನ ರಾಜಕೀಯದ ವಿರುದ್ಧವಾಗಿ ಜನ ನಮಗೆ ಮತ ನೀಡಿದ್ದಾರೆ.

ಸೇಡಿನ ರಾಜಕೀಯವನ್ನು, ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು ಜನ ಈ ಹಿಂದೆಯೂ ಒಪ್ಪಿಲ್ಲ, ಮುಂದೆಯೂ ಒಪ್ಪಲ್ಲ. ದೇಶ, ಸಂವಿಧಾನ, ರಾಜ್ಯ ಹಾಗೂ ಪ್ರಜಾಪ್ರಭುತ್ವಕ್ಕೆ ಆಪತ್ತು ಬಂದಾಗ ಜನ ಅವುಗಳ ರಕ್ಷಣೆಗೆ ನಿಲ್ಲುತ್ತಾರೆ ಎಂದು ಹಿಂದೆಯೂ ನೋಡಿದ್ದೇವೆ, ಮುಂದೆಯೂ ಹೀಗೆ ಆಗುತ್ತದೆ ಎಂದು ವಿವರಿಸಿದರು. ಬಸವರಾಜ ಹೊರಟ್ಟಿ ಅವರು ವೈಯಕ್ತಿಕ ವರ್ಚಸ್ಸಿನಿಂದ ಗೆದ್ದಿರುವುದು, ಬಿಜೆಪಿಯಿಂದ ನಿಂತಿದ್ದಕ್ಕಾಗಿ ಗೆದ್ದಿದ್ದಲ್ಲ. ಈ ಹಿಂದೆ ಅವರು ಜೆಡಿಎಸ್​ನಿಂದ 3 ಬಾರಿ ಗೆದ್ದಿದ್ದರು. ವಾಯುವ್ಯ ಪದವೀಧರರ ಕ್ಷೇತ್ರದಿಂದ ಬಲಿಷ್ಠ ಅಭ್ಯರ್ಥಿಯನ್ನು ನಮ್ಮಿಂದ ಹಾಕಲು ಆಗಲಿಲ್ಲ.

ಇದನ್ನೂ ಓದಿ: ದ.ಪದವೀಧರ ಕ್ಷೇತ್ರ: ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ.ಮಾದೇಗೌಡ ಜಯಭೇರಿ

ಕೊನೆ ಕ್ಷಣದಲ್ಲಿ ಒಬ್ಬರು ಲಾಯರ್‌ ಅವರನ್ನು ನಿಲ್ಲಿಸಿದ್ವಿ. ಗೆದ್ದ ಕಡೆಗಳೆಲ್ಲೆಲ್ಲ ದೊಡ್ಡ ಅಂತರದಲ್ಲಿ ಗೆದ್ದಿದ್ದೀವಿ. ನಾಲ್ಕೂ ಕಡೆಗಳಲ್ಲಿ ಈ ಮೊದಲು ಕಾಂಗ್ರೆಸ್‌ ಶೂನ್ಯದಲ್ಲಿತ್ತು, ಆದರೆ ಈ ಬಾರಿ ಎರಡು ಕಡೆ ಗೆದ್ದಿದ್ದೀವಿ. ಸೋತ ಅಭ್ಯರ್ಥಿ ತಾನು ನ್ಯಾಯವಾಗಿ ಸೋತೆ ಎಂದು ಹೇಳುತ್ತಾರಾ? ನಮ್ಮ ಅಭ್ಯರ್ಥಿ ಒಂದು ಬಾರಿ ಗೆದ್ದಿದ್ದಕ್ಕೆ ಹಣ ಖರ್ಚು ಮಾಡಿ ಗೆದ್ದಿದ್ದು ಎನ್ನುವುದಾದರೆ ಈ ಹಿಂದೆ ಅರುಣ್‌ ಶಹಾಪುರ್‌ ಎರಡು ಬಾರಿ ಗೆದ್ದಿದ್ರಲ್ಲ ಎಷ್ಟು ಹಣ ಖರ್ಚು ಮಾಡಿ ಗೆದ್ದಿದ್ದಂತೆ? ಇದು ಮತದಾರರಿಗೆ ಅವಮಾನ ಮಾಡಿದಂತೆ ಆಗಲ್ವಾ? ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದವರು ಬಿಜೆಪಿಯವರು, ನಾವಲ್ಲ ಎಂದು ವಿವರಿಸಿದರು.

ಕಾಲು ಎಳೆಯುವವರು ರಾಜಕೀಯದಲ್ಲಿ ಇರುತ್ತಾರೆ: ಕೋಲಾರ, ಬಾದಾಮಿ, ಕೊಪ್ಪಳ, ವರುಣಾ, ಚಾಮರಾಜಪೇಟೆ ಈ ಎಲ್ಲಾ ಕಡೆ ನನಗೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹತ್ತಾರು ಕಡೆ ಜನ ಕರೆಯುತ್ತಿದ್ದಾರೆ ಎಂದರೆ ನಾನು ಗೆಲ್ಲುತ್ತೇನೆ ಎಂದೇ ತಾನೇ ಕರೆಯುತ್ತಿರೋದು. ಕಾಲು ಎಳೆಯುವವರು ರಾಜಕೀಯದಲ್ಲಿ ಇದ್ದೇ ಇರುತ್ತಾರೆ. ನಮ್ಮ ಪಕ್ಷದಲ್ಲಿ ಯಾರೂ ಈ ತರದವರು ಇಲ್ಲ, ಯಾರನ್ನು ಕಂಡರೆ ಭಯ ಇರುತ್ತೆ ಅಂತವರ ಕಾಲೆಳೆಯೋಕೆ ಅಂತಲೇ ಪ್ರಯತ್ನ ಮಾಡುತ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆಕಿಚ್ಚು ಪಡುವವರು ಮಾತ್ರ ಈ ರೀತಿ ಮಾಡುತ್ತಾರೆ.

ನಮ್ಮ ಪಕ್ಷದಲ್ಲಿ ನನ್ನ ವಿರೋಧಿಗಳಿಲ್ಲ: ನಮ್ಮ ಪಕ್ಷದಲ್ಲಿ ಎಲ್ಲರೂ ಅಭಿಮಾನದಿಂದ ಕಾಣ್ತಾರೆ, ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ನಮ್ಮ ಪಕ್ಷದಲ್ಲಿ ಯಾರೂ ನನ್ನ ವಿರೋಧಿಗಳಿಲ್ಲ. ಬಿಜೆಪಿಯವರಂತೆ ನಮ್ಮ ಪಕ್ಷದವರು ಮಾತನಾಡಲ್ಲ ಎಂದು ನಾನು ಈ ಹಿಂದೆ ಹೇಳಿದ್ದೇನೆ. ನಾನು ಏನಾದ್ರೂ ಮಾತನಾಡಿದ್ರೆ ಇಪ್ಪತ್ತು ಜನ ಬಿಜೆಪಿಯವರು ನನ್ನ ಮೇಲೆ ಬರ್ತಾರೆ. ಈ ರೀತಿ ನಮ್ಮವರು ಮಾತನಾಡಲ್ಲ ಎಂದು ಹೇಳಿದ್ದೆ ಅಷ್ಟೇ. ಬಿಜೆಪಿ ಅವರು ಸುಳ್ಳು ಹೇಳೋದರಲ್ಲಿ ಮೊದಲಿಗರು. ಬಿಜೆಪಿ ಮತ್ತು ಜೆಡಿಎಸ್​ನವರು ನನ್ನ ಸಂಪರ್ಕದಲ್ಲಿ ಇರೋದು ನಿಜ. ಅದನ್ನು ಈಗಲೇ ಹೇಳೋಕಾಗಲ್ಲ. ಮುಂದೆ ಸಮಯ ಬಂದಾಗ ಹೇಳುತ್ತೇನೆ ಎಂದರು.

ರಾಜಕೀಯ ದ್ವೇಷದಿಂದ ಸುಳ್ಳು ಮೊಕದ್ದಮೆ ಹಾಕಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ನೇಣು ಹಾಕುತ್ತಿದ್ದಾರೆ. ಸಂವಿಧಾನದ ರೀತಿ ನಡೆದುಕೊಳ್ಳುತ್ತಿಲ್ಲ ಇದರ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಇಂದು ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಎಐಸಿಸಿ ಕಚೇರಿಯನ್ನು ಒಂದು ರೀತಿ ವಶಕ್ಕೆ ಪಡೆದಂತೆ ಅಲ್ಲಿದ್ದವರನ್ನು ಆಚೆಗಟ್ಟಿ, ಹಲ್ಲೆ ಮಾಡಲು ಇವರಿಗೆ ಅಧಿಕಾರ ಕೊಟ್ಟಿದ್ದು ಯಾರು? ತುರ್ತು ಪರಿಸ್ಥಿತಿಯಲ್ಲೂ ಈ ರೀತಿ ಆಗಿರಲಿಲ್ಲ. ಯಾರು ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಾರೆ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ, ಇದಕ್ಕೆ ವಿರುದ್ಧವಾಗಿ ನಾವು ಪ್ರತಿಭಟನೆ ಮಾಡಿದ್ದು ಎಂದು ಕಿಡಿಕಾರಿದರು.

ಬೆಂಗಳೂರು: ವಿಧಾನಪರಿಷತ್​ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ. ಆದ್ರೆ ಜನ ಬದಲಾವಣೆಯನ್ನು ಬಯಸಿದ್ದಾರೆ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಶಿಕ್ಷಕ ಹಾಗೂ ಪದವೀಧರ 4 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎರಡು ಕ್ಷೇತ್ರವನ್ನು ನಾವು ಗೆದ್ದುಕೊಂಡಿದ್ದೇವೆ. ನಮ್ಮದಲ್ಲದ ಎರಡು ಕ್ಷೇತ್ರವನ್ನು ಗೆದ್ದುಕೊಂಡ ಹಿನ್ನೆಲೆಯಲ್ಲಿ ವಿಧಾನಪರಿಷತ್ತಿನಲ್ಲಿ ನಮ್ಮ ಸಂಖ್ಯಾಬಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸೋಲಿನ ಭಯದಿಂದ ಶ್ರೀಕಂಠೇಗೌಡರು ಸ್ಪರ್ಧಿಸಿಲ್ಲ: ನಮ್ಮ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಸುಮಾರು 12,205 ಮತಗಳ‌ ಅಂತರದಿಂದ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ನಮ್ಮ ಸಮೀಪ ಅಭ್ಯರ್ಥಿ ಎಂ.ವಿ. ರವಿಶಂಕರ್ ಅವರಿಗೆ 33,848 ಮತಗಳು ಬಂದಿದ್ದು, ನಮ್ಮ ಅಭ್ಯರ್ಥಿಗೆ 46,073 ಮತಗಳು ಬಂದಿವೆ. ಜೆಡಿಎಸ್​ಗೆ 19,630 ಮತ ಬಂದಿದೆ. ಎರಡು ಬಾರಿ ಶ್ರೀಕಂಠೇಗೌಡ ಅವರು ಗೆದ್ದಿದ್ದರು. ಈ ಬಾರಿ ರಾಮು ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಬಹುಶಃ ಸೋಲಿನ ಭಯದಿಂದ ಶ್ರೀಕಂಠೇಗೌಡರು ಸ್ಪರ್ಧಿಸಿರಲಿಲ್ಲ ಎಂದು ಕಾಣುತ್ತೆ. ನಮ್ಮ ಪಕ್ಷದ ಅಭ್ಯರ್ಥಿಗಳು ಶಿಕ್ಷಕರ ಕ್ಷೇತ್ರದಿಂದ ಈ ಹಿಂದೆ ಗೆದ್ದಿದ್ದರು ಆದರೆ ಯಾವತ್ತೂ ದಕ್ಷಿಣ ಪದವೀಧರ ಕ್ಷೇತ್ರದಿಂದ ಗೆದ್ದಿರಲಿಲ್ಲ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಮತದಾರರಿಗೆ ಧನ್ಯವಾದ ಹೇಳಿದ ಸಿದ್ದು: ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಈ ಬಾರಿ ದಕ್ಷಿಣ ಪದವೀಧರ ಕ್ಷೇತ್ರದಿಂದ ಗೆದ್ದಿದ್ದು. ಜೆಡಿಎಸ್​ನವರು ಮತ್ತು ಬಿಜೆಪಿ ಅವರು ಇದನ್ನು ನಮ್ಮ ಭದ್ರಕೋಟೆ ಎಂದು ಹೇಳುತ್ತಿದ್ದರು. ಇಂಥಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನ ಅಭ್ಯರ್ಥಿ ಮಧು ಮಾದೇಗೌಡ ಅವರು ಗೆದ್ದಿದ್ದಾರೆ. ಅವರಿಗೆ ನಾನು ಅಭಿನಂದನೆಗಳನ್ನು ಹೇಳಲು ಬಯಸುತ್ತೇನೆ. ನಮ್ಮ ಅಭ್ಯರ್ಥಿಗೆ ಮತ ನೀಡಿದ ಪದವೀಧರ ಮತದಾರರಿಗೆ ಧನ್ಯವಾದಗಳು. 1 ಲಕ್ಷ 33 ಸಾವಿರ ಪದವೀಧರ ಮತದಾರರಿದ್ದರು. ನಮ್ಮ ಅಭ್ಯರ್ಥಿ ಇವರ ಮನ ಗೆಲ್ಲಲು ಯಶಸ್ವಿಯಾಗಿದ್ದಾರೆ. ನಮ್ಮ ಅಭ್ಯರ್ಥಿಯ ಗೆಲುವಿಗೆ ಸಂಘಟಿತ ಹೋರಾಟ ಕಾರಣ ಎಂದರು.

ಸಂಘಟಿತ ಹೋರಾಟದಿಂದ ಗೆಲುವು: ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಪದವೀಧರ ಮತದಾರರು ಮತ ಚಲಾಯಿಸಿದ್ದಾರೆ. ಈ ನಾಲ್ಕು ಜಿಲ್ಲೆಗಳ ಕಾರ್ಯಕರ್ತರು, ಪಕ್ಷದ ಅಧ್ಯಕ್ಷರುಗಳು, ಮಾಜಿ ಸಂಸದರು, ಶಾಸಕರು ಇವರೆಲ್ಲರ ಸಂಘಟಿತ ಹೋರಾಟದ ಮೂಲಕ ಚುನಾವಣೆ ಗೆದ್ದಿದ್ದೇವೆ. ಈ ಎಲ್ಲಾರಿಗೂ ನನ್ನ ಆತ್ಮೀಯ ಧನ್ಯವಾದಗಳು. ಇದೇ ರೀತಿ ಬೆಳಗಾವಿಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್‌ ಹುಕ್ಕೇರಿ ಅವರು ಮೊದಲ ಸುತ್ತಿನಲ್ಲೇ ಗೆಲುವಿನ ಕೋಟಾ ತಲುಪಿ ಗೆದ್ದಿದ್ದಾರೆ. ಚಲಾವಣೆಯಾದ 20,000 ಮತಗಳಲ್ಲಿ ನಮ್ಮ ಅಭ್ಯರ್ಥಿ 11,000 ಕ್ಕೂ ಅಧಿಕ ಮತ ಪಡೆದಿದ್ದಾರೆ. ಕಳೆದ ಎರಡು ಬಾರಿ ಅಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಶಹಾಪುರ್‌ ಅವರು ಗೆದ್ದಿದ್ದರು.

ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ ಬೆಳಗಾವಿ, ಬಿಜಾಪುರ, ಬಾಗಲಕೋಟೆ ಜಿಲ್ಲೆಗಳ ಎಲ್ಲಾ ಶಿಕ್ಷಕ ಬಂಧುಗಳಿಗೆ, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದಗಳು. ಉಳಿದ ಇನ್ನೆರಡು ಕ್ಷೇತ್ರಗಳಲ್ಲಿ ಸೋತಿದ್ದೇವೆ. ನಾವು ಈ ಮೊದಲು ನಾಲ್ಕೂ ಸ್ಥಾನಗಳಲ್ಲೂ ಇರಲಿಲ್ಲ. ಬಸವರಾಜ್‌ ಗುರಿಕಾರ್‌ ಅವರಿಗೆ ಸುಮಾರು 4,597 ಮತಗಳನ್ನು ಹಾಗೂ ಸುನೀಲ್‌ ಸಂಕ ಅವರಿಗೆ 10,122 ಮತಗಳನ್ನು ನೀಡಿದ್ದಾರೆ. ಇಲ್ಲಿ ನಮ್ಮ ಅಭ್ಯರ್ಥಿಗಳು ಸೋತಿದ್ದರೂ, ಇಷ್ಟು ಮತಗಳನ್ನು ನೀಡಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಹೇಳಿದರು.

ಬದಲಾವಣೆ ಬಯಸಿದ ಮತದಾರ: ಎಲ್ಲಕ್ಕಿಂತ ಮುಖ್ಯವಾಗಿ ಶಿಕ್ಷಕರು ಮತ್ತು ಪದವೀಧರ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂಬುದು ಈ ಫಲಿತಾಂಶದಿಂದ ಸ್ಪಷ್ಟವಾಗುತ್ತದೆ. ಬಿಜೆಪಿ ಪಕ್ಷ ನಾಲ್ಕೂ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂಬ ಜಂಭ ಹೊಡೆದಿದ್ದರು, ಮುಖ್ಯಮಂತ್ರಿಗಳೇ ಹೋಗಿ ಪ್ರಚಾರ ಮಾಡಿದ್ದರು. ನಮಗೆ ಸಂಪನ್ಮೂಲಗಳ ಕೊರತೆ ಇದ್ದಾಗ್ಯೂ ಪದವೀಧರರು ಮತ್ತು ಶಿಕ್ಷಕರು ನಮಗೆ ಆಶೀರ್ವಾದ ಮಾಡಿದ್ದಾರೆ. ಇದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾದ ವಾತಾವರಣ ಇದೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ.

ಮತದಾರರಿಂದ ಕಾಂಗ್ರೆಸ್​ಗೆ ಆಶೀರ್ವಾದ: ದೇಶದ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರಗಳು ಅಧೋಗತಿಗೆ ತಂದಿವೆ. ರೈತರು, ಮಹಿಳೆಯರು, ಯುವಕರ ಸಮಸ್ಯೆಗಳು ಇಂದು ಬಹಳ ಬೃಹದಾಕಾರವಾಗಿ ಬೆಳೆಯುತ್ತಿದೆ. ಇದರಿಂದ ರಾಜಕೀಯ ಪ್ರಬುದ್ಧತೆ ಇರುವ ಮತದಾರರು ಕಾಂಗ್ರೆಸ್‌ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿಯೂ ಇದೇ ರೀತಿ ಜನ ಆಶೀರ್ವಾದ ಮಾಡುತ್ತಾರೆಂದು ಸ್ಪಷ್ಟವಾಗಿ ಕಾಣುತ್ತಿದೆ. ಬಿಜೆಪಿಯವರ ಕೋಮುವಾದ, ಧರ್ಮ ರಾಜಕಾರಣ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳು, ಸಂವಿಧಾನ ವಿರೋಧಿ ಕ್ರಮಗಳು, ಸೇಡಿನ ರಾಜಕೀಯದ ವಿರುದ್ಧವಾಗಿ ಜನ ನಮಗೆ ಮತ ನೀಡಿದ್ದಾರೆ.

ಸೇಡಿನ ರಾಜಕೀಯವನ್ನು, ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು ಜನ ಈ ಹಿಂದೆಯೂ ಒಪ್ಪಿಲ್ಲ, ಮುಂದೆಯೂ ಒಪ್ಪಲ್ಲ. ದೇಶ, ಸಂವಿಧಾನ, ರಾಜ್ಯ ಹಾಗೂ ಪ್ರಜಾಪ್ರಭುತ್ವಕ್ಕೆ ಆಪತ್ತು ಬಂದಾಗ ಜನ ಅವುಗಳ ರಕ್ಷಣೆಗೆ ನಿಲ್ಲುತ್ತಾರೆ ಎಂದು ಹಿಂದೆಯೂ ನೋಡಿದ್ದೇವೆ, ಮುಂದೆಯೂ ಹೀಗೆ ಆಗುತ್ತದೆ ಎಂದು ವಿವರಿಸಿದರು. ಬಸವರಾಜ ಹೊರಟ್ಟಿ ಅವರು ವೈಯಕ್ತಿಕ ವರ್ಚಸ್ಸಿನಿಂದ ಗೆದ್ದಿರುವುದು, ಬಿಜೆಪಿಯಿಂದ ನಿಂತಿದ್ದಕ್ಕಾಗಿ ಗೆದ್ದಿದ್ದಲ್ಲ. ಈ ಹಿಂದೆ ಅವರು ಜೆಡಿಎಸ್​ನಿಂದ 3 ಬಾರಿ ಗೆದ್ದಿದ್ದರು. ವಾಯುವ್ಯ ಪದವೀಧರರ ಕ್ಷೇತ್ರದಿಂದ ಬಲಿಷ್ಠ ಅಭ್ಯರ್ಥಿಯನ್ನು ನಮ್ಮಿಂದ ಹಾಕಲು ಆಗಲಿಲ್ಲ.

ಇದನ್ನೂ ಓದಿ: ದ.ಪದವೀಧರ ಕ್ಷೇತ್ರ: ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ.ಮಾದೇಗೌಡ ಜಯಭೇರಿ

ಕೊನೆ ಕ್ಷಣದಲ್ಲಿ ಒಬ್ಬರು ಲಾಯರ್‌ ಅವರನ್ನು ನಿಲ್ಲಿಸಿದ್ವಿ. ಗೆದ್ದ ಕಡೆಗಳೆಲ್ಲೆಲ್ಲ ದೊಡ್ಡ ಅಂತರದಲ್ಲಿ ಗೆದ್ದಿದ್ದೀವಿ. ನಾಲ್ಕೂ ಕಡೆಗಳಲ್ಲಿ ಈ ಮೊದಲು ಕಾಂಗ್ರೆಸ್‌ ಶೂನ್ಯದಲ್ಲಿತ್ತು, ಆದರೆ ಈ ಬಾರಿ ಎರಡು ಕಡೆ ಗೆದ್ದಿದ್ದೀವಿ. ಸೋತ ಅಭ್ಯರ್ಥಿ ತಾನು ನ್ಯಾಯವಾಗಿ ಸೋತೆ ಎಂದು ಹೇಳುತ್ತಾರಾ? ನಮ್ಮ ಅಭ್ಯರ್ಥಿ ಒಂದು ಬಾರಿ ಗೆದ್ದಿದ್ದಕ್ಕೆ ಹಣ ಖರ್ಚು ಮಾಡಿ ಗೆದ್ದಿದ್ದು ಎನ್ನುವುದಾದರೆ ಈ ಹಿಂದೆ ಅರುಣ್‌ ಶಹಾಪುರ್‌ ಎರಡು ಬಾರಿ ಗೆದ್ದಿದ್ರಲ್ಲ ಎಷ್ಟು ಹಣ ಖರ್ಚು ಮಾಡಿ ಗೆದ್ದಿದ್ದಂತೆ? ಇದು ಮತದಾರರಿಗೆ ಅವಮಾನ ಮಾಡಿದಂತೆ ಆಗಲ್ವಾ? ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿದವರು ಬಿಜೆಪಿಯವರು, ನಾವಲ್ಲ ಎಂದು ವಿವರಿಸಿದರು.

ಕಾಲು ಎಳೆಯುವವರು ರಾಜಕೀಯದಲ್ಲಿ ಇರುತ್ತಾರೆ: ಕೋಲಾರ, ಬಾದಾಮಿ, ಕೊಪ್ಪಳ, ವರುಣಾ, ಚಾಮರಾಜಪೇಟೆ ಈ ಎಲ್ಲಾ ಕಡೆ ನನಗೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹತ್ತಾರು ಕಡೆ ಜನ ಕರೆಯುತ್ತಿದ್ದಾರೆ ಎಂದರೆ ನಾನು ಗೆಲ್ಲುತ್ತೇನೆ ಎಂದೇ ತಾನೇ ಕರೆಯುತ್ತಿರೋದು. ಕಾಲು ಎಳೆಯುವವರು ರಾಜಕೀಯದಲ್ಲಿ ಇದ್ದೇ ಇರುತ್ತಾರೆ. ನಮ್ಮ ಪಕ್ಷದಲ್ಲಿ ಯಾರೂ ಈ ತರದವರು ಇಲ್ಲ, ಯಾರನ್ನು ಕಂಡರೆ ಭಯ ಇರುತ್ತೆ ಅಂತವರ ಕಾಲೆಳೆಯೋಕೆ ಅಂತಲೇ ಪ್ರಯತ್ನ ಮಾಡುತ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆಕಿಚ್ಚು ಪಡುವವರು ಮಾತ್ರ ಈ ರೀತಿ ಮಾಡುತ್ತಾರೆ.

ನಮ್ಮ ಪಕ್ಷದಲ್ಲಿ ನನ್ನ ವಿರೋಧಿಗಳಿಲ್ಲ: ನಮ್ಮ ಪಕ್ಷದಲ್ಲಿ ಎಲ್ಲರೂ ಅಭಿಮಾನದಿಂದ ಕಾಣ್ತಾರೆ, ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ನಮ್ಮ ಪಕ್ಷದಲ್ಲಿ ಯಾರೂ ನನ್ನ ವಿರೋಧಿಗಳಿಲ್ಲ. ಬಿಜೆಪಿಯವರಂತೆ ನಮ್ಮ ಪಕ್ಷದವರು ಮಾತನಾಡಲ್ಲ ಎಂದು ನಾನು ಈ ಹಿಂದೆ ಹೇಳಿದ್ದೇನೆ. ನಾನು ಏನಾದ್ರೂ ಮಾತನಾಡಿದ್ರೆ ಇಪ್ಪತ್ತು ಜನ ಬಿಜೆಪಿಯವರು ನನ್ನ ಮೇಲೆ ಬರ್ತಾರೆ. ಈ ರೀತಿ ನಮ್ಮವರು ಮಾತನಾಡಲ್ಲ ಎಂದು ಹೇಳಿದ್ದೆ ಅಷ್ಟೇ. ಬಿಜೆಪಿ ಅವರು ಸುಳ್ಳು ಹೇಳೋದರಲ್ಲಿ ಮೊದಲಿಗರು. ಬಿಜೆಪಿ ಮತ್ತು ಜೆಡಿಎಸ್​ನವರು ನನ್ನ ಸಂಪರ್ಕದಲ್ಲಿ ಇರೋದು ನಿಜ. ಅದನ್ನು ಈಗಲೇ ಹೇಳೋಕಾಗಲ್ಲ. ಮುಂದೆ ಸಮಯ ಬಂದಾಗ ಹೇಳುತ್ತೇನೆ ಎಂದರು.

ರಾಜಕೀಯ ದ್ವೇಷದಿಂದ ಸುಳ್ಳು ಮೊಕದ್ದಮೆ ಹಾಕಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ನೇಣು ಹಾಕುತ್ತಿದ್ದಾರೆ. ಸಂವಿಧಾನದ ರೀತಿ ನಡೆದುಕೊಳ್ಳುತ್ತಿಲ್ಲ ಇದರ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಇಂದು ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಎಐಸಿಸಿ ಕಚೇರಿಯನ್ನು ಒಂದು ರೀತಿ ವಶಕ್ಕೆ ಪಡೆದಂತೆ ಅಲ್ಲಿದ್ದವರನ್ನು ಆಚೆಗಟ್ಟಿ, ಹಲ್ಲೆ ಮಾಡಲು ಇವರಿಗೆ ಅಧಿಕಾರ ಕೊಟ್ಟಿದ್ದು ಯಾರು? ತುರ್ತು ಪರಿಸ್ಥಿತಿಯಲ್ಲೂ ಈ ರೀತಿ ಆಗಿರಲಿಲ್ಲ. ಯಾರು ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಾರೆ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ, ಇದಕ್ಕೆ ವಿರುದ್ಧವಾಗಿ ನಾವು ಪ್ರತಿಭಟನೆ ಮಾಡಿದ್ದು ಎಂದು ಕಿಡಿಕಾರಿದರು.

Last Updated : Jun 16, 2022, 6:47 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.