ETV Bharat / state

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ 2885 ಕೋಟಿ ರೂ. ಸಾಲ: ಪುಟ್ಟರಂಗಶೆಟ್ಟಿ - undefined

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವನ್ನು ಸಚಿವ ಸಿ. ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 2885.79 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ತಿಳಿಸಿದರು.

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ
author img

By

Published : Jun 7, 2019, 5:38 AM IST

ಬೆಂಗಳೂರು : 2018-19 ನೇ ಸಾಲಿನಲ್ಲಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ 2885.79 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟನೆ

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟಿಸಿ ಅವರು ಮಾತನಾಡಿದರು. ಈ ನಿಗಮದಡಿ 10,36,581 ಮಂದಿ ಅನುಕೂಲ ಪಡೆದಿದ್ದಾರೆ ಎಂದರು.

ಗಂಗಾ ಕಲ್ಯಾಣ ಯೋಜನೆ ಪ್ರಾರಂಭವಾದಾಗಿನಿಂದ 2018 -19 ನೇ ಸಾಲಿನವರೆಗೆ 68,459 ಸಣ್ಣ ಮತ್ತು ಅತಿ ಸಣ್ಣ ರೈತರ 1,61,563.24 ಎಕರೆ ಜಮೀನಿಗೆ 729.38 ಕೋಟಿ ರೂ. ವೆಚ್ಚದಲ್ಲಿ52,104 ಕೊಳವೆ ಬಾವಿಗಳನ್ನು ಕೊರೆಸಿ ಮೋಟಾರ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಇದು ನಿಗಮದ ಮಹತ್ವದ ಹೆಗ್ಗಳಿಕೆ. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಯೋಜನೆ ಆರಂಭವಾದಾಗಿನಿಂದ ಈವರೆಗೆ 30,620 ಮಂದಿಗೆ 80 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಲ ಹಾಗೂ ಭೂ ಖರೀದಿ ಸೇರಿದಂತೆ ನಾನಾ ಯೋಜನೆಗಳ ಮೂಲಕ ವಿವಿಧ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ನಿಗಮ 250 ಕೋಟಿ ರೂ. ವೆಚ್ಚದಲ್ಲಿ 27,178 ಮಂದಿಗೆ ವಿವಿಧ ಸಾಲ ಸೌಲಭ್ಯ ಒದಗಿಸುವ ಮೂಲಕ ಹಿಂದುಳಿದ ವರ್ಗಗಳ ಬಡವರ ಆರ್ಥಿಕ ಅಭಿವೃದ್ಧಿಯ ಸಂಕಲ್ಪ ಮಾಡಿದೆ. ಮುಂದಿನ ದಿನಗಳಲ್ಲಿ ಇದೇ ಮಾದರಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತದೆ. ಇದೀಗ ಆರ್ಯವೈಶ್ಯ ನಿಗಮ ಕೂಡ ನೂತನವಾಗಿ ಸ್ಥಾಪಿತವಾಗಿದ್ದು, ನಿಗಮ ಹಾಗೂ ನಿಗಮದ ಅಧ್ಯಕ್ಷ ಶರವಣ ಅವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುವುದಾಗಿ ಪುಟ್ಟರಂಗಶೆಟ್ಟಿ ತಿಳಿಸಿದರು.

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಎ. ಶರವಣ ಮಾತನಾಡಿ, ನಮ್ಮ ಸಮುದಾಯವನ್ನು ಜಾತಿ ಪಟ್ಟಿಗೆ ಸೇರಿಸುವ ಕಾರ್ಯ ಯಶಸ್ವಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ನಮ್ಮ ಸಮುದಾಯದಲ್ಲಿ ಎಲ್ಲರೂ ಶ್ರೀಮಂತರಿಲ್ಲ ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ಅನ್ನದಾನಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಬೆಂಗಳೂರು : 2018-19 ನೇ ಸಾಲಿನಲ್ಲಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ 2885.79 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟನೆ

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟಿಸಿ ಅವರು ಮಾತನಾಡಿದರು. ಈ ನಿಗಮದಡಿ 10,36,581 ಮಂದಿ ಅನುಕೂಲ ಪಡೆದಿದ್ದಾರೆ ಎಂದರು.

ಗಂಗಾ ಕಲ್ಯಾಣ ಯೋಜನೆ ಪ್ರಾರಂಭವಾದಾಗಿನಿಂದ 2018 -19 ನೇ ಸಾಲಿನವರೆಗೆ 68,459 ಸಣ್ಣ ಮತ್ತು ಅತಿ ಸಣ್ಣ ರೈತರ 1,61,563.24 ಎಕರೆ ಜಮೀನಿಗೆ 729.38 ಕೋಟಿ ರೂ. ವೆಚ್ಚದಲ್ಲಿ52,104 ಕೊಳವೆ ಬಾವಿಗಳನ್ನು ಕೊರೆಸಿ ಮೋಟಾರ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಇದು ನಿಗಮದ ಮಹತ್ವದ ಹೆಗ್ಗಳಿಕೆ. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಯೋಜನೆ ಆರಂಭವಾದಾಗಿನಿಂದ ಈವರೆಗೆ 30,620 ಮಂದಿಗೆ 80 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಲ ಹಾಗೂ ಭೂ ಖರೀದಿ ಸೇರಿದಂತೆ ನಾನಾ ಯೋಜನೆಗಳ ಮೂಲಕ ವಿವಿಧ ಸೌಲಭ್ಯ ಒದಗಿಸಲಾಗಿದೆ ಎಂದು ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ನಿಗಮ 250 ಕೋಟಿ ರೂ. ವೆಚ್ಚದಲ್ಲಿ 27,178 ಮಂದಿಗೆ ವಿವಿಧ ಸಾಲ ಸೌಲಭ್ಯ ಒದಗಿಸುವ ಮೂಲಕ ಹಿಂದುಳಿದ ವರ್ಗಗಳ ಬಡವರ ಆರ್ಥಿಕ ಅಭಿವೃದ್ಧಿಯ ಸಂಕಲ್ಪ ಮಾಡಿದೆ. ಮುಂದಿನ ದಿನಗಳಲ್ಲಿ ಇದೇ ಮಾದರಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತದೆ. ಇದೀಗ ಆರ್ಯವೈಶ್ಯ ನಿಗಮ ಕೂಡ ನೂತನವಾಗಿ ಸ್ಥಾಪಿತವಾಗಿದ್ದು, ನಿಗಮ ಹಾಗೂ ನಿಗಮದ ಅಧ್ಯಕ್ಷ ಶರವಣ ಅವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುವುದಾಗಿ ಪುಟ್ಟರಂಗಶೆಟ್ಟಿ ತಿಳಿಸಿದರು.

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಎ. ಶರವಣ ಮಾತನಾಡಿ, ನಮ್ಮ ಸಮುದಾಯವನ್ನು ಜಾತಿ ಪಟ್ಟಿಗೆ ಸೇರಿಸುವ ಕಾರ್ಯ ಯಶಸ್ವಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ನಮ್ಮ ಸಮುದಾಯದಲ್ಲಿ ಎಲ್ಲರೂ ಶ್ರೀಮಂತರಿಲ್ಲ ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ಅನ್ನದಾನಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Intro:newsBody:ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಡಿ 2885.79 ಕೋಟಿ ರು ಸಾಲ ನೀಡಲಾಗಿದೆ: ಪುಟ್ಟರಂಗಶೆಟ್ಟಿ

ಬೆಂಗಳೂರು: 2018-19 ನೇ ಸಾಲಿನವರೆಗೆ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಡಿ 2885.79 ಕೋಟಿ ರು ಸಾಲ ನೀಡಲಾಗಿದೆ ಎಂದು ಸಚಿವ ಸಿ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಉದ್ಘಾಟಿಸಿ ಮಾತನಾಡಿ, ಈ ನಿಗಮದ ಅಡಿ 10,36,581 ಮಂದಿ ಅನುಕೂಲ ಪಡೆದಿದ್ದಾರೆ. ಗಂಗಾ ಕಲ್ಯಾಣ ಯೋಜನೆ ಪ್ರಾರಂಭವಾದಾಗಿನಿಂದ 2018 -19 ನೇ ಸಾಲಿನ ವರೆಗೆ 6845 9ಸಣ್ಣ ಮತ್ತು ಅತಿ ಸಣ್ಣ ರೈತರ 1,61,563.24 ಎಕರೆ ಜಮೀನಿಗೆ 729 .38 ಕೋಟಿ ರು ವೆಚ್ಚದಲ್ಲಿ52104 ಕೊಳವೆ ಬಾವಿಯನ್ನ ಕೊರೆಸಿ ಪಂಪು ಮೋಟರ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಇದು ನಿಗಮದ ಮಹತ್ವದ ಹೆಗ್ಗಳಿಕೆ. ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಯೋಜನೆ ಆರಂಭವಾದಾಗಿನಿಂದ ಈವರೆಗೆ30620 ಮಂದಿ ಈ ಜನಾಂಗದವರಿಗೆ 80 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಲ ಹಾಗೂ ಭೂ ಖರೀದಿ ಸೇರಿದಂತೆ ನಾನಾ ಯೋಜನೆಗಳ ಮೂಲಕ ವಿವಿಧ ಸೌಲಭ್ಯ ಒದಗಿಸಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ನಿಗಮ 250 ಕೋಟಿ ರು ವೆಚ್ಚದಲ್ಲಿ 27178 ಮಂದಿಗೆ ವಿವಿಧ ಸಾಲ ಸೌಲಭ್ಯ ಒದಗಿಸುವ ಮೂಲಕ ಹಿಂದುಳಿದ ವರ್ಗಗಳ ಬಡವರ ಆರ್ಥಿಕ ಅಭಿವೃದ್ಧಿಯ ಸಂಕಲ್ಪ ಮಾಡಿದೆ ಮುಂದಿನ ದಿನಗಳಲ್ಲಿ ಇದೇ ಮಾದರಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಸಾಗುತ್ತೇವೆ. ಇದೀಗ ಆರ್ಯವೈಶ್ಯ ನಿಗಮ ಕೂಡ ನೂತನವಾಗಿ ಸ್ಥಾಪಿತವಾಗಿದ್ದು ನಿಗಮ ಹಾಗೂ ನಿಗಮದ ಅಧ್ಯಕ್ಷ ಶರವಣ ಅವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಎ. ಶರವಣ ಮಾತನಾಡಿ, ನಮ್ಮ ಸಮುದಾಯವನ್ನು ಜಾತಿ ಪಟ್ಟಿಗೆ ಸೇರಿಸುವ ಕಾರ್ಯ ಯಶಸ್ವಿಯಾಗಿದೆ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದೆ. ನಮ್ಮ ಸಮುದಾಯದಲ್ಲಿ ಎಲ್ಲರೂ ಶ್ರೀಮಂತರಿಲ್ಲ. ಶೆಟ್ರು ಅಂದರೆ ಶ್ರೀಮಂತರೆಂಬ ಭಾವನೆ ಇದೆ. ನಾನು ಶಾಸಕನಾದ ನಂತರ ಸಾವಿರಾರು ಕಿ.ಮಿ. ಸಂಚರಿಸಿ ಸಮುದಾಯದ ಕಡು ಬಡವರ ಪಟ್ಟಿ ಸಿದ್ಧಪಡಿಸಿ ನೀಡಿದೆ. ಸಮುದಾಯದ ಕಲ್ಯಾಣಕ್ಕೆ ಆರ್ಯ ವೈಶ್ಯ ನಿಗಮ ಸ್ಥಾಪಿಸಲಾಗಿದೆ. ಸಿಎಂ 11 ಕೋಟಿ ರೂ ಹಣ ಮೀಸಲಿಟ್ಟಿದ್ದರು, ಕಷ್ಟ, ಇಷ್ಟ ಪಟ್ಟು ಓಡಾಡಿ ಇಂದು ನಿಗಮ ಸ್ಥಾಪನೆ ಆಗಿದೆ. ಅಧಿಕಾರಿಗಳಿಂದ ಸರಿಯಾದ ಸ್ಪಂಧನೆ ಸಿಗಲಿಲ್ಲ. ನಮ್ಮ ಸಮುದಾಯ ಇನ್ನೊಬ್ಬರ ಮುಂದೆ ಕೈಚಾಚುವ ವಂಶವಲ್ಲ. ನಮ್ಮ ಸಮಾಜದ ನಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಮ್ಮ ಸಮುದಾಯದ ಸಣ್ಣ ವ್ಯಾಪಾರಿಗಳು ಮನೆ ಸೇರಿದ್ದಾರೆ. ಇವರಿಗೆ ಸಾಲ ಸೌಲಭ್ಯ ನೀಡಿ ಮೇಲ್ಪಂಕ್ತಿಗೆ ತರುವ ಯತ್ನ ಮಾಡುತ್ತೇವೆ. ವಾಸವಿ ಜಯಂತಿಯನ್ನೂ ಸರ್ಕಾರದ ವತಿಯಿಂದ ಆಚರಿಸಲು ಮನವಿ ಮಾಡಿದ್ದೇನೆ. ಅದಕ್ಕೂ ಸಿಎಂ ಒಪ್ಪುವ ನಿರೀಕ್ಷೆ ಹೊಂದಿದ್ದೇನೆ. ಸಮಾಜದ ಆದಾಯ, ಜಾತಿ ಪ್ರಮಾಣಪತ್ರ ಎಲ್ಲಾ ತಾಲ್ಲೂಕು ಕಚೇರಿಯಲ್ಲಿ ಸಿಗುವಂತೆ ಮಾಡಿಕೊಡಿ, ಶಿಕ್ಷಣ ಪಡೆಯಲು ಪರ ಊರಿಗೆ ಬರುವವರಿಗೆ ಹಾಸ್ಟೆಲ್ ನಿರ್ಮಾಣಕ್ಕೆ ಬೆಂಗಳೂರು ಇಲ್ಲವೇ ಸಮೀಪದಲ್ಲಿ 10 ಎಕರೆಭೂಮಿ ಕೊಡಿ ಎಂದು ಸರ್ಕಾರಕ್ಕೆ ಮಾಡುತ್ತೇನೆ ಎಂದರು.
ನಿಗಮಕ್ಕೆ 100 ಕೋಟಿ ಅನುದಾನದ ಅಗತ್ಯವಿದೆ. ಶೇ.4 ರಷ್ಟು ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುತ್ತೇವೆ. ಸರ್ಕಾರ ಸಮುದಾಯದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡಬೇಂದು ಆಶಿಸಿದರು.
ಶಾಸಕರಾದ ಕೆ. ಅನ್ನದಾನಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತರಾಜು ಇದ್ದರು.Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.