ETV Bharat / state

ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ.. ಆಕಾಂಕ್ಷಿಗಳಿಂದ ಮುಂದುವರಿದ ಮಂತ್ರಿಗಿರಿ ಲಾಬಿ

author img

By

Published : Dec 31, 2019, 5:26 PM IST

Updated : Dec 31, 2019, 7:13 PM IST

ಮಕರ ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಹಾಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಯಡಿಯೂರಪ್ಪ ಜತೆ ಮಂತ್ರಿಗಿರಿಗಾಗಿ ಕಸರತ್ತು ಮುಂದುವರೆಸಿದ್ದಾರೆ. ಇಂದು ಕೂಡ ಸಿಎಂ ಬಿಎಸ್​ವೈ ನಿವಾಸಕ್ಕೆ ಉಮೇಶ್​ ಕತ್ತಿ, ಅನರ್ಹ ಶಾಸಕರಾದ ಎಂಟಿಬಿ ನಾಗರಾಜ್​, ಆರ್​.ಶಂಕರ್​ ಭೇಟಿ ನೀಡಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.

ಆಂಕಾಂಕ್ಷಿಗಳಿಂದ ಮುಂದುವರಿದ ಮಂತ್ರಿಗಿರಿ ಲಾಭಿ
ಆಂಕಾಂಕ್ಷಿಗಳಿಂದ ಮುಂದುವರಿದ ಮಂತ್ರಿಗಿರಿ ಲಾಭಿ

ಬೆಂಗಳೂರು: ಮಕರ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ಈ ಹಿಲ್ಲೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಯಡಿಯೂರಪ್ಪ ಜೊತೆ ಮಂತ್ರಿಗಿರಿಗಾಗಿ ಕಸರತ್ತು ಮುಂದುವರೆಸಿದ್ದಾರೆ.

ಉಮೇಶ್ ಕತ್ತಿ ಪದೇಪದೆ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ. ಇಂದು ಮತ್ತೊಮ್ಮೆ ಡಾಲರ್ಸ್ ಕಾಲೋನಿಯ ಸಿಎಂ ಬಿಎಸ್​ವೈ ನಿವಾಸಕ್ಕೆ ಆಗಮಿಸಿದ ಕತ್ತಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಜೊತೆಗೆ ಬಿಎಸ್‌ವೈ ನಿವಾಸಕ್ಕೆ ಮಾಜಿ ಸಚಿವರಾದ ಆರ್.ಶಂಕರ್ ಹಾಗೂ ಎಂಟಿಬಿ ನಾಗರಾಜ್‌ ಕೂಡ ಭೇಟಿ ನೀಡಿ ಸಚಿವ ಸ್ಥಾನಕ್ಕಾಗಿ ತಮ್ಮ ಲಾಬಿ ನಡೆಸಿದ್ದಾರೆ. ಸಂಪುಟ ವಿಸ್ತರಣೆ ವೇಳೆ ತಮ್ಮನ್ನು ಪರಿಗಣಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಆಂಕಾಂಕ್ಷಿಗಳಿಂದ ಮುಂದುವರಿದ ಮಂತ್ರಿಗಿರಿ ಲಾಬಿ..

ಅನರ್ಹ ಶಾಸಕ ಆರ್​.ಶಂಕರ್​ನ್ನು ಎಂಎಲ್​ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಹೀಗಾಗಿ ವಿಧಾನ ಪರಿಷತ್​ನಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್‌ರಿಂದ ತೆರವಾದ ಎಂಎಲ್‌ಸಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗ್ತಿದೆ.

ಆದರೆ, ವಿಧಾನ ಪರಿಷತ್​ನಲ್ಲಿ ಉಳಿದಿರುವ ಒಂದು ಸ್ಥಾನವನ್ನು ಡಿಸಿಎಂ ಲಕ್ಷಣ ಸವದಿಗೆ ನೀಡಲು ಸಿಎಂ ಒಲವು ತೋರಿಸಿದ್ದಾರೆ. ಸವದಿ ಡಿಸಿಎಂ ಸ್ಥಾನ ಉಳಿಯಬೇಕಾದರೆ ಆರು ತಿಂಗಳ ಒಳಗಾಗಿ ಪರಿಷತ್​ ಸದಸ್ಯರಾಗಿ ಆಯ್ಕೆಯಾಗಬೇಕು. ಈ ಅವಧಿ ಈಗಾಗಲೇ ಮುಗಿಯುತ್ತಾ ಬಂದಿದೆ. ಹೀಗಾಗಿ ಸವದಿ ಸ್ಥಾನವನ್ನು ಭದ್ರಪಡಿಸಲು ಸಿಎಂ ಯೋಚಿಸಿದ್ದಾರೆ. ಆದರೆ, ಪರಿಷತ್​ ಸ್ಥಾನವನ್ನು ತನಗೇ ನೀಡಬೇಕು ಎಂದು ಆರ್​.ಶಂಕರ್​ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಮಕರ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ಈ ಹಿಲ್ಲೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಯಡಿಯೂರಪ್ಪ ಜೊತೆ ಮಂತ್ರಿಗಿರಿಗಾಗಿ ಕಸರತ್ತು ಮುಂದುವರೆಸಿದ್ದಾರೆ.

ಉಮೇಶ್ ಕತ್ತಿ ಪದೇಪದೆ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ. ಇಂದು ಮತ್ತೊಮ್ಮೆ ಡಾಲರ್ಸ್ ಕಾಲೋನಿಯ ಸಿಎಂ ಬಿಎಸ್​ವೈ ನಿವಾಸಕ್ಕೆ ಆಗಮಿಸಿದ ಕತ್ತಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಜೊತೆಗೆ ಬಿಎಸ್‌ವೈ ನಿವಾಸಕ್ಕೆ ಮಾಜಿ ಸಚಿವರಾದ ಆರ್.ಶಂಕರ್ ಹಾಗೂ ಎಂಟಿಬಿ ನಾಗರಾಜ್‌ ಕೂಡ ಭೇಟಿ ನೀಡಿ ಸಚಿವ ಸ್ಥಾನಕ್ಕಾಗಿ ತಮ್ಮ ಲಾಬಿ ನಡೆಸಿದ್ದಾರೆ. ಸಂಪುಟ ವಿಸ್ತರಣೆ ವೇಳೆ ತಮ್ಮನ್ನು ಪರಿಗಣಿಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಆಂಕಾಂಕ್ಷಿಗಳಿಂದ ಮುಂದುವರಿದ ಮಂತ್ರಿಗಿರಿ ಲಾಬಿ..

ಅನರ್ಹ ಶಾಸಕ ಆರ್​.ಶಂಕರ್​ನ್ನು ಎಂಎಲ್​ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಹೀಗಾಗಿ ವಿಧಾನ ಪರಿಷತ್​ನಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್‌ರಿಂದ ತೆರವಾದ ಎಂಎಲ್‌ಸಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗ್ತಿದೆ.

ಆದರೆ, ವಿಧಾನ ಪರಿಷತ್​ನಲ್ಲಿ ಉಳಿದಿರುವ ಒಂದು ಸ್ಥಾನವನ್ನು ಡಿಸಿಎಂ ಲಕ್ಷಣ ಸವದಿಗೆ ನೀಡಲು ಸಿಎಂ ಒಲವು ತೋರಿಸಿದ್ದಾರೆ. ಸವದಿ ಡಿಸಿಎಂ ಸ್ಥಾನ ಉಳಿಯಬೇಕಾದರೆ ಆರು ತಿಂಗಳ ಒಳಗಾಗಿ ಪರಿಷತ್​ ಸದಸ್ಯರಾಗಿ ಆಯ್ಕೆಯಾಗಬೇಕು. ಈ ಅವಧಿ ಈಗಾಗಲೇ ಮುಗಿಯುತ್ತಾ ಬಂದಿದೆ. ಹೀಗಾಗಿ ಸವದಿ ಸ್ಥಾನವನ್ನು ಭದ್ರಪಡಿಸಲು ಸಿಎಂ ಯೋಚಿಸಿದ್ದಾರೆ. ಆದರೆ, ಪರಿಷತ್​ ಸ್ಥಾನವನ್ನು ತನಗೇ ನೀಡಬೇಕು ಎಂದು ಆರ್​.ಶಂಕರ್​ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

Intro:Body:KN_BNG_01_DOLLARSCOLONYCM_LOBBY_SCRIPT_7201951

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ಸಚಿವ ಸ್ಥಾನಕ್ಕಾಗಿ ಲಾಭಿ!

ಬೆಂಗಳೂರು: ಮಕರಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗಲಿದ್ದು, ಇತ್ತ ಸಚಿವ ಆಕಾಂಕ್ಷಿಗಳು ಸಿಎಂ ಯಡಿಯೂರಪ್ಪ ಜತೆ ಮಂತ್ರಿಗಿರಿಗಾಗಿ ಕಸರತ್ತು ಮುಂದುವರಿದ್ದಾರೆ.

ಉಮೇಶ್ ಕತ್ತಿ ಪದೇ ಪದೆ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ, ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದ ಉಮೇಶ್ ಕತ್ತಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದರು.

ಇತ್ತ ಬಿಎಸ್‌ವೈ ನಿವಾಸಕ್ಕೆ ಅನರ್ಹ ಮಾಜಿ ಶಾಸಕ ಆರ್.ಶಂಕರ್ ಹಾಗೂ ಎಂ.ಟಿ.ಬಿ.ನಾಗರಾಜ್‌ ಕೂಡ ಭೇಟಿ ನೀಡಿ ಮಂತ್ರಿ ಸ್ಥಾನಕ್ಕಾಗಿ ತಮ್ಮ ಲಾಭಿ ಮುಂದುವರಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ತಮ್ಮನ್ನು ಸಚಿವ ಸ್ಥಾನಕ್ಕಾಗಿ ಪರಿಗಣಿಸುವಂತೆ ಸಿಎಂರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇತ್ತ ಆರ್.ಶಂಕರ್ ಸಿಎಂರನ್ನು ಭೇಟಿಯಾಗಿ ರಿಜ್ವಾನ್ ಅರ್ಷದ್ ರಿಂದ ತೆರವಾದ ಎಂಎಲ್ ಸಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸಸುವಂತೆ ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ತಮ್ಮನ್ನು ಎಂಎಲ್ ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿರುವ ಹಿನ್ನೆಲೆ, ಸದ್ಯಕ್ಕೆ ತೆರವಾಗಿರುವ ಒಂದು ಎಂಎಲ್ ಸಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.

ಸಿಎಂ ಯಡಿಯೂರಪ್ಪ ಅವರು ಡಿಸಿಎಂ ಸವದಿಗೆ ತೆರವಾಗಿರುವ ಎಂಎಲ್ ಸಿ ಸ್ಥಾನವನ್ನು ನೀಡಲು ಮುಂದಾಗಿದ್ದಾರೆ. ಲಕ್ಷ್ಮಣ್ ಸವದಿ ಡಿಸಿಎಂ ಸ್ಥಾನ ಉಳಿಸಿಕೊಳ್ಳಬೇಕಾದರೆ, ಆರು ತಿಂಗಳೊಳಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಾಗಿದ್ದು, ಈಗ ಆ ಅವಧಿ ಮುಗಿಯುತ್ತಾ ಬಂದಿದೆ. ಹೀಗಾಗಿ ತೆರವಾಗಿರುವ ಒಂದು ಪರಿಷತ್ ಸ್ಥಾನವನ್ನು ಸವದಿಗೆ ನೀಡಲು ಸಿಎಂ ಒಲವು ಹೊಂದಿದ್ದಾರೆ. ಆದರೆ ಆರ್.ಶಂಕರ್ ಪರಿಷತ್ ಸ್ಥಾನವನ್ನು ತಮಗೆ ನೀಡಿ, ಸಚಿವರನ್ನಾಗಿ ಮಾಡುವಂತೆ ಸಿಎಂರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.Conclusion:
Last Updated : Dec 31, 2019, 7:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.