ಬೆಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಮುತ್ತಿಗೆ ಹಾಕಿದೆ.
ಈ ಹಿನ್ನೆಲೆ ಇಡಿ ಕಚೇರಿ ಬಳಿ ವಿಲ್ಸನ್ ಗಾರ್ಡನ್ ಪೊಲೀಸರಿಂದ ಬಿಗಿ ಬಂದೋಬಸ್ತ್ ವಹಿಸಲಾಗಿದೆ. ಹಾಗೆ ಹೆಚ್ಚುವರಿಯಾಗಿ ಎರಡು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಸಂಘಟನೆಯ ಕಾರ್ಯಕರ್ತರು ಪೊಲೀಸರಿಂದ ಯಾವುದೇ ಅನುಮತಿ ಪಡೆಯದೇ ಇಡಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ ಎನ್ನಲಾಗ್ತಿದೆ.
ಕಾರಣವೇನು: ಇತ್ತೀಚೆಗೆ ಕೇರಳದ ತಿರುವನಂತಪುರಂನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯದರ್ಶಿ ಇಡಿಯಿಂದ ಬಂಧನಕ್ಕೊಳಗಾಗಿದ್ದ. ಇದನ್ನು ವಿರೋಧಿಸಿ ಇಡಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.