ETV Bharat / state

ಪೊಲೀಸ್ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ತೆರವು

author img

By

Published : Dec 17, 2019, 4:43 PM IST

ಪೊಲೀಸ್ ಇಲಾಖೆಯ ಡಿಜಿ-ಐಜಿಪಿ‌ ಹಾಗೂ ಸರ್ಕಾರದ ಕಡೆಯಿಂದ ಅಫಿಡವಿಟ್‌ ಸಲ್ಲಿಕೆ ಮಾಡಿದ ಕಾರಣ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿದಂತೆ ಇಲಾಖೆಯ ಪ್ರಮುಖರಿಗೆ ನೀಡಿದ್ದ ನ್ಯಾಯಾಂಗ ನಿಂದನೆ ನೋಟಿಸ್​ನ್ನು ತೆರವುಗೊಳಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಪೊಲೀಸ್ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ತೆರವು , Cancel of Judicial Abuse on police dept
ಪೊಲೀಸ್ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ತೆರವು

ಬೆಂಗಳೂರು: ಪೊಲೀಸ್ ಇಲಾಖೆಯ ಡಿಜಿ-ಐಜಿಪಿ‌ ಹಾಗೂ ಸರ್ಕಾರದ ಕಡೆಯಿಂದ ಅಫಿಡವಿಟ್‌ ಸಲ್ಲಿಕೆ ಮಾಡಿದ ಕಾರಣ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿದಂತೆ ಇಲಾಖೆಯ ಪ್ರಮುಖರಿಗೆ ನೀಡಿದ್ದ ನ್ಯಾಯಾಂಗ ನಿಂದನೆ ನೋಟಿಸ್​ನ್ನು ತೆರವುಗೊಳಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಸಾರ್ವಜನಿಕರು ನೀಡುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸುವಾಗ ಪೊಲೀಸ್ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಬೇಕೆಂದು ಹೈಕೋರ್ಟ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿತ್ತು. ಆದರೆ, ಈ ಆದೇಶವನ್ನು ಪೊಲೀಸ್​ ಇಲಾಖೆ ಪಾಲನೆ ಮಾಡುತ್ತಿಲ್ಲ ಎಂದು ವಕೀಲ ಎಸ್.ಉಮಾಪತಿ ಪೀಠಕ್ಕೆ ತಿಳಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್​ ನೀಡಿತ್ತು.

ಅಲ್ಲದೆ, ಇಲಾಖೆಯನ್ನು ಪ್ರಶ್ನಿಸಿದ ನ್ಯಾಯಾಲಯ, ಕೋರ್ಟ್‌ನ ಆದೇಶವನ್ನು ಯಾಕೆ ಪಾಲಿಸಿಲ್ಲ ಎಂಬುದರ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ, ಗೃಹ ಇಲಾಖೆಯ ಎಸಿಎಸ್ ರಜಿನೀಶ್ ಗೋಯಲ್‌ಗೆ ಕಳೆದ ವಿಚಾರಣೆ ವೇಳೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು. ಸದ್ಯ ಈ ವಿಚಾರವನ್ನ ಅಫಿಡವಿಟ್ ಮೂಲಕ ಸಲ್ಲಿಸಿದ ಕಾರಣ ನ್ಯಾಯಾಂಗ ನಿಂದನೆ ತೆರವು ಮಾಡಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ‌.

ಬೆಂಗಳೂರು: ಪೊಲೀಸ್ ಇಲಾಖೆಯ ಡಿಜಿ-ಐಜಿಪಿ‌ ಹಾಗೂ ಸರ್ಕಾರದ ಕಡೆಯಿಂದ ಅಫಿಡವಿಟ್‌ ಸಲ್ಲಿಕೆ ಮಾಡಿದ ಕಾರಣ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿದಂತೆ ಇಲಾಖೆಯ ಪ್ರಮುಖರಿಗೆ ನೀಡಿದ್ದ ನ್ಯಾಯಾಂಗ ನಿಂದನೆ ನೋಟಿಸ್​ನ್ನು ತೆರವುಗೊಳಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಸಾರ್ವಜನಿಕರು ನೀಡುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸುವಾಗ ಪೊಲೀಸ್ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಬೇಕೆಂದು ಹೈಕೋರ್ಟ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿತ್ತು. ಆದರೆ, ಈ ಆದೇಶವನ್ನು ಪೊಲೀಸ್​ ಇಲಾಖೆ ಪಾಲನೆ ಮಾಡುತ್ತಿಲ್ಲ ಎಂದು ವಕೀಲ ಎಸ್.ಉಮಾಪತಿ ಪೀಠಕ್ಕೆ ತಿಳಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ನ್ಯಾಯಾಂಗ ನಿಂದನೆ ಆರೋಪದಡಿ ನೋಟಿಸ್​ ನೀಡಿತ್ತು.

ಅಲ್ಲದೆ, ಇಲಾಖೆಯನ್ನು ಪ್ರಶ್ನಿಸಿದ ನ್ಯಾಯಾಲಯ, ಕೋರ್ಟ್‌ನ ಆದೇಶವನ್ನು ಯಾಕೆ ಪಾಲಿಸಿಲ್ಲ ಎಂಬುದರ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ, ಗೃಹ ಇಲಾಖೆಯ ಎಸಿಎಸ್ ರಜಿನೀಶ್ ಗೋಯಲ್‌ಗೆ ಕಳೆದ ವಿಚಾರಣೆ ವೇಳೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು. ಸದ್ಯ ಈ ವಿಚಾರವನ್ನ ಅಫಿಡವಿಟ್ ಮೂಲಕ ಸಲ್ಲಿಸಿದ ಕಾರಣ ನ್ಯಾಯಾಂಗ ನಿಂದನೆ ತೆರವು ಮಾಡಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ‌.

Intro:ಪೊಲೀಸ್ ಅಧಿಕಾರಿಗಳ ವಿರುದ್ಧದ
ನ್ಯಾಯಾಂಗ ನಿಂದನೆ ತೆರವು ಮಾಡಿದ ನ್ಯಾಯಲಯ

ಸಾರ್ವಜನಿಕರು ನೀಡುವ ದೂರುಗಳನ್ನು ಆಧಾರಿಸಿ ಎಫ್‌ಐಆರ್ ದಾಖಲಿಸುವಾಗ ಪೊಲೀಸ್ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಪಾಲಿಸದ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸೇರಿ ಎಲ್ಲ ಪ್ರತಿವಾದಿಗಳಿಗೆ ನ್ಯಾಯಾಂಗ ನಿಂದನೆ ನೋಟಿಸನ್ನ ಹೈಕೋರ್ಟ್ ಕಳೆದ ವಿಚಾರಣೆ ವೇಳೆ ಜಾರಿಗೊಳಿಸಿತ್ತು ,ಆದರೆ ಇಂದು ಪೊಲೀಸ್ ಇಲಾಖೆಯ ಡಿಜಿ-ಐಜಿಪಿ‌ ಹಾಗು ಸರ್ಕಾರದ ಕಡೆಯಿಂದ ಅಫಿಡವಿಟ್‌ ಸಲ್ಲಿಕೆ ಮಾಡಿದ ಕಾರಣ ಅಫಿಡವಿಟ್‌ ಪರಿಶೀಲಿಸಿ ಅಧಿಕಾರಿಗಳ ಮೇಲಿನ ನ್ಯಾಯಾಂಗ ನಿಂದನೆ ತೆರವುಗೊಳಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಈ ಕುರಿತಂತೆ ವಕೀಲ ಎಸ್.ಉಮಾಪತಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ‌ನಡೆಯಿತು.


ಕಳೆದ ವಿಚಾರಣೆ ವೇಳೆ ಅರ್ಜಿದಾರರು ನ್ಯಾಯಾಲಯದ ಲ್ಲಿ ವಾದ ಮಾಡಿ ಸಾರ್ವಜನಿಕರು ದೂರು ದಾಖಲಿಸಲು ಬಂದಾಗ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ಅಧಿಸೂಚನೆ ಮೂಲಕ ನಿರ್ದೇಶಿಸಬೇಕು. ಈ ಬಗ್ಗೆ ಸಾರ್ವಜನಿಕರು ಹಾಗೂ ಪೊಲೀಸರಲ್ಲಿ ವ್ಯಾಪಕ ತಿಳಿವಳಿಕೆ ಮೂಡಿಸಬೇಕು. ಠಾಣಾ ವ್ಯಾಪ್ತಿ ನೆಪ ಹೇಳಿ ಎಫ್‌ಐಆರ್‌ದಾಖಲಿಸಿಕೊಳ್ಳಲು ನಿರಾಕರಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ಈ ಆದೇಶವನ್ನು ಇಲ್ಲಿಯವರೆಗೆ ಪಾಲಿಸಿಲ್ಲ ಎಂದು ಅರ್ಜಿದಾರ ವಕೀಲ ಎಸ್.ಉಮಾಪತಿ ಪೀಠಕ್ಕೆ ತಿಳಿಸಿದರು.

ಹೀಗಾಗಿ ನ್ಯಾಯಪೀಠವು ಕೋರ್ಟ್‌ನ ಆದೇಶವನ್ನು ಯಾಕೆ ಪಾಲಿಸಿಲ್ಲ ಎಂಬ ಕುರಿತು ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ, ಗೃಹ ಇಲಾಖೆಯ ಎಸಿಎಸ್ ರಜಿನೀಶ್ ಗೋಯಲ್‌ಗೆ ಕಳೆದ ವಿಚಾರಣೆ ವೇಳೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿತ್ತು. ಸದ್ಯ ಸದ್ಯದ ವಿಚಾರವನ್ನ ಅಫಿಡವಿಟ್ ಮೂಲಕ ಸಲ್ಲಿಸಿದ ಕಾರಣ ನ್ಯಾಯಾಂಗ ನಿಂದನೆ ತೆರವು ಮಾಡಿ ಹೈಕೋರ್ಟ್ ಆದೇಶಿಸಿದೆ‌.

Body:KN_BNG_14_POlICE_7204498Conclusion:KN_BNG_14_POlICE_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.