ETV Bharat / state

ಬೆಂಗಳೂರು-ಹುಬ್ಬಳ್ಳಿ ರೈಲುಗಳ ಓಡಾಟದಲ್ಲಿ ವ್ಯತ್ಯಯ: ಭಾನುವಾರ ಯಾವೆಲ್ಲ ಟ್ರೈನ್ ರದ್ದು - janashatabdi train

ಭಾನುವಾರ ಹುಬ್ಬಳ್ಳಿ ಮಾರ್ಗದ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ರೈಲುಗಳ ಓಡಾಟದಲ್ಲಿ ವ್ಯತ್ಯಯ
ರೈಲುಗಳ ಓಡಾಟದಲ್ಲಿ ವ್ಯತ್ಯಯ
author img

By

Published : Oct 29, 2022, 10:27 PM IST

ಬೆಂಗಳೂರು: ತುರ್ತು ರೈಲ್ವೆ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ ಜನಶತಾಬ್ದಿ ರೈಲು ಸೇರಿದಂತೆ ರಾಜಧಾನಿಯಿಂದ ಹುಬ್ಬಳ್ಳಿ ಮಾರ್ಗದ ರೈಲುಗಳ ಓಡಾಟ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ದೇವರಗುಡ್ಡ - ಬ್ಯಾಡಗಿ ಮಾರ್ಗದಲ್ಲಿ ಲೈನ್ ಬ್ಲಾಕ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಕೆಎಸ್‌ಆರ್ ಬೆಂಗಳೂರು - ಹುಬ್ಬಳ್ಳಿ ಜನಶತಾಬ್ದಿ ರೈಲನ್ನು ಹರಿಹರ ವರೆಗೆ ಮಾತ್ರ ಸಂಚರಿಸಲಿದ್ದು, ಹರಿಹರದಿಂದ ಹುಬ್ಬಳ್ಳಿವರೆಗಿನ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ರೈಲು ಹರಿಹರದಿಂದ ಬೆಂಗಳೂರಿಗೆ ಹಿಂದಿರುಗಲಿದೆ ಎಂದು ಇಲಾಖೆ ತಿಳಿಸಿದೆ.

ರೈಲುಗಳ ಓಡಾಟದಲ್ಲಿ ವ್ಯತ್ಯಯ
ರೈಲುಗಳ ಓಡಾಟದಲ್ಲಿ ವ್ಯತ್ಯಯ

ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸಪ್ರೆಸ್ ಬೆಳಗಾವಿಯಿಂದ ರಾಣೆಬೆನ್ನೂರು ನಿಲ್ದಾಣವರೆಗೆ ಸಂಚಾರ ಸ್ಥಗಿತಗೊಳಿಸಲಿದೆ. ಅರಸಿಕೆರೆ - ಹುಬ್ಬಳ್ಳಿ ಎಕ್ಸ್​ಪ್ರೆಸ್ ರೈಲು ಅರಸಿಕೆರೆ - ಹಾವೇರಿ ನಿಲ್ದಾಣದ ನಡುವೆ ಸ್ಥಗಿತಗೊಳಿಸಲಿದೆ. ಈ ಎಲ್ಲ ರೈಲುಗಳ ಸಂಚರಿಸುವ ನಿಲ್ದಾಣಗಳ ವೇಳಾಪಟ್ಟಿಯಲ್ಲಿ ಯಾವುದೇ ವ್ಯತ್ಯಯವಿಲ್ಲ. ಹುಬ್ಬಳ್ಳಿ - ಚಿತ್ರದುರ್ಗ ಎಕ್ಸ್​ಪ್ರೆಸ್ ಓಡಾಟ ಪೂರ್ಣಪ್ರಮಾಣದಲ್ಲಿ ರದ್ದಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

(ಓದಿ: ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ..)

ಬೆಂಗಳೂರು: ತುರ್ತು ರೈಲ್ವೆ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ ಜನಶತಾಬ್ದಿ ರೈಲು ಸೇರಿದಂತೆ ರಾಜಧಾನಿಯಿಂದ ಹುಬ್ಬಳ್ಳಿ ಮಾರ್ಗದ ರೈಲುಗಳ ಓಡಾಟ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ದೇವರಗುಡ್ಡ - ಬ್ಯಾಡಗಿ ಮಾರ್ಗದಲ್ಲಿ ಲೈನ್ ಬ್ಲಾಕ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಕೆಎಸ್‌ಆರ್ ಬೆಂಗಳೂರು - ಹುಬ್ಬಳ್ಳಿ ಜನಶತಾಬ್ದಿ ರೈಲನ್ನು ಹರಿಹರ ವರೆಗೆ ಮಾತ್ರ ಸಂಚರಿಸಲಿದ್ದು, ಹರಿಹರದಿಂದ ಹುಬ್ಬಳ್ಳಿವರೆಗಿನ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ರೈಲು ಹರಿಹರದಿಂದ ಬೆಂಗಳೂರಿಗೆ ಹಿಂದಿರುಗಲಿದೆ ಎಂದು ಇಲಾಖೆ ತಿಳಿಸಿದೆ.

ರೈಲುಗಳ ಓಡಾಟದಲ್ಲಿ ವ್ಯತ್ಯಯ
ರೈಲುಗಳ ಓಡಾಟದಲ್ಲಿ ವ್ಯತ್ಯಯ

ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸಪ್ರೆಸ್ ಬೆಳಗಾವಿಯಿಂದ ರಾಣೆಬೆನ್ನೂರು ನಿಲ್ದಾಣವರೆಗೆ ಸಂಚಾರ ಸ್ಥಗಿತಗೊಳಿಸಲಿದೆ. ಅರಸಿಕೆರೆ - ಹುಬ್ಬಳ್ಳಿ ಎಕ್ಸ್​ಪ್ರೆಸ್ ರೈಲು ಅರಸಿಕೆರೆ - ಹಾವೇರಿ ನಿಲ್ದಾಣದ ನಡುವೆ ಸ್ಥಗಿತಗೊಳಿಸಲಿದೆ. ಈ ಎಲ್ಲ ರೈಲುಗಳ ಸಂಚರಿಸುವ ನಿಲ್ದಾಣಗಳ ವೇಳಾಪಟ್ಟಿಯಲ್ಲಿ ಯಾವುದೇ ವ್ಯತ್ಯಯವಿಲ್ಲ. ಹುಬ್ಬಳ್ಳಿ - ಚಿತ್ರದುರ್ಗ ಎಕ್ಸ್​ಪ್ರೆಸ್ ಓಡಾಟ ಪೂರ್ಣಪ್ರಮಾಣದಲ್ಲಿ ರದ್ದಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

(ಓದಿ: ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ..)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.