ETV Bharat / state

'ದೆವ್ವದ ಬಾಯಿಂದ ಬೈಬಲ್': ಸಂಸದ ಹನುಮಂತಯ್ಯ, ಎಂಎಲ್​ಸಿ ಹರಿಪ್ರಸಾದ್ ಟೀಕಿಸಿದ ಕಾರ್ಣಿಕ್

author img

By

Published : Aug 19, 2021, 10:04 AM IST

ಸಂಸದೀಯ ಸಭೆಗಳಲ್ಲಿ ಸಮಕಾಲೀನ ಸಮಸ್ಯೆಗಳ ಕುರಿತು ಆರೋಗ್ಯಪೂರ್ಣ ಚರ್ಚೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಸಿದ್ಧಾಂತ ಎನ್ನುವುದನ್ನು ಈ ದೇಶವನ್ನು ದೀರ್ಘಕಾಲ ಆಳಿದ, ಸಂಸದೀಯ ನಡವಳಿಕೆಗಳ ಬಗ್ಗೆ ಅಪಾರ ಅನುಭವ ಇರುವ ಇಂದಿನ ಕಾಂಗ್ರೆಸ್ ಸಮರ್ಥ ನಾಯಕತ್ವದ ಕೊರತೆಯಿಂದ ಮರೆತಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಟೀಕಿಸಿದರು.

Bengaluru
ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್

ಬೆಂಗಳೂರು: ಸದನದೊಳಗೆ ದಾಂಧಲೆ ನಡೆಸಿ, ಮೇಜು ಹತ್ತಿ ಕಾರ್ಯ ಕಲಾಪದ ನಿಯಮಾವಳಿಯ ಪುಸ್ತಕವನ್ನು ಪೀಠದತ್ತ ತೂರಿ ತನ್ನ ಗೂಂಡಾಗಿರಿ ಪ್ರವೃತ್ತಿಯನ್ನು ದೇಶಕ್ಕೆ ಪರಿಚಯಿಸಿರುವ ಸಂದರ್ಭದಲ್ಲಿ ಸಂಸದ ಎಲ್.ಹನುಮಂತಯ್ಯ ಮತ್ತು ವಿಧಾನಪರಿಷತ್ತಿನ ಸದಸ್ಯ ಬಿ.ಕೆ.ಹರಿಪ್ರಸಾದ್‍ ನೀಡಿರುವ ಹೇಳಿಕೆಗಳು 'ದೆವ್ವದ ಬಾಯಿಂದ ಬೈಬಲ್ ನುಡಿದಂತಾಗಿದೆ' ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಟೀಕಿಸಿದ್ದಾರೆ.

ಕೋವಿಡ್ ಮಹಾಸಂಕಟದಿಂದಾಗಿ ದೇಶ ಮತ್ತು ಜಗತ್ತು ತೀವ್ರ ಸಂಕಟವನ್ನು ಅನುಭವಿಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುವುದನ್ನು ಮರೆತ ಕಾಂಗ್ರೆಸ್, ಕಲಾಪವನ್ನು ಧಿಕ್ಕರಿಸಿ, ಯಾವುದೇ ಚರ್ಚೆ ನಡೆಯದಂತೆ ತಡೆಯೊಡ್ಡಿ, ಸಭ್ಯತೆಯ ಎಲ್ಲ ನಿಯಮಗಳನ್ನು ಗಾಳಿಗೆ ತೂರಿತು. ಸಂಸದೀಯ ಸಭೆಗಳಲ್ಲಿ ಸಮಕಾಲೀನ ಸಮಸ್ಯೆಗಳ ಕುರಿತು ಆರೋಗ್ಯಪೂರ್ಣ ಚರ್ಚೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಸಿದ್ಧಾಂತ ಎನ್ನುವುದನ್ನು ಈ ದೇಶದಲ್ಲಿ ದೀರ್ಘಕಾಲ ಆಳಿದ, ಸಂಸದೀಯ ನಡವಳಿಕೆಗಳ ಬಗ್ಗೆ ಅಪಾರ ಅನುಭವ ಇರುವ ಇಂದಿನ ಕಾಂಗ್ರೆಸ್ ಸಮರ್ಥ ನಾಯಕತ್ವದ ಕೊರತೆಯಿಂದ ಮರೆತಿದೆ. ತನ್ನ ಹೊಣೆಗೇಡಿತನದ ನಡವಳಿಕೆಯಿಂದ ನಗೆಪಾಟಲಿಗೀಡಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ಕಾರ್ಣಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನಲ್ಲಿ ಅನುಮೋದನೆಗೊಂಡ ಶಾಸನವನ್ನು ಧೂರ್ತ ರಾಜಕಾರಣಕ್ಕಾಗಿ ಪ್ರತಿಭಟಿಸುವ ಷಡ್ಯಂತ್ರವನ್ನು ಈ ದೇಶದ ಬೆನ್ನೆಲುಬಾಗಿರುವ ಕೃಷಿಕರು ಅರ್ಥೈಸಿಕೊಂಡಿರುವುದರಿಂದಲೇ ಪ್ರಾಮಾಣಿಕ ಕೃಷಿಕರಿಂದ ದೇಶದಾದ್ಯಂತ ಯಾವುದೇ ಬೆಂಬಲ ಸಿಗದಿರುವುದನ್ನು ರಾಜಕಾರಣದಲ್ಲಿ ಅತಿಥಿ ಕಲಾವಿದರಾದ ಎಲ್.ಹನುಮಂತಯ್ಯ ಮತ್ತು ಬಿ.ಕೆ.ಹರಿಪ್ರಸಾದ್‍ರವರು ಅರ್ಥ ಮಾಡಿಕೊಳ್ಳುತ್ತಾರೆಂದು ಭಾವಿಸುತ್ತೇನೆ ಎಂದು ವ್ಯಂಗ್ಯವಾಡಿದರು.

ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲದಿರುವ ಕಾಂಗ್ರೆಸ್ಸಿಗರು ತಮ್ಮ ತಟ್ಟೆಯಲ್ಲಿ ಸತ್ತು ಬಿದ್ದಿರುವ ಹೆಗ್ಗಣವನ್ನು ಮರೆತಂತೆ ವರ್ತಿಸುತ್ತಿರುವುದು ದೊಡ್ಡ ರಾಜಕೀಯ ದುರಂತ ಎಂದು ತಿಳಿಸಿದ್ದಾರೆ.

ಬೆಂಗಳೂರು: ಸದನದೊಳಗೆ ದಾಂಧಲೆ ನಡೆಸಿ, ಮೇಜು ಹತ್ತಿ ಕಾರ್ಯ ಕಲಾಪದ ನಿಯಮಾವಳಿಯ ಪುಸ್ತಕವನ್ನು ಪೀಠದತ್ತ ತೂರಿ ತನ್ನ ಗೂಂಡಾಗಿರಿ ಪ್ರವೃತ್ತಿಯನ್ನು ದೇಶಕ್ಕೆ ಪರಿಚಯಿಸಿರುವ ಸಂದರ್ಭದಲ್ಲಿ ಸಂಸದ ಎಲ್.ಹನುಮಂತಯ್ಯ ಮತ್ತು ವಿಧಾನಪರಿಷತ್ತಿನ ಸದಸ್ಯ ಬಿ.ಕೆ.ಹರಿಪ್ರಸಾದ್‍ ನೀಡಿರುವ ಹೇಳಿಕೆಗಳು 'ದೆವ್ವದ ಬಾಯಿಂದ ಬೈಬಲ್ ನುಡಿದಂತಾಗಿದೆ' ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಟೀಕಿಸಿದ್ದಾರೆ.

ಕೋವಿಡ್ ಮಹಾಸಂಕಟದಿಂದಾಗಿ ದೇಶ ಮತ್ತು ಜಗತ್ತು ತೀವ್ರ ಸಂಕಟವನ್ನು ಅನುಭವಿಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುವುದನ್ನು ಮರೆತ ಕಾಂಗ್ರೆಸ್, ಕಲಾಪವನ್ನು ಧಿಕ್ಕರಿಸಿ, ಯಾವುದೇ ಚರ್ಚೆ ನಡೆಯದಂತೆ ತಡೆಯೊಡ್ಡಿ, ಸಭ್ಯತೆಯ ಎಲ್ಲ ನಿಯಮಗಳನ್ನು ಗಾಳಿಗೆ ತೂರಿತು. ಸಂಸದೀಯ ಸಭೆಗಳಲ್ಲಿ ಸಮಕಾಲೀನ ಸಮಸ್ಯೆಗಳ ಕುರಿತು ಆರೋಗ್ಯಪೂರ್ಣ ಚರ್ಚೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಸಿದ್ಧಾಂತ ಎನ್ನುವುದನ್ನು ಈ ದೇಶದಲ್ಲಿ ದೀರ್ಘಕಾಲ ಆಳಿದ, ಸಂಸದೀಯ ನಡವಳಿಕೆಗಳ ಬಗ್ಗೆ ಅಪಾರ ಅನುಭವ ಇರುವ ಇಂದಿನ ಕಾಂಗ್ರೆಸ್ ಸಮರ್ಥ ನಾಯಕತ್ವದ ಕೊರತೆಯಿಂದ ಮರೆತಿದೆ. ತನ್ನ ಹೊಣೆಗೇಡಿತನದ ನಡವಳಿಕೆಯಿಂದ ನಗೆಪಾಟಲಿಗೀಡಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ಕಾರ್ಣಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನಲ್ಲಿ ಅನುಮೋದನೆಗೊಂಡ ಶಾಸನವನ್ನು ಧೂರ್ತ ರಾಜಕಾರಣಕ್ಕಾಗಿ ಪ್ರತಿಭಟಿಸುವ ಷಡ್ಯಂತ್ರವನ್ನು ಈ ದೇಶದ ಬೆನ್ನೆಲುಬಾಗಿರುವ ಕೃಷಿಕರು ಅರ್ಥೈಸಿಕೊಂಡಿರುವುದರಿಂದಲೇ ಪ್ರಾಮಾಣಿಕ ಕೃಷಿಕರಿಂದ ದೇಶದಾದ್ಯಂತ ಯಾವುದೇ ಬೆಂಬಲ ಸಿಗದಿರುವುದನ್ನು ರಾಜಕಾರಣದಲ್ಲಿ ಅತಿಥಿ ಕಲಾವಿದರಾದ ಎಲ್.ಹನುಮಂತಯ್ಯ ಮತ್ತು ಬಿ.ಕೆ.ಹರಿಪ್ರಸಾದ್‍ರವರು ಅರ್ಥ ಮಾಡಿಕೊಳ್ಳುತ್ತಾರೆಂದು ಭಾವಿಸುತ್ತೇನೆ ಎಂದು ವ್ಯಂಗ್ಯವಾಡಿದರು.

ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲದಿರುವ ಕಾಂಗ್ರೆಸ್ಸಿಗರು ತಮ್ಮ ತಟ್ಟೆಯಲ್ಲಿ ಸತ್ತು ಬಿದ್ದಿರುವ ಹೆಗ್ಗಣವನ್ನು ಮರೆತಂತೆ ವರ್ತಿಸುತ್ತಿರುವುದು ದೊಡ್ಡ ರಾಜಕೀಯ ದುರಂತ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.