ETV Bharat / state

ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ.. ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕೊಂದ ಕಿಡಿಗೇಡಿ.. - ಬೆಂಗಳೂರಲ್ಲಿ ನಾಯಿ ಮೇಲೆ ಕಾರು ಹರಿಸಿದ ಚಾಲಕ

ರಾಜಧಾನಿಯಲ್ಲಿ ಪ್ರಾಣಿಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಮಲಗಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿಕೊಂಡು ಹೋಗಿರುವ ಮತ್ತೊಂದು ಘಟನೆ ಜರುಗಿದೆ..

car-runs-over-street-dog-sleeping-on-road-in-bengaluru
ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ... ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕೊಂದ ಕಿಡಿಗೇಡಿ
author img

By

Published : May 30, 2022, 12:08 PM IST

ಬೆಂಗಳೂರು : ರಾಜಧಾನಿಯಲ್ಲಿ ಪ್ರಾಣಿಗಳ ಮೇಲಿನ ದೌರ್ಜನ್ಯ ಪ್ರಕರಣ ಮರುಕಳಿಸುತ್ತಲೇ ಇವೆ. ಶ್ವಾನ ಲಾರಾ ಪ್ರಕರಣದ ಬೆನ್ನಲ್ಲೇ ಜಯನಗರದ 9ನೇ ಬ್ಲಾಕ್‌ನಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. ಮಲಗಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿಕೊಂಡು ಹೋಗಿರುವ ಘಟನೆ ನಡೆದಿದೆ.

ಮೇ 27ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಏಕಾಏಕಿ ಬಂದ ಕಾರು ನಾಯಿಯ ಕತ್ತಿನ ಮೇಲೆ ಹತ್ತಿಸಿದ ಪರಿಣಾಮ ಸ್ಥಳದಲ್ಲೇ ನರಳಾಡಿ ಕೆಲ ಸೆಕೆಂಡ್​ಗಳಲ್ಲೇ ಸಾವನ್ನಪ್ಪಿದೆ.

ಪ್ರಕರಣದ ಕುರಿತು ಶ್ವಾನಪ್ರಿಯರಾದ ನಾಗರಾಜ್ ಹಾಗೂ ಬದ್ರಿಪ್ರಸಾದ್‌ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಕಾರು ಹತ್ತಿಸಿ ದುಷ್ಕೃತ್ಯ ಮೆರೆದಿರೋದು ಯಾರೆಂದು ತಿಳಿದು ಬಂದಿಲ್ಲ.

ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿ ಕೊಂದ ಕಿಡಿಗೇಡಿ..

ಇದನ್ನೂ ಓದಿ: ಬೀದಿನಾಯಿ ಮೇಲೆ ಕಾರು ಹರಿಸಿ ಕೊಂದ ಪಾಪಿ: 'ಲಾರಾ' ಅಂತ್ಯಕ್ರಿಯೆಗೆ ಎಲ್ಲರೂ ಬರುವಂತೆ ನಟಿ ರಮ್ಯಾ ಕರೆ

30 ವರ್ಷ ವಯಸ್ಸಿನ ವ್ಯಕ್ತಿಯು ಮಲಗಿರುವ ನಾಯಿಯ ಮೇಲೆ ಕಾರು ಚಲಾಯಿಸಿದ್ದಾನೆ. ಚಾಲಕನ ನಿರ್ಲಕ್ಷ್ಯತನದಿಂದ ಶ್ವಾನ ಸಾವನ್ನಪ್ಪಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಸ್ಥಳೀಯ ಶ್ವಾನಪ್ರಿಯರು ಮೃತ ಶ್ವಾನದ ಅಂತ್ಯಕ್ರಿಯೆ ಮಾಡಿದ್ದು, ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉದ್ಯಮಿ ಮೊಮ್ಮಗನ ಅಟ್ಟಹಾಸಕ್ಕೆ ಬಲಿಯಾದ ಶ್ವಾನ.. ಬೀದಿ ನಾಯಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ನಟಿ ರಮ್ಯಾ

ಬೆಂಗಳೂರು : ರಾಜಧಾನಿಯಲ್ಲಿ ಪ್ರಾಣಿಗಳ ಮೇಲಿನ ದೌರ್ಜನ್ಯ ಪ್ರಕರಣ ಮರುಕಳಿಸುತ್ತಲೇ ಇವೆ. ಶ್ವಾನ ಲಾರಾ ಪ್ರಕರಣದ ಬೆನ್ನಲ್ಲೇ ಜಯನಗರದ 9ನೇ ಬ್ಲಾಕ್‌ನಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. ಮಲಗಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿಕೊಂಡು ಹೋಗಿರುವ ಘಟನೆ ನಡೆದಿದೆ.

ಮೇ 27ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಏಕಾಏಕಿ ಬಂದ ಕಾರು ನಾಯಿಯ ಕತ್ತಿನ ಮೇಲೆ ಹತ್ತಿಸಿದ ಪರಿಣಾಮ ಸ್ಥಳದಲ್ಲೇ ನರಳಾಡಿ ಕೆಲ ಸೆಕೆಂಡ್​ಗಳಲ್ಲೇ ಸಾವನ್ನಪ್ಪಿದೆ.

ಪ್ರಕರಣದ ಕುರಿತು ಶ್ವಾನಪ್ರಿಯರಾದ ನಾಗರಾಜ್ ಹಾಗೂ ಬದ್ರಿಪ್ರಸಾದ್‌ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಕಾರು ಹತ್ತಿಸಿ ದುಷ್ಕೃತ್ಯ ಮೆರೆದಿರೋದು ಯಾರೆಂದು ತಿಳಿದು ಬಂದಿಲ್ಲ.

ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿ ಕೊಂದ ಕಿಡಿಗೇಡಿ..

ಇದನ್ನೂ ಓದಿ: ಬೀದಿನಾಯಿ ಮೇಲೆ ಕಾರು ಹರಿಸಿ ಕೊಂದ ಪಾಪಿ: 'ಲಾರಾ' ಅಂತ್ಯಕ್ರಿಯೆಗೆ ಎಲ್ಲರೂ ಬರುವಂತೆ ನಟಿ ರಮ್ಯಾ ಕರೆ

30 ವರ್ಷ ವಯಸ್ಸಿನ ವ್ಯಕ್ತಿಯು ಮಲಗಿರುವ ನಾಯಿಯ ಮೇಲೆ ಕಾರು ಚಲಾಯಿಸಿದ್ದಾನೆ. ಚಾಲಕನ ನಿರ್ಲಕ್ಷ್ಯತನದಿಂದ ಶ್ವಾನ ಸಾವನ್ನಪ್ಪಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಸ್ಥಳೀಯ ಶ್ವಾನಪ್ರಿಯರು ಮೃತ ಶ್ವಾನದ ಅಂತ್ಯಕ್ರಿಯೆ ಮಾಡಿದ್ದು, ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉದ್ಯಮಿ ಮೊಮ್ಮಗನ ಅಟ್ಟಹಾಸಕ್ಕೆ ಬಲಿಯಾದ ಶ್ವಾನ.. ಬೀದಿ ನಾಯಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ನಟಿ ರಮ್ಯಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.