ಬೆಂಗಳೂರು: ಐಟಿ ಅಧಿಕಾರಿಗಳ ಮೇಲೆ ಸಿಬಿಐ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗೇಶ್ ಹಾಗೂ ನರೇಂದರ್ ಸಿಂಗ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿಸಲಾಯಿತು. ಆರೋಪಿಗಳ ಜೊತೆ ಅವರ ಬಳಿ ವಶಪಡಿಸಿಕೊಂಡಿದ್ದ ಹಣವನ್ನ ಕೋರ್ಟ್ಗೆ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದ್ರು.
ಇನ್ನು ವಿಚಾರಣೆ ನಡೆಸಿದ ನ್ಯಾಯಲಯ ಆರೋಪಿಗಳನ್ನು 4 ದಿನ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ಕಾಲಾವಕಾಶ ನೀಡಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಯಿತು.