ETV Bharat / state

ಜನಾರ್ದನ ರೆಡ್ಡಿ ಆಸ್ತಿ ವಿವರ ಕೋರಿ 4 ದೇಶಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಮನವಿ

ಬೇರೆ ಬೇರೆ ದೇಶಗಳಲ್ಲಿ ಜನಾರ್ದನ ರೆಡ್ಡಿ ನಡೆಸಿರುವ ವ್ಯವಹಾರದ ಹಣವನ್ನು ಆ ದೇಶಗಳ ಬ್ಯಾಂಕ್​ಗಳಲ್ಲೇ ಉಳಿಸಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

author img

By

Published : Mar 9, 2023, 1:23 PM IST

Updated : Mar 9, 2023, 2:32 PM IST

Former minister Janardhana Reddy
ಮಾಜಿ ಸಚಿವ ಜನಾರ್ದನ ರೆಡ್ಡಿ

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿವಿಧ ದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಎನ್ನಲಾದ ಆರೋಪ ಸಂಬಂಧದ ಬಂಡವಾಳವನ್ನು ಪತ್ತೆ ಹಚ್ಚಲು ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ವಿವಿಧ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ಮನವಿ ಮಾಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇ.ಇಂದ್ರಕಲಾ ಅವರು ಸ್ವಿಡ್ಜರ್ಲೆಂಡ್, ಸಿಂಗಾಪುರ, ಯುಎಇ ಮತ್ತು ಐಲ್ ಆಫ್ ಮ್ಯಾನ್ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ಕೋರಿದ್ದಾರೆ. ಆರೋಪಿಗೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 166(ಎ) ಪ್ರಕಾರ ಮನವಿ ಮಾಡುತ್ತಿದ್ದು, ಈ ಪ್ರಕರಣದಲ್ಲಿ ತನಿಖೆಗೆ ಸಹಕಾರ ನೀಡುವುದಕ್ಕಾಗಿ ಕೋರುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

ಸಿಬಿಐ ತನಿಖಾಧಿಕಾರಿಗಳು ಜಿಎಲ್‌ಎ (ಗಾಲಿ ಜನಾರ್ದನ ರೆಡ್ಡಿ) ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೆಟ್ ಲಿಮಿಟೆಡ್‌ನ ಸಂಯೋಜನೆಯ ವಿವರಗಳಂತಹ ಮಾಹಿತಿಯನ್ನು ಸಂಗ್ರಹಿಸಲು ನ್ಯಾಯಾಂಗದ ಸಹಾಯವನ್ನು ಕೋರಿದೆ. ಈ ನಿಟ್ಟಿನಲ್ಲಿ ಮನವಿ ಮಾಡಲಾಗುತ್ತಿದೆ ಎಂದು ನ್ಯಾಯಾಧೀಶರು ಕೋರಿದ್ದಾರೆ. ಜಿಎಲ್‌ಎ ಕಂಪೆನಿಯ ಸ್ವರೂಪ, ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವರ, ಮಾಲೀಕರು ಮತ್ತು ಅಧಿಕೃತವಾಗಿ ಸಹಿ ಹಾಕಿರುವ ವ್ಯಕ್ತಿಯ ವಿವರ, ಅದರ ಮುಂದಿನ ಫಲಾನುಭವಿಗಳು, ಕಂಪೆನಿಯ ಷೇರುಗಳ ವಿವರ, ಅದನ್ನು ಖರೀದಿ ಮಾಡಿರುವವರು ಮತ್ತು ಮಾರಾಟ ಮಾಡಿರುವವರು, ಕಂಪೆನಿಯ ನಿರ್ದೇಶಕರು ಮತ್ತು ಷೇರುದಾರರ ವಿವರ ಸೇರಿದಂತೆ ಲಭ್ಯವಿರುವ ಎಲ್ಲ ಮಾಹಿತಿಯನ್ನು ಒದಗಿಸುವಂತೆ ಕೋರ್ಟ್ ಕೇಳಿದೆ.

ಗಾಲಿ ಜನಾರ್ದನ ರೆಡ್ಡಿ 2009-10ರ ಅವಧಿಯಲ್ಲಿ ಸುಮಾರು 7 ರಿಂದ 8 ಮಿಲಿಯನ್ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ವಿವಿಧ ದೇಶಗಳೊಂದಿಗೆ ವಹಿವಾಟು ನಡೆಸಿದ್ದಾರೆ. ಇದರ ಮೊತ್ತವನ್ನು ಆಯಾ ದೇಶಗಳಲ್ಲಿಯೇ ಉಳಿಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೆ, ಜಿಎಲ್‌ಎ ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೆಟ್ ಲಿಮಿಟೆಡ್ ಹೆಸರಿನಲ್ಲಿರುವ ಕಂಪೆನಿ ಮತ್ತು ಬ್ಯಾಂಕ್ ಖಾತೆ ಇದೆಯೇ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿತ್ತು. ಸಿಬಿಐ ಅಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯ ಪ್ರಕಾರ ನ್ಯಾಯಾಲಯ ಸಂಜ್ಞೆಯನ್ನು ತೆಗೆದುಕೊಂಡಿದೆ. ಅಲ್ಲದೆ, ಆರೋಪಿಗೆ ಸಮನ್ಸ್‌ ಜಾರಿ ಮಾಡಿದೆ. ತನಿಖೆ ಮುಂದುವರೆಯುತ್ತಿರುವ ಬೆನ್ನಲ್ಲೇ ಸಿಬಿಐ ಈಗಾಗಲೇ ಮಧ್ಯಂತರ ಆರೋಪ ಪಟ್ಟಿಯನ್ನು 2013ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸಿಬಿಐ ಆಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಗಣಿಗಾರಿಕೆಗೆ ಸಂಬಂಧಿಸಿದಂತೆ ಗುತ್ತಿಗೆ ವಿಷಯದಲ್ಲಿ ವಿವಿಧ ವ್ಯಕ್ತಿಗಳು ನಡೆಸಿರುವ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿರುವ ಆಸ್ತಿಗಳ ಮುಟ್ಟುಗೋಲು ಹಾಕಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರ ಇತ್ತೀಚೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಕುಟುಂಬಸ್ಥರ ಅಕ್ರಮ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಅನುಮತಿ, ಸಿಬಿಐ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿವಿಧ ದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಎನ್ನಲಾದ ಆರೋಪ ಸಂಬಂಧದ ಬಂಡವಾಳವನ್ನು ಪತ್ತೆ ಹಚ್ಚಲು ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ವಿವಿಧ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ಮನವಿ ಮಾಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇ.ಇಂದ್ರಕಲಾ ಅವರು ಸ್ವಿಡ್ಜರ್ಲೆಂಡ್, ಸಿಂಗಾಪುರ, ಯುಎಇ ಮತ್ತು ಐಲ್ ಆಫ್ ಮ್ಯಾನ್ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ಕೋರಿದ್ದಾರೆ. ಆರೋಪಿಗೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 166(ಎ) ಪ್ರಕಾರ ಮನವಿ ಮಾಡುತ್ತಿದ್ದು, ಈ ಪ್ರಕರಣದಲ್ಲಿ ತನಿಖೆಗೆ ಸಹಕಾರ ನೀಡುವುದಕ್ಕಾಗಿ ಕೋರುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

ಸಿಬಿಐ ತನಿಖಾಧಿಕಾರಿಗಳು ಜಿಎಲ್‌ಎ (ಗಾಲಿ ಜನಾರ್ದನ ರೆಡ್ಡಿ) ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೆಟ್ ಲಿಮಿಟೆಡ್‌ನ ಸಂಯೋಜನೆಯ ವಿವರಗಳಂತಹ ಮಾಹಿತಿಯನ್ನು ಸಂಗ್ರಹಿಸಲು ನ್ಯಾಯಾಂಗದ ಸಹಾಯವನ್ನು ಕೋರಿದೆ. ಈ ನಿಟ್ಟಿನಲ್ಲಿ ಮನವಿ ಮಾಡಲಾಗುತ್ತಿದೆ ಎಂದು ನ್ಯಾಯಾಧೀಶರು ಕೋರಿದ್ದಾರೆ. ಜಿಎಲ್‌ಎ ಕಂಪೆನಿಯ ಸ್ವರೂಪ, ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವರ, ಮಾಲೀಕರು ಮತ್ತು ಅಧಿಕೃತವಾಗಿ ಸಹಿ ಹಾಕಿರುವ ವ್ಯಕ್ತಿಯ ವಿವರ, ಅದರ ಮುಂದಿನ ಫಲಾನುಭವಿಗಳು, ಕಂಪೆನಿಯ ಷೇರುಗಳ ವಿವರ, ಅದನ್ನು ಖರೀದಿ ಮಾಡಿರುವವರು ಮತ್ತು ಮಾರಾಟ ಮಾಡಿರುವವರು, ಕಂಪೆನಿಯ ನಿರ್ದೇಶಕರು ಮತ್ತು ಷೇರುದಾರರ ವಿವರ ಸೇರಿದಂತೆ ಲಭ್ಯವಿರುವ ಎಲ್ಲ ಮಾಹಿತಿಯನ್ನು ಒದಗಿಸುವಂತೆ ಕೋರ್ಟ್ ಕೇಳಿದೆ.

ಗಾಲಿ ಜನಾರ್ದನ ರೆಡ್ಡಿ 2009-10ರ ಅವಧಿಯಲ್ಲಿ ಸುಮಾರು 7 ರಿಂದ 8 ಮಿಲಿಯನ್ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ವಿವಿಧ ದೇಶಗಳೊಂದಿಗೆ ವಹಿವಾಟು ನಡೆಸಿದ್ದಾರೆ. ಇದರ ಮೊತ್ತವನ್ನು ಆಯಾ ದೇಶಗಳಲ್ಲಿಯೇ ಉಳಿಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೆ, ಜಿಎಲ್‌ಎ ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೆಟ್ ಲಿಮಿಟೆಡ್ ಹೆಸರಿನಲ್ಲಿರುವ ಕಂಪೆನಿ ಮತ್ತು ಬ್ಯಾಂಕ್ ಖಾತೆ ಇದೆಯೇ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿತ್ತು. ಸಿಬಿಐ ಅಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯ ಪ್ರಕಾರ ನ್ಯಾಯಾಲಯ ಸಂಜ್ಞೆಯನ್ನು ತೆಗೆದುಕೊಂಡಿದೆ. ಅಲ್ಲದೆ, ಆರೋಪಿಗೆ ಸಮನ್ಸ್‌ ಜಾರಿ ಮಾಡಿದೆ. ತನಿಖೆ ಮುಂದುವರೆಯುತ್ತಿರುವ ಬೆನ್ನಲ್ಲೇ ಸಿಬಿಐ ಈಗಾಗಲೇ ಮಧ್ಯಂತರ ಆರೋಪ ಪಟ್ಟಿಯನ್ನು 2013ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸಿಬಿಐ ಆಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಗಣಿಗಾರಿಕೆಗೆ ಸಂಬಂಧಿಸಿದಂತೆ ಗುತ್ತಿಗೆ ವಿಷಯದಲ್ಲಿ ವಿವಿಧ ವ್ಯಕ್ತಿಗಳು ನಡೆಸಿರುವ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿರುವ ಆಸ್ತಿಗಳ ಮುಟ್ಟುಗೋಲು ಹಾಕಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರ ಇತ್ತೀಚೆಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ಕುಟುಂಬಸ್ಥರ ಅಕ್ರಮ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಅನುಮತಿ, ಸಿಬಿಐ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ

Last Updated : Mar 9, 2023, 2:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.