ETV Bharat / state

ಗನ್​ ತೋರಿಸಿ ಬಡ್ಡಿ ಹಣ ವಸೂಲಿ ಮಾಡ್ತಿದ್ದ ಗೋಲ್ಡ್​​ ಮಂಜ: ಈಗ ಆಗಿದ್ದೇನು ಗೊತ್ತಾ? - ಬಡ್ಡಿ ವಸೂಲಿ ಮಾಡುತ್ತಿದ್ದವನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಗನ್ ತೋರಿಸಿ ಬಡ್ಡಿ ಹಣ ವಸೂಲಿ ಮಾಡ್ತಿದ್ದ ಆರೋಪಿಯನ್ನ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗನ್ ತೋರಿಸಿ ಬಡ್ಡಿ ಹಣ ವಸೂಲಿ
author img

By

Published : Oct 20, 2019, 2:52 PM IST

Updated : Oct 20, 2019, 7:38 PM IST

ಬೆಂಗಳೂರು: ನಗರದಲ್ಲಿ ಗನ್ ತೋರಿಸಿ ಬಡ್ಡಿ ವಸೂಲಿ ಮಾಡ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಮಂಜುನಾಥ್ ಅಲಿಯಾಸ್ ಫೈನಾನ್ಸ್ ಮಂಜ (ಗೋಲ್ಡ್ ಮಂಜ) ಬಂಧಿತ ಆರೋಪಿ. ಬಡ್ಡಿ ಹಣ ವಸೂಲಿಗಾಗಿಯೇ ಮಂಜ ಅನಧಿಕೃತವಾಗಿ ಖಾಸಗಿ ಗನ್‌ಮ್ಯಾನ್ ನೇಮಿಸಿಕೊಂಡಿದ್ದ. ಹಣ ನೀಡದವರಿಗೆ ಈತ ಬೆದರಿಕೆ ಹಾಕುತ್ತಿದ್ದ ಎನ್ನಲಾಗ್ತಿದೆ.

ಇತ್ತೀಚೆಗೆ ಮಂಜನಿಂದ ಹಣ ಪಡೆದುಕೊಂಡಿದ್ದ ಉದ್ಯಮಿ‌ ವಿ. ಶೇಖರ್ ಎಂಬವರ ಬಳಿ ಹೆಚ್ಚು ಬಡ್ಡಿ ವಸೂಲಿ ಮಾಡಲು ಮುಂದಾಗಿದ್ದ. ಇದಕ್ಕೆ ಶೇಖರ್​ ನಿರಾಕರಿಸಿದಾಗ ಗನ್​​ ತೋರಿಸಿ, ಹಣ ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಮಂಜ ಹಣ ನೀಡಿ ಜಮೀನಿನ ಮುಂಗಡ ಪತ್ರದ ಕರಾರನ್ನು ನೋಂದಣಿ ಮಾಡಿಸಿಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ.

CCB police arrest Interest giver in benglore
ಗನ್ ತೋರಿಸಿ ಬಡ್ಡಿ ಹಣ ವಸೂಲಿ

ಶೇಖರ್ ಅವರು ಸಿಸಿಬಿ ಇನ್ಸ್​​ಪೆಕ್ಟರ್​ ಪುನೀತ್​​ಕುಮಾರ್ ಅವರಿಗೆ ಈ ಬಗ್ಗೆ​ ದೂರು ನೀಡಿದ್ದರು. ಕರ್ನಾಟಕ ಪ್ರೈವೇಟ್ ಸೆಕ್ಯೂರಿಟಿ ಎಜನ್ಸಿ ಕಾಯ್ದೆ 2005 ಕಲಂ ಅಡಿಯಲ್ಲಿ ಆರೋಪಿಯನ್ನ ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

ಈತ ಮೈಮೇಲೆ‌ ಕೆಜಿಗಟ್ಟಲ್ಲೇ ಚಿನ್ನಾಭರಣ ಹಾಕಿಕೊಂಡು ಬಡ್ಡಿ ವ್ಯವಹಾರ ನಡೆಸುತ್ತಿದ್ದ. ಹಾಗಾಗಿ ಗೋಲ್ಡ್ ಮಂಜ ಎಂದು ಕರೆಯುತ್ತಿದ್ದರು. ಸೆಕ್ಯೂರಿಟಿ ಎಜೆನ್ಸಿ ಅಥವಾ ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆಯದೆ ಅನಧಿಕೃತವಾಗಿ ಗನ್​​ಮ್ಯಾನ್ ಹೊಂದಿದ್ದ. ಅಲ್ಲದೆ, ಪಿಸ್ತೂಲ್, ಡಬಲ್ ಬ್ಯಾರೆಲ್​​ ಗನ್​​​ಗಳಿಗೆ ಪರವಾನಗಿ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸಿರಲಿಲ್ಲ. ಆರೋಪಿಯಿಂದ ಪಿಸ್ತೂಲ್ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬೆಂಗಳೂರು: ನಗರದಲ್ಲಿ ಗನ್ ತೋರಿಸಿ ಬಡ್ಡಿ ವಸೂಲಿ ಮಾಡ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಮಂಜುನಾಥ್ ಅಲಿಯಾಸ್ ಫೈನಾನ್ಸ್ ಮಂಜ (ಗೋಲ್ಡ್ ಮಂಜ) ಬಂಧಿತ ಆರೋಪಿ. ಬಡ್ಡಿ ಹಣ ವಸೂಲಿಗಾಗಿಯೇ ಮಂಜ ಅನಧಿಕೃತವಾಗಿ ಖಾಸಗಿ ಗನ್‌ಮ್ಯಾನ್ ನೇಮಿಸಿಕೊಂಡಿದ್ದ. ಹಣ ನೀಡದವರಿಗೆ ಈತ ಬೆದರಿಕೆ ಹಾಕುತ್ತಿದ್ದ ಎನ್ನಲಾಗ್ತಿದೆ.

ಇತ್ತೀಚೆಗೆ ಮಂಜನಿಂದ ಹಣ ಪಡೆದುಕೊಂಡಿದ್ದ ಉದ್ಯಮಿ‌ ವಿ. ಶೇಖರ್ ಎಂಬವರ ಬಳಿ ಹೆಚ್ಚು ಬಡ್ಡಿ ವಸೂಲಿ ಮಾಡಲು ಮುಂದಾಗಿದ್ದ. ಇದಕ್ಕೆ ಶೇಖರ್​ ನಿರಾಕರಿಸಿದಾಗ ಗನ್​​ ತೋರಿಸಿ, ಹಣ ನೀಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಮಂಜ ಹಣ ನೀಡಿ ಜಮೀನಿನ ಮುಂಗಡ ಪತ್ರದ ಕರಾರನ್ನು ನೋಂದಣಿ ಮಾಡಿಸಿಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ.

CCB police arrest Interest giver in benglore
ಗನ್ ತೋರಿಸಿ ಬಡ್ಡಿ ಹಣ ವಸೂಲಿ

ಶೇಖರ್ ಅವರು ಸಿಸಿಬಿ ಇನ್ಸ್​​ಪೆಕ್ಟರ್​ ಪುನೀತ್​​ಕುಮಾರ್ ಅವರಿಗೆ ಈ ಬಗ್ಗೆ​ ದೂರು ನೀಡಿದ್ದರು. ಕರ್ನಾಟಕ ಪ್ರೈವೇಟ್ ಸೆಕ್ಯೂರಿಟಿ ಎಜನ್ಸಿ ಕಾಯ್ದೆ 2005 ಕಲಂ ಅಡಿಯಲ್ಲಿ ಆರೋಪಿಯನ್ನ ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.

ಈತ ಮೈಮೇಲೆ‌ ಕೆಜಿಗಟ್ಟಲ್ಲೇ ಚಿನ್ನಾಭರಣ ಹಾಕಿಕೊಂಡು ಬಡ್ಡಿ ವ್ಯವಹಾರ ನಡೆಸುತ್ತಿದ್ದ. ಹಾಗಾಗಿ ಗೋಲ್ಡ್ ಮಂಜ ಎಂದು ಕರೆಯುತ್ತಿದ್ದರು. ಸೆಕ್ಯೂರಿಟಿ ಎಜೆನ್ಸಿ ಅಥವಾ ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆಯದೆ ಅನಧಿಕೃತವಾಗಿ ಗನ್​​ಮ್ಯಾನ್ ಹೊಂದಿದ್ದ. ಅಲ್ಲದೆ, ಪಿಸ್ತೂಲ್, ಡಬಲ್ ಬ್ಯಾರೆಲ್​​ ಗನ್​​​ಗಳಿಗೆ ಪರವಾನಗಿ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸಿರಲಿಲ್ಲ. ಆರೋಪಿಯಿಂದ ಪಿಸ್ತೂಲ್ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Intro:ಗನ್ ತೋರಿಸಿ ಬಡ್ಡಿ ವಸೂಲಿ ಮಾಡ್ತಿದ್ದ ಅಸಾಮಿ
ಇದೀಗ ಸಿಸಿವಿ ಪೊಲೀಸರ ವಶಕ್ಕೆ

ಗನ್ ತೋರಿಸಿ ಬಡ್ಡಿ ವಸೂಲಿ ಮಾಡ್ತಿದ್ದ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್ ಅಲಿಯಾಸ್ ಫೈನಾನ್ಸ್ ಮಂಜ, ಗೋಲ್ಡ್ ಮಂಜ ಬಂಧಿತ ಆರೋಪಿ

ಈತ ಬಡ್ಡಿ ವ್ಯವಹಾರ ಕೆಲಸ ಮಾಡ್ತಿದ್ದು ಹಲವು ಮಂದಿಗೆ ಬಡ್ಡಿ ಹಣ ನೀಡಿದ್ದ .ಆದ್ರೆ ಕೆಲವರು ಬಡ್ಡಿ ಹಣ ನೀಡಲು ನಿರಾಕರಣೆ ಮಾಡಿದಾಗ ಈತ‌ ಅನಧಿಕೃತವಾಗಿ ಖಾಸಗಿ ಗನ್‌ಮ್ಯಾನ್ ಇಟ್ಟುಕೊಂಡು ಬಡ್ಡಿ ಹಣ ವಸೂಲಿಗಾಗಿಯೇ ಗನ್ ಮ್ಯಾನ್ ಕರೆದುಕೊಂಡು ಹೋಗಿ ಬಡ್ಡಿ ಹಣ ನೀಡದೆ ಇರುವವರಿಗೆ ಬೆದರಿಕೆ ಹಾಕುತ್ತಿದ್ದ..

ಈ ಮಾಹಿತಿ ಸಿಸಿಬಿ ಇನ್ಸ್ಪೆಕ್ಟರ್ ಪುನೀತ್ ಕುಮಾರ್ ಅವರಿಗೆ ತಿಳಿದು ಆರೋಪಿಯನ್ನ ಬಂಧಿಸಿ ಕರ್ನಾಟಕ ಪ್ರೈವೇಟ್ ಸೆಕ್ಯೂರಿಟಿ ಏಜನ್ಸಿ ಕಾಯ್ದೆ 2005ಕಲಂ ಅಡಿಯಲ್ಲಿ ‌ಆರೋಪಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿ ಫೈನಾನ್ಸ್ ಮಂಜ ಅರೆಸ್ಟ್ ಮಾಡಿ ಆರೋಪಿಯಿಂದ ಮಂಜ ಎರಡು ಗನ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ.Body:KN_bNG_06_CCb_7204498Conclusion:KN_bNG_06_CCb_7204498
Last Updated : Oct 20, 2019, 7:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.