ETV Bharat / state

ನಟೋರಿಯಸ್ ರೌಡಿಶೀಟರ್ ಬೊಂಡ ಮಂಜನ ಮೇಲೆ ಸಿಸಿಬಿ ಪೊಲೀಸರಿಂದ ಫೈರಿಂಗ್​​! - bangalore latest news

ರೌಡಿಶೀಟರ್​​​ನ ಚಲನವಲನದ ಬಗ್ಗೆ ಇಂದು ಖಚಿತ ಮಾಹಿತಿ ಪಡೆದ ಮೇರೆಗೆ ಆತನನ್ನು ಬಂಧಿಸಲು ಇನ್ಸ್​​ಪೆಕ್ಟರ್ ಪುನೀತ್ ಮತ್ತು ತಂಡ ತೆರಳಿತ್ತು. ಪೊಲೀಸರನ್ನು ಕಂಡ ರೌಡಿಶೀಟರ್ ಬೈಕ್​ನಲ್ಲಿ ನಾರಾಯಣನಗರ ಬಳಿ ಪರಾರಿಯಾಗ್ತಿದ್ದಂತೆ ಪೊಲೀಸರು ಅಡ್ಡಗಟ್ಟಿದ್ದಾರೆ. ಈ ವೇಳೆ ಏಕಾಏಕಿ ಸಿಸಿಬಿ ಹೆಡ್​ ಕಾನ್ಸ್​​ಟೇಬಲ್​ ನಾಗರಾಜ್ ಕೈಗೆ ಡ್ರ್ಯಾಗರ್​ನಿಂದ ಹಲ್ಲೆ ಮಾಡಿದ್ದಾನೆ‌. ಬಳಿಕ ಪೊಲೀಸರು ಆತನ ಮೇಲೆ ಫೈರಿಂಗ್​ ನಡೆಸಿದ್ದಾರೆ.

CCB police firing on Notorious Rowdy sheeter!
ನಟೋರಿಯಸ್ ರೌಡಿಶೀಟರ್ ಮೇಲೆ ಸಿಸಿಬಿ ಪೊಲೀಸರಿಂದ ಫೈರಿಂಗ್​​!
author img

By

Published : Nov 18, 2020, 9:34 AM IST

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕೋಣನಕುಂಟೆ ಠಾಣಾ ವ್ಯಾಪ್ತಿಯ ನಾರಾಯಣನಗರ ಡಬಲ್ ರೋಡ್​​ನಲ್ಲಿ ಈ ಘಟನೆ ನಡೆದಿದೆ‌.

ನಟೋರಿಯಸ್ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಗುಂಡು ಹಾರಿಸಲಾಗಿದೆ. ಬಂಧನದ ವೇಳೆ ಸಿಸಿಬಿ ಹೆಡ್ ಕಾನ್ಸ್​​ಟೇಬಲ್ ನಾಗರಾಜ್ ಗಾಯಗೊಂಡಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಲಘಟ್ಟಪುರ ಠಾಣೆ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ವಿರುದ್ಧ 23ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಕಳೆದ ಒಂದು ತಿಂಗಳಿನಿಂದ ಆರೋಪಿ ಪತ್ತೆಗಾಗಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಕೋಣನಕುಂಟೆಯಲ್ಲಿ ರೌಡಿಶೀಟರ್​​​ನ ಚಲನವಲನದ ಬಗ್ಗೆ ಇಂದು ಖಚಿತ ಮಾಹಿತಿ ಪಡೆದ ಮೇರೆಗೆ ಆತನನ್ನು ಬಂಧಿಸಲು ಇನ್ಸ್​​ಪೆಕ್ಟರ್ ಪುನೀತ್ ಮತ್ತು ತಂಡ ತೆರಳಿತ್ತು. ಪೊಲೀಸರನ್ನು ಕಂಡ ರೌಡಿಶೀಟರ್ ಬೈಕ್​ನಲ್ಲಿ ನಾರಾಯಣನಗರ ಬಳಿ ಪರಾರಿಯಾಗ್ತಿದ್ದಂತೆ ಪೊಲೀಸರು ಅಡ್ಡಗಟ್ಟಿದ್ದಾರೆ. ಈ ವೇಳೆ ಏಕಾಏಕಿ ಸಿಸಿಬಿ ಹೆಡ್​ ಕಾನ್ಸ್​ಟೇಬಲ್​ ನಾಗರಾಜ್ ಕೈಗೆ ಡ್ರ್ಯಾಗರ್​ನಿಂದ ಹಲ್ಲೆ ಮಾಡಿದ್ದಾನೆ‌.

ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರೂ ಪ್ರತಿರೋಧವೊಡ್ಡಿ, ಇನ್ಸ್​​ಪೆಕ್ಟರ್ ಮೇಲೂ ಹಲ್ಲೆಗೆ ಮುಂದಾಗಿದ್ದ. ಹಾಗಾಗಿ ಇನ್ಸ್​​ಪೆಕ್ಟರ್​​ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಮೇಲೆ ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕೋಣನಕುಂಟೆ ಠಾಣಾ ವ್ಯಾಪ್ತಿಯ ನಾರಾಯಣನಗರ ಡಬಲ್ ರೋಡ್​​ನಲ್ಲಿ ಈ ಘಟನೆ ನಡೆದಿದೆ‌.

ನಟೋರಿಯಸ್ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಗುಂಡು ಹಾರಿಸಲಾಗಿದೆ. ಬಂಧನದ ವೇಳೆ ಸಿಸಿಬಿ ಹೆಡ್ ಕಾನ್ಸ್​​ಟೇಬಲ್ ನಾಗರಾಜ್ ಗಾಯಗೊಂಡಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಲಘಟ್ಟಪುರ ಠಾಣೆ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ವಿರುದ್ಧ 23ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಕಳೆದ ಒಂದು ತಿಂಗಳಿನಿಂದ ಆರೋಪಿ ಪತ್ತೆಗಾಗಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಕೋಣನಕುಂಟೆಯಲ್ಲಿ ರೌಡಿಶೀಟರ್​​​ನ ಚಲನವಲನದ ಬಗ್ಗೆ ಇಂದು ಖಚಿತ ಮಾಹಿತಿ ಪಡೆದ ಮೇರೆಗೆ ಆತನನ್ನು ಬಂಧಿಸಲು ಇನ್ಸ್​​ಪೆಕ್ಟರ್ ಪುನೀತ್ ಮತ್ತು ತಂಡ ತೆರಳಿತ್ತು. ಪೊಲೀಸರನ್ನು ಕಂಡ ರೌಡಿಶೀಟರ್ ಬೈಕ್​ನಲ್ಲಿ ನಾರಾಯಣನಗರ ಬಳಿ ಪರಾರಿಯಾಗ್ತಿದ್ದಂತೆ ಪೊಲೀಸರು ಅಡ್ಡಗಟ್ಟಿದ್ದಾರೆ. ಈ ವೇಳೆ ಏಕಾಏಕಿ ಸಿಸಿಬಿ ಹೆಡ್​ ಕಾನ್ಸ್​ಟೇಬಲ್​ ನಾಗರಾಜ್ ಕೈಗೆ ಡ್ರ್ಯಾಗರ್​ನಿಂದ ಹಲ್ಲೆ ಮಾಡಿದ್ದಾನೆ‌.

ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರೂ ಪ್ರತಿರೋಧವೊಡ್ಡಿ, ಇನ್ಸ್​​ಪೆಕ್ಟರ್ ಮೇಲೂ ಹಲ್ಲೆಗೆ ಮುಂದಾಗಿದ್ದ. ಹಾಗಾಗಿ ಇನ್ಸ್​​ಪೆಕ್ಟರ್​​ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.