ಬೆಂಗಳೂರು: ನಗರದ ಪಬ್ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 20 ಮಂದಿ ಜೂಜುಕೋರರನ್ನು ಬಂಧಿಸಿದ್ದಾರೆ.
ಕೆ.ಆರ್.ಪುರಂ ಬಳಿ ಇರುವ ಓಂ ಶ್ರೀ ರಿಕ್ರೀಯೇಷನ್ ಪಬ್ನಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿತ್ತು. ಅದರಂತೆ ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.
ದಾಳಿಯಲ್ಲಿ ತೆಲಂಗಾಣ ಮತ್ತು ಕರ್ನಾಟಕ ರಾಜ್ಯದ 20 ಮಂದಿ ಜೂಜಾಟದಲ್ಲಿ ಭಾಗಿಯಾಗಿದ್ರು. ಇನ್ನು ಕ್ಲಬ್ ಓನರ್ ಲೋಕೇಶ್ ಸೇರಿದಂತೆ ಒಟ್ಟು 22 ಜನರನ್ನ ಹಾಗೂ 2 ಲಕ್ಷ ರೂ. ಹಣ ವಶಕ್ಕೆ ಪಡೆದ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ