ETV Bharat / state

ರಾಜ್ಯದ 'ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌' ಕೇಂದ್ರ ಮೆಚ್ಚಿದೆ: ಸಚಿವ ಡಾ.ಕೆ.ಸುಧಾಕರ್‌ - Etv bharat kannada

ರಾಜ್ಯ ಸರ್ಕಾರ ಆರಂಭಿಸಿರುವ ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಮೆಚ್ಚಿಕೊಂಡಿದೆ. ಅಲ್ಲದೇ ಇದನ್ನು ದೇಶಾದ್ಯಂತ ಜಾರಿಗೊಳಿಸುವುದಾಗಿ ಹೇಳಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

Minister Dr. K. Sudhakar
'ಬ್ರೈನ್‌ ಹೆಲ್ತ್‌ ಕ್ಲಿನಿಕ್‌' ಉದ್ಘಾಟನಾ ಸಮಾರಂಭ
author img

By

Published : Jul 22, 2022, 5:14 PM IST

ಬೆಂಗಳೂರು: ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ 'ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌' ಅನ್ನು ಕೇಂದ್ರ ಸರ್ಕಾರ ಮೆಚ್ಚಿದೆ. ದೇಶಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಿಮ್ಹಾನ್ಸ್‌ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ ಹಾಗೂ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ 'ಬ್ರೈನ್‌ ಹೆಲ್ತ್‌ ಕ್ಲಿನಿಕ್‌' ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್‌ ಮಾಡಿದ ವೈದ್ಯರಿದ್ದಾರೆ. ಮಾನಸಿಕ ರೋಗಿಗಳು ಇವರ ಬಳಿ ಬಂದಾಗ ಚಿಕಿತ್ಸೆ ನೀಡಲು ವಿಶೇಷ ತರಬೇತಿ ಬೇಕು.

ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಿಮ್ಹಾನ್ಸ್​​​​​​ನ ತಜ್ಞರು ಈಗಾಗಲೇ 100 ವೈದ್ಯರಿಗೆ ತರಬೇತಿ ನೀಡಿದ್ದಾರೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ. ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆ ಪಡೆಯಬಹುದು ಎಂದು ತಿಳಿಸಿದರು.

Minister Dr. K. Sudhakar
ವಿಶ್ವ ಮೆದುಳು ಆರೋಗ್ಯ ದಿನ

ರೋಗಿಗಳಿಗೆ ಆಪ್ತ ಸಮಾಲೋಚನೆ ಅಗತ್ಯ: ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುವ ತರಬೇತಿ ಕೊಡುವ ಬಗ್ಗೆ ಎರಡು ವರ್ಷಗಳ ಹಿಂದೆಯೇ ಚರ್ಚೆ ನಡೆದಿತ್ತು. ಕೋವಿಡ್‌ ಬಂದ ಆರಂಭದಲ್ಲಿ ರೋಗಿಯೊಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೊರೊನಾ ಪಾಸಿಟಿವ್‌ ಎಂದು ವರದಿ ಬಂದ ಕೂಡಲೇ ಅವರು ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ರೋಗದಿಂದ ಸಾಯುವುದಕ್ಕಿಂತ ಭಯದಿಂದಲೇ ಕೆಲವರು ಸತ್ತಿದ್ದರು. ಇಂತಹ ರೋಗಿಗಳಿಗೆ ಆಪ್ತ ಸಮಾಲೋಚನೆ ಅಗತ್ಯವಿದೆ. ಇದಕ್ಕಾಗಿ ನಿಮ್ಹಾನ್ಸ್‌ ಸಹಯೋಗದಲ್ಲಿ ಆಪ್ತ ಸಮಾಲೋಚನೆ ಆರಂಭಿಸಲಾಯಿತು.

ಪ್ರತಿದಿನ ಒಂದು ಆಟ ಆಡಿ: ಜನರು ಯಾವುದೇ ಮಾನಸಿಕ ಸಮಸ್ಯೆ ಇದ್ದರೂ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು. ನಿತ್ಯ ಒಂದು ಕ್ರೀಡೆ ಆಡಬೇಕು ಅಥವಾ ಒಂದು ಸಂಗೀತ ಸಾಧನವನ್ನು ಕಲಿಯಬೇಕು. ಇದರಿಂದಾಗಿ ಮೆದುಳಿನ ಆರೋಗ್ಯ ಉತ್ತಮವಾಗುತ್ತದೆ. ಜನಪ್ರಿಯ ಕ್ರಿಕೆಟಿಗ ರಾಬಿನ್‌ ಉತ್ತಪ್ಪ, ಕರ್ನಾಟಕದ ಮೆದುಳು ಆರೋಗ್ಯ ಉಪಕ್ರಮದ ರಾಯಭಾರಿಯಾಗಿದ್ದಾರೆ. ಅವರು ಉಚಿತವಾಗಿ ಈ ಕೆಲಸ ಮಾಡುತ್ತಿದ್ದು, ನಿಜವಾದ ಹೀರೋ ಆಗಿದ್ದಾರೆ ಎಂದು ಸಚಿವರು ಶ್ಲಾಘಿಸಿದರು.

ಸದಾ ಕ್ರೀಯಾಶೀಲರಾಗಿರಬೇಕು: ಒಬ್ಬ ವ್ಯಕ್ತಿಗೆ ಕೇವಲ ದೈಹಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸಾಲುವುದಿಲ್ಲ. ಮಾನಸಿಕ ಆರೋಗ್ಯ ಕೂಡ ಮುಖ್ಯವಾಗುತ್ತದೆ. ಮೆದುಳಿನ ಆರೋಗ್ಯ ನಮ್ಮ ನಡವಳಿಕೆ, ಅಭಿಪ್ರಾಯ ವ್ಯಕ್ತಪಡಿಸುವುದು, ನಗುವುದು, ಅಳುವುದು, ಎಲ್ಲ ಭಾವನೆಗಳನ್ನು ವ್ಯಕ್ತಪಡಿಸಲು ಮೆದುಳು ಅಗತ್ಯ. ನೆನಪು ಎನ್ನುವುದು ಸುಂದರವಾದ ಅನುಭವ. ಆ ನೆನಪನ್ನು ಹಿಡಿದಿಟ್ಟುಕೊಳ್ಳುವುದೇ ಮೆದುಳು. ನೆನಪಿನ ಶಕ್ತಿ ಇಲ್ಲದಿದ್ದರೆ ಭವಿಷ್ಯ ಸಂಪೂರ್ಣ ಮಂಕಾಗಿಬಿಡುತ್ತದೆ. ದೇಹದ ಎಲ್ಲ ಅಂಗಗಳು ಉತ್ತಮವಾಗಿರಲು ಮೆದುಳು ಮುಖ್ಯ. ಇದಕ್ಕಾಗಿ ಸದಾ ಕ್ರೀಯಾಶೀಲವಾಗಿರಬೇಕು.

Minister Dr. K. Sudhakar
'ಬ್ರೈನ್‌ ಹೆಲ್ತ್‌ ಕ್ಲಿನಿಕ್‌' ಉದ್ಘಾಟನಾ ಸಮಾರಂಭ

ಆರಂಭಿಕ ಹಂತದಲ್ಲೇ ವೈದ್ಯರ ಬಳಿ ಹೋಗಿ: ಉತ್ತಮ ಆರೋಗ್ಯಕ್ಕೆ ಕನಿಷ್ಠ 6-8 ಗಂಟೆ ನಿದ್ದೆ ಮಾಡಬೇಕಾಗುತ್ತದೆ. ನಿದ್ರಾಹೀನತೆ ಉಂಟಾದರೆ ಆರೋಗ್ಯವೂ ಕೆಡುತ್ತದೆ. ಈ ಬಗ್ಗೆ ಜನರಲ್ಲಿ ಅರಿವು ಅಗತ್ಯ. ಮಾನಸಿಕ ರೋಗವನ್ನು ಜನರು ತಪ್ಪಾಗಿ ಭಾವಿಸುತ್ತಿದ್ದಾರೆ. ಮಾನಸಿಕ ಆರೋಗ್ಯ ತಜ್ಞರ ಬಳಿ ಹೋದರೆ, ಆ ವ್ಯಕ್ತಿಗೆ ತಲೆ ಸರಿ ಇಲ್ಲ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಇದರಿಂದಾಗಿ ಅನೇಕರು ವೈದ್ಯರ ಬಳಿ ಹೋಗುವುದೇ ಇಲ್ಲ. ಆರಂಭಿಕ ಹಂತದಲ್ಲೇ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದರೆ ರೋಗ ನಿವಾರಣೆ ಸಾಧ್ಯ. ಆದರೆ ಬಡತನ, ಸಮಾಜದ ಬಗ್ಗೆ ಆತಂಕ, ಅರಿವಿನ ಕೊರತೆ, ಸೌಲಭ್ಯಗಳ ಕೊರತೆ ಮೊದಲಾದ ಕಾರಣಗಳಿಂದ ಮಾನಸಿಕ ಅನಾರೋಗ್ಯಕ್ಕೊಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 480 ' ನಮ್ಮ ಕ್ಲಿನಿಕ್' ಆರಂಭ: ಡಾ.ಕೆ.ಸುಧಾಕರ್​

ನಿಮ್ಹಾನ್ಸ್‌ ಸಂಸ್ಥೆ ಇಡೀ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದಿದ್ದು, ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಜನರು ಕೂಡ ಇದೇ ಆಸ್ಪತ್ರೆಗೆ ಬರುತ್ತಿದ್ದಾರೆ. ಇಲ್ಲಿ ಟ್ರಾಮಾ ಸೆಂಟರ್‌ ಆರಂಭಿಸುವ ಕುರಿತು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರ ಅನುಮತಿ ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ 'ನಮ್ಮ ಕ್ಲಿನಿಕ್‌' ಮೂಲಕ ಎಲ್ಲರಿಗೂ ಪ್ರಾಥಮಿಕ ಆರೋಗ್ಯ ಸೇವೆ ನೀಡಲಿದೆ ಎಂದು ಹೇಳಿದರು.

ಬೆಂಗಳೂರು: ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ 'ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌' ಅನ್ನು ಕೇಂದ್ರ ಸರ್ಕಾರ ಮೆಚ್ಚಿದೆ. ದೇಶಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಿಮ್ಹಾನ್ಸ್‌ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ ಹಾಗೂ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ 'ಬ್ರೈನ್‌ ಹೆಲ್ತ್‌ ಕ್ಲಿನಿಕ್‌' ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್‌ ಮಾಡಿದ ವೈದ್ಯರಿದ್ದಾರೆ. ಮಾನಸಿಕ ರೋಗಿಗಳು ಇವರ ಬಳಿ ಬಂದಾಗ ಚಿಕಿತ್ಸೆ ನೀಡಲು ವಿಶೇಷ ತರಬೇತಿ ಬೇಕು.

ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಿಮ್ಹಾನ್ಸ್​​​​​​ನ ತಜ್ಞರು ಈಗಾಗಲೇ 100 ವೈದ್ಯರಿಗೆ ತರಬೇತಿ ನೀಡಿದ್ದಾರೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ. ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆ ಪಡೆಯಬಹುದು ಎಂದು ತಿಳಿಸಿದರು.

Minister Dr. K. Sudhakar
ವಿಶ್ವ ಮೆದುಳು ಆರೋಗ್ಯ ದಿನ

ರೋಗಿಗಳಿಗೆ ಆಪ್ತ ಸಮಾಲೋಚನೆ ಅಗತ್ಯ: ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುವ ತರಬೇತಿ ಕೊಡುವ ಬಗ್ಗೆ ಎರಡು ವರ್ಷಗಳ ಹಿಂದೆಯೇ ಚರ್ಚೆ ನಡೆದಿತ್ತು. ಕೋವಿಡ್‌ ಬಂದ ಆರಂಭದಲ್ಲಿ ರೋಗಿಯೊಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೊರೊನಾ ಪಾಸಿಟಿವ್‌ ಎಂದು ವರದಿ ಬಂದ ಕೂಡಲೇ ಅವರು ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ರೋಗದಿಂದ ಸಾಯುವುದಕ್ಕಿಂತ ಭಯದಿಂದಲೇ ಕೆಲವರು ಸತ್ತಿದ್ದರು. ಇಂತಹ ರೋಗಿಗಳಿಗೆ ಆಪ್ತ ಸಮಾಲೋಚನೆ ಅಗತ್ಯವಿದೆ. ಇದಕ್ಕಾಗಿ ನಿಮ್ಹಾನ್ಸ್‌ ಸಹಯೋಗದಲ್ಲಿ ಆಪ್ತ ಸಮಾಲೋಚನೆ ಆರಂಭಿಸಲಾಯಿತು.

ಪ್ರತಿದಿನ ಒಂದು ಆಟ ಆಡಿ: ಜನರು ಯಾವುದೇ ಮಾನಸಿಕ ಸಮಸ್ಯೆ ಇದ್ದರೂ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು. ನಿತ್ಯ ಒಂದು ಕ್ರೀಡೆ ಆಡಬೇಕು ಅಥವಾ ಒಂದು ಸಂಗೀತ ಸಾಧನವನ್ನು ಕಲಿಯಬೇಕು. ಇದರಿಂದಾಗಿ ಮೆದುಳಿನ ಆರೋಗ್ಯ ಉತ್ತಮವಾಗುತ್ತದೆ. ಜನಪ್ರಿಯ ಕ್ರಿಕೆಟಿಗ ರಾಬಿನ್‌ ಉತ್ತಪ್ಪ, ಕರ್ನಾಟಕದ ಮೆದುಳು ಆರೋಗ್ಯ ಉಪಕ್ರಮದ ರಾಯಭಾರಿಯಾಗಿದ್ದಾರೆ. ಅವರು ಉಚಿತವಾಗಿ ಈ ಕೆಲಸ ಮಾಡುತ್ತಿದ್ದು, ನಿಜವಾದ ಹೀರೋ ಆಗಿದ್ದಾರೆ ಎಂದು ಸಚಿವರು ಶ್ಲಾಘಿಸಿದರು.

ಸದಾ ಕ್ರೀಯಾಶೀಲರಾಗಿರಬೇಕು: ಒಬ್ಬ ವ್ಯಕ್ತಿಗೆ ಕೇವಲ ದೈಹಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸಾಲುವುದಿಲ್ಲ. ಮಾನಸಿಕ ಆರೋಗ್ಯ ಕೂಡ ಮುಖ್ಯವಾಗುತ್ತದೆ. ಮೆದುಳಿನ ಆರೋಗ್ಯ ನಮ್ಮ ನಡವಳಿಕೆ, ಅಭಿಪ್ರಾಯ ವ್ಯಕ್ತಪಡಿಸುವುದು, ನಗುವುದು, ಅಳುವುದು, ಎಲ್ಲ ಭಾವನೆಗಳನ್ನು ವ್ಯಕ್ತಪಡಿಸಲು ಮೆದುಳು ಅಗತ್ಯ. ನೆನಪು ಎನ್ನುವುದು ಸುಂದರವಾದ ಅನುಭವ. ಆ ನೆನಪನ್ನು ಹಿಡಿದಿಟ್ಟುಕೊಳ್ಳುವುದೇ ಮೆದುಳು. ನೆನಪಿನ ಶಕ್ತಿ ಇಲ್ಲದಿದ್ದರೆ ಭವಿಷ್ಯ ಸಂಪೂರ್ಣ ಮಂಕಾಗಿಬಿಡುತ್ತದೆ. ದೇಹದ ಎಲ್ಲ ಅಂಗಗಳು ಉತ್ತಮವಾಗಿರಲು ಮೆದುಳು ಮುಖ್ಯ. ಇದಕ್ಕಾಗಿ ಸದಾ ಕ್ರೀಯಾಶೀಲವಾಗಿರಬೇಕು.

Minister Dr. K. Sudhakar
'ಬ್ರೈನ್‌ ಹೆಲ್ತ್‌ ಕ್ಲಿನಿಕ್‌' ಉದ್ಘಾಟನಾ ಸಮಾರಂಭ

ಆರಂಭಿಕ ಹಂತದಲ್ಲೇ ವೈದ್ಯರ ಬಳಿ ಹೋಗಿ: ಉತ್ತಮ ಆರೋಗ್ಯಕ್ಕೆ ಕನಿಷ್ಠ 6-8 ಗಂಟೆ ನಿದ್ದೆ ಮಾಡಬೇಕಾಗುತ್ತದೆ. ನಿದ್ರಾಹೀನತೆ ಉಂಟಾದರೆ ಆರೋಗ್ಯವೂ ಕೆಡುತ್ತದೆ. ಈ ಬಗ್ಗೆ ಜನರಲ್ಲಿ ಅರಿವು ಅಗತ್ಯ. ಮಾನಸಿಕ ರೋಗವನ್ನು ಜನರು ತಪ್ಪಾಗಿ ಭಾವಿಸುತ್ತಿದ್ದಾರೆ. ಮಾನಸಿಕ ಆರೋಗ್ಯ ತಜ್ಞರ ಬಳಿ ಹೋದರೆ, ಆ ವ್ಯಕ್ತಿಗೆ ತಲೆ ಸರಿ ಇಲ್ಲ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಇದರಿಂದಾಗಿ ಅನೇಕರು ವೈದ್ಯರ ಬಳಿ ಹೋಗುವುದೇ ಇಲ್ಲ. ಆರಂಭಿಕ ಹಂತದಲ್ಲೇ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದರೆ ರೋಗ ನಿವಾರಣೆ ಸಾಧ್ಯ. ಆದರೆ ಬಡತನ, ಸಮಾಜದ ಬಗ್ಗೆ ಆತಂಕ, ಅರಿವಿನ ಕೊರತೆ, ಸೌಲಭ್ಯಗಳ ಕೊರತೆ ಮೊದಲಾದ ಕಾರಣಗಳಿಂದ ಮಾನಸಿಕ ಅನಾರೋಗ್ಯಕ್ಕೊಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 480 ' ನಮ್ಮ ಕ್ಲಿನಿಕ್' ಆರಂಭ: ಡಾ.ಕೆ.ಸುಧಾಕರ್​

ನಿಮ್ಹಾನ್ಸ್‌ ಸಂಸ್ಥೆ ಇಡೀ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದಿದ್ದು, ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಜನರು ಕೂಡ ಇದೇ ಆಸ್ಪತ್ರೆಗೆ ಬರುತ್ತಿದ್ದಾರೆ. ಇಲ್ಲಿ ಟ್ರಾಮಾ ಸೆಂಟರ್‌ ಆರಂಭಿಸುವ ಕುರಿತು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರ ಅನುಮತಿ ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ 'ನಮ್ಮ ಕ್ಲಿನಿಕ್‌' ಮೂಲಕ ಎಲ್ಲರಿಗೂ ಪ್ರಾಥಮಿಕ ಆರೋಗ್ಯ ಸೇವೆ ನೀಡಲಿದೆ ಎಂದು ಹೇಳಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.