ETV Bharat / state

ಗೆಲುವಿಗಾಗಿ ಚಂಡಿಕಾಹೋಮದ ಮೊರೆಹೋದ ಎಸ್ ಟಿ ಸೋಮಶೇಖರ್..

author img

By

Published : Dec 3, 2019, 3:10 PM IST

ಉಪಸಮರದ ಗೆಲುವಿಗಾಗಿ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಚಂಡಿಕಾಹೋಮ ಏರ್ಪಡಿಸಿದ್ದಾರೆ.

Chandikahoma
ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಚಂಡಿಕಾಹೋಮ

ಬೆಂಗಳೂರು: ಯಶವಂತಪುರ ಉಪಸಮರದ ಗೆಲುವಿಗಾಗಿ ಕಮಲ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಇಂದು ವಿದ್ಯಾನಗರದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಏರ್ಪಡಿಸಿರುವ ಚಂಡಿಕಾಹೋಮದಲ್ಲಿ ಪಾಲ್ಗೊಂಡರು. ಚಂಡಿಕಾಹೋಮದಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ, ಸಂಸದೆ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದರು.

ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಚಂಡಿಕಾಹೋಮ..

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಉಪಚುನಾವಣೆ ಬಂದಿರೋದಕ್ಕೆ ಕಾರಣ ಏನು ಎಂಬುದು ಎಲ್ಲರಿಗೂ ಗೊತ್ತು. ಕಳೆದ 14 ತಿಂಗಳ ಕಾಲ ಸಮ್ಮಿಶ್ರ ಸರ್ಕಾರವಿತ್ತು. ಚುನಾವಣಾ ಫಲಿತಾಂಶ ಬಂದ ಅರ್ಧ ಗಂಟೆಯಲ್ಲಿ ಅವಸರವಸರವಾಗಿ ಸರ್ಕಾರ ರಚನೆ ಮಾಡಿದ್ದರು. ಆದರೆ, ಆ ಸರ್ಕಾರದ ಆಡಳಿತದಲ್ಲಿ ಯಾವ ಸ್ಪಷ್ಟತೆಯೂ ಇರಲಿಲ್ಲ. ಜನರಿಗೆ ನಿರಾಸೆಯಾಯಿತು. ಜನರ ಕಷ್ಟ ಸುಖಗಳಿಗೆ ಅವರು ಸ್ಪಂದಿಸಲಿಲ್ಲ. ಜನರ ಮನಸ್ಸಿನಲ್ಲಿ ಕುದಿಯುತ್ತಿದ್ದ ಭಾವನೆಗಳಿಗೆ ಎಸ್ ಟಿ ಸೋಮಶೇಖರ್ ಮತ್ತು ಮುನಿರತ್ನ ಸ್ಪಷ್ಟ ರೂಪ ಕೊಟ್ಟರು‌. ಆದ್ದರಿಂದ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬರುವಂತಾಯ್ತು ಎಂದರು.

ಬೆಂಗಳೂರು: ಯಶವಂತಪುರ ಉಪಸಮರದ ಗೆಲುವಿಗಾಗಿ ಕಮಲ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಇಂದು ವಿದ್ಯಾನಗರದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಏರ್ಪಡಿಸಿರುವ ಚಂಡಿಕಾಹೋಮದಲ್ಲಿ ಪಾಲ್ಗೊಂಡರು. ಚಂಡಿಕಾಹೋಮದಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ, ಸಂಸದೆ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದರು.

ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಚಂಡಿಕಾಹೋಮ..

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಉಪಚುನಾವಣೆ ಬಂದಿರೋದಕ್ಕೆ ಕಾರಣ ಏನು ಎಂಬುದು ಎಲ್ಲರಿಗೂ ಗೊತ್ತು. ಕಳೆದ 14 ತಿಂಗಳ ಕಾಲ ಸಮ್ಮಿಶ್ರ ಸರ್ಕಾರವಿತ್ತು. ಚುನಾವಣಾ ಫಲಿತಾಂಶ ಬಂದ ಅರ್ಧ ಗಂಟೆಯಲ್ಲಿ ಅವಸರವಸರವಾಗಿ ಸರ್ಕಾರ ರಚನೆ ಮಾಡಿದ್ದರು. ಆದರೆ, ಆ ಸರ್ಕಾರದ ಆಡಳಿತದಲ್ಲಿ ಯಾವ ಸ್ಪಷ್ಟತೆಯೂ ಇರಲಿಲ್ಲ. ಜನರಿಗೆ ನಿರಾಸೆಯಾಯಿತು. ಜನರ ಕಷ್ಟ ಸುಖಗಳಿಗೆ ಅವರು ಸ್ಪಂದಿಸಲಿಲ್ಲ. ಜನರ ಮನಸ್ಸಿನಲ್ಲಿ ಕುದಿಯುತ್ತಿದ್ದ ಭಾವನೆಗಳಿಗೆ ಎಸ್ ಟಿ ಸೋಮಶೇಖರ್ ಮತ್ತು ಮುನಿರತ್ನ ಸ್ಪಷ್ಟ ರೂಪ ಕೊಟ್ಟರು‌. ಆದ್ದರಿಂದ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬರುವಂತಾಯ್ತು ಎಂದರು.

Intro:Body:ಗೆಲುವಿಗಾಗಿ ಚಂಡಿಕಾಹೋಮದ ಮೊರೆಹೋದ ಎಸ್.ಟಿ.ಸೋಮಶೇಖರ್.


ಬೆಂಗಳೂರು: ಯಶವಂತಪುರ ಉಪಸಮರದ ಗೆಲುವಿಗಾಗಿ ಕಮಲ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಇಂದು ವಿದ್ಯಾನ್ಯ ನಗರದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಏರ್ಪಡಿಸಿರುವ ಚಂಡಿಕಾಹೋಮದಲ್ಲಿ ಪಾಲ್ಗೊಂಡರು. ದಂಪತಿ ಸಹಿತ ಪೂರ್ಣಾಹುತಿಯಲ್ಲಿ ಪಾಲ್ಗೊಂಡ ಎಸ್.ಟಿ.ಸೋಮಶೇಖರ್. ಮಾಜಿ ಸಿಎಂ ಎಸ್.ಎಂ.ಕೃಷ್ಣ,ಸಂಸದೆ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದರು.


ಇದೆ ಸಂದರ್ಭದಲ್ಲಿ ಮಾತನ್ನಾಡಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇದೆ ವೇಳೆ ಮಾತನ್ನಾಡಿ ಉಪಚುನಾವಣೆ ಬಂದಿರೋದಕ್ಕೆ ಕಾರಣ ಏನು ಎಂಬುದು ಎಲ್ಲರಿಗೂ ಗೊತ್ತು.ಕಳೆದ 14ತಿಂಗಳ ಕಾಲ ಸಮ್ಮಿಶ್ರ ಸರ್ಕಾರ ಇತ್ತು.ಚುನಾವಣಾ ಫಲಿತಾಂಶ ಬಂದ ಅರ್ದಗಂಟೆಯಲ್ಲಿ ಅವಸರವಸರವಾಗಿ ಸರ್ಕಾರ ರಚನೆ ಮಾಡಿದ್ದರು.ಆದರೆ ಆ ಸರ್ಕಾರದ ಆಡಳಿತದಲ್ಲಿ ಯಾವ ಸ್ಪಷ್ಟತೆಯೂ ಇರಲಿಲ್ಲ..ಜನರಿಗೆ ನಿರಾಶೆಯಾಯ್ತು.ಜನರ ಕಷ್ಟ ಸುಖಗಳಿಗೆ ಅವರು ಸ್ಪಂದಿಸಲಿಲ್ಲ.ಜನರ ಮನಸ್ಸಿನಲ್ಲಿ ಕುದಿಯುತ್ತಿದ್ದ ಭಾವನೆಗಳಿಗೆ ಎಸ್.ಟಿ.ಸೋಮಶೇಖರ್ ಮತ್ತು ಮುನಿರತ್ನ ಸ್ಪಷ್ಟ ರೂಪ ಕೊಟ್ಟರು‌.ಅದರಿಂದ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬರುವಂತಾಯ್ತು ಎಂದರು.


ಹಾಗೂ ಈ ಕ್ಷೇತ್ರಕ್ಕೆ 760 ಕೋಟಿ ರೂ.ಕೊಟ್ಟಿದ್ದಾರೆ‌.ಇದನ್ನು ಪಡೆಯಲು ಸೋಮಶೇಖರ್ ಅದೆಷ್ಡು ಯಾಗ ಮಾಡಬೇಕಿತ್ತೋ.ಯಡಿಯೂರಪ್ಪನವರ ವಿಶೇಷ ಗುಣ ಎಂದರೆ ಯಾವುದೇ ನಿರ್ಧಾರ ತಕ್ಷಣ ತೆಗೆದುಕೊಂಡು ಜಾರಿಗೆ ತರುತ್ತಾರೆ ಎಂದು ಬಿ ಎಸ್ ವೈ ರನ್ನು ಕೊಂಡಾಡಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.