ETV Bharat / state

ನನ್ನ‌ ಹೆಸರು ಬಳಸಿಕೊಂಡು ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ - ಸೈಬರ್ ಕ್ರೈಂ ಪೊಲೀಸರಿಗೆ ಚಂದ್ರಶೇಖರ್ ಕಂಬಾರ ದೂರು

ಚಂಡೀಗಢ, ಕೋಲ್ಕತ್ತಾದಲ್ಲಿರುವ ನನ್ನ ಸ್ನೇಹಿತರೊಬ್ಬರಿಗೆ ಹಣ ಕೇಳಿ ವಾಟ್ಸ್​​ಆ್ಯಪ್ ಸಂದೇಶ ಮಾಡಿದ್ದಾರೆ. ನಾನು ತೊಂದರೆಯಲ್ಲಿದ್ದೀನಿ, ಹಣದ ಸಹಾಯಬೇಕಿದೆ ಅಂದಿದ್ದಾರೆ ಎಂದು ಚಂದ್ರಶೇಖರ ಕಂಬಾರ ಹೇಳಿದರು.

chandrashekhara-kambara-give-a-complaint-on-against-who-asking-money-use-of-his-name
ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ
author img

By

Published : Jun 2, 2022, 3:47 PM IST

Updated : Jun 2, 2022, 4:03 PM IST

ಬೆಂಗಳೂರು: ನನ್ನ ಹೆಸರಿನಲ್ಲಿ ಬೇರೆ-ಬೇರೆ ವ್ಯಕ್ತಿಗಳಿಗೆ ವಾಟ್ಸ್​​ಆ್ಯಪ್ ಸಂದೇಶ ಕಳಿಸುತ್ತಿರುವ ಕಿಡಿಗೇಡಿಗಳು ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದ್ದರಿಂದ ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಯಾರೂ ಕೊಡಬೇಡಿ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ತಿಳಿಸಿದರು.

ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ
ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ

ತಮ್ಮ ಹೆಸರಿನಲ್ಲಿ ಸೈಬರ್ ಖದೀಮರಿಂದ ವಂಚನೆ ಯತ್ನ ಸಂಬಂಧ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ಖುದ್ದು ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂಡೀಗಢ, ಕೋಲ್ಕತ್ತಾದಲ್ಲಿರುವ ನನ್ನ ಸ್ನೇಹಿತರೊಬ್ಬರಿಗೆ ಹಣ ಕೇಳಿ ವಾಟ್ಸ್​​ಆ್ಯಪ್ ಸಂದೇಶ ಮಾಡಿದ್ದಾರೆ. ನಾನು ತೊಂದರೆಯಲ್ಲಿದ್ದೀನಿ, ಹಣದ ಸಹಾಯಬೇಕಿದೆ ಅಂದಿದ್ದಾರೆ ಎಂದು ಹೇಳಿದರು.

ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ

ಈ ಬಗ್ಗೆ ಅವರ ಸ್ನೇಹಿತ ನನಗೆ ಕಾಲ್ ಮಾಡಿ ವಿಚಾರ ತಿಳಿಸಿದ್ದಾರೆ. ಹೀಗಾಗಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಈ‌ ಹಿಂದೆ ಕೂಡ ಇದೇ ರೀತಿ ಇ-ಮೇಲ್​ ಮೂಲಕ ಹಣ ಕೇಳಿದ್ದರು. ಕೆಲ ಕಿಡಿಗೇಡಿಗಳು ನನ್ನ ಹೆಸರನ್ನು ಬಳಸಿಕೊಂಡು ಈ ರೀತಿ ಮಾಡುತ್ತಾರೆ. ಇದನ್ನು ನಂಬಬೇಡಿ. ನಾನು ಆರೋಗ್ಯವಾಗಿದ್ದೇನೆ ಎಂದು ಅವರು ಸ್ಟಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು

ಬೆಂಗಳೂರು: ನನ್ನ ಹೆಸರಿನಲ್ಲಿ ಬೇರೆ-ಬೇರೆ ವ್ಯಕ್ತಿಗಳಿಗೆ ವಾಟ್ಸ್​​ಆ್ಯಪ್ ಸಂದೇಶ ಕಳಿಸುತ್ತಿರುವ ಕಿಡಿಗೇಡಿಗಳು ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದ್ದರಿಂದ ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಯಾರೂ ಕೊಡಬೇಡಿ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ತಿಳಿಸಿದರು.

ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ
ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ

ತಮ್ಮ ಹೆಸರಿನಲ್ಲಿ ಸೈಬರ್ ಖದೀಮರಿಂದ ವಂಚನೆ ಯತ್ನ ಸಂಬಂಧ ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ಖುದ್ದು ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂಡೀಗಢ, ಕೋಲ್ಕತ್ತಾದಲ್ಲಿರುವ ನನ್ನ ಸ್ನೇಹಿತರೊಬ್ಬರಿಗೆ ಹಣ ಕೇಳಿ ವಾಟ್ಸ್​​ಆ್ಯಪ್ ಸಂದೇಶ ಮಾಡಿದ್ದಾರೆ. ನಾನು ತೊಂದರೆಯಲ್ಲಿದ್ದೀನಿ, ಹಣದ ಸಹಾಯಬೇಕಿದೆ ಅಂದಿದ್ದಾರೆ ಎಂದು ಹೇಳಿದರು.

ನನ್ನ‌ ಹೆಸರು ಬಳಸಿಕೊಂಡ ಹಣ ಕೇಳಿದರೆ ಕೊಡಬೇಡಿ: ಚಂದ್ರಶೇಖರ ಕಂಬಾರ

ಈ ಬಗ್ಗೆ ಅವರ ಸ್ನೇಹಿತ ನನಗೆ ಕಾಲ್ ಮಾಡಿ ವಿಚಾರ ತಿಳಿಸಿದ್ದಾರೆ. ಹೀಗಾಗಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ಈ‌ ಹಿಂದೆ ಕೂಡ ಇದೇ ರೀತಿ ಇ-ಮೇಲ್​ ಮೂಲಕ ಹಣ ಕೇಳಿದ್ದರು. ಕೆಲ ಕಿಡಿಗೇಡಿಗಳು ನನ್ನ ಹೆಸರನ್ನು ಬಳಸಿಕೊಂಡು ಈ ರೀತಿ ಮಾಡುತ್ತಾರೆ. ಇದನ್ನು ನಂಬಬೇಡಿ. ನಾನು ಆರೋಗ್ಯವಾಗಿದ್ದೇನೆ ಎಂದು ಅವರು ಸ್ಟಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು

Last Updated : Jun 2, 2022, 4:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.