ETV Bharat / state

ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಬಲವಾದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಪರಿಗಣಿಸಲಾಗದು: ಹೈಕೋರ್ಟ್

author img

By

Published : Apr 15, 2023, 3:12 PM IST

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಸಂತೋಷ್ ಎಂಬವರು ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

charge-of-abetment-to-suicide-not-countable-without-strong-evidence-high-court
ಆತ್ಮಹತ್ಯೆಗೆ ಪ್ರಚೋಧನೆ ಆರೋಪದಲ್ಲಿ ಬಲವಾದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಪರಿಗಣಿಸಲಾಗದು: ಹೈಕೋರ್ಟ್

ಬೆಂಗಳೂರು: ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪಗಳಿಗೆ ಪೂರಕ ಮತ್ತು ಬಲವಾದ ಸಾಕ್ಷ್ಯಾಧಾರಗಳಿರದಿದ್ದಲ್ಲಿ ಅಂತಹ ಆರೋಪವನ್ನು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬೆಳಗಾವಿ ಜಿಲ್ಲೆ ರಾಯಭಾಗದ ನಿವಾಸಿ ಸಂತೋಷ್ ಅವರು ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯ ಆದೇಶವನ್ನು ಮಾರ್ಪಾಡು ಮಾಡಿ ಆದೇಶಿಸಿದೆ. ಜತೆಗೆ, ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ವಿಧಿಸಿದ್ದ ಶಿಕೆಯನ್ನು ರದ್ದುಪಡಿಸಿದೆ. ಆದರೆ, ಮಾನಸಿಕ ಕಿರುಕುಳ ನೀಡಿದ ಆರೋಪದಲ್ಲಿ ವಿಧಿಸಿದ್ದ ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ.

ಅಲ್ಲದೆ, ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ) ಪ್ರಕರಣದಲ್ಲಿ ಅಪರಾಧಿ ಮೃತರಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಕುಮ್ಮಕ್ಕು ನೀಡಿರುವುದಕ್ಕೆ ಬಲವಾದ ಸಾಕ್ಷ್ಯಾಧಾರಗಳಿರಬೇಕು. ಇದಕ್ಕೆ ನಿಖರವಾದ ಪುರಾವೆಗಳಿರಬೇಕು. ಅಲ್ಲದೆ, ಸತತ ಪ್ರಚೋಧನೆ ನೀಡಿರುವ ಪರಿಣಾಣ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪುವಂತಿರಬೇಕು. ಇಲ್ಲವಾದಲ್ಲಿ ಆರೋಪವನ್ನು ಪರಿಗಣಿಸಲಾಗದು ಎಂದು ತಿಳಿಸಿದ ನ್ಯಾಯಪೀಠ ಶಿಕ್ಷೆಯನ್ನು ರದ್ದುಪಡಿಸಿದೆ.

ಆರೋಪಗಳು ಪ್ರತ್ಯೇಕ: ಆತ್ಮಹತ್ಯೆಗೆ ಪ್ರಚೋದನೆ ನೀಡುವುದು (ಐಪಿಸಿ ಸೆಕ್ಷನ್​ 306) ಮತ್ತು ಪತಿ ಹಾಗೂ ಪತಿಯ ಸಂಬಂಧಿಕರಿಂದ ಕಿರುಕುಳ (ಐಪಿಸಿ 498A) ನೀಡಿರುವ ಆರೋಪಗಳು ಪ್ರತ್ಯೇಕವಾಗಿರಲಿದ್ದು, ಒಂದು ಪ್ರಕರಣದಲ್ಲಿ ಆರೋಪ ಮುಕ್ತರಾದರು ಮತ್ತೊಂದು ಪ್ರಕರಣದಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ. ಅಲ್ಲದೆ, ಆರೋಪಿ ಸಂತೋಷ್‌ ಅವರಿಗೆ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿರುವ ನ್ಯಾಯಪೀಠ, ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ಈ ದಂಡದ ಮೊತ್ತವನ್ನು ಮೃತ ಜಯಶ್ರೀ ಅವರ ಸಂಬಂಧಿಕರಿಗೆ ಪಾವತಿ ಮಾಡಬೇಕು ಎಂದು ತಿಳಿಸಿದೆ. ಒಂದು ವೇಳೆ ಪಾವತಿ ಮಾಡುವಲ್ಲಿ ವಿಫಲವಾದಲ್ಲಿ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಹಿನ್ನೆಲೆ ಏನು? : 2009ರ ಡಿಸೆಂಬರ್ 12 ರಂದು ಆರೋಪಿ ಸಂತೋಷ್ ಪತ್ನಿ ಜಯಶ್ರೀ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮೃತ ಜಯಶ್ರೀ ಮನೆ ಕೆಲಸ ಮಾಡಲು ಅಸಮರ್ಥಳು. ಅಲ್ಲದೆ, ಆರೋಪಿ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರಿಂದ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಚಿಕ್ಕೋಡಿಯ ವಿಚಾರಣ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಗೆ ಮೂರು ವರ್ಷ ಶಿಕ್ಷೆ ಮತ್ತು 25 ಸಾವಿರ ರೂ.ಗಳ ದಂಡವನ್ನು ವಿಧಿಸಿ ಆದೇಶಿಸಿತ್ತು. ಆದೇಶದಲ್ಲಿ ಈಗಾಗಲೇ ಮೂರು ತಿಂಗಳು ಮತ್ತು ಐದು ದಿನಗಳ ಕಾಲ ಜೈಲಿನಲ್ಲಿದ್ದ ಸಂತೋಷ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ತಮ್ಮ ವಿರುದ್ಧ ಪ್ರಕಟವಾಗಿದ್ದ ಶಿಕ್ಷೆಯನ್ನು ರದ್ದು ಮಾಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ಮದುವೆಯಾಗಿ 3 ವರ್ಷವಾದ್ರೂ ಹಿಂದಿರುಗದ ಪತ್ನಿ: ವಿಚ್ಛೇದನ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪಗಳಿಗೆ ಪೂರಕ ಮತ್ತು ಬಲವಾದ ಸಾಕ್ಷ್ಯಾಧಾರಗಳಿರದಿದ್ದಲ್ಲಿ ಅಂತಹ ಆರೋಪವನ್ನು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬೆಳಗಾವಿ ಜಿಲ್ಲೆ ರಾಯಭಾಗದ ನಿವಾಸಿ ಸಂತೋಷ್ ಅವರು ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯ ಆದೇಶವನ್ನು ಮಾರ್ಪಾಡು ಮಾಡಿ ಆದೇಶಿಸಿದೆ. ಜತೆಗೆ, ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ವಿಧಿಸಿದ್ದ ಶಿಕೆಯನ್ನು ರದ್ದುಪಡಿಸಿದೆ. ಆದರೆ, ಮಾನಸಿಕ ಕಿರುಕುಳ ನೀಡಿದ ಆರೋಪದಲ್ಲಿ ವಿಧಿಸಿದ್ದ ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ.

ಅಲ್ಲದೆ, ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ) ಪ್ರಕರಣದಲ್ಲಿ ಅಪರಾಧಿ ಮೃತರಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಕುಮ್ಮಕ್ಕು ನೀಡಿರುವುದಕ್ಕೆ ಬಲವಾದ ಸಾಕ್ಷ್ಯಾಧಾರಗಳಿರಬೇಕು. ಇದಕ್ಕೆ ನಿಖರವಾದ ಪುರಾವೆಗಳಿರಬೇಕು. ಅಲ್ಲದೆ, ಸತತ ಪ್ರಚೋಧನೆ ನೀಡಿರುವ ಪರಿಣಾಣ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪುವಂತಿರಬೇಕು. ಇಲ್ಲವಾದಲ್ಲಿ ಆರೋಪವನ್ನು ಪರಿಗಣಿಸಲಾಗದು ಎಂದು ತಿಳಿಸಿದ ನ್ಯಾಯಪೀಠ ಶಿಕ್ಷೆಯನ್ನು ರದ್ದುಪಡಿಸಿದೆ.

ಆರೋಪಗಳು ಪ್ರತ್ಯೇಕ: ಆತ್ಮಹತ್ಯೆಗೆ ಪ್ರಚೋದನೆ ನೀಡುವುದು (ಐಪಿಸಿ ಸೆಕ್ಷನ್​ 306) ಮತ್ತು ಪತಿ ಹಾಗೂ ಪತಿಯ ಸಂಬಂಧಿಕರಿಂದ ಕಿರುಕುಳ (ಐಪಿಸಿ 498A) ನೀಡಿರುವ ಆರೋಪಗಳು ಪ್ರತ್ಯೇಕವಾಗಿರಲಿದ್ದು, ಒಂದು ಪ್ರಕರಣದಲ್ಲಿ ಆರೋಪ ಮುಕ್ತರಾದರು ಮತ್ತೊಂದು ಪ್ರಕರಣದಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ. ಅಲ್ಲದೆ, ಆರೋಪಿ ಸಂತೋಷ್‌ ಅವರಿಗೆ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿರುವ ನ್ಯಾಯಪೀಠ, ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ಈ ದಂಡದ ಮೊತ್ತವನ್ನು ಮೃತ ಜಯಶ್ರೀ ಅವರ ಸಂಬಂಧಿಕರಿಗೆ ಪಾವತಿ ಮಾಡಬೇಕು ಎಂದು ತಿಳಿಸಿದೆ. ಒಂದು ವೇಳೆ ಪಾವತಿ ಮಾಡುವಲ್ಲಿ ವಿಫಲವಾದಲ್ಲಿ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಹಿನ್ನೆಲೆ ಏನು? : 2009ರ ಡಿಸೆಂಬರ್ 12 ರಂದು ಆರೋಪಿ ಸಂತೋಷ್ ಪತ್ನಿ ಜಯಶ್ರೀ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮೃತ ಜಯಶ್ರೀ ಮನೆ ಕೆಲಸ ಮಾಡಲು ಅಸಮರ್ಥಳು. ಅಲ್ಲದೆ, ಆರೋಪಿ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದರಿಂದ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಚಿಕ್ಕೋಡಿಯ ವಿಚಾರಣ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಗೆ ಮೂರು ವರ್ಷ ಶಿಕ್ಷೆ ಮತ್ತು 25 ಸಾವಿರ ರೂ.ಗಳ ದಂಡವನ್ನು ವಿಧಿಸಿ ಆದೇಶಿಸಿತ್ತು. ಆದೇಶದಲ್ಲಿ ಈಗಾಗಲೇ ಮೂರು ತಿಂಗಳು ಮತ್ತು ಐದು ದಿನಗಳ ಕಾಲ ಜೈಲಿನಲ್ಲಿದ್ದ ಸಂತೋಷ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ತಮ್ಮ ವಿರುದ್ಧ ಪ್ರಕಟವಾಗಿದ್ದ ಶಿಕ್ಷೆಯನ್ನು ರದ್ದು ಮಾಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ಮದುವೆಯಾಗಿ 3 ವರ್ಷವಾದ್ರೂ ಹಿಂದಿರುಗದ ಪತ್ನಿ: ವಿಚ್ಛೇದನ ಎತ್ತಿಹಿಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.