ETV Bharat / state

ಶಾಸಕ ಎಂ ಕೃಷ್ಣಪ್ಪ ವಿರುದ್ಧ ಭೂ ಒತ್ತುವರಿ ಆರೋಪ: ತೆರವು ವರದಿ ಕೇಳಿದ ಹೈಕೋರ್ಟ್

author img

By

Published : Jun 23, 2021, 9:15 PM IST

ಬೆಂಗಳೂರು ನಗರ ದಕ್ಷಿಣ ಶಾಸಕ ಎಂ ಕೃಷ್ಣಪ್ಪ ಉತ್ತರಹಳ್ಳಿ ಕೆರೆ ಒತ್ತುವರಿ ಮಾಡಿರುವ ಆರೋಪದ ಬಗ್ಗೆ ಫೋಟೋ ಸಹಿತ ತೆರವು ವರದಿ ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಹೈಕೋರ್ಟ್ ನಿರ್ದೇಶಿಸಿದೆ.

ಶಾಸಕ ಎಂ ಕೃಷ್ಣಪ್ಪ ವಿರುದ್ಧ ಭೂ ಒತ್ತುವರಿ ಆರೋಪ
ಶಾಸಕ ಎಂ ಕೃಷ್ಣಪ್ಪ ವಿರುದ್ಧ ಭೂ ಒತ್ತುವರಿ ಆರೋಪ

ಬೆಂಗಳೂರು: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಉತ್ತರಹಳ್ಳಿ ಕೆರೆ ಒತ್ತುವರಿ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಒತ್ತುವರಿ ತೆರವು ಮಾಡಿರುವ ವರದಿಯನ್ನು ಫೋಟೋ ಸಹಿತ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ನಗರದ ಪ್ರಜಾ ಹಕ್ಕುಗಳ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸರ್ಕಾರದ ಪರ ವಕೀಲರು ಒತ್ತುವರಿ ಜಾಗವನ್ನು ನಿನ್ನೆ ಸಂಜೆಯಷ್ಟೇ ತೆರವು ಮಾಡಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಒತ್ತುವರಿ ತೆರವು ಮಾಡಿದ್ದಲ್ಲಿ ಆ ಕುರಿತು ಫೋಟೋ ಸಹಿತ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಹಿಂದಿನ ವಿಚಾರಣೆ ವೇಳೆ ಅರ್ಜಿದಾರರು ಆರೋಪಿಸಿರುವಂತೆ ಉತ್ತರಹಳ್ಳಿ ಕೆರೆಯ ಸರ್ವೆ ನಂಬರ್ 111ರಲ್ಲಿ 15.16 ಎಕರೆ ಭೂಮಿ ಒತ್ತುವರಿಯಾಗಿದೆಯೇ ಎಂಬುದನ್ನು ಗುರುತಿಸಲು ಹಿರಿಯ ಕಂದಾಯ ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು. ಅವರ ನೇತೃತ್ವದಲ್ಲಿ ಕೆರೆ ಪ್ರದೇಶವನ್ನು ಸರ್ವೆ ನಡೆಸಿ ಒತ್ತುವರಿಯಾಗಿದ್ದಲ್ಲಿ ತೆರವು ಮಾಡಬೇಕು ಎಂದು ನಿರ್ದೇಶಿಸಿತ್ತು.

ಅರ್ಜಿದಾರರ ಆರೋಪ :
ಬನಶಂಕರಿ 5ನೇ ಹಂತ ನಿರ್ಮಾಣಕ್ಕಾಗಿ ಬಿಡಿಎ 1988ರಲ್ಲಿ ನೋಟಿಫೈ ಮಾಡಿದ್ದ ಉತ್ತರಹಳ್ಳಿಯ ಸರ್ವೆ 103/1ರಲ್ಲಿನ 36 ಗುಂಟೆ ಹಾಗೂ 103/2ರಲ್ಲಿನ 39 ಗುಂಟೆ ಭೂಮಿಯನ್ನು ಶಾಸಕ ಎಂ. ಕೃಷ್ಣಪ್ಪ ಅಕ್ರಮವಾಗಿ 1994ರಲ್ಲಿ ಖರೀದಿಸಿದ್ದರು. ಬಳಿಕ 2007ರಲ್ಲಿ ಈ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದರು. ಆ ಬಳಿಕ ಇವೇ ಜಮೀನುಗಳ ಪಕ್ಕದಲ್ಲಿದ್ದ ಉತ್ತರಹಳ್ಳಿ ಕೆರೆಗೆ ಸೇರಿದ ಸರ್ವೆ ನಂಬರ್ 111ರಲ್ಲಿನ 15.16 ಎಕರೆ ಭೂಮಿಯನ್ನು ರೈನ್​ಬೋ ಹೋಟೆಲ್ ನಿರ್ಮಾಣಕ್ಕಾಗಿ ಒತ್ತುವರಿ ಮಾಡಿದ್ದಾರೆ.

ಇಷ್ಟಲ್ಲದೇ, ಉತ್ತರಹಳ್ಳಿ ಹೋಬಳಿಯ ವಡ್ಡರಪಾಳ್ಯ ಗ್ರಾಮದ ಗೋಮಾಳಕ್ಕೆ ಸೇರಿದ ಸರ್ವೆ ನಂಬರ್ 32 ರಿಂದ 40ವರೆಗಿನ (ಹಳೆ ಸರ್ವೆ ನಂಬರ್ 8) 10ಎಕರೆ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನು ನಿರ್ಮಿಸಿ ಮಾರಾಟ ಮಾಡಿದ್ದಾರೆ. ಈ ಸಂಬಂಧ ಸಿಎಂ, ಕಂದಾಯ ಸಚಿವರು, ಸ್ಪೀಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹದಳ ಸೇರಿದಂತೆ ಸಂಬಂಧಿಸಿದ ಪ್ರಾಧಿಕಾರಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಓದಿ:Lockdown ವೇಳೆ ಕಳ್ಳರ ಕೈಚಳಕ.. ರಸ್ತೆ ಬದಿ ನಿಲ್ಲಿಸಿದ್ದ ರೋಡ್​ ರೋಲರ್ ಅನ್ನೇ ಗುಜರಿಗೆ ಹಾಕಿದ ಖದೀಮರು

ಬೆಂಗಳೂರು: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಉತ್ತರಹಳ್ಳಿ ಕೆರೆ ಒತ್ತುವರಿ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಒತ್ತುವರಿ ತೆರವು ಮಾಡಿರುವ ವರದಿಯನ್ನು ಫೋಟೋ ಸಹಿತ ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ನಗರದ ಪ್ರಜಾ ಹಕ್ಕುಗಳ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸರ್ಕಾರದ ಪರ ವಕೀಲರು ಒತ್ತುವರಿ ಜಾಗವನ್ನು ನಿನ್ನೆ ಸಂಜೆಯಷ್ಟೇ ತೆರವು ಮಾಡಲಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಒತ್ತುವರಿ ತೆರವು ಮಾಡಿದ್ದಲ್ಲಿ ಆ ಕುರಿತು ಫೋಟೋ ಸಹಿತ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಹಿಂದಿನ ವಿಚಾರಣೆ ವೇಳೆ ಅರ್ಜಿದಾರರು ಆರೋಪಿಸಿರುವಂತೆ ಉತ್ತರಹಳ್ಳಿ ಕೆರೆಯ ಸರ್ವೆ ನಂಬರ್ 111ರಲ್ಲಿ 15.16 ಎಕರೆ ಭೂಮಿ ಒತ್ತುವರಿಯಾಗಿದೆಯೇ ಎಂಬುದನ್ನು ಗುರುತಿಸಲು ಹಿರಿಯ ಕಂದಾಯ ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು. ಅವರ ನೇತೃತ್ವದಲ್ಲಿ ಕೆರೆ ಪ್ರದೇಶವನ್ನು ಸರ್ವೆ ನಡೆಸಿ ಒತ್ತುವರಿಯಾಗಿದ್ದಲ್ಲಿ ತೆರವು ಮಾಡಬೇಕು ಎಂದು ನಿರ್ದೇಶಿಸಿತ್ತು.

ಅರ್ಜಿದಾರರ ಆರೋಪ :
ಬನಶಂಕರಿ 5ನೇ ಹಂತ ನಿರ್ಮಾಣಕ್ಕಾಗಿ ಬಿಡಿಎ 1988ರಲ್ಲಿ ನೋಟಿಫೈ ಮಾಡಿದ್ದ ಉತ್ತರಹಳ್ಳಿಯ ಸರ್ವೆ 103/1ರಲ್ಲಿನ 36 ಗುಂಟೆ ಹಾಗೂ 103/2ರಲ್ಲಿನ 39 ಗುಂಟೆ ಭೂಮಿಯನ್ನು ಶಾಸಕ ಎಂ. ಕೃಷ್ಣಪ್ಪ ಅಕ್ರಮವಾಗಿ 1994ರಲ್ಲಿ ಖರೀದಿಸಿದ್ದರು. ಬಳಿಕ 2007ರಲ್ಲಿ ಈ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದರು. ಆ ಬಳಿಕ ಇವೇ ಜಮೀನುಗಳ ಪಕ್ಕದಲ್ಲಿದ್ದ ಉತ್ತರಹಳ್ಳಿ ಕೆರೆಗೆ ಸೇರಿದ ಸರ್ವೆ ನಂಬರ್ 111ರಲ್ಲಿನ 15.16 ಎಕರೆ ಭೂಮಿಯನ್ನು ರೈನ್​ಬೋ ಹೋಟೆಲ್ ನಿರ್ಮಾಣಕ್ಕಾಗಿ ಒತ್ತುವರಿ ಮಾಡಿದ್ದಾರೆ.

ಇಷ್ಟಲ್ಲದೇ, ಉತ್ತರಹಳ್ಳಿ ಹೋಬಳಿಯ ವಡ್ಡರಪಾಳ್ಯ ಗ್ರಾಮದ ಗೋಮಾಳಕ್ಕೆ ಸೇರಿದ ಸರ್ವೆ ನಂಬರ್ 32 ರಿಂದ 40ವರೆಗಿನ (ಹಳೆ ಸರ್ವೆ ನಂಬರ್ 8) 10ಎಕರೆ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನು ನಿರ್ಮಿಸಿ ಮಾರಾಟ ಮಾಡಿದ್ದಾರೆ. ಈ ಸಂಬಂಧ ಸಿಎಂ, ಕಂದಾಯ ಸಚಿವರು, ಸ್ಪೀಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತ, ಭ್ರಷ್ಟಾಚಾರ ನಿಗ್ರಹದಳ ಸೇರಿದಂತೆ ಸಂಬಂಧಿಸಿದ ಪ್ರಾಧಿಕಾರಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಓದಿ:Lockdown ವೇಳೆ ಕಳ್ಳರ ಕೈಚಳಕ.. ರಸ್ತೆ ಬದಿ ನಿಲ್ಲಿಸಿದ್ದ ರೋಡ್​ ರೋಲರ್ ಅನ್ನೇ ಗುಜರಿಗೆ ಹಾಕಿದ ಖದೀಮರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.