ETV Bharat / state

ಕಾಂಗ್ರೆಸ್​​ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

author img

By

Published : Oct 15, 2022, 4:49 PM IST

ಭಾರತ್ ಜೋಡೋ ಯಾತ್ರೆಯ ಅರ್ಥ ಏನು? ಭಾರತ ಈಗಾಗಲೇ ಒಕ್ಕೂಟವಾಗಿ, ಒಗ್ಗಟ್ಟಾಗಿ ಮುನ್ನಡೆಯುತ್ತಿದೆ. ಇದನ್ನು ಮತ್ತೆ ಜೋಡಿಸುವ ಪ್ರಮೇಯ ಇಲ್ಲ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

CM Basavaraj Bommai
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತ ದೇಶ ಒಗ್ಗಟ್ಟಿನಿಂದ ಬಲಿಷ್ಠವಾಗಿ ಬೆಳೆಯುತ್ತಿರುವಾಗ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆಯ ಅರ್ಥ ಏನು?, ಭಾರತ ಈಗಾಗಲೇ ಒಕ್ಕೂಟವಾಗಿ, ಒಗ್ಗಟ್ಟಾಗಿ ಮುನ್ನಡೆಯುತ್ತಿದೆ. ಇದನ್ನು ಮತ್ತೆ ಜೋಡಿಸುವ ಪ್ರಮೇಯ ಇಲ್ಲ. ಇಡೀ ದೇಶ ಒಗ್ಗಟ್ಟಾಗಿ ಭಾರತ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆಯನ್ನು ಸಾಧಿಸುತ್ತಿದೆ ಎಂದರು.

ಪ್ರಸ್ತುತ ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಉಂಟಾಗುತ್ತಿದೆ. ಅಮೆರಿಕ ಸೇರಿದಂತೆ ಜಿ-7 ದೇಶಗಳು ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿರುವ ಸಂದರ್ಭದಲ್ಲಿ ಭಾರತ ದೇಶ ಕನಿಷ್ಠ ಶೇ. 7 ಅಭಿವೃದ್ಧಿಯನ್ನು ಕಾಯ್ದುಕೊಂಡು ಬಂದಿದೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರ ಮೊದಲ ಮಿಸೈಲ್ ವಿಫಲಗೊಂಡಿದ್ದು, ಈಗ ಮತ್ತೊಮ್ಮೆ ಲಾಂಚ್ ಮಾಡುವ ಪ್ರಯತ್ನದಲ್ಲಿದ್ದಾರೆ. ಅದು ಬಿಟ್ಟರೆ ಇವರ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ಸಿಎಂ ಟೀಕಿಸಿದರು.

ಭಾರತ್ ಜೋಡೋ ಯಾತ್ರೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಬಳ್ಳಾರಿಯ ಜನಕ್ಕೆ ಮೋಸ ಮಾಡಿದಂತಲ್ಲವೇ?: ಬಳ್ಳಾರಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಸಮಾವೇಶಕ್ಕೆ ಯಾವ ಪ್ರಶ್ನೆ ಕೇಳಲು ಬಯಸುತ್ತೀರಿ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಲೋಕಸಭಾ ಚುನಾವಣೆಗೆ ನಿಂತು ಈ ಕ್ಷೇತ್ರವನ್ನೇ ಆಯ್ಕೆ ಮಾಡುವುದಾಗಿ ನಿರ್ಣಯಿಸಿ ನಂತರ ರಾಯಬರೇಲಿ ಎಂದು ಅಲ್ಲಿಗೆ ಸೀಮಿತವಾದರು. ಆ ಸಂದರ್ಭದಲ್ಲಿ ಮತ ಹಾಕಿದ ಜನರಿಗೆ ಕೃತಜ್ಞತೆಯನ್ನೂ ಸಹ ಸಲ್ಲಿಸಲಿಲ್ಲ. ಅಂದು 3 ಸಾವಿರ ಕೋಟಿ ಬಜೆಟ್ ನಿಗದಿಪಡಿಸಿ 1 ಪೈಸೆಯನ್ನೂ ಬಿಡುಗಡೆ ಮಾಡಲಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದೀರಿ. ಅಲ್ಲಿನ ಜನಕ್ಕೆ ನೀವು ಮೋಸ ಮಾಡಿದಂತಲ್ಲವೇ ಎಂದು ಬೊಮ್ಮಾಯಿ ಪ್ರಶ್ನಿಸಿದರು.

2023ರಲ್ಲಿ 150 ಗುರಿಯನ್ನು ಮುಟ್ಟುವ ವಿಶ್ವಾಸ: ಸಂಕಲ್ಪ ಯಾತ್ರೆಯನ್ನು 3 ದಿನಗಳ ಕಾಲ 4 ಜಿಲ್ಲೆಯಲ್ಲಿ ಪ್ರಾರಂಭ ಮಾಡಿದ್ದು, ಅಭೂತಪೂರ್ವ ಬೆಂಬಲ ಇದೆ. ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಬಂದಿದೆ. ಬಿಜೆಪಿ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಿದೆ. ಸಂಕಲ್ಪಯಾತ್ರೆ ವಿಜಯಸಂಕಲ್ಪ ಯಾತ್ರೆ ಆಗುವುದರಲ್ಲಿ ಸಂಶಯವಿಲ್ಲ. 2023ರಲ್ಲಿ 150 ಗುರಿಯನ್ನು ಮುಟ್ಟುವ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ನೂರು ವರ್ಷ ಚೆನ್ನಾಗಿರಲಿ: ಸಿದ್ಧರಾಮಯ್ಯನವರು 4 ಕಿ.ಮೀ. ನಡೆಯುವ ಸವಾಲಿಗೆ ಪ್ರತಿಕ್ರಿಯೆ ನೀಡಿ, ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದಾರೆ. ಇದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರಿಗೆ ದೇವರು ಒಳ್ಳೆಯ ಆರೋಗ್ಯವನ್ನು ನೀಡಿ ನೂರು ವರ್ಷ ಚೆನ್ನಾಗಿರಲಿ ಎಂದು ಹಾರೈಸಿದರು.

ಕಾನೂನಿನ ಚೌಕಟ್ಟಿನೊಳಗೆ ಕ್ರಮ: ಮುರುಘಾ ಮಠಕ್ಕೆ ಹೊಸ ಶ್ರೀಗಳನ್ನು ನೇಮಿಸುವ ಬಗ್ಗೆ ಒತ್ತಡ ಕೇಳಿ ಬರುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಭಕ್ತ ಮಂಡಳಿಯ ಸರ್ವರೂ ಬಂದು ಭೇಟಿಯಾಗಿದ್ದಾರೆ. ಅಲ್ಲಿನ ವಿಚಾರಗಳೆಲ್ಲವನ್ನೂ ತಿಳಿಸಿದ್ದಾರೆ. ಮಠದ ಆಡಳಿತಕ್ಕೆ ಆಗುತ್ತಿರುವ ತೊಂದರೆಯ ಬಗ್ಗೆ ವಿವರಿಸಿದ್ದಾರೆ. ಮಠದ ಟ್ರಸ್ಟ್ ಇದ್ದು, ಕಾನೂನಿನ ಚೌಕಟ್ಟಿನೊಳಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಟ್ರ್ಯಾಕ್ ಹಾಳಾಗದಂತೆ ಕ್ರಮ ವಹಿಸಲು ತಾಕೀತು: ಕಂಠೀರವ ಸ್ಟೇಡಿಯಂನ್ನು ಫುಟ್ಬಾಲ್ ಕ್ರೀಡೆಗೆ ನೀಡುತ್ತಿದ್ದು, ರಾಜ್ಯದ ಕ್ರೀಡಾಪಟುಗಳಿಗೆ ಇದರಿಂದ ತೊಂದರೆಯಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಮಾಡುತ್ತಿದ್ದು, ಈ ವಿಚಾರ ಅಧಿಕಾರದ ಮಿತಿಗೆ ಒಳಪಟ್ಟಿದೆ. ನಾವು ನಿರ್ಧರಿಸಲು ಆಗುವುದಿಲ್ಲ. ಆದರೆ ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಟ್ರ್ಯಾಕ್ ಹಾಳಾಗದಂತೆ ಕಾಪಾಡುವುದು ಅಸೋಸಿಯೇಷನ್ ಅವರ ಜವಾಬ್ದಾರಿ. ಇದಕ್ಕೆ ಸಂಬಂಧಪಟ್ಟವರನ್ನು ಕರೆಸಿ ಈ ಬಗ್ಗೆ ತಾಕೀತು ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ.. ಬಳ್ಳಾರಿ ಹಲಕುಂದಿ ಮಠದಿಂದ ರಾಹುಲ್​ ಗಾಂಧಿ ಯಾತ್ರೆ ಆರಂಭ

ಬೆಂಗಳೂರು: ಭಾರತ ದೇಶ ಒಗ್ಗಟ್ಟಿನಿಂದ ಬಲಿಷ್ಠವಾಗಿ ಬೆಳೆಯುತ್ತಿರುವಾಗ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು 61ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆಯ ಅರ್ಥ ಏನು?, ಭಾರತ ಈಗಾಗಲೇ ಒಕ್ಕೂಟವಾಗಿ, ಒಗ್ಗಟ್ಟಾಗಿ ಮುನ್ನಡೆಯುತ್ತಿದೆ. ಇದನ್ನು ಮತ್ತೆ ಜೋಡಿಸುವ ಪ್ರಮೇಯ ಇಲ್ಲ. ಇಡೀ ದೇಶ ಒಗ್ಗಟ್ಟಾಗಿ ಭಾರತ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುನ್ನಡೆಯನ್ನು ಸಾಧಿಸುತ್ತಿದೆ ಎಂದರು.

ಪ್ರಸ್ತುತ ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಉಂಟಾಗುತ್ತಿದೆ. ಅಮೆರಿಕ ಸೇರಿದಂತೆ ಜಿ-7 ದೇಶಗಳು ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿರುವ ಸಂದರ್ಭದಲ್ಲಿ ಭಾರತ ದೇಶ ಕನಿಷ್ಠ ಶೇ. 7 ಅಭಿವೃದ್ಧಿಯನ್ನು ಕಾಯ್ದುಕೊಂಡು ಬಂದಿದೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರ ಮೊದಲ ಮಿಸೈಲ್ ವಿಫಲಗೊಂಡಿದ್ದು, ಈಗ ಮತ್ತೊಮ್ಮೆ ಲಾಂಚ್ ಮಾಡುವ ಪ್ರಯತ್ನದಲ್ಲಿದ್ದಾರೆ. ಅದು ಬಿಟ್ಟರೆ ಇವರ ಜೋಡೋ ಯಾತ್ರೆಗೆ ಯಾವುದೇ ಅರ್ಥವಿಲ್ಲ ಎಂದು ಸಿಎಂ ಟೀಕಿಸಿದರು.

ಭಾರತ್ ಜೋಡೋ ಯಾತ್ರೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಬಳ್ಳಾರಿಯ ಜನಕ್ಕೆ ಮೋಸ ಮಾಡಿದಂತಲ್ಲವೇ?: ಬಳ್ಳಾರಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಸಮಾವೇಶಕ್ಕೆ ಯಾವ ಪ್ರಶ್ನೆ ಕೇಳಲು ಬಯಸುತ್ತೀರಿ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಲೋಕಸಭಾ ಚುನಾವಣೆಗೆ ನಿಂತು ಈ ಕ್ಷೇತ್ರವನ್ನೇ ಆಯ್ಕೆ ಮಾಡುವುದಾಗಿ ನಿರ್ಣಯಿಸಿ ನಂತರ ರಾಯಬರೇಲಿ ಎಂದು ಅಲ್ಲಿಗೆ ಸೀಮಿತವಾದರು. ಆ ಸಂದರ್ಭದಲ್ಲಿ ಮತ ಹಾಕಿದ ಜನರಿಗೆ ಕೃತಜ್ಞತೆಯನ್ನೂ ಸಹ ಸಲ್ಲಿಸಲಿಲ್ಲ. ಅಂದು 3 ಸಾವಿರ ಕೋಟಿ ಬಜೆಟ್ ನಿಗದಿಪಡಿಸಿ 1 ಪೈಸೆಯನ್ನೂ ಬಿಡುಗಡೆ ಮಾಡಲಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದೀರಿ. ಅಲ್ಲಿನ ಜನಕ್ಕೆ ನೀವು ಮೋಸ ಮಾಡಿದಂತಲ್ಲವೇ ಎಂದು ಬೊಮ್ಮಾಯಿ ಪ್ರಶ್ನಿಸಿದರು.

2023ರಲ್ಲಿ 150 ಗುರಿಯನ್ನು ಮುಟ್ಟುವ ವಿಶ್ವಾಸ: ಸಂಕಲ್ಪ ಯಾತ್ರೆಯನ್ನು 3 ದಿನಗಳ ಕಾಲ 4 ಜಿಲ್ಲೆಯಲ್ಲಿ ಪ್ರಾರಂಭ ಮಾಡಿದ್ದು, ಅಭೂತಪೂರ್ವ ಬೆಂಬಲ ಇದೆ. ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಬಂದಿದೆ. ಬಿಜೆಪಿ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಿದೆ. ಸಂಕಲ್ಪಯಾತ್ರೆ ವಿಜಯಸಂಕಲ್ಪ ಯಾತ್ರೆ ಆಗುವುದರಲ್ಲಿ ಸಂಶಯವಿಲ್ಲ. 2023ರಲ್ಲಿ 150 ಗುರಿಯನ್ನು ಮುಟ್ಟುವ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ನೂರು ವರ್ಷ ಚೆನ್ನಾಗಿರಲಿ: ಸಿದ್ಧರಾಮಯ್ಯನವರು 4 ಕಿ.ಮೀ. ನಡೆಯುವ ಸವಾಲಿಗೆ ಪ್ರತಿಕ್ರಿಯೆ ನೀಡಿ, ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದಾರೆ. ಇದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರಿಗೆ ದೇವರು ಒಳ್ಳೆಯ ಆರೋಗ್ಯವನ್ನು ನೀಡಿ ನೂರು ವರ್ಷ ಚೆನ್ನಾಗಿರಲಿ ಎಂದು ಹಾರೈಸಿದರು.

ಕಾನೂನಿನ ಚೌಕಟ್ಟಿನೊಳಗೆ ಕ್ರಮ: ಮುರುಘಾ ಮಠಕ್ಕೆ ಹೊಸ ಶ್ರೀಗಳನ್ನು ನೇಮಿಸುವ ಬಗ್ಗೆ ಒತ್ತಡ ಕೇಳಿ ಬರುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಭಕ್ತ ಮಂಡಳಿಯ ಸರ್ವರೂ ಬಂದು ಭೇಟಿಯಾಗಿದ್ದಾರೆ. ಅಲ್ಲಿನ ವಿಚಾರಗಳೆಲ್ಲವನ್ನೂ ತಿಳಿಸಿದ್ದಾರೆ. ಮಠದ ಆಡಳಿತಕ್ಕೆ ಆಗುತ್ತಿರುವ ತೊಂದರೆಯ ಬಗ್ಗೆ ವಿವರಿಸಿದ್ದಾರೆ. ಮಠದ ಟ್ರಸ್ಟ್ ಇದ್ದು, ಕಾನೂನಿನ ಚೌಕಟ್ಟಿನೊಳಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಟ್ರ್ಯಾಕ್ ಹಾಳಾಗದಂತೆ ಕ್ರಮ ವಹಿಸಲು ತಾಕೀತು: ಕಂಠೀರವ ಸ್ಟೇಡಿಯಂನ್ನು ಫುಟ್ಬಾಲ್ ಕ್ರೀಡೆಗೆ ನೀಡುತ್ತಿದ್ದು, ರಾಜ್ಯದ ಕ್ರೀಡಾಪಟುಗಳಿಗೆ ಇದರಿಂದ ತೊಂದರೆಯಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಮಾಡುತ್ತಿದ್ದು, ಈ ವಿಚಾರ ಅಧಿಕಾರದ ಮಿತಿಗೆ ಒಳಪಟ್ಟಿದೆ. ನಾವು ನಿರ್ಧರಿಸಲು ಆಗುವುದಿಲ್ಲ. ಆದರೆ ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಟ್ರ್ಯಾಕ್ ಹಾಳಾಗದಂತೆ ಕಾಪಾಡುವುದು ಅಸೋಸಿಯೇಷನ್ ಅವರ ಜವಾಬ್ದಾರಿ. ಇದಕ್ಕೆ ಸಂಬಂಧಪಟ್ಟವರನ್ನು ಕರೆಸಿ ಈ ಬಗ್ಗೆ ತಾಕೀತು ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ.. ಬಳ್ಳಾರಿ ಹಲಕುಂದಿ ಮಠದಿಂದ ರಾಹುಲ್​ ಗಾಂಧಿ ಯಾತ್ರೆ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.