ETV Bharat / state

ಸಿಎಂ ಭೇಟಿಯಾದ ಧರ್ಮೇಂದ್ರ ಪ್ರಧಾನ್.. ರೇಸ್ ಕೋರ್ಸ್ ನಿವಾಸದಲ್ಲಿ ಚುನಾವಣಾ ರಣತಂತ್ರದ ಕುರಿತು ಚರ್ಚೆ

author img

By

Published : Mar 5, 2023, 3:59 PM IST

ವಿಧಾನಸಭೆ ಚುನಾವಣೆ 2023- ಸಿಎಂ ಬೊಮ್ಮಾಯಿ ಭೇಟಿಯಾದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ - ಎಲೆಕ್ಷನ್​ ರಣತಂತ್ರದ ಕುರಿತು ಚರ್ಚೆ

ಧರ್ಮೇಂದ್ರ ಪ್ರಧಾನ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ
ಧರ್ಮೇಂದ್ರ ಪ್ರಧಾನ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗಿದ್ದು, ನಾಲ್ಕು ದಿಕ್ಕಿನಿಂದಲೂ ಬಿಜೆಪಿ ರಥಯಾತ್ರೆ ಆರಂಭಗೊಂಡಿರುವ ನಡುವೆಯೇ ಚುನಾವಣಾ ಕಾರ್ಯತಂತ್ರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮಾತುಕತೆ ನಡೆಸಿದರು. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಶೇಷವಾಗಿ ಸಮಾಲೋಚನೆ ನಡೆಸಲಾಯಿತು.

ನಗರದ ರೇಸ್​ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ರೇಸ್​ವ್ಯೂ ಕಾಟೇಜ್​ಗೆ ಭೇಟಿ ನೀಡಿದ ಧರ್ಮೇಂದ್ರ ಪ್ರಧಾನ್ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಸರ್ಕಾರ ಮತ್ತು ಪಕ್ಷದಲ್ಲಿನ ಸದ್ಯದ ಬೆಳವಣಿಗೆಗಳ ಕುರಿತು ಅವಲೋಕನ ಮಾಡಿದರು. ಪಕ್ಷದ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ವಿರುದ್ಧದ ಭ್ರಷ್ಟಾಚಾರದ ಆರೋಪ ಕುರಿತು ಸಮಾಲೋಚನೆ ನಡೆಸಿದರು. ಚುನಾವಣೆ ಮುನ್ನ ಭ್ರಷ್ಟಾಚಾರದ ಆರೋಪ ಪಕ್ಷದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ, ಸಂಪುಟ ಸಹೋದ್ಯೋಗಿಗಳು ಮತ್ತು ನಿಗಮ ಮಂಡಳಿ ಅಧ್ಯಕ್ಷರು ಎಚ್ಚರಿಕೆಯಿಂದ ಇರುವಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಪ್ರಧಾನ್ ಸೂಚನೆ ನೀಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್​ ಟೀಕೆಗಳಿಗೆ ತಕ್ಕ ಉತ್ತರ ನೀಡಲು ಸೂಚನೆ: ಇನ್ನು ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಹಿನ್ನಲೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದು, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಯತ್ನವನ್ನೂ ನಡೆಸಿದೆ. ರಾಜ್ಯಾದ್ಯಂತ ಈ ವಿಚಾರವನ್ನಿಟ್ಟುಕೊಂಡೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಹಾಗಾಗಿ 40 ಪರ್ಸೆಂಟ್ ಕಮೀಷನ್ ಮತ್ತು ಭ್ರಷ್ಟಾಚಾರ ಆರೋಪವನ್ನು ಸಮರ್ಥವಾಗಿ ಎದುರಿಸಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕೈ ಮೇಲಾಗದಂತೆ ನೋಡಿಕೊಳ್ಳಬೇಕು. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಿ, ಕಾಂಗ್ರೆಸ್ ಆರೋಪ, ಟೀಕೆಗಳಿಗೆ ತಕ್ಕ ಎದುರೇಟು ನೀಡಬೇಕು. ಇಡೀ ಸಚಿವ ಸಂಪುಟ ಒಟ್ಟಾಗಿ ಕಾಂಗ್ರೆಸ್ ಟೀಕೆಗಳನ್ನು ಎದುರಿಸಬೇಕು ಎಂದು ಸೂಚಿಸಿದರು.

ಇನ್ನು, ರಾಜ್ಯದಲ್ಲಿ ಆರಂಭಗೊಂಡಿರುವ ನಾಲ್ಕು ರಥಯಾತ್ರೆಗಳ ಕುರಿತು ಚರ್ಚಿಸಲಾಯಿತು. ಈಗಾಗಲೇ ಮೊದಲ ರಥಯಾತ್ರೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎರಡನೇ ರಥಯಾತ್ರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗು ಮೂರು ಮತ್ತು ನಾಲ್ಕನೇ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದು, ಯಾತ್ರೆಯ ಮಾರ್ಗದಂತೆ ನಾಲ್ಕೂ ಯಾತ್ರೆಗಳು ರಾಜ್ಯದ ನಾಲ್ಕು ಮೂಲೆಯಿಂದ ಅಬ್ಬರದ ಪ್ರಚಾರ ಆರಂಭಿಸಿ ಹೊರಟಿದ್ದು, ಈ ಕುರಿತು ಚರ್ಚಿಸಿದರು. ಯಾತ್ರೆಯುದ್ದಕ್ಕೂ ನಡೆಸಬೇಕಿರುವ ಕಾರ್ಯತಂತ್ರ, ಮೋರ್ಚಾಗಳ ಸಮಾವೇಶ, ಫಲಾನುಭವಿಗಳ ಸಮಾವೇಶ ಇತ್ಯಾದಿಗಳ ಸಿದ್ಧತೆ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಸಿಎಂ ಜೊತೆ ಪ್ರಧಾನ್ ಸಮಾಲೋಚನೆ: ಇನ್ನು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ ಉದ್ಘಾಟನೆ ನಡೆಸಲಿದ್ದಾರೆ. ಈ ಕಾರ್ಯಕ್ರಮದ ಸಿದ್ಧತೆ ಕುರಿತು ಸಿಎಂ ಜೊತೆ ಪ್ರಧಾನ್ ಸಮಾಲೋಚನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇನ್ಮುಂದೆ ಒಂದು ತಿಂಗಳು ಕೇಂದ್ರದ ನಾಯಕರು ನಿರಂತರವಾಗಿ ರಾಜ್ಯ ಪ್ರವಾಸಕ್ಕೆ ಆಗಮಿಸಲಿದ್ದು, ಸೂಕ್ತ ರೀತಿಯ ಪ್ರಚಾರ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು ಎಂಬುದು ಮೂಲಗಳ ಮಾಹಿತಿ.

ಇದನ್ನೂ ಓದಿ : ಮಾಡಾಳ್ ವಿರೂಪಾಕ್ಷಪ್ಪ ಕೇಸ್​ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಆರಗ ಜ್ಞಾನೇಂದ್ರ

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗಿದ್ದು, ನಾಲ್ಕು ದಿಕ್ಕಿನಿಂದಲೂ ಬಿಜೆಪಿ ರಥಯಾತ್ರೆ ಆರಂಭಗೊಂಡಿರುವ ನಡುವೆಯೇ ಚುನಾವಣಾ ಕಾರ್ಯತಂತ್ರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮಾತುಕತೆ ನಡೆಸಿದರು. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಶೇಷವಾಗಿ ಸಮಾಲೋಚನೆ ನಡೆಸಲಾಯಿತು.

ನಗರದ ರೇಸ್​ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ರೇಸ್​ವ್ಯೂ ಕಾಟೇಜ್​ಗೆ ಭೇಟಿ ನೀಡಿದ ಧರ್ಮೇಂದ್ರ ಪ್ರಧಾನ್ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಸರ್ಕಾರ ಮತ್ತು ಪಕ್ಷದಲ್ಲಿನ ಸದ್ಯದ ಬೆಳವಣಿಗೆಗಳ ಕುರಿತು ಅವಲೋಕನ ಮಾಡಿದರು. ಪಕ್ಷದ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ವಿರುದ್ಧದ ಭ್ರಷ್ಟಾಚಾರದ ಆರೋಪ ಕುರಿತು ಸಮಾಲೋಚನೆ ನಡೆಸಿದರು. ಚುನಾವಣೆ ಮುನ್ನ ಭ್ರಷ್ಟಾಚಾರದ ಆರೋಪ ಪಕ್ಷದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ, ಸಂಪುಟ ಸಹೋದ್ಯೋಗಿಗಳು ಮತ್ತು ನಿಗಮ ಮಂಡಳಿ ಅಧ್ಯಕ್ಷರು ಎಚ್ಚರಿಕೆಯಿಂದ ಇರುವಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಪ್ರಧಾನ್ ಸೂಚನೆ ನೀಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್​ ಟೀಕೆಗಳಿಗೆ ತಕ್ಕ ಉತ್ತರ ನೀಡಲು ಸೂಚನೆ: ಇನ್ನು ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಹಿನ್ನಲೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದು, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಯತ್ನವನ್ನೂ ನಡೆಸಿದೆ. ರಾಜ್ಯಾದ್ಯಂತ ಈ ವಿಚಾರವನ್ನಿಟ್ಟುಕೊಂಡೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಹಾಗಾಗಿ 40 ಪರ್ಸೆಂಟ್ ಕಮೀಷನ್ ಮತ್ತು ಭ್ರಷ್ಟಾಚಾರ ಆರೋಪವನ್ನು ಸಮರ್ಥವಾಗಿ ಎದುರಿಸಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕೈ ಮೇಲಾಗದಂತೆ ನೋಡಿಕೊಳ್ಳಬೇಕು. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಿ, ಕಾಂಗ್ರೆಸ್ ಆರೋಪ, ಟೀಕೆಗಳಿಗೆ ತಕ್ಕ ಎದುರೇಟು ನೀಡಬೇಕು. ಇಡೀ ಸಚಿವ ಸಂಪುಟ ಒಟ್ಟಾಗಿ ಕಾಂಗ್ರೆಸ್ ಟೀಕೆಗಳನ್ನು ಎದುರಿಸಬೇಕು ಎಂದು ಸೂಚಿಸಿದರು.

ಇನ್ನು, ರಾಜ್ಯದಲ್ಲಿ ಆರಂಭಗೊಂಡಿರುವ ನಾಲ್ಕು ರಥಯಾತ್ರೆಗಳ ಕುರಿತು ಚರ್ಚಿಸಲಾಯಿತು. ಈಗಾಗಲೇ ಮೊದಲ ರಥಯಾತ್ರೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎರಡನೇ ರಥಯಾತ್ರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗು ಮೂರು ಮತ್ತು ನಾಲ್ಕನೇ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದು, ಯಾತ್ರೆಯ ಮಾರ್ಗದಂತೆ ನಾಲ್ಕೂ ಯಾತ್ರೆಗಳು ರಾಜ್ಯದ ನಾಲ್ಕು ಮೂಲೆಯಿಂದ ಅಬ್ಬರದ ಪ್ರಚಾರ ಆರಂಭಿಸಿ ಹೊರಟಿದ್ದು, ಈ ಕುರಿತು ಚರ್ಚಿಸಿದರು. ಯಾತ್ರೆಯುದ್ದಕ್ಕೂ ನಡೆಸಬೇಕಿರುವ ಕಾರ್ಯತಂತ್ರ, ಮೋರ್ಚಾಗಳ ಸಮಾವೇಶ, ಫಲಾನುಭವಿಗಳ ಸಮಾವೇಶ ಇತ್ಯಾದಿಗಳ ಸಿದ್ಧತೆ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಸಿಎಂ ಜೊತೆ ಪ್ರಧಾನ್ ಸಮಾಲೋಚನೆ: ಇನ್ನು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ ಉದ್ಘಾಟನೆ ನಡೆಸಲಿದ್ದಾರೆ. ಈ ಕಾರ್ಯಕ್ರಮದ ಸಿದ್ಧತೆ ಕುರಿತು ಸಿಎಂ ಜೊತೆ ಪ್ರಧಾನ್ ಸಮಾಲೋಚನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇನ್ಮುಂದೆ ಒಂದು ತಿಂಗಳು ಕೇಂದ್ರದ ನಾಯಕರು ನಿರಂತರವಾಗಿ ರಾಜ್ಯ ಪ್ರವಾಸಕ್ಕೆ ಆಗಮಿಸಲಿದ್ದು, ಸೂಕ್ತ ರೀತಿಯ ಪ್ರಚಾರ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು ಎಂಬುದು ಮೂಲಗಳ ಮಾಹಿತಿ.

ಇದನ್ನೂ ಓದಿ : ಮಾಡಾಳ್ ವಿರೂಪಾಕ್ಷಪ್ಪ ಕೇಸ್​ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.