ETV Bharat / state

ಅಟಲ್ ಜನಸ್ನೇಹಿ ಕೇಂದ್ರ ಸೇರಿ ಗ್ರಾಮ ಒನ್​ಗೆ ಇನ್ನಷ್ಟು ಸೇವೆ ಸೇರಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

author img

By

Published : Aug 17, 2022, 11:00 PM IST

ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಜಿಲ್ಲೆಗಳಿಗೆ ವಿಶಿಷ್ಟವಾದ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ ಸೀಮಿತಗೊಳಿಸಿ ಗ್ರಾಮ ಒನ್ ಕೇಂದ್ರಗಳಲ್ಲಿ ಒದಗಿಸಬೇಕು. ಜೊತೆಗೆ ಮೈಕ್ರೋ ಬ್ಯಾಂಕಿಂಗ್, ಎಲ್​​ಪಿಜಿ ಬುಕಿಂಗ್ ಮತ್ತಿತರ ಕೆಲವು ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸಬಹುದು ಎಂದು ತಿಳಿಸಿದರು.

ಈ ವೇಳೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈವರೆಗೆ ಒಟ್ಟು 7274 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 2022ರ ಜನವರಿಯಲ್ಲಿ 65,520 ವ್ಯವಹಾರ (Transaction) ನಡೆದಿದೆ. ಜೂನ್ ತಿಂಗಳಲ್ಲಿ 10,36,542 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಧಿಕಾರಿಗಳ ಮಾಹಿತಿ ಆಲಿಸಿದ ಸಿಎಂ: ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕವೂ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಡಾಟಾ ಸೆಂಟರ್, ಡ್ರೋಣ್ ಸ್ಕೂಲ್ ಸ್ಥಾಪನೆ: ರಾಜ್ಯದಲ್ಲಿ ಹೊಸ ಡಾಟಾ ಸೆಂಟರ್ ಪ್ರಾರಂಭಿಸುವ ಕುರಿತು ಸಿಎಂ ನಡೆಸಿದ ಸಭೆಯಲ್ಲಿ ಚರ್ಚಿಸಲಾಯಿತು. ಹೊಸ ಡಾಟಾ ಸೆಂಟರ್ ಸ್ಥಾಪನೆಗೆ ಸೂಕ್ತ ಸ್ಥಳ ನಿಗದಿಪಡಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು. ಜೊತೆಗೆ ಖಾಸಗಿ ಕಂಪೆನಿಗಳೂ ಡಾಟಾ ಸೆಂಟರ್ ಪ್ರಾರಂಭಿಸಲು ಮುಂದೆ ಬರುತ್ತಿದ್ದು, ಸರ್ಕಾರವೂ ಇವುಗಳ ಸೇವೆ ಪಡೆದುಕೊಳ್ಳುವ ಬಗ್ಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.‌

ಕೆ-ಜಿಐಎಸ್ ಅಡಿ ಲಭ್ಯವಿರುವ ಮಾಹಿತಿಗಳನ್ನು ತ್ವರಿತವಾಗಿ ಹಾಗೂ ನಿಖರವಾಗಿ ನಿರ್ಧಾರ ತೆಗೆದುಕೊಳ್ಳಲು ಆಧಾರವಾಗಿ ಬಳಸಿಕೊಳ್ಳಲು ಅವಕಾಶವಿದೆ. ವಿವಿಧ ಇಲಾಖೆಗಳು ಇವುಗಳ ಅನುಕೂಲ ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಪಿಎಂ ಗತಿಶಕ್ತಿ ಯೋಜನೆಯಡಿ ರಾಜ್ಯದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಡ್ರೋನ್ ಸ್ಕೂಲ್ ಪ್ರಾರಂಭಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.‌

ಅರ್ಜಿ ಸಲ್ಲಿಸದೆಯೇ ಸವಲತ್ತು ವಿತರಣೆ: ಕುಟುಂಬ ತಂತ್ರಾಂಶದ ಮಾಹಿತಿಯನ್ನಾಧರಿಸಿ, ರಾಜ್ಯದಲ್ಲಿ ಹಲವು ಯೋಜನೆಗಳಡಿ ನಾಗರಿಕರು ಅರ್ಜಿ ಸಲ್ಲಿಸದೆಯೇ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ಇದೀಗ ಮುಖ್ಯಮಂತ್ರಿಯವರು ಇತ್ತೀಚೆಗೆ ಘೋಷಿಸಿರುವ 75 ಯುನಿಟ್ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ಯೋಜನೆ, ನೇಕಾರರ ಮಕ್ಕಳ ವಿದ್ಯಾರ್ಥಿ ವೇತನ ಮತ್ತಿತರ ಕಾರ್ಯಕ್ರಮಗಳಿಗೆ ಈ ದತ್ತಾಂಶವನ್ನು ಆಧರಿಸಿ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸಮಗ್ರ ಕುಂದು ಕೊರತೆ ನಿವಾರಣಾ ವ್ಯವಸ್ಥೆಯಡಿ ದೂರುದಾರರಿಗೆ ತೃಪ್ತಿಕರ ಸೇವೆಯನ್ನು ಒದಗಿಸಲು ಒತ್ತು ನೀಡಬೇಕೆಂದು ತಿಳಿಸಿದರು. ಇ-ಆಡಳಿತ ಉತ್ತಮ ಆಡಳಿತದ ಪ್ರಮುಖ ಸಾಧನ. ಇದನ್ನು ಹೆಚ್ಚಾಗಿ ಬಳಸಿ ಸರ್ಕಾರದ ಸವಲತ್ತುಗಳನ್ನು ಜನರಿಗೆ ಪಾರದರ್ಶಕವಾಗಿ ತಲುಪಿಸಬೇಕು ಎಂದು ನುಡಿದರು.

ಎಲ್ಲಾ ಯೋಜನೆ ಡಿಬಿಟಿ ವ್ಯಾಪ್ತಿಗೆ ತನ್ನಿ: ರಾಜ್ಯದಲ್ಲಿ ಡಿ.ಬಿ.ಟಿ ವೇದಿಕೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. 2021-22 ರಲ್ಲಿ 1.76 ಕೋಟಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ 3.53 ಕೋಟಿ ವ್ಯವಹಾರ (transaction) ನಡೆದಿದ್ದು, 11,708.75 ಕೋಟಿ ರೂ. ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. 2022-23ನೇ ಸಾಲಿನಲ್ಲಿ ಈ ವರೆಗೆ 62.87 ಲಕ್ಷ ಫಲಾನುಭವಿಗಳಿಗೆ 3114.55 ಕೋಟಿ ರೂ. ವರ್ಗಾಯಿಸಲಾಗಿದೆ. ಡಿಬಿಟಿ ವೇದಿಕೆಯನ್ನು ಇನ್ನಷ್ಟು ಬಲಪಡಿಸಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾಧ್ಯವಿರುವ ಎಲ್ಲ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಓದಿ: ಗಣಪತಿ ಹಬ್ಬಕ್ಕೆ ಅಡ್ಡ ಬಂದ್ರೆ ಸರಿಯಾದ ಬೆಲೆ ತೆರಬೇಕಾಗುತ್ತದೆ: ಕೆ ಎಸ್ ಈಶ್ವರಪ್ಪ

ಬೆಂಗಳೂರು: ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಜಿಲ್ಲೆಗಳಿಗೆ ವಿಶಿಷ್ಟವಾದ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ ಸೀಮಿತಗೊಳಿಸಿ ಗ್ರಾಮ ಒನ್ ಕೇಂದ್ರಗಳಲ್ಲಿ ಒದಗಿಸಬೇಕು. ಜೊತೆಗೆ ಮೈಕ್ರೋ ಬ್ಯಾಂಕಿಂಗ್, ಎಲ್​​ಪಿಜಿ ಬುಕಿಂಗ್ ಮತ್ತಿತರ ಕೆಲವು ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸಬಹುದು ಎಂದು ತಿಳಿಸಿದರು.

ಈ ವೇಳೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈವರೆಗೆ ಒಟ್ಟು 7274 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 2022ರ ಜನವರಿಯಲ್ಲಿ 65,520 ವ್ಯವಹಾರ (Transaction) ನಡೆದಿದೆ. ಜೂನ್ ತಿಂಗಳಲ್ಲಿ 10,36,542 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಧಿಕಾರಿಗಳ ಮಾಹಿತಿ ಆಲಿಸಿದ ಸಿಎಂ: ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕವೂ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಡಾಟಾ ಸೆಂಟರ್, ಡ್ರೋಣ್ ಸ್ಕೂಲ್ ಸ್ಥಾಪನೆ: ರಾಜ್ಯದಲ್ಲಿ ಹೊಸ ಡಾಟಾ ಸೆಂಟರ್ ಪ್ರಾರಂಭಿಸುವ ಕುರಿತು ಸಿಎಂ ನಡೆಸಿದ ಸಭೆಯಲ್ಲಿ ಚರ್ಚಿಸಲಾಯಿತು. ಹೊಸ ಡಾಟಾ ಸೆಂಟರ್ ಸ್ಥಾಪನೆಗೆ ಸೂಕ್ತ ಸ್ಥಳ ನಿಗದಿಪಡಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು. ಜೊತೆಗೆ ಖಾಸಗಿ ಕಂಪೆನಿಗಳೂ ಡಾಟಾ ಸೆಂಟರ್ ಪ್ರಾರಂಭಿಸಲು ಮುಂದೆ ಬರುತ್ತಿದ್ದು, ಸರ್ಕಾರವೂ ಇವುಗಳ ಸೇವೆ ಪಡೆದುಕೊಳ್ಳುವ ಬಗ್ಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.‌

ಕೆ-ಜಿಐಎಸ್ ಅಡಿ ಲಭ್ಯವಿರುವ ಮಾಹಿತಿಗಳನ್ನು ತ್ವರಿತವಾಗಿ ಹಾಗೂ ನಿಖರವಾಗಿ ನಿರ್ಧಾರ ತೆಗೆದುಕೊಳ್ಳಲು ಆಧಾರವಾಗಿ ಬಳಸಿಕೊಳ್ಳಲು ಅವಕಾಶವಿದೆ. ವಿವಿಧ ಇಲಾಖೆಗಳು ಇವುಗಳ ಅನುಕೂಲ ಪಡೆಯಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಪಿಎಂ ಗತಿಶಕ್ತಿ ಯೋಜನೆಯಡಿ ರಾಜ್ಯದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಡ್ರೋನ್ ಸ್ಕೂಲ್ ಪ್ರಾರಂಭಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.‌

ಅರ್ಜಿ ಸಲ್ಲಿಸದೆಯೇ ಸವಲತ್ತು ವಿತರಣೆ: ಕುಟುಂಬ ತಂತ್ರಾಂಶದ ಮಾಹಿತಿಯನ್ನಾಧರಿಸಿ, ರಾಜ್ಯದಲ್ಲಿ ಹಲವು ಯೋಜನೆಗಳಡಿ ನಾಗರಿಕರು ಅರ್ಜಿ ಸಲ್ಲಿಸದೆಯೇ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ಇದೀಗ ಮುಖ್ಯಮಂತ್ರಿಯವರು ಇತ್ತೀಚೆಗೆ ಘೋಷಿಸಿರುವ 75 ಯುನಿಟ್ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ಯೋಜನೆ, ನೇಕಾರರ ಮಕ್ಕಳ ವಿದ್ಯಾರ್ಥಿ ವೇತನ ಮತ್ತಿತರ ಕಾರ್ಯಕ್ರಮಗಳಿಗೆ ಈ ದತ್ತಾಂಶವನ್ನು ಆಧರಿಸಿ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸಮಗ್ರ ಕುಂದು ಕೊರತೆ ನಿವಾರಣಾ ವ್ಯವಸ್ಥೆಯಡಿ ದೂರುದಾರರಿಗೆ ತೃಪ್ತಿಕರ ಸೇವೆಯನ್ನು ಒದಗಿಸಲು ಒತ್ತು ನೀಡಬೇಕೆಂದು ತಿಳಿಸಿದರು. ಇ-ಆಡಳಿತ ಉತ್ತಮ ಆಡಳಿತದ ಪ್ರಮುಖ ಸಾಧನ. ಇದನ್ನು ಹೆಚ್ಚಾಗಿ ಬಳಸಿ ಸರ್ಕಾರದ ಸವಲತ್ತುಗಳನ್ನು ಜನರಿಗೆ ಪಾರದರ್ಶಕವಾಗಿ ತಲುಪಿಸಬೇಕು ಎಂದು ನುಡಿದರು.

ಎಲ್ಲಾ ಯೋಜನೆ ಡಿಬಿಟಿ ವ್ಯಾಪ್ತಿಗೆ ತನ್ನಿ: ರಾಜ್ಯದಲ್ಲಿ ಡಿ.ಬಿ.ಟಿ ವೇದಿಕೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. 2021-22 ರಲ್ಲಿ 1.76 ಕೋಟಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ 3.53 ಕೋಟಿ ವ್ಯವಹಾರ (transaction) ನಡೆದಿದ್ದು, 11,708.75 ಕೋಟಿ ರೂ. ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. 2022-23ನೇ ಸಾಲಿನಲ್ಲಿ ಈ ವರೆಗೆ 62.87 ಲಕ್ಷ ಫಲಾನುಭವಿಗಳಿಗೆ 3114.55 ಕೋಟಿ ರೂ. ವರ್ಗಾಯಿಸಲಾಗಿದೆ. ಡಿಬಿಟಿ ವೇದಿಕೆಯನ್ನು ಇನ್ನಷ್ಟು ಬಲಪಡಿಸಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾಧ್ಯವಿರುವ ಎಲ್ಲ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಓದಿ: ಗಣಪತಿ ಹಬ್ಬಕ್ಕೆ ಅಡ್ಡ ಬಂದ್ರೆ ಸರಿಯಾದ ಬೆಲೆ ತೆರಬೇಕಾಗುತ್ತದೆ: ಕೆ ಎಸ್ ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.