ETV Bharat / state

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಲ್ಲ, ಇದಕ್ಕೆ ಯಾರು ಹೊಣೆ: ಸಿಎಂ ಬೊಮ್ಮಾಯಿ

author img

By

Published : Mar 9, 2023, 4:21 PM IST

ಮೀಸಲಾತಿ ಹಾಗೂ ಸರ್ಕಾರದ ಸೌಲಭ್ಯಗಳಿಂದ ಎಷ್ಟು ಜನರ ಬದುಕು ಸುಧಾರಿಸಿದೆ ಎಂಬುದರ ಕುರಿತು ಸಾಮಾಜಿಕ ಲೆಕ್ಕಪರಿಶೋಧನೆಯಾಗಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸೌಲಭ್ಯಗಳನ್ನು ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸಲಾಗಿಲ್ಲ. ಇದಕ್ಕೆ ಯಾರು ಹೊಣೆಗಾರರು ಎಂದು ಆತ್ಮಾವಲೋಕನ ಮಾಡಿಕೊಳ್ಳೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಪರೋಕ್ಷವಾಗಿ ಕಾಂಗ್ರೆಸ್​​​ಗೆ ಟಾಂಗ್ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಕಂಡಂತೆ ಮೀಸಲಾತಿಯ ಲಾಭ ಕೆಲವೇ ಕೆಲವು ಜನರಿಗೆ ಸಿಕ್ಕಿದೆ. ದೊರೆತಿರುವವರಿಗೇ ಸೌಲಭ್ಯಗಳು ದೊರೆಯುತ್ತಿದ್ದು, ಅವರಿಗೆ ಸಂವಿಧಾನದ ಈ ಹಕ್ಕನ್ನು ಹೇಗೆ ಪಡೆಯಬೇಕು ಎಂಬುದು ಕರಗತವಾಗಿದೆ. ಹಳ್ಳಿಯ ಜನರಿಗೆ, ಬಡವರಿಗೆ ಈ ಮೀಸಲಾತಿ ಕುರಿತು ಸ್ವಲ್ಪವೂ ಅರಿವಿಲ್ಲ. ನಮ್ಮ ಹಕ್ಕು ನಮಗೆ ತಿಳಿಯದಿದ್ದರೆ ಅದನ್ನು ಪಡೆಯುವುದು ಕಷ್ಟವಾಗುತ್ತದೆ ಎಂದರು.

ದೇಶ ಹಾಗೂ ರಾಜ್ಯ ಹಲವಾರು ಆರ್ಥಿಕ ಸ್ತರಗಳ ಹಿನ್ನೆಲೆಯಿಂದ ಬಂದಿರುವ ಜನ ಮತ್ತು ಜನಾಂಗಗಳಿಂದ ಕೂಡಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೂಡಾ ಸಾಮಾಜಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ತುಳಿತಕ್ಕೊಳಪಟ್ಟ ಹಲವಾರು ಸಮುದಾಯಗಳಿವೆ. ಇಂತಹ ಜನಾಂಗಗಳನ್ನು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಗುರುತಿಸಿ ಈ ಜನಾಂಗಳಿಗೆ ಹಕ್ಕುಗಳನ್ನು ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತಂದು ಅವರಿಗೆ ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯನ್ನು ಸುಧಾರಿಸಿಕೊಂಡು ತಮ್ಮ ಕುಟುಂಬ ಹಾಗೂ ದೇಶ ಕಟ್ಟಲು ನೆರವಾಗಿದ್ದಾರೆ ಎಂದರು.

ಮೀಸಲಾತಿ ಮತ್ತು ಈ ಎಲ್ಲ ಸಮುದಾಯಗಳಿಗೆ ನೀಡಿರುವ ಸರ್ಕಾರದ ಕಾರ್ಯಕ್ರಮಗಳು ಎಷ್ಟರಮಟ್ಟಿಗೆ ಮುಟ್ಟಿದೆ ಹಾಗೂ ಎಷ್ಟು ಜನರ ಜೀವನ ಗುಣಮಟ್ಟ ಸುಧಾರಿಸಿದೆ. ಅವಕಾಶಗಳು ಯಾವ ಜನಾಂಗಕ್ಕೆ ದೊರೆತಿದೆ ಹಾಗೂ ಯಾರಿಗೆ ದೊರೆತಿಲ್ಲ ಎಂಬ ಸಾಮಾಜಿಕ ಲೆಕ್ಕಪರಿಶೋಧನೆಯಾಗಬೇಕು ಎಂದು ಹೇಳಿದರು.

17 ಸಾವಿರ ಮಂದಿಗೆ ಗಂಗಾಕಲ್ಯಾಣ ಯೋಜನೆ ಮಂಜೂರು: ನಮ್ಮ ಸರ್ಕಾರ 17 ಸಾವಿರ ಜನರಿಗೆ ಗಂಗಾಕಲ್ಯಾಣ ಮಂಜೂರು ಮಾಡಿದೆ‌. ಈ ಯೋಜನೆಗೆ 595 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ ₹ 75 ಸಾವಿರ ರೂಗಳನ್ನು 8 ಸಾವಿರ ಫಲಾನುಭವಿಗಳ ಬ್ಯಾಂಕ್​ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. ಇದರಿಂದಾಗಿ ಫಲಾನುಭವಿಗಳೇ ನಿಂತು ಕೊಳವೆಬಾವಿ ಕೊರೆಸಿ, ಪಂಪ್​ ಹಾಕಿಸಿಕೊಂಡು ಕಾನೂನಿನ ಪ್ರಕಾರ ವಿದ್ಯುದೀಕರಣ ಮಾಡಿಸಿಕೊಳ್ಳಬಹುದು ಎಂದು ಹೇಳಿದರು. ಎಲ್ಲ ನಿಗಮಗಳಲ್ಲಿಯೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲಾಗಿದೆ ಎಂದು ಹೇಳಿದರು.

ಮೆಗಾ ಹಾಸ್ಟೆಲ್ ನಿರ್ಮಾಣ: 5 ಮೆಗಾ ಹಾಸ್ಟೆಲ್​ಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ ಹಾಗೂ ಕಲಬುರಗಿಯಲ್ಲಿ ತೆರೆಯಲಾಗುತ್ತಿದೆ. ಇಲ್ಲಿಗೆ ಬೇರೆ ಬೇರೆ ಜಿಲ್ಲೆಯ ಹಾಗೂ ಗ್ರಾಮಗಳ ಮಕ್ಕಳು ಬರುತ್ತಾರೆ. ಅವರಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಸಿಕ್ಕರೂ ಹಾಸ್ಟೆಲ್ ಗಳಿರುವುದಿಲ್ಲ. ಅದಕ್ಕಾಗಿ ಮೆಗಾ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ಹಾಸ್ಟೆಲ್ ಒಂದು ಸಾವಿರ ಮಕ್ಕಳ ಸಾಮರ್ಥ್ಯ ಹೊಂದಿರಲಿದೆ. ಪ್ರತಿ ವರ್ಷವೂ ಮಂಜೂರಾಗಿ ಮುಂದಿನ 5 ವರ್ಷ 5 ಸಾವಿರ ಮಕ್ಕಳು ಸೇರಿ 25 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಮುಂದೆ ಜಿಲ್ಲಾ ಮಟ್ಟದಲ್ಲಿ ಇಂತಹ ಹಾಸ್ಟೆಲ್​ಗಳು ನಿರ್ಮಾಣವಾಗಬೇಕು. 500 ಕೋಟಿ ರೂಗಳ ವೆಚ್ಚದಲ್ಲಿ ಈ 5 ಮೆಗಾ ಹಾಸ್ಟೆಲ್​ಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ಇದನ್ನೂ ಓದಿ : ಬಿಜೆಪಿ- ಕಾಂಗ್ರೆಸ್ ಎರಡೂ ಪಕ್ಷಗಳು ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿವೆ: ಹೆಚ್​ಡಿಕೆ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಸೌಲಭ್ಯಗಳನ್ನು ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸಲಾಗಿಲ್ಲ. ಇದಕ್ಕೆ ಯಾರು ಹೊಣೆಗಾರರು ಎಂದು ಆತ್ಮಾವಲೋಕನ ಮಾಡಿಕೊಳ್ಳೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಪರೋಕ್ಷವಾಗಿ ಕಾಂಗ್ರೆಸ್​​​ಗೆ ಟಾಂಗ್ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಕಂಡಂತೆ ಮೀಸಲಾತಿಯ ಲಾಭ ಕೆಲವೇ ಕೆಲವು ಜನರಿಗೆ ಸಿಕ್ಕಿದೆ. ದೊರೆತಿರುವವರಿಗೇ ಸೌಲಭ್ಯಗಳು ದೊರೆಯುತ್ತಿದ್ದು, ಅವರಿಗೆ ಸಂವಿಧಾನದ ಈ ಹಕ್ಕನ್ನು ಹೇಗೆ ಪಡೆಯಬೇಕು ಎಂಬುದು ಕರಗತವಾಗಿದೆ. ಹಳ್ಳಿಯ ಜನರಿಗೆ, ಬಡವರಿಗೆ ಈ ಮೀಸಲಾತಿ ಕುರಿತು ಸ್ವಲ್ಪವೂ ಅರಿವಿಲ್ಲ. ನಮ್ಮ ಹಕ್ಕು ನಮಗೆ ತಿಳಿಯದಿದ್ದರೆ ಅದನ್ನು ಪಡೆಯುವುದು ಕಷ್ಟವಾಗುತ್ತದೆ ಎಂದರು.

ದೇಶ ಹಾಗೂ ರಾಜ್ಯ ಹಲವಾರು ಆರ್ಥಿಕ ಸ್ತರಗಳ ಹಿನ್ನೆಲೆಯಿಂದ ಬಂದಿರುವ ಜನ ಮತ್ತು ಜನಾಂಗಗಳಿಂದ ಕೂಡಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೂಡಾ ಸಾಮಾಜಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ತುಳಿತಕ್ಕೊಳಪಟ್ಟ ಹಲವಾರು ಸಮುದಾಯಗಳಿವೆ. ಇಂತಹ ಜನಾಂಗಗಳನ್ನು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಗುರುತಿಸಿ ಈ ಜನಾಂಗಳಿಗೆ ಹಕ್ಕುಗಳನ್ನು ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತಂದು ಅವರಿಗೆ ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯನ್ನು ಸುಧಾರಿಸಿಕೊಂಡು ತಮ್ಮ ಕುಟುಂಬ ಹಾಗೂ ದೇಶ ಕಟ್ಟಲು ನೆರವಾಗಿದ್ದಾರೆ ಎಂದರು.

ಮೀಸಲಾತಿ ಮತ್ತು ಈ ಎಲ್ಲ ಸಮುದಾಯಗಳಿಗೆ ನೀಡಿರುವ ಸರ್ಕಾರದ ಕಾರ್ಯಕ್ರಮಗಳು ಎಷ್ಟರಮಟ್ಟಿಗೆ ಮುಟ್ಟಿದೆ ಹಾಗೂ ಎಷ್ಟು ಜನರ ಜೀವನ ಗುಣಮಟ್ಟ ಸುಧಾರಿಸಿದೆ. ಅವಕಾಶಗಳು ಯಾವ ಜನಾಂಗಕ್ಕೆ ದೊರೆತಿದೆ ಹಾಗೂ ಯಾರಿಗೆ ದೊರೆತಿಲ್ಲ ಎಂಬ ಸಾಮಾಜಿಕ ಲೆಕ್ಕಪರಿಶೋಧನೆಯಾಗಬೇಕು ಎಂದು ಹೇಳಿದರು.

17 ಸಾವಿರ ಮಂದಿಗೆ ಗಂಗಾಕಲ್ಯಾಣ ಯೋಜನೆ ಮಂಜೂರು: ನಮ್ಮ ಸರ್ಕಾರ 17 ಸಾವಿರ ಜನರಿಗೆ ಗಂಗಾಕಲ್ಯಾಣ ಮಂಜೂರು ಮಾಡಿದೆ‌. ಈ ಯೋಜನೆಗೆ 595 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ ₹ 75 ಸಾವಿರ ರೂಗಳನ್ನು 8 ಸಾವಿರ ಫಲಾನುಭವಿಗಳ ಬ್ಯಾಂಕ್​ ಖಾತೆಗೆ ನೇರವಾಗಿ ವರ್ಗಾಯಿಸಲಾಗಿದೆ. ಇದರಿಂದಾಗಿ ಫಲಾನುಭವಿಗಳೇ ನಿಂತು ಕೊಳವೆಬಾವಿ ಕೊರೆಸಿ, ಪಂಪ್​ ಹಾಕಿಸಿಕೊಂಡು ಕಾನೂನಿನ ಪ್ರಕಾರ ವಿದ್ಯುದೀಕರಣ ಮಾಡಿಸಿಕೊಳ್ಳಬಹುದು ಎಂದು ಹೇಳಿದರು. ಎಲ್ಲ ನಿಗಮಗಳಲ್ಲಿಯೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲಾಗಿದೆ ಎಂದು ಹೇಳಿದರು.

ಮೆಗಾ ಹಾಸ್ಟೆಲ್ ನಿರ್ಮಾಣ: 5 ಮೆಗಾ ಹಾಸ್ಟೆಲ್​ಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ ಹಾಗೂ ಕಲಬುರಗಿಯಲ್ಲಿ ತೆರೆಯಲಾಗುತ್ತಿದೆ. ಇಲ್ಲಿಗೆ ಬೇರೆ ಬೇರೆ ಜಿಲ್ಲೆಯ ಹಾಗೂ ಗ್ರಾಮಗಳ ಮಕ್ಕಳು ಬರುತ್ತಾರೆ. ಅವರಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಸಿಕ್ಕರೂ ಹಾಸ್ಟೆಲ್ ಗಳಿರುವುದಿಲ್ಲ. ಅದಕ್ಕಾಗಿ ಮೆಗಾ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ಹಾಸ್ಟೆಲ್ ಒಂದು ಸಾವಿರ ಮಕ್ಕಳ ಸಾಮರ್ಥ್ಯ ಹೊಂದಿರಲಿದೆ. ಪ್ರತಿ ವರ್ಷವೂ ಮಂಜೂರಾಗಿ ಮುಂದಿನ 5 ವರ್ಷ 5 ಸಾವಿರ ಮಕ್ಕಳು ಸೇರಿ 25 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಮುಂದೆ ಜಿಲ್ಲಾ ಮಟ್ಟದಲ್ಲಿ ಇಂತಹ ಹಾಸ್ಟೆಲ್​ಗಳು ನಿರ್ಮಾಣವಾಗಬೇಕು. 500 ಕೋಟಿ ರೂಗಳ ವೆಚ್ಚದಲ್ಲಿ ಈ 5 ಮೆಗಾ ಹಾಸ್ಟೆಲ್​ಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ಇದನ್ನೂ ಓದಿ : ಬಿಜೆಪಿ- ಕಾಂಗ್ರೆಸ್ ಎರಡೂ ಪಕ್ಷಗಳು ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿವೆ: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.