ETV Bharat / state

ಬಿ ಟೀಂ ಯಾರಾದರೇನು, ಬಿಜೆಪಿ ಯಾವತ್ತೂ ಎ ಟೀಂ: ಸಿಎಂ ಬೊಮ್ಮಾಯಿ

author img

By

Published : Jun 11, 2022, 6:00 PM IST

Updated : Jun 11, 2022, 7:47 PM IST

ಬಿ ಟೀಂ ಯಾರಾದರೇನು. ನಾವು ಎ ಟೀಂ. ರಾಜ್ಯಸಭೆಗೆ ಬಿಜೆಪಿ ಪ್ರಥಮ ಬಾರಿಗೆ ರಾಜ್ಯದಿಂದ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ಪರಿಷತ್​ ಚುನಾವಣೆಯಲ್ಲೂ ಗೆಲುವು ನಮ್ಮದೇ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ: ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್‌ನವರು ಹೇಳುತ್ತಾರೆ. ಅಂದರೆ 'ಬಿಜೆಪಿ ಎ ಟೀಂ' ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿ ಟೀಂ ಯಾರಾದರೇನು ನಮಗೆ ಚಿಂತೆ ಇಲ್ಲ ಎಂದರು.

ವಿಧಾನ ಪರಿಷತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಆದರೆ ವಾಸ್ತವದಲ್ಲಿ ನೋಡಿದಾಗ ಬಿಜೆಪಿಗೆ ಉತ್ತಮ ಅವಕಾಶವಿದೆ. ಬಿಜೆಪಿಯಲ್ಲಿ ಸಂಪೂರ್ಣ ಒಗ್ಗಟ್ಟಿದೆ ಎಂದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಸಿಎಂ ಬೊಮ್ಮಾಮಿ ಬಗ್ಗೆ ಸಾಫ್ಟ್ ಕಾರ್ನರ್ ಇದೆ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ನನ್ನ ವಿರುದ್ಧವೇ ಹೆಚ್ಚು ಮಾತನಾಡುತ್ತಾರೆ. ಅವರು ಬಳಸುವ ಭಾಷೆ ಗಮನಿಸಿ, ಸಾಫ್ಟ್ ಅಥವಾ ಹಾರ್ಡ್ ಎನ್ನುವುದನ್ನು ತಿಳಿದುಕೊಳ್ಳಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ಮಧ್ಯೆ ಹೋಗಬಾರದು ಎಂದು ತೀರ್ಮಾನ ಮಾಡಿದ್ದೇನೆ. ಯಾವ ಪಕ್ಷವನ್ನೂ ಯಾರೂ ಕೂಡ ಮುಗಿಸಲು ಸಾಧ್ಯವಿಲ್ಲ. ಅದೆಲ್ಲವೂ ಜನರ ಕೈಯಲ್ಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಥಮ ಬಾರಿಗೆ ರಾಜ್ಯದಿಂದ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ನಮ್ಮ ಪ್ರಾತಿನಿಧ್ಯ ರಾಜ್ಯ ಸಭೆಯಲ್ಲಿ ಹೆಚ್ಚಾಗಿದೆ. ವಿಧಾನ ಪರಿಷತ್​ನ ನಾಲ್ಕೂ ಸ್ಥಳಗಳಲ್ಲಿ ವಿಜೇತರಾಗುವ ವಿಶ್ವಾಸವಿದೆ. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಮ್ಮ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರ ಸಮೇತವಾಗಿ ಎಲ್ಲರೂ ಒಟ್ಟಾಗಿ ಬಂದು ಶ್ರಮಿಸಿದ್ದಾರೆ. ಹಾಗೂ ಎಲ್ಲಾ ಸಂಘ ಸಂಸ್ಥೆಗಳು ಕೂಡ ಬೆಂಬಲವನ್ನು ವ್ಯಕ್ತಪಡಿಸಿವೆ. ಇಬ್ಬರೂ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಆಯ್ಕೆಯಾಗುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ತಾಕತ್ತಿದ್ರೆ ಬರಲಿ, ಗಂಡಸಾದ್ರೆ ನನ್ನ ಎದುರು ಸ್ಪರ್ಧಿಸಲಿ: ಹೆಚ್​​ಡಿಕೆಗೆ ಶಾಸಕ ಶ್ರೀನಿವಾಸ್ ಓಪನ್​ ಚಾಲೆಂಜ್​

ಕೆಎಲ್​ಇ ಚೇರ್ಮನ್​ ಪ್ರಭಾಕರ ಕೋರೆ ಅವರು ನಮ್ಮೊಂದಿಗಿದ್ದಾರೆ. ಇದನ್ನು ಪಕ್ಷವೂ ಗುರುತಿಸುತ್ತದೆ. ಸುದೀರ್ಘವಾಗಿ ನಾಲ್ಕು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಅವರು ಮಾಡಿರುವ ಕೆಲಸ ನಮಗೆ ಮಾರ್ಗದರ್ಶಕವಾಗಿದೆ ಎಂದು ಸಿಎಂ ತಿಳಿಸಿದರು.

ಬೆಳಗಾವಿ: ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್‌ನವರು ಹೇಳುತ್ತಾರೆ. ಅಂದರೆ 'ಬಿಜೆಪಿ ಎ ಟೀಂ' ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿ ಟೀಂ ಯಾರಾದರೇನು ನಮಗೆ ಚಿಂತೆ ಇಲ್ಲ ಎಂದರು.

ವಿಧಾನ ಪರಿಷತ್ ಚುನಾವಣೆಗೂ ಮುನ್ನ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಆದರೆ ವಾಸ್ತವದಲ್ಲಿ ನೋಡಿದಾಗ ಬಿಜೆಪಿಗೆ ಉತ್ತಮ ಅವಕಾಶವಿದೆ. ಬಿಜೆಪಿಯಲ್ಲಿ ಸಂಪೂರ್ಣ ಒಗ್ಗಟ್ಟಿದೆ ಎಂದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಸಿಎಂ ಬೊಮ್ಮಾಮಿ ಬಗ್ಗೆ ಸಾಫ್ಟ್ ಕಾರ್ನರ್ ಇದೆ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ನನ್ನ ವಿರುದ್ಧವೇ ಹೆಚ್ಚು ಮಾತನಾಡುತ್ತಾರೆ. ಅವರು ಬಳಸುವ ಭಾಷೆ ಗಮನಿಸಿ, ಸಾಫ್ಟ್ ಅಥವಾ ಹಾರ್ಡ್ ಎನ್ನುವುದನ್ನು ತಿಳಿದುಕೊಳ್ಳಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ಮಧ್ಯೆ ಹೋಗಬಾರದು ಎಂದು ತೀರ್ಮಾನ ಮಾಡಿದ್ದೇನೆ. ಯಾವ ಪಕ್ಷವನ್ನೂ ಯಾರೂ ಕೂಡ ಮುಗಿಸಲು ಸಾಧ್ಯವಿಲ್ಲ. ಅದೆಲ್ಲವೂ ಜನರ ಕೈಯಲ್ಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಥಮ ಬಾರಿಗೆ ರಾಜ್ಯದಿಂದ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ನಮ್ಮ ಪ್ರಾತಿನಿಧ್ಯ ರಾಜ್ಯ ಸಭೆಯಲ್ಲಿ ಹೆಚ್ಚಾಗಿದೆ. ವಿಧಾನ ಪರಿಷತ್​ನ ನಾಲ್ಕೂ ಸ್ಥಳಗಳಲ್ಲಿ ವಿಜೇತರಾಗುವ ವಿಶ್ವಾಸವಿದೆ. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಮ್ಮ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರ ಸಮೇತವಾಗಿ ಎಲ್ಲರೂ ಒಟ್ಟಾಗಿ ಬಂದು ಶ್ರಮಿಸಿದ್ದಾರೆ. ಹಾಗೂ ಎಲ್ಲಾ ಸಂಘ ಸಂಸ್ಥೆಗಳು ಕೂಡ ಬೆಂಬಲವನ್ನು ವ್ಯಕ್ತಪಡಿಸಿವೆ. ಇಬ್ಬರೂ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಆಯ್ಕೆಯಾಗುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ತಾಕತ್ತಿದ್ರೆ ಬರಲಿ, ಗಂಡಸಾದ್ರೆ ನನ್ನ ಎದುರು ಸ್ಪರ್ಧಿಸಲಿ: ಹೆಚ್​​ಡಿಕೆಗೆ ಶಾಸಕ ಶ್ರೀನಿವಾಸ್ ಓಪನ್​ ಚಾಲೆಂಜ್​

ಕೆಎಲ್​ಇ ಚೇರ್ಮನ್​ ಪ್ರಭಾಕರ ಕೋರೆ ಅವರು ನಮ್ಮೊಂದಿಗಿದ್ದಾರೆ. ಇದನ್ನು ಪಕ್ಷವೂ ಗುರುತಿಸುತ್ತದೆ. ಸುದೀರ್ಘವಾಗಿ ನಾಲ್ಕು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಅವರು ಮಾಡಿರುವ ಕೆಲಸ ನಮಗೆ ಮಾರ್ಗದರ್ಶಕವಾಗಿದೆ ಎಂದು ಸಿಎಂ ತಿಳಿಸಿದರು.

Last Updated : Jun 11, 2022, 7:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.