ETV Bharat / state

ಇಂಟಿಗ್ರೇಟೆಡ್ ಟೌನ್​ಷಿಪ್ ಯೋಜನೆ: ಪರಿಣತ ವಿವಿಗಳ ಸಹಯೋಗ ಪಡೆಯಲು ಸಿಎಂ ಸೂಚನೆ

author img

By

Published : Aug 19, 2022, 9:55 PM IST

ಸ್ಮಾರ್ಟ್ ಇಂಟಿಗ್ರೇಟೆಡ್ ಟೌನ್​ಷಿಪ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿಂಗಾಪುರ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ವಿಶ್ವವಿದ್ಯಾಲಯಗಳು ನಗರ ಯೋಜನೆಯಲ್ಲಿ ವಿಶೇಷ ಪರಿಣತಿ ಹೊಂದಿವೆ. ಅವುಗಳ ನೆರವು ಪಡೆಯಿರಿ ಎಂದು ಸೂಚನೆ ನೀಡಿದರು.

cm-bommai-meeting-on-smart-integrated-township-scheme
ಇಂಟಿಗ್ರೇಟೆಡ್ ಟೌನ್​ಷಿಪ್ ಯೋಜನೆ: ಪರಿಣತ ವಿವಿಗಳ ಸಹಯೋಗ ಪಡೆಯಲು ಸಿಎಂ ಸೂಚನೆ

ಬೆಂಗಳೂರು: ಆಯವ್ಯಯ ಘೋಷಣೆಯಂತೆ ಪ್ರತಿ ವಿಭಾಗದಲ್ಲಿ ಒಂದು ಪರಿಸರ ಸ್ನೇಹಿ ಸ್ಮಾರ್ಟ್ ಇಂಟಿಗ್ರೇಟೆಡ್ ಟೌನ್​ಷಿಪ್ ಯೋಜನೆ ಜಾರಿಗೆ ನಗರ ಯೋಜನೆಯಲ್ಲಿ ಪರಿಣತಿ ಹೊಂದಿದ ವಿಶ್ವವಿದ್ಯಾಲಯಗಳ ಸಹಯೋಗ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂಟಿಗ್ರೇಟೆಡ್ ಟೌನ್​ಷಿಪ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಿಂಗಾಪುರ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ವಿಶ್ವವಿದ್ಯಾಲಯಗಳು ನಗರ ಯೋಜನೆಯಲ್ಲಿ ವಿಶೇಷ ಪರಿಣತಿ ಹೊಂದಿವೆ. ಅವುಗಳ ನೆರವು ಪಡೆಯಬೇಕು. ಈ ಟೌನ್​ಷಿಪ್​ಗಳು ಪರಿಸರ ಸ್ನೇಹಿ ಹಾಗೂ ಸ್ಮಾರ್ಟ್ ನಗರಗಳಾಗಿದ್ದು, ವಸತಿ, ಅಗತ್ಯ ಮೂಲಸೌಕರ್ಯಗಳು, ಶೈಕ್ಷಣಿಕ ಸೌಲಭ್ಯ, ಆರೋಗ್ಯ ಸೇವೆಗಳು, ವಾಣಿಜ್ಯ ಚಟುವಟಿಕೆಗಳು ಹಾಗೂ ಸಮೀಪದಲ್ಲಿಯೇ ಕೈಗಾರಿಕೆಗಳೂ ಸ್ಥಾಪಿಸುವಂತಿರಬೇಕು. ಅತ್ಯುತ್ತಮ ಸಾರಿಗೆ ಸಂಪರ್ಕ ಹೊಂದಿರಬೇಕು ಎಂದು ಸಿಎಂ ತಿಳಿಸಿದರು.

ಟೌನ್​ಷಿಪ್ ನಿರ್ಮಾಣಕ್ಕೆ ಭೂಮಿಯ ಲಭ್ಯತೆಯ ಆಧಾರದಲ್ಲಿ ವಿವಿಧ ಜಿಲ್ಲೆಗಳಿಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವ ಈ ಯೋಜನೆಗೆ ಕಾನ್ಸೆಪ್ಟ್ ಪೇಪರ್ ಸಿದ್ಧಪಡಿಸಿ ಸಲ್ಲಿಸುವಂತೆ ಬೊಮ್ಮಾಯಿ ಸೂಚಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಸೂಚನೆ

ಬೆಂಗಳೂರು: ಆಯವ್ಯಯ ಘೋಷಣೆಯಂತೆ ಪ್ರತಿ ವಿಭಾಗದಲ್ಲಿ ಒಂದು ಪರಿಸರ ಸ್ನೇಹಿ ಸ್ಮಾರ್ಟ್ ಇಂಟಿಗ್ರೇಟೆಡ್ ಟೌನ್​ಷಿಪ್ ಯೋಜನೆ ಜಾರಿಗೆ ನಗರ ಯೋಜನೆಯಲ್ಲಿ ಪರಿಣತಿ ಹೊಂದಿದ ವಿಶ್ವವಿದ್ಯಾಲಯಗಳ ಸಹಯೋಗ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂಟಿಗ್ರೇಟೆಡ್ ಟೌನ್​ಷಿಪ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸಿಂಗಾಪುರ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ವಿಶ್ವವಿದ್ಯಾಲಯಗಳು ನಗರ ಯೋಜನೆಯಲ್ಲಿ ವಿಶೇಷ ಪರಿಣತಿ ಹೊಂದಿವೆ. ಅವುಗಳ ನೆರವು ಪಡೆಯಬೇಕು. ಈ ಟೌನ್​ಷಿಪ್​ಗಳು ಪರಿಸರ ಸ್ನೇಹಿ ಹಾಗೂ ಸ್ಮಾರ್ಟ್ ನಗರಗಳಾಗಿದ್ದು, ವಸತಿ, ಅಗತ್ಯ ಮೂಲಸೌಕರ್ಯಗಳು, ಶೈಕ್ಷಣಿಕ ಸೌಲಭ್ಯ, ಆರೋಗ್ಯ ಸೇವೆಗಳು, ವಾಣಿಜ್ಯ ಚಟುವಟಿಕೆಗಳು ಹಾಗೂ ಸಮೀಪದಲ್ಲಿಯೇ ಕೈಗಾರಿಕೆಗಳೂ ಸ್ಥಾಪಿಸುವಂತಿರಬೇಕು. ಅತ್ಯುತ್ತಮ ಸಾರಿಗೆ ಸಂಪರ್ಕ ಹೊಂದಿರಬೇಕು ಎಂದು ಸಿಎಂ ತಿಳಿಸಿದರು.

ಟೌನ್​ಷಿಪ್ ನಿರ್ಮಾಣಕ್ಕೆ ಭೂಮಿಯ ಲಭ್ಯತೆಯ ಆಧಾರದಲ್ಲಿ ವಿವಿಧ ಜಿಲ್ಲೆಗಳಿಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವ ಈ ಯೋಜನೆಗೆ ಕಾನ್ಸೆಪ್ಟ್ ಪೇಪರ್ ಸಿದ್ಧಪಡಿಸಿ ಸಲ್ಲಿಸುವಂತೆ ಬೊಮ್ಮಾಯಿ ಸೂಚಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.