ETV Bharat / state

ಅರುಣ್ ಸಿಂಗ್ ಅವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಬಿಎಸ್​ವೈ

author img

By

Published : Jun 15, 2021, 1:51 PM IST

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಾಳೆ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ನಮ್ಮ ಶಾಸಕರು, ಸಂಸದರ ಜತೆ ಚರ್ಚೆ ಮಾಡುತ್ತಾರೆ. ಯಾವುದೇ ಗೊಂದಲ ಇಲ್ಲ, ಯಾರು ಬೇಕಾದರೂ ಅವರನ್ನು ಭೇಟಿ ಮಾಡಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

cm bs yadiyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಯಾವ ಶಾಸಕರು ಬೇಕಾದರೂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಸಿಂಗ್ ಜತೆಗೆ ಮತ್ತೊಬ್ಬ ವೀಕ್ಷಕ ಬರಬೇಕು ಎಂಬ ಆಗ್ರಹ ವಿಚಾರದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಅನಗತ್ಯವಾದ ಪ್ರಶ್ನೆ ಕೇಳಬೇಡಿ. ಅರುಣ್ ಸಿಂಗ್ ನಮ್ಮ ರಾಜ್ಯದ ಉಸ್ತುವಾರಿಗಳು. ಅವರು ನಾಳೆ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ನಮ್ಮ ಶಾಸಕರು, ಸಂಸದರ ಜತೆ ಚರ್ಚೆ ಮಾಡುತ್ತಾರೆ. ಯಾವುದೇ ಗೊಂದಲ ಇಲ್ಲ, ಯಾರು ಬೇಕಾದರೂ ಅವರನ್ನು ಭೇಟಿ ಮಾಡಬಹುದು. ಅವರು ಕೆಕೆ ಗೆಸ್ಟ್ ಹೌಸ್​ನಲ್ಲಿದ್ದು, ಎಲ್ಲ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿ ತಿಳಿದುಕೊಳ್ಳಲಿದ್ದಾರೆ ಎಂದರು.

ನಾಯಕತ್ವ ಬದಲಾವಣೆ ವಿಚಾರ

ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಗೊಂದಲ ಇಲ್ಲ. ನಾನು ಕೂಡ ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ. ಯಾರೋ ಒಂದಿಬ್ಬರಿಗೆ ಬೇಸರ ಇರಬಹುದು. ಆದರೆ ಅವರನ್ನು ಕರೆದು ಅರುಣ್ ಸಿಂಗ್ ಮಾತನಾಡುತ್ತಾರೆ. ನಾಯಕತ್ವದ ಬಗ್ಗೆಯಾಗಲಿ, ಬೇರೆ ವಿಷಯದ ಬಗ್ಗೆಯಾಗಲಿ ಯಾವುದೇ ಗೊಂದಲ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಎರಡನೇ ಹಂತದ ಅನ್​​ಲಾಕ್

ಇವತ್ತು, ನಾಳೆ ಪರಿಸ್ಥಿತಿ ಪರಾಮರ್ಶೆ ಮಾಡಲಾಗುತ್ತದೆ. ಪರಿಸ್ಥಿತಿ ಸುಧಾರಣೆ ಆಗುತ್ತಿರೋದನ್ನು ಗಮನಿಸಿ ಎರಡನೇ ಹಂತದ ಅನ್ ಲಾಕ್ ಬಗ್ಗೆ ನಿರ್ಧಾರ ಮಾಡುತ್ತೇವೆ. ಎರಡನೇ ಹಂತದಲ್ಲಿ ಯಾವುದಕ್ಕೆಲ್ಲ ವಿನಾಯಿತಿ ಕೊಡಬಹುದು ಎಂಬುದರ ಬಗ್ಗೆ ಯೋಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು.

ಮತ್ತೊಮ್ಮೆ ಗೃಹಪ್ರವೇಶವಿಲ್ಲ

ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸ ನವೀಕರಣ ಆಗಿದೆ. ಈಗಾಗಲೇ ಧವಳಗಿರಿಯ ಗೃಹ ಪ್ರವೇಶ ಆಗಿದೆ. ಅಡುಗೆಯವರು ಇದ್ದಾರೆ. ಮತ್ತೊಮ್ಮೆ ಗೃಹ ಪ್ರವೇಶ ಮಾಡೋ ಪ್ರಶ್ನೆ ಇಲ್ಲ. ಹಾಗಾಗಿ ಬಂದು ಹೋಗುತ್ತಿದ್ದೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಂಚಲನ ಮೂಡಿಸಿದ ಅರುಣ್​​ ಸಿಂಗ್​ ರಾಜ್ಯ ಭೇಟಿ... ಸಚಿವ ಈಶ್ವರಪ್ಪ ಹೇಳಿದ್ದೇನು?

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಯಾವ ಶಾಸಕರು ಬೇಕಾದರೂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಸಿಂಗ್ ಜತೆಗೆ ಮತ್ತೊಬ್ಬ ವೀಕ್ಷಕ ಬರಬೇಕು ಎಂಬ ಆಗ್ರಹ ವಿಚಾರದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಅನಗತ್ಯವಾದ ಪ್ರಶ್ನೆ ಕೇಳಬೇಡಿ. ಅರುಣ್ ಸಿಂಗ್ ನಮ್ಮ ರಾಜ್ಯದ ಉಸ್ತುವಾರಿಗಳು. ಅವರು ನಾಳೆ ರಾಜ್ಯಕ್ಕೆ ಬರುತ್ತಿದ್ದಾರೆ. ಅವರು ನಮ್ಮ ಶಾಸಕರು, ಸಂಸದರ ಜತೆ ಚರ್ಚೆ ಮಾಡುತ್ತಾರೆ. ಯಾವುದೇ ಗೊಂದಲ ಇಲ್ಲ, ಯಾರು ಬೇಕಾದರೂ ಅವರನ್ನು ಭೇಟಿ ಮಾಡಬಹುದು. ಅವರು ಕೆಕೆ ಗೆಸ್ಟ್ ಹೌಸ್​ನಲ್ಲಿದ್ದು, ಎಲ್ಲ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿ ತಿಳಿದುಕೊಳ್ಳಲಿದ್ದಾರೆ ಎಂದರು.

ನಾಯಕತ್ವ ಬದಲಾವಣೆ ವಿಚಾರ

ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಗೊಂದಲ ಇಲ್ಲ. ನಾನು ಕೂಡ ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ. ಯಾರೋ ಒಂದಿಬ್ಬರಿಗೆ ಬೇಸರ ಇರಬಹುದು. ಆದರೆ ಅವರನ್ನು ಕರೆದು ಅರುಣ್ ಸಿಂಗ್ ಮಾತನಾಡುತ್ತಾರೆ. ನಾಯಕತ್ವದ ಬಗ್ಗೆಯಾಗಲಿ, ಬೇರೆ ವಿಷಯದ ಬಗ್ಗೆಯಾಗಲಿ ಯಾವುದೇ ಗೊಂದಲ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಎರಡನೇ ಹಂತದ ಅನ್​​ಲಾಕ್

ಇವತ್ತು, ನಾಳೆ ಪರಿಸ್ಥಿತಿ ಪರಾಮರ್ಶೆ ಮಾಡಲಾಗುತ್ತದೆ. ಪರಿಸ್ಥಿತಿ ಸುಧಾರಣೆ ಆಗುತ್ತಿರೋದನ್ನು ಗಮನಿಸಿ ಎರಡನೇ ಹಂತದ ಅನ್ ಲಾಕ್ ಬಗ್ಗೆ ನಿರ್ಧಾರ ಮಾಡುತ್ತೇವೆ. ಎರಡನೇ ಹಂತದಲ್ಲಿ ಯಾವುದಕ್ಕೆಲ್ಲ ವಿನಾಯಿತಿ ಕೊಡಬಹುದು ಎಂಬುದರ ಬಗ್ಗೆ ಯೋಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು.

ಮತ್ತೊಮ್ಮೆ ಗೃಹಪ್ರವೇಶವಿಲ್ಲ

ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸ ನವೀಕರಣ ಆಗಿದೆ. ಈಗಾಗಲೇ ಧವಳಗಿರಿಯ ಗೃಹ ಪ್ರವೇಶ ಆಗಿದೆ. ಅಡುಗೆಯವರು ಇದ್ದಾರೆ. ಮತ್ತೊಮ್ಮೆ ಗೃಹ ಪ್ರವೇಶ ಮಾಡೋ ಪ್ರಶ್ನೆ ಇಲ್ಲ. ಹಾಗಾಗಿ ಬಂದು ಹೋಗುತ್ತಿದ್ದೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಂಚಲನ ಮೂಡಿಸಿದ ಅರುಣ್​​ ಸಿಂಗ್​ ರಾಜ್ಯ ಭೇಟಿ... ಸಚಿವ ಈಶ್ವರಪ್ಪ ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.