ETV Bharat / state

UNLOCK 3.0 ಮುಖ್ಯಾಂಶಗಳು: ಜುಲೈ 5 ರಿಂದ ರಾಜ್ಯದಲ್ಲಿ ಯಾವುದಕ್ಕೆಲ್ಲಾ ಅವಕಾಶ?

ಮಾಲ್​ಗಳನ್ನು ಓಪನ್​ ಮಾಡಲು, ಬಾರ್​ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್​ ಕರ್ಫ್ಯೂ ಮುಂದುವರೆಯಲಿದೆ..

author img

By

Published : Jul 3, 2021, 7:21 PM IST

Updated : Jul 3, 2021, 9:32 PM IST

CM BSY announced unlock 3.0 guideline
ಪಬ್​ಗೆ ಅವಕಾಶವಿಲ್ಲ, ಬಾರ್​ ತೆರೆಯಲು ಅನುಮತಿ; ಸಿಎಂ ಬಿಎಸ್​ವೈ

ಬೆಂಗಳೂರು : ರಾಜ್ಯದಲ್ಲಿ ಜುಲೈ 5ರಿಂದ ಅನ್ವಯವಾಗುವಂತೆ ಅನ್​ಲಾಕ್​​ 3.0 ಜಾರಿಗೆ ಅನುಮತಿಸಲಾಗಿದೆ. ಪ್ರಾರ್ಥನಾ ಮಂದಿರಗಳು, ಮಾರುಕಟ್ಟೆ, ಮಾಲ್, ಬಾರ್​​ಗಳನ್ನು ತೆರೆಯಲು ಅವಕಾಶ ದೊರೆತಿದೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರಕ್ಕೆ ತತ್ತರಿಸಿ ಲಾಕ್​​ಡೌನ್​​ ಜಾರಿಗೊಳಿಸಿದ್ದ ರಾಜ್ಯ ಸರ್ಕಾರ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದಂತೆ ಹಂತ ಹಂತವಾಗಿ ಅನ್​​ಲಾಕ್ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.

ಈ ಅನ್ ಲಾಕ್ ಜುಲೈ 5 ರಿಂದ ಬೆಳಿಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

ಅನ್‌ಲಾಕ್‌ 3.0 ಕುರಿತಂತೆ ಸಿಎಂ ಬಿ ಎಸ್‌ ಯಡಿಯೂರಪ್ಪ ಮಾಹಿತಿ ನೀಡಿರುವುದು..

ಯಾವುದಕ್ಕೆ ಸಡಿಲಿಕೆ:

  • ಮಾಲ್​ಗಳನ್ನು ತೆರೆಯಲು ಅವಕಾಶ
  • ಸರ್ಕಾರಿ/ಖಾಸಗಿ ಕಚೇರಿಗಳು,ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ, ಸೇವೆಗಿಲ್ಲ
  • ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ
  • ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ
  • ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ
  • ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ
  • ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ
  • ನೈಟ್ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ
  • ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ
  • ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಸಭೆ-ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ
  • ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನ
  • ಪಬ್​ಗ​ಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್​ಗಳು ಕಾರ್ಯನಿರ್ವಹಿಸಲು ಅವಕಾಶ
  • ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ

ಅವಶ್ಯವಿದ್ದಲ್ಲಿ ಹೆಚ್ಚಿನ ನಿರ್ಬಂಧ ಹೇರಲು ಜಿಲ್ಲಾಡಳಿಕ್ಕೆ ಸೂಚನೆ :

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಿಎಂ ಬಿಎಸ್​ವೈ ವಿನಂತಿಸಿದರು.

ಬೆಂಗಳೂರು : ರಾಜ್ಯದಲ್ಲಿ ಜುಲೈ 5ರಿಂದ ಅನ್ವಯವಾಗುವಂತೆ ಅನ್​ಲಾಕ್​​ 3.0 ಜಾರಿಗೆ ಅನುಮತಿಸಲಾಗಿದೆ. ಪ್ರಾರ್ಥನಾ ಮಂದಿರಗಳು, ಮಾರುಕಟ್ಟೆ, ಮಾಲ್, ಬಾರ್​​ಗಳನ್ನು ತೆರೆಯಲು ಅವಕಾಶ ದೊರೆತಿದೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರಕ್ಕೆ ತತ್ತರಿಸಿ ಲಾಕ್​​ಡೌನ್​​ ಜಾರಿಗೊಳಿಸಿದ್ದ ರಾಜ್ಯ ಸರ್ಕಾರ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದಂತೆ ಹಂತ ಹಂತವಾಗಿ ಅನ್​​ಲಾಕ್ ಪ್ರಕ್ರಿಯೆ ಕೈಗೆತ್ತಿಕೊಂಡಿದೆ.

ಈ ಅನ್ ಲಾಕ್ ಜುಲೈ 5 ರಿಂದ ಬೆಳಿಗ್ಗೆ 5 ಗಂಟೆಯಿಂದ ಜುಲೈ 19ರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

ಅನ್‌ಲಾಕ್‌ 3.0 ಕುರಿತಂತೆ ಸಿಎಂ ಬಿ ಎಸ್‌ ಯಡಿಯೂರಪ್ಪ ಮಾಹಿತಿ ನೀಡಿರುವುದು..

ಯಾವುದಕ್ಕೆ ಸಡಿಲಿಕೆ:

  • ಮಾಲ್​ಗಳನ್ನು ತೆರೆಯಲು ಅವಕಾಶ
  • ಸರ್ಕಾರಿ/ಖಾಸಗಿ ಕಚೇರಿಗಳು,ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ, ಸೇವೆಗಿಲ್ಲ
  • ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ.100ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ
  • ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ
  • ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ
  • ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ
  • ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ
  • ನೈಟ್ ಕರ್ಫ್ಯೂ ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ
  • ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ
  • ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಸಭೆ-ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ
  • ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನ
  • ಪಬ್​ಗ​ಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್​ಗಳು ಕಾರ್ಯನಿರ್ವಹಿಸಲು ಅವಕಾಶ
  • ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ

ಅವಶ್ಯವಿದ್ದಲ್ಲಿ ಹೆಚ್ಚಿನ ನಿರ್ಬಂಧ ಹೇರಲು ಜಿಲ್ಲಾಡಳಿಕ್ಕೆ ಸೂಚನೆ :

ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಿಎಂ ಬಿಎಸ್​ವೈ ವಿನಂತಿಸಿದರು.

Last Updated : Jul 3, 2021, 9:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.