ETV Bharat / state

ಸರ್ಕಾರಿ ನೌಕರರ ವಿರುದ್ಧದ ದೂರುಗಳ ಏಕಾಏಕಿ ತನಿಖೆಗೆ ಸಿಎಂ ಬ್ರೇಕ್!

author img

By

Published : Feb 24, 2021, 11:47 AM IST

ರಾಜ್ಯದ ಸರ್ಕಾರಿ ಅಧಿಕಾರಿ/ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗವನ್ನು ತಡೆಗಟ್ಟುವ ದೃಷ್ಟಿಯಿಂದ ಸರ್ಕಾರಿ ನೌಕರರ ವಿರುದ್ದ ಅನಾಮಧೇಯ ದೂರುಗಳನ್ನ ತನಿಖೆಗೆ ಏಕಾಏಕಿ ಒಳಪಡಿಸದಿರಲು ಸಿಎಂ ಬಿಎಸ್​ವೈ ನಿರ್ಧರಿಸಿದ್ದಾರೆ.

employees
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ

ಬೆಂಗಳೂರು:ಸರ್ಕಾರದ ನೌಕರರ ವಿರುದ್ಧದ ಅನಾಮಧೇಯ ದೂರುಗಳು ಹೆಚ್ಚಾದ ಹಿನ್ನೆಲೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಿ ನೌಕರರ ವಿರುದ್ದ ಅನಾಮಧೇಯ ದೂರುಗಳನ್ನ ತನಿಖೆಗೆ ಏಕಾಏಕಿ ಒಳಪಡಿಸದಿರಲು ನಿರ್ಧರಿಸಿದ್ದಾರೆ.

cm bsy directions to stop investigations against government employees
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ
ಪೂರ್ಣ ವಿಳಾಸ ಸಹಿತವಿರುವ ದೂರುಗಳನ್ನು ತನಿಖೆಗೆ/ವಿಚಾರಣೆಗೆ ಪರಿಗಣಿಸುವುದು ಎಂಬುದನ್ನು ಮಾರ್ಪಡಿಸಿ, ದೂರು ನೀಡಿರುವ ವ್ಯಕ್ತಿಯ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಅರ್ಜಿದಾರ/ದೂರುದಾರರು ಆಗತ್ಯ ಪೂರಕ ದಾಖಲೆಗಳನ್ನು ಒದಗಿಸಿದ ನಂತರ ಸದರಿ ದೂರುದಾರರ ಆರೋಪವು ಮೇಲ್ನೋಟಕ್ಕೆ ಸರಿ ಎಂದು ಕಂಡು ಬಂದಲ್ಲಿ, ಅಂತಹ ದೂರು ಅರ್ಜಿಗಳನ್ನು ಪ್ರಾಥಮಿಕ ತನಿಖೆಗೆ/ವಿಚಾರಣೆಗೆ ಪರಿಗಣಿಸುವುದಾಗಿ ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿ/ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗವನ್ನು ತಡೆಗಟ್ಟುವ ದೃಷ್ಟಿಯಿಂದ ಸೂಕ್ತ ಆದೇಶ ಹೊರಡಿಸಲು ಸಿಎಂ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯದ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸದೇ ಇರಲು ಕೇಂದ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ 2019 ರಲ್ಲಿ ಹೊರಡಿಸಿದ್ದ ಸುತ್ತೋಲೆಯನ್ನು ಅನೇಕರು ದುರುಪಯೋಗಪಡಿಸಿಕೊಂಡು ನಕಲಿ ಹೆಸರು ಮತ್ತು ನಕಲಿ ವಿಳಾಸವನ್ನು ಬಳಸಿಕೊಂಡು ರಾಜ್ಯ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಬೇನಾಮಿ ದೂರುಗಳನ್ನು ನೀಡಿ ನೌಕರರನ್ನು ಅನಗತ್ಯವಾಗಿ ತನಿಖೆಗೆ ವಿಚಾರಣೆಗೆ ಒಳಪಡಿಸುವುದರಿಂದ ಅಧಿಕಾರಿ/ನೌಕರರಿಗೆ ತಮ್ಮ ದೈನಂದಿನ ಕೆಲಸಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗಿ ದಕ್ಷ ಹಾಗೂ ಪ್ರಾಮಾಣಿಕ ನೌಕರರಿಗೆ ಧಕ್ಕೆ ಉಂಟಾಗುತ್ತಿದೆಯಲ್ಲದೇ, ಆಡಳಿತಾತ್ಮಕ ಸಮಸ್ಯೆಗಳು ಉದ್ಭವವಾಗಿ ಸರ್ಕಾರಿ ಕೆಲಸ ಕಾರ್ಯಗಳು/ಯೋಜನೆಗಳು ಕುಂಠಿತವಾಗುತ್ತಿವೆ. ಇದನ್ನು ತಪ್ಪಿಸಿ ಮುಕ್ತ ಮತ್ತು ನಿರ್ಭೀತಿಯಿಂದ ಸರ್ಕಾರಿ ಅಧಿಕಾರಿ/ನೌಕರರ ಕರ್ತವ್ಯ ನಿರ್ವಹಿಸಲು ಅನುಕೂಲ ಕಲ್ಪಿಸಲು ಸರ್ಕಾರಿ ನೌಕರ ಸಂಘ ಮನವಿ ಮಾಡಿತ್ತು. ಈ ಮನವಿಗೆ ಇದೀಗ ಸಿಎಂ ಸ್ಪಂದಿಸಿದ್ದಾರೆ.

ಇದನ್ನೂ ಓದಿ:ಮೀಸಲಾತಿ ವಿಚಾರ: ಮುರುಗೇಶ್​ ನಿರಾಣಿ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಬೆಂಗಳೂರು:ಸರ್ಕಾರದ ನೌಕರರ ವಿರುದ್ಧದ ಅನಾಮಧೇಯ ದೂರುಗಳು ಹೆಚ್ಚಾದ ಹಿನ್ನೆಲೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಿ ನೌಕರರ ವಿರುದ್ದ ಅನಾಮಧೇಯ ದೂರುಗಳನ್ನ ತನಿಖೆಗೆ ಏಕಾಏಕಿ ಒಳಪಡಿಸದಿರಲು ನಿರ್ಧರಿಸಿದ್ದಾರೆ.

cm bsy directions to stop investigations against government employees
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ
ಪೂರ್ಣ ವಿಳಾಸ ಸಹಿತವಿರುವ ದೂರುಗಳನ್ನು ತನಿಖೆಗೆ/ವಿಚಾರಣೆಗೆ ಪರಿಗಣಿಸುವುದು ಎಂಬುದನ್ನು ಮಾರ್ಪಡಿಸಿ, ದೂರು ನೀಡಿರುವ ವ್ಯಕ್ತಿಯ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಅರ್ಜಿದಾರ/ದೂರುದಾರರು ಆಗತ್ಯ ಪೂರಕ ದಾಖಲೆಗಳನ್ನು ಒದಗಿಸಿದ ನಂತರ ಸದರಿ ದೂರುದಾರರ ಆರೋಪವು ಮೇಲ್ನೋಟಕ್ಕೆ ಸರಿ ಎಂದು ಕಂಡು ಬಂದಲ್ಲಿ, ಅಂತಹ ದೂರು ಅರ್ಜಿಗಳನ್ನು ಪ್ರಾಥಮಿಕ ತನಿಖೆಗೆ/ವಿಚಾರಣೆಗೆ ಪರಿಗಣಿಸುವುದಾಗಿ ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿ/ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗವನ್ನು ತಡೆಗಟ್ಟುವ ದೃಷ್ಟಿಯಿಂದ ಸೂಕ್ತ ಆದೇಶ ಹೊರಡಿಸಲು ಸಿಎಂ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯದ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸದೇ ಇರಲು ಕೇಂದ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ 2019 ರಲ್ಲಿ ಹೊರಡಿಸಿದ್ದ ಸುತ್ತೋಲೆಯನ್ನು ಅನೇಕರು ದುರುಪಯೋಗಪಡಿಸಿಕೊಂಡು ನಕಲಿ ಹೆಸರು ಮತ್ತು ನಕಲಿ ವಿಳಾಸವನ್ನು ಬಳಸಿಕೊಂಡು ರಾಜ್ಯ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಬೇನಾಮಿ ದೂರುಗಳನ್ನು ನೀಡಿ ನೌಕರರನ್ನು ಅನಗತ್ಯವಾಗಿ ತನಿಖೆಗೆ ವಿಚಾರಣೆಗೆ ಒಳಪಡಿಸುವುದರಿಂದ ಅಧಿಕಾರಿ/ನೌಕರರಿಗೆ ತಮ್ಮ ದೈನಂದಿನ ಕೆಲಸಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗಿ ದಕ್ಷ ಹಾಗೂ ಪ್ರಾಮಾಣಿಕ ನೌಕರರಿಗೆ ಧಕ್ಕೆ ಉಂಟಾಗುತ್ತಿದೆಯಲ್ಲದೇ, ಆಡಳಿತಾತ್ಮಕ ಸಮಸ್ಯೆಗಳು ಉದ್ಭವವಾಗಿ ಸರ್ಕಾರಿ ಕೆಲಸ ಕಾರ್ಯಗಳು/ಯೋಜನೆಗಳು ಕುಂಠಿತವಾಗುತ್ತಿವೆ. ಇದನ್ನು ತಪ್ಪಿಸಿ ಮುಕ್ತ ಮತ್ತು ನಿರ್ಭೀತಿಯಿಂದ ಸರ್ಕಾರಿ ಅಧಿಕಾರಿ/ನೌಕರರ ಕರ್ತವ್ಯ ನಿರ್ವಹಿಸಲು ಅನುಕೂಲ ಕಲ್ಪಿಸಲು ಸರ್ಕಾರಿ ನೌಕರ ಸಂಘ ಮನವಿ ಮಾಡಿತ್ತು. ಈ ಮನವಿಗೆ ಇದೀಗ ಸಿಎಂ ಸ್ಪಂದಿಸಿದ್ದಾರೆ.

ಇದನ್ನೂ ಓದಿ:ಮೀಸಲಾತಿ ವಿಚಾರ: ಮುರುಗೇಶ್​ ನಿರಾಣಿ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.