ETV Bharat / state

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬಿಎಸ್​ವೈ

author img

By

Published : Dec 30, 2020, 1:22 PM IST

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬಿಎಸ್​ವೈ
ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬಿಎಸ್​ವೈ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ ಸಿಎಂ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜ್ಯದ ಪರ ಸ್ವಾಗತಿಸಿ, ಹೂವಿನ ಹಾರ ಹಾಕಿ ಗೌರವಿಸಿದರು. ಸಿಎಂ ಬಿಎಸ್​ವೈ ಅವರಿಂದ ಗೌರವ ಸ್ವೀಕಾರ ಮಾಡಿದ ಉಪ ರಾಷ್ಟ್ರಪತಿ, "ಕೊರೊನಾ ಕಾರಣದಿಂದಾಗಿ ಕಳೆದ 10 ತಿಂಗಳಲ್ಲಿ ಯಾರಿಂದಲೂ ಹಾರ ಸ್ವೀಕರಿಸಿರಲಿಲ್ಲ. ನಿಮ್ಮಿಂದ ಈಗ ಸ್ವೀಕರಿಸುತ್ತಿದ್ದೇನೆ." ಎನ್ನುತ್ತಾ ನಗುಮೊಗದಿಂದ ಪ್ರತಿಕ್ರಿಯೆ ನೀಡಿದರು.

ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬಿಎಸ್​ವೈ

ಬಳಿಕ ಕುಮಾರಕೃಪಾ ಆವರಣದಲ್ಲಿಯೇ ವೆಂಕಯ್ಯ ನಾಯ್ಡು ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಉಭಯ ಕುಶಲೋಪರಿ ವಿಚಾರಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ. ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ ಸಿಎಂ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜ್ಯದ ಪರ ಸ್ವಾಗತಿಸಿ, ಹೂವಿನ ಹಾರ ಹಾಕಿ ಗೌರವಿಸಿದರು. ಸಿಎಂ ಬಿಎಸ್​ವೈ ಅವರಿಂದ ಗೌರವ ಸ್ವೀಕಾರ ಮಾಡಿದ ಉಪ ರಾಷ್ಟ್ರಪತಿ, "ಕೊರೊನಾ ಕಾರಣದಿಂದಾಗಿ ಕಳೆದ 10 ತಿಂಗಳಲ್ಲಿ ಯಾರಿಂದಲೂ ಹಾರ ಸ್ವೀಕರಿಸಿರಲಿಲ್ಲ. ನಿಮ್ಮಿಂದ ಈಗ ಸ್ವೀಕರಿಸುತ್ತಿದ್ದೇನೆ." ಎನ್ನುತ್ತಾ ನಗುಮೊಗದಿಂದ ಪ್ರತಿಕ್ರಿಯೆ ನೀಡಿದರು.

ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬಿಎಸ್​ವೈ

ಬಳಿಕ ಕುಮಾರಕೃಪಾ ಆವರಣದಲ್ಲಿಯೇ ವೆಂಕಯ್ಯ ನಾಯ್ಡು ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಉಭಯ ಕುಶಲೋಪರಿ ವಿಚಾರಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ. ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.