ಬೆಂಗಳೂರು : ಇಂದು (ಶುಕ್ರವಾರ) ಸಂಜೆ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ನಿಗದಿಗೊಳಿಸಲಾಗಿದ್ದ ಸಭೆಯನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಿಂದ ವಾಪಸ್ ಆಗುವುದು ವಿಳಂಬವಾದ ಹಿನ್ನೆಲೆ ಇಂದು ಸಂಜೆ 5.15ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಿಗದಿಗೊಳಿಸಲಾಗಿದ್ದ ಸಭೆ ರದ್ದಾಗಿದೆ.
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಸಭೆ ಆಯೋಜಿಸಲಾಗಿತ್ತು. ಆದರೆ, ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಇಂದು ಸಂಜೆ 4.15ಕ್ಕೆ ವಾಪಸಾಗುವ ವೇಳಾಪಟ್ಟಿ ಬದಲಾಗಿದೆ.
ಅವರು ಸಂಜೆ 6.50ಕ್ಕೆ ಬರಲಿದ್ದಾರೆ. ಹಾಗಾಗಿ, ಇಂದಿನ ಸಭೆ ಮುಂದೂಡಿಕೆಯಾಗಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಸಭೆಯನ್ನ ಮರುನಿಗದಿಗೊಳಿಸಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.
ಇದನ್ನೂ ಓದಿ: ಕಾಂಗ್ರೆಸ್ ಬಗ್ಗೆ ನಾನ್ಯಾಕೆ ಸಾಫ್ಟ್ ಕಾರ್ನರ್ ಆಗಲಿ : ಮಾಜಿ ಸಿಎಂ ಹೆಚ್ಡಿಕೆ