ETV Bharat / state

ಅಪಾಯದಲ್ಲಿ ದೋಸ್ತಿ ಸರ್ಕಾರ... ಕ್ಯಾಬಿನೆಟ್ ಸಭೆ ಕರೆದ ಸಿಎಂ ಹೆಚ್​ಡಿಕೆ - undefined

ಗುರುವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಲಿದ್ದು, ರಾಜಕೀಯ ಬಿಕ್ಕಟ್ಟಿನ ಕುರಿತು ಸಂಪುಟದ ಸಹೋದ್ಯೋಗಿಗಳ ಜೊತೆ ಸಿಎಂ ಚರ್ಚೆ ಮಾಡಲಿದ್ದಾರೆ.

ಇಂದು ಕ್ಯಾಬಿನೆಟ್ ಸಭೆ ಕರೆದ ಸಿಎಂ ಹೆಚ್​ಡಿಕೆ
author img

By

Published : Jul 11, 2019, 1:57 AM IST

ಬೆಂಗಳೂರು: ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪರ್ವದಿಂದಾಗಿ ಸಂಖ್ಯಾಬಲ ಕುಸಿದು ಅಪಾಯಕ್ಕೆ ಸಿಲುಕಿರುವ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರನೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಶಾಸಕರ ರಾಜೀನಾಮೆಯಿಂದಾಗಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಸಂಪುಟದ ಸಹೋದ್ಯೋಗಿಗಳ ಜೊತೆ ಸಿಎಂ ಚರ್ಚೆ ಮಾಡಲಿದ್ದಾರೆ. ಸಂಪುಟ ಸಭೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವರೆಲ್ಲರ ರಾಜೀನಾಮೆ ಇನ್ನೂ ಅಂಗೀಕಾರವಾಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಪಕ್ಷಗಳ ಸಚಿವರು ಭಾಗವಹಿಸಲಿದ್ದಾರೆ.

ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಉಳಿಸಿಕೊಳ್ಳಲು ಇರುವ ಮಾರ್ಗಗಳು, ಶಾಸಕರ ಮನವೊಲಿಕೆ, ಸಂಖ್ಯಾಬಲ ಕೊರತೆಯಾದರೆ ವಿಶ್ವಾಸ ಮತಯಾಚನೆ, ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಎದುರಿಸುವುದು, ವಿಧಾನಸಭೆ ವಿಸರ್ಜನೆ ಸೇರಿದಂತೆ ಹಲವಾರು ಗಂಭೀರ ಸ್ವರೂಪದ ವಿಷಯಗಳ ಬಗ್ಗೆ ಸಿಎಂ ಕುಮಾರಸ್ವಾಮಿ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಅಲ್ಲದೆ ಶುಕ್ರವಾರದಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಬರಗಾಲ, ಮಳೆ ಕೊರತೆ ಹಾಗೂ ಕೆಲವು ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಬೆಂಗಳೂರು: ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪರ್ವದಿಂದಾಗಿ ಸಂಖ್ಯಾಬಲ ಕುಸಿದು ಅಪಾಯಕ್ಕೆ ಸಿಲುಕಿರುವ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರನೆ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದ್ದು, ಶಾಸಕರ ರಾಜೀನಾಮೆಯಿಂದಾಗಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಸಂಪುಟದ ಸಹೋದ್ಯೋಗಿಗಳ ಜೊತೆ ಸಿಎಂ ಚರ್ಚೆ ಮಾಡಲಿದ್ದಾರೆ. ಸಂಪುಟ ಸಭೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವರೆಲ್ಲರ ರಾಜೀನಾಮೆ ಇನ್ನೂ ಅಂಗೀಕಾರವಾಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಪಕ್ಷಗಳ ಸಚಿವರು ಭಾಗವಹಿಸಲಿದ್ದಾರೆ.

ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಉಳಿಸಿಕೊಳ್ಳಲು ಇರುವ ಮಾರ್ಗಗಳು, ಶಾಸಕರ ಮನವೊಲಿಕೆ, ಸಂಖ್ಯಾಬಲ ಕೊರತೆಯಾದರೆ ವಿಶ್ವಾಸ ಮತಯಾಚನೆ, ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಎದುರಿಸುವುದು, ವಿಧಾನಸಭೆ ವಿಸರ್ಜನೆ ಸೇರಿದಂತೆ ಹಲವಾರು ಗಂಭೀರ ಸ್ವರೂಪದ ವಿಷಯಗಳ ಬಗ್ಗೆ ಸಿಎಂ ಕುಮಾರಸ್ವಾಮಿ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಅಲ್ಲದೆ ಶುಕ್ರವಾರದಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ. ಬರಗಾಲ, ಮಳೆ ಕೊರತೆ ಹಾಗೂ ಕೆಲವು ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

Intro:ಅಪಾಯದಲ್ಲಿ ದೋಸ್ತಿ ಸರಕಾರ : ಇಂದು ಕ್ಯಾಬಿನೆಟ್
ಸಭೆ ಕರೆದ ಸಿಎಂ ಹೆಚ್.ಡಿ.ಕೆ

ಬೆಂಗಳೂರು : ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪರ್ವದಿಂದಾಗಿ ಸಂಖ್ಯಾಬಲ ಕುಸಿದು ಅಪಾಯಕ್ಕೆ ಸಿಲುಕಿರುವ ಸಮ್ಮಿಶ್ರ ಸರಕಾರದ ಉಳಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರನೆ ಸಚಿವ ಅಂಪುಟ ಸಭೆ ಕರೆದಿದ್ದಾರೆ.

ಇಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದ್ದು ಶಾಸಕರ ರಾಜೀನಾಮೆಯಿಂದಾಗಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಸಂಪುಟದ ಸಹೋದ್ಯೋಗಿಗಳ ಜತೆ ಸಿಎಂ ಚರ್ಚೆ ಮಾಡಲಿದ್ದಾರೆ

ಸಂಪುಟ ಸಭೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವರೆಲ್ಲರ ರಾಜೀನಾಮೆ ಇನ್ನೂ ಅಂಗೀಕಾರವಾಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಪಕ್ಷಗಳ ಸಚಿವರು ಭಾಗವಹಿಸಲಿದ್ದಾರೆ.

ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸರಕಾರ ಉಳಿಸಿಕೊಳ್ಳಲು ಇರುವ ಮಾರ್ಗಗಳು, ಶಾಸಕರ ಮನವೊಲಿಕೆ, ಸಂಖ್ಯಾಬಲ ಕೊರತೆಯಾದರೆ ವಿಶ್ವಾಸ ಮತ ಯಾಚನೆ , ಅಧವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಎದುರಿಸುವುದು, ವಿಧಾನಸಭೆ ವಿಸರ್ಜನೆ ಸೇರಿದಂತೆ ಹಲವಾರು ಗಂಭೀರ ಸ್ವರೂಪದ ವಿಷಯಗಳ ಬಗ್ಗೆ ಸಿಎಂ ಕುಮಾರಸ್ವಾಮಿ ಸಂಪುಟ ಸಹೋದ್ಯೋಗಿ ಗಳ ಜತೆ ಚರ್ಚೆ ನೆಸುವ ಸಾಧ್ಯತೆಗಳಿವೆ.


Body: ಸಂಪುಟ ಸಭೆಯಲ್ಲಿ ನಾಳೆ ಶುಕ್ರವಾರದಿಂದ ಆರಂಭವಾಗುವ ವಿಧಾನ ಮಂಡಳ ಅಧಿವೇಶನ ವನ್ನು ಮುಂದೂಡುವ ಬಗ್ಗೆಯೂ ಚರ್ಚೆಯು ನಡೆಯಲಿದೆ ಎಂದು ಹೇಳಲಾಗಿದೆ.

ಬರಗಾಲ ಮತ್ತು ಮಳೆ ಕೊರತೆ ಹಾಗು ಕೆಲವು ಅಭಿವೃದ್ದಿ ಯೋಜನೆಗಳೂ ಸಂಪುಟ ಸಭೆಯಲ್ಲಿ ತೀರ್ಮಾನ ತಗೆದುಕೊಳ್ಳುವ ಸಾಧ್ಯತೆ ಇದೆಯೆನ್ನಲಾಗಿದೆ.


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.