ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರ ಸಂಬಂಧ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗದ ಆಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
![CM instructs to conduct study and submit report of panchamasali community reservation](https://etvbharatimages.akamaized.net/etvbharat/prod-images/kn-bng-08-cm-clarification-script-7208080_05022021214250_0502f_1612541570_721.jpg)
ಸಿಎಂ ಸ್ಪಷ್ಟೀಕರಣ: ಇಂದಿನ ಅಧಿವೇಶನದಲ್ಲಿ ನನ್ನ ಹೇಳಿಕೆಯನ್ನು ಜಯಮೃತ್ಯುಂಜಯ ಸ್ವಾಮೀಜಿಗಳು ಅಪಾರ್ಥ ಮಾಡಿಕೊಂಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.
![press note](https://etvbharatimages.akamaized.net/etvbharat/prod-images/kn-bng-08-cm-clarification-script-7208080_05022021214250_0502f_1612541570_252.jpg)
ನಾನು ಇಂದಿನ ಅಧಿವೇಶನದಲ್ಲಿ ಕೇವಲ ಹೇಳಿದ್ದಿಷ್ಟು. ನಮ್ಮದೊಂದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಎಲ್ಲಾ ಸಂಸತ್ ಸದಸ್ಯರ ಜೊತೆ ಚರ್ಚಿಸಿ ಮುಂದೆ ರಾಷ್ಟ್ರೀಯ ನಾಯಕರೊಂದಿಗೆ ಈ ವಿಷಯದ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ. ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು 3ಬಿಗೆ ಸೇರಿಸಿರುವುದನ್ನು ಈ ಸಂದರ್ಭದಲ್ಲಿ ನನೆಪಿಸಿಕೊಳ್ಳಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲಾ ಸಮುದಾಯಗಳ ಒಳಿತಿಗೆ ನಾನು ಬದ್ಧನಾಗಿದ್ದೇನೆ. ಇಂತಹ ಗಂಭೀರ ವಿಷಯಗಳ ಬಗ್ಗೆ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದೆ, ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಬೇಕಾಗುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ತಮ್ಮೆಲ್ಲರ ಸಹಕಾರವನ್ನು ಕೋರುತ್ತೇನೆ ಎಂದು ತಿಳಿಸಿದ್ದಾರೆ.