ETV Bharat / state

ಡಿನೋಟಿಫಿಕೇಷನ್ ಪ್ರಕರಣದ ಬಿ ರಿಪೋರ್ಟ್ ರದ್ದುಗೊಳಿಸಿದ ಕೋರ್ಟ್​: ಸಿಎಂಗೆ ಹಿನ್ನಡೆ

author img

By

Published : Jul 20, 2019, 7:00 PM IST

ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಮೇಲೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಮೇಲೆ ಒತ್ತಡ ಹಾಕಿ ಬಿ ರಿಪೋರ್ಟ್ ಹಾಕಿಸಿದ್ದಾರೆ ಎಂದು ಮಹಾದೇವಸ್ವಾಮಿ ಎಂಬುವರು ಜನಪ್ರತಿನಿಧಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ ಮಾಡಿದ್ದರು.

CM Kumaraswamy

ಬೆಂಗಳೂರು: ವಡೇರಹಳ್ಳಿ ಗ್ರಾಮದ ಉತ್ತರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ 'ಬಿ' ರಿಪೋರ್ಟ್ ರದ್ದುಗೊಳಿಸಿ ಎಂದು ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ. ಡಿ ಹುದ್ದಾರ ಇಂದು ಆದೇಶ ಹೊರಡಿಸಿದ್ದಾರೆ.

ಬನಶಂಕರಿ ಬಳಿ ಇರುವ ಉತ್ತರಹಳ್ಳಿ ಹೋಬಳಿಯ ಹಲಗೆ ವಡೇರಹಳ್ಳಿ ಗ್ರಾಮದ ಸರ್ವೆ ನಂಬರ್ 128, 130 ರಲ್ಲಿ ಸುಮಾರು 2.24 ಎಕರೆ ಭೂಮಿಯನ್ನ ಕೋಟಿ ಕೋಟಿ ಹಣಕ್ಕೆ ಸಿಎಂ ಖಾಸಗಿಯವರಿಗೆ ಡಿನೊಟಿಫಿಕೇಷನ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮಹಾದೇವಸ್ವಾಮಿ ಎಂಬುವವರು 2012ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ಲೋಕಾಯುಕ್ತ ಈ ಬಗ್ಗೆ 2018ರಲ್ಲಿ 'ಬಿ' ರಿಪೋರ್ಟ್ ಸಲ್ಲಿಸಿತ್ತು.

ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಮೇಲೆ ಲೋಕಾಯುಕ್ತ ಪೊಲೀಸರ ಮೇಲೆ ಒತ್ತಡ ಹಾಕಿ ಬಿ ರಿಪೋರ್ಟ್ ಹಾಕಿಸಿದ್ದಾರೆ ಎಂದು ಮಹಾದೇವಸ್ವಾಮಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ ಮಾಡಿದ್ದರು. ಅದರಂತೆ ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇಂದು ಲೋಕಾಯುಕ್ತ 'ಬಿ' ರಿಪೋರ್ಟ್ ರದ್ದು ಮಾಡಿದೆ. ಮರು ತನಿಖೆ ನಡೆಸಿ ಮಾಹಿತಿ ನೀಡಿ ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ ಜು.26 ಕ್ಕೆ ಪ್ರಕರಣದ ವಿಚಾರಣೆ‌ಯನ್ನ ಕೋರ್ಟ್ ಮುಂದೂಡಿಕೆದೆ.

ಬೆಂಗಳೂರು: ವಡೇರಹಳ್ಳಿ ಗ್ರಾಮದ ಉತ್ತರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ 'ಬಿ' ರಿಪೋರ್ಟ್ ರದ್ದುಗೊಳಿಸಿ ಎಂದು ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ. ಡಿ ಹುದ್ದಾರ ಇಂದು ಆದೇಶ ಹೊರಡಿಸಿದ್ದಾರೆ.

ಬನಶಂಕರಿ ಬಳಿ ಇರುವ ಉತ್ತರಹಳ್ಳಿ ಹೋಬಳಿಯ ಹಲಗೆ ವಡೇರಹಳ್ಳಿ ಗ್ರಾಮದ ಸರ್ವೆ ನಂಬರ್ 128, 130 ರಲ್ಲಿ ಸುಮಾರು 2.24 ಎಕರೆ ಭೂಮಿಯನ್ನ ಕೋಟಿ ಕೋಟಿ ಹಣಕ್ಕೆ ಸಿಎಂ ಖಾಸಗಿಯವರಿಗೆ ಡಿನೊಟಿಫಿಕೇಷನ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮಹಾದೇವಸ್ವಾಮಿ ಎಂಬುವವರು 2012ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ಲೋಕಾಯುಕ್ತ ಈ ಬಗ್ಗೆ 2018ರಲ್ಲಿ 'ಬಿ' ರಿಪೋರ್ಟ್ ಸಲ್ಲಿಸಿತ್ತು.

ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಮೇಲೆ ಲೋಕಾಯುಕ್ತ ಪೊಲೀಸರ ಮೇಲೆ ಒತ್ತಡ ಹಾಕಿ ಬಿ ರಿಪೋರ್ಟ್ ಹಾಕಿಸಿದ್ದಾರೆ ಎಂದು ಮಹಾದೇವಸ್ವಾಮಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ ಮಾಡಿದ್ದರು. ಅದರಂತೆ ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇಂದು ಲೋಕಾಯುಕ್ತ 'ಬಿ' ರಿಪೋರ್ಟ್ ರದ್ದು ಮಾಡಿದೆ. ಮರು ತನಿಖೆ ನಡೆಸಿ ಮಾಹಿತಿ ನೀಡಿ ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ ಜು.26 ಕ್ಕೆ ಪ್ರಕರಣದ ವಿಚಾರಣೆ‌ಯನ್ನ ಕೋರ್ಟ್ ಮುಂದೂಡಿಕೆದೆ.

Intro:ಸಿಎಂ ಕುಮಾರಸ್ವಾಮಿಡಿನೋಟಿಫಿಕೇಷನ್ ಬಿ ರೀಪೋರ್ಟ್ ರದ್ದು
ಭೂ ಹಗರಣದ ಸುಳಿಯಲ್ಲಿ ಹೆಚ್ ಡಿಕೆ..

ಸಿಎಂ ಕುಮಾರಸ್ವಾಮಿಗೆ ಮತ್ತೆ ಭೂ ಸಂಕಟ ಎದುರಾಗುತ್ತಾ ಅನ್ನೋ ಪ್ರಶ್ನೇ ಎದ್ದಿದೆ.ವಡೇರಹಳ್ಳಿ ಗ್ರಾಮ ಉತ್ತರ ಹಳ್ಳಿ ಡಿನೊಟೀಫಿಕೇಷನ್ ಸಂಬಂಧ ಲೋಕಾಯುಕ್ತ ಬಿ ರಿಪೋರ್ಟ್ ರದ್ದುಗೊಳಿಸಿ ಜನಪ್ರತಿನಿಧಿಗಳ ವಿರುದ್ದದ ವಿಶೇಷ ನ್ಯಾಯಾಲಯದ
ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ಇಂದು ಆದೇಶ ಹೊರಡಿಸಿದ್ದಾರೆ.

ಬನಶಂಕರಿ ಬಳಿ ಇರುವ ಉತ್ತರ ಹಳ್ಳಿ ಹೋಬಳಿಯ ಹಲಗೆ ವಡೇರಹಳ್ಳಿ ಗ್ರಾಮದ ಸರ್ವೇ ನಂಬರ್ 128, 130 ರಲ್ಲಿ
2.24 ಎಕರೆ ಭೂಮಿಯನ್ನ ಕೋಟಿ ಕೋಟಿ ಹಣಕ್ಕೆ ಖಾಸಗಿಯವರಿಗೆ ಡಿನೊಟೀಫಿಕೇಷನ್ ಮಾಡಿದ್ರು

ಈ ಸಂಬಂಧ ಮಹಾದೇವಸ್ವಾಮಿ 2012 ರಲ್ಲಿ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಿದ್ರು.ವಿಚಾರಣೆ ನಡೆಸಿ ಲೋಕಾಯುಕ್ತ ಈ ಬಗ್ಗೆ 2018 ರಲ್ಲಿ ಬಿ ರಿಪೋರ್ಟ್ ಸಲ್ಲಿಸಿತ್ತು.
ಸಿಎಂ ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಮಾಡಿದ ಮೇಲೆ ಲೋಕಾಯುಕ್ತ ಪೊಲೀಸರ ಮೇಲೆ ಒತ್ತಡ ಹಾಕಿ ಬಿ ರೀಪೋರ್ಟ್ ಹಾಕಿಸಿದ್ದಾರೆ ಎಂದು ಮಹಾದೇವಸ್ವಾಮಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ ಮಾಡಿದ್ರು.

ಅದರಂತೆ ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ
ಇಂದು ಲೋಕಾಯುಕ್ತ ಬಿ ರೀಪೋರ್ಟ್ ರದ್ದು ಮಾಡಿ ಲೋಕಾಯುಕ್ತ ಪೊಲೀಸರು ಮರು ತನಿಖೆ ನಡೆಸಿ ಮಾಹಿತಿ ನೀಡಿ ಎಂದು ಲೋಕಾಯುಕ್ತಕ್ಕೆ ನಿರ್ದೇಶನ ನೀಡಿ ಜುಲೈ 26 ಕ್ಕೆ ಪ್ರಕರಣದ ವಿಚಾರಣೆ‌ಯನ್ನ ಮುಂದೂಡಿಕೆ ಮಾಡಿದೆ

Body:KN_BNG_07_CM_7204498Conclusion:KN_BNG_07_CM_7204498

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.