ETV Bharat / state

ನಿಖಿಲ್​ ದೋಷ ನಿವಾರಣೆಗೆ ಕುಟುಂಬ ಸಮೇತ ಪಳನಿಗೆ ತೆರಳಲಿರುವ ಸಿಎಂ

ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ತೆರಳಲಿದ್ದಾರೆ.

author img

By

Published : Mar 26, 2019, 3:59 PM IST

ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ತಮ್ಮ ಮಗನ ಗೆಲುವಿಗಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಲಿದ್ದಾರೆ.

ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ತೆರಳಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಸಿಎಂ ಭಾಗಿಯಾಗಲಿದ್ದಾರೆ. ಇದಾದ ನಂತರ ಬೆಂಗಳೂರಿಗೆ ಆಗಮಿಸಲಿರುವ ಕುಮಾರಸ್ವಾಮಿ ಅವರು, ಕುಟುಂಬ ಸಮೇತರಾಗಿ ಪಳನಿಯ ಮುರುಗಾ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ನಿಖಿಲ್​ಗೆ ಜ್ಯೋತಿಷಿಗಳ ಪ್ರಕಾರ ಈ ವರ್ಷ ಸರಿಯಿಲ್ಲ ಎಂದು ಹೇಳಲಾಗಿದೆಯಂತೆ. ಈ ಕಾರಣಕ್ಕಾಗಿ ನಿಖಿಲ್​ರ ದೋಷ ನಿವಾರಣೆಗಾಗಿ ಸಿಎಂ ಕುಟುಂಬ ಮುರುಗ ದೇವರಿಗೆ ಪೂಜೆ ಮಾಡಿಸಿ ಪಳನಿಗೆ ತೆರಳಿ ನಂತರ ಇಂದೇ ಹಿಂದಿರುಗಲಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ತಮ್ಮ ಮಗನ ಗೆಲುವಿಗಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಲಿದ್ದಾರೆ.

ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ತೆರಳಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಸಿಎಂ ಭಾಗಿಯಾಗಲಿದ್ದಾರೆ. ಇದಾದ ನಂತರ ಬೆಂಗಳೂರಿಗೆ ಆಗಮಿಸಲಿರುವ ಕುಮಾರಸ್ವಾಮಿ ಅವರು, ಕುಟುಂಬ ಸಮೇತರಾಗಿ ಪಳನಿಯ ಮುರುಗಾ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ನಿಖಿಲ್​ಗೆ ಜ್ಯೋತಿಷಿಗಳ ಪ್ರಕಾರ ಈ ವರ್ಷ ಸರಿಯಿಲ್ಲ ಎಂದು ಹೇಳಲಾಗಿದೆಯಂತೆ. ಈ ಕಾರಣಕ್ಕಾಗಿ ನಿಖಿಲ್​ರ ದೋಷ ನಿವಾರಣೆಗಾಗಿ ಸಿಎಂ ಕುಟುಂಬ ಮುರುಗ ದೇವರಿಗೆ ಪೂಜೆ ಮಾಡಿಸಿ ಪಳನಿಗೆ ತೆರಳಿ ನಂತರ ಇಂದೇ ಹಿಂದಿರುಗಲಿದ್ದಾರೆ ಎನ್ನಲಾಗಿದೆ.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.