ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸಂತೋಷ್ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಯ ಜನರಲ್ ವಾರ್ಡ್ಗೆ ನಿನ್ನೆ ರಾತ್ರಿ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಇಂದು ಸಂಜೆ ವೇಳೆಗೆ ಸಂತೋಷ್ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಸಂತೋಷ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆಯಾಗಿದೆ. ಅವರು ಆತ್ಮಹತ್ಯೆಗೆ ಮುಂದಾಗಿದ್ದ ಹಿನ್ನೆಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆತ್ಮಹತ್ಯೆ ಹಿಂದೆ ಒಂದೊಂದು ವಿಚಾರ ಬಯಲಾಗ್ತಿರುವ ಕಾರಣ ಇಂದು ಸಂತೋಷ್ ಅವರಿಂದ ಸದಾಶಿವನಗರ ಪೊಲೀಸರು ಹೇಳಿಕೆ ಪಡೆಯುವ ಸಾಧ್ಯತೆ ಇದೆ.
ಆತ್ಮಹತ್ಯೆಗೆ ಯತ್ನ ಹಿನ್ನೆಲೆ ಐಪಿಸಿ 309ರ ಅಡಿ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದು ಎಂಬುದರ ಕುರಿತು ಸಂತೋಷ್ ಹೇಳಿಕೆ ನೀಡಬೇಕಿದೆ.