ETV Bharat / state

ಸಚಿವ ಸಂಪುಟ ವಿಸ್ತರಣೆ ಕಸರತ್ತು: ದೆಹಲಿಗೆ ಪ್ರಯಾಣಿಸಿದ ಸಿಎಂ, ಡಿಸಿಎಂ

author img

By

Published : May 25, 2023, 10:17 AM IST

ಸಚಿವ ಸ್ಥಾನದ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್​ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

Cm,Dcm
ದೆಹಲಿಗೆ ಪ್ರಯಾಣ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿದೆ. ಆಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೊದಲ ಹಂತದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆ ಒಟ್ಟು 8 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕಚೇರಿಯನ್ನು ಈಗಾಗಲೇ ನೀಡಲಾಗಿದೆ. ಆದರೆ ಇದುವರೆಗೂ ಖಾತೆ ಹಂಚಿಕೆ ಆಗಿಲ್ಲ.

ಪ್ರಭಾವಿ ಖಾತೆಗಾಗಿ ಎಂಟು ಸಚಿವರು ಲಾಬಿ ನಡೆಸುತ್ತಿರುವ ಮಧ್ಯೆ ಬಾಕಿ ಉಳಿದಿರುವ 24 ಸ್ಥಾನಗಳಿಗೆ 80 ಕ್ಕೂ ಹೆಚ್ಚು ಹಿರಿ, ಕಿರಿಯ ಶಾಸಕರು ಪೈಪೋಟಿ ನಡೆಸುತ್ತಿದ್ದಾರೆ. ತೀವ್ರ ಹಗ್ಗಜಗ್ಗಾಟದ ಬಳಿಕ ಹಿರಿಯ ಶಾಸಕರು ವಿಧಾನಸಭಾಧ್ಯಕ್ಷ ಸ್ಥಾನ ಅಲಂಕರಿಸಲು ಒಪ್ಪದಿದ್ದಾಗ ಯುವ ನಾಯಕ ಯು.ಟಿ.ಖಾದರ್ ಹೆಗಲಿಗೆ ಜವಾಬ್ದಾರಿ ಹೊರಿಸಲಾಗಿದೆ.

ಸಿದ್ದರಾಮಯ್ಯ 2ನೇ ಹಂತದಲ್ಲಿ 20 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಜಾತಿ, ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿ ಇಟ್ಟುಕೊಂಡು ಈ ಸಂಪುಟ ವಿಸ್ತರಣೆ ನಡೆಯಲಿದೆ. ಇದಕ್ಕಿಂತಲೂ ಮುಖ್ಯವಾಗಿ ಇಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಆಪ್ತರೂ ಹಾಗೂ ಬೆಂಬಲಿಗರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪರಿಸ್ಥಿತಿ ನಿಭಾಯಿಸುವ ಹೊಣೆಯನ್ನು ಹೈಕಮಾಂಡ್ ನಾಯಕರ ಹೆಗಲಿಗೆ ವಹಿಸಲು ತೀರ್ಮಾನಿಸಿರುವ ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಿದ್ದಾರೆ.

ಮುಂದಿನ ಎರಡು ದಿನ ಅವರು ದೆಹಲಿಯಲ್ಲೇ ತಂಗಲಿದ್ದು ಸಚಿವ ಸ್ಥಾನದ ಪಟ್ಟಿ ಅಂತಿಮಗೊಳಿಸಿಕೊಂಡೇ ಹಿಂದಿರುಗಲಿದ್ದಾರೆ. 24 ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬ ಕುರಿತು ತಾವೇ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿರುವ ಹೈಕಮಾಂಡ್ ನಾಯಕರು ಪ್ರಮುಖ ಮುಖಂಡರನ್ನು ಇಲ್ಲಿಗೆ ಕರೆಸಿಕೊಂಡಿದ್ದಾರೆ. ನಾಳೆ ವಿವಿಧ ಹಂತಗಳಲ್ಲಿ ಸಮಾಲೋಚನೆ ನಡೆಯಲಿದ್ದು ಅಂತಿಮವಾಗಿ ಕೇಂದ್ರದ ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡುವ ಪಟ್ಟಿಯ ಜೊತೆ ಸಿಎಂ ಹಾಗೂ ಡಿಸಿಎಂ ಆಗಮಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿರುವವರ ಪೈಕಿ ಹಿರಿಯ ಶಾಸಕ ಹಾಗೂ ಹಲವು ಸಾರಿ ಸಚಿವರಾಗಿರುವ ಆರ್.ವಿ.ದೇಶಪಾಂಡೆ, ಎಚ್. ಕೆ. ಪಾಟೀಲ್, ಟಿ. ಬಿ. ಜಯಚಂದ್ರ ಹಾಗೂ ಶಾಮನೂರು ಶಿವಶಂಕರಪ್ಪ ಇದ್ದಾರೆ. ಇವರಿಗೆ ಸಚಿವ ಸ್ಥಾನ ಸಿಗುವುದು ಅನುಮಾನ ಎಂದೂ ಹೇಳಲಾಗುತ್ತಿದೆ. ಇವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲು ಸಹ ಚಿಂತನೆ ನಡೆಸಲಾಗುತ್ತಿದ್ದು ಹೇಗೆ ಮನವೊಲಿಸಬೇಕು ಎಂಬ ಕುರಿತು ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ನಾಯಕರ ಜೊತೆ ಮುಂದಿನ ಎರಡು ದಿನ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ.

ಉಳಿದಂತೆ, ಸಚಿವರಾಗುವವರ ಪಟ್ಟಿಯಲ್ಲಿ ಅತ್ಯಂತ ಪ್ರಮುಖವಾಗಿ ಕೇಳಿ ಬರುತ್ತಿರುವ ಹೆಸರುಗಳು ಇಂತಿವೆ. ಕೃಷ್ಣ ಬೈರೇಗೌಡ ಅಥವಾ ಎಂ. ಕೃಷ್ಣಪ್ಪ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಬಿ. ಕೆ. ಹರಿಪ್ರಸಾದ್, ಶಿವಾನಂದ ಪಾಟೀಲ್, ಶಿವರಾಜ ತಂಗಡಗಿ, ಕೆ. ಎನ್. ರಾಜಣ್ಣ, ಬಸವರಾಜ ರಾಯರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ರಾಘವೇಂದ್ರ ಹಿಟ್ನಾಳ್, ರಹೀಂ ಖಾನ್, ಎಚ್. ಸಿ. ಮಹದೇವಪ್ಪ, ನರೇಂದ್ರಸ್ವಾಮಿ, ಈಶ್ವರ್ ಖಂಡ್ರೆ, ಚೆಲುವರಾಯಸ್ವಾಮಿ, ವಿನಯ್ ಕುಲಕರ್ಣಿ, ಸಂತೋಷ್ ಲಾಡ್.

ವಿಧಾನಸಭೆ ಸ್ಪೀಕರ್ ಆಗಿ ಈಗಾಗಲೇ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ಉಪ ನಾಯಕನ ಸ್ಥಾನಕ್ಕೆ ಆರಕ್ಕೂ ಹೆಚ್ಚು ಶಾಸಕರು ಪೈಪೋಟಿ ನಡೆಸಿದ್ದು ಹೊಸಬರೇ ಇವರಲ್ಲಿ ಹೆಚ್ಚಾಗಿದ್ದಾರೆ ಎಂಬ ಮಾಹಿತಿ ಇದೆ. ಸಿದ್ದರಾಮಯ್ಯ ಆಪ್ತ ಶಾಸಕರಲ್ಲಿ ಒಬ್ಬರು ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ನೇಮಕಗೊಳ್ಳಲಿದ್ದಾರೆ. ಇದಲ್ಲದೆ ವಿಧಾನಸಭೆ ಉಪನಾಯಕನ ಆಯ್ಕೆಯೂ ಆಗಬೇಕಿದೆ. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಸಚಿವ ಸ್ಥಾನ ಆಕಾಂಕ್ಷೆಗಳ ಸಂಖ್ಯೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಇದ್ದು ಅವಕಾಶ ಸಿಗದವರ ಮನವೊಲಿಕೆ ಯಾವ ರೀತಿ ಆಗುತ್ತದೆ ಎಂಬ ಜಿಜ್ಞಾಸೆ ಮೂಡಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಸಿಎಂ, ಡಿಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್​ ಜೊತೆ ಚರ್ಚೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿದೆ. ಆಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೊದಲ ಹಂತದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆ ಒಟ್ಟು 8 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕಚೇರಿಯನ್ನು ಈಗಾಗಲೇ ನೀಡಲಾಗಿದೆ. ಆದರೆ ಇದುವರೆಗೂ ಖಾತೆ ಹಂಚಿಕೆ ಆಗಿಲ್ಲ.

ಪ್ರಭಾವಿ ಖಾತೆಗಾಗಿ ಎಂಟು ಸಚಿವರು ಲಾಬಿ ನಡೆಸುತ್ತಿರುವ ಮಧ್ಯೆ ಬಾಕಿ ಉಳಿದಿರುವ 24 ಸ್ಥಾನಗಳಿಗೆ 80 ಕ್ಕೂ ಹೆಚ್ಚು ಹಿರಿ, ಕಿರಿಯ ಶಾಸಕರು ಪೈಪೋಟಿ ನಡೆಸುತ್ತಿದ್ದಾರೆ. ತೀವ್ರ ಹಗ್ಗಜಗ್ಗಾಟದ ಬಳಿಕ ಹಿರಿಯ ಶಾಸಕರು ವಿಧಾನಸಭಾಧ್ಯಕ್ಷ ಸ್ಥಾನ ಅಲಂಕರಿಸಲು ಒಪ್ಪದಿದ್ದಾಗ ಯುವ ನಾಯಕ ಯು.ಟಿ.ಖಾದರ್ ಹೆಗಲಿಗೆ ಜವಾಬ್ದಾರಿ ಹೊರಿಸಲಾಗಿದೆ.

ಸಿದ್ದರಾಮಯ್ಯ 2ನೇ ಹಂತದಲ್ಲಿ 20 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಜಾತಿ, ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿ ಇಟ್ಟುಕೊಂಡು ಈ ಸಂಪುಟ ವಿಸ್ತರಣೆ ನಡೆಯಲಿದೆ. ಇದಕ್ಕಿಂತಲೂ ಮುಖ್ಯವಾಗಿ ಇಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಆಪ್ತರೂ ಹಾಗೂ ಬೆಂಬಲಿಗರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪರಿಸ್ಥಿತಿ ನಿಭಾಯಿಸುವ ಹೊಣೆಯನ್ನು ಹೈಕಮಾಂಡ್ ನಾಯಕರ ಹೆಗಲಿಗೆ ವಹಿಸಲು ತೀರ್ಮಾನಿಸಿರುವ ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಿದ್ದಾರೆ.

ಮುಂದಿನ ಎರಡು ದಿನ ಅವರು ದೆಹಲಿಯಲ್ಲೇ ತಂಗಲಿದ್ದು ಸಚಿವ ಸ್ಥಾನದ ಪಟ್ಟಿ ಅಂತಿಮಗೊಳಿಸಿಕೊಂಡೇ ಹಿಂದಿರುಗಲಿದ್ದಾರೆ. 24 ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬ ಕುರಿತು ತಾವೇ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿರುವ ಹೈಕಮಾಂಡ್ ನಾಯಕರು ಪ್ರಮುಖ ಮುಖಂಡರನ್ನು ಇಲ್ಲಿಗೆ ಕರೆಸಿಕೊಂಡಿದ್ದಾರೆ. ನಾಳೆ ವಿವಿಧ ಹಂತಗಳಲ್ಲಿ ಸಮಾಲೋಚನೆ ನಡೆಯಲಿದ್ದು ಅಂತಿಮವಾಗಿ ಕೇಂದ್ರದ ಕಾಂಗ್ರೆಸ್ ನಾಯಕರು ಬಿಡುಗಡೆ ಮಾಡುವ ಪಟ್ಟಿಯ ಜೊತೆ ಸಿಎಂ ಹಾಗೂ ಡಿಸಿಎಂ ಆಗಮಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿರುವವರ ಪೈಕಿ ಹಿರಿಯ ಶಾಸಕ ಹಾಗೂ ಹಲವು ಸಾರಿ ಸಚಿವರಾಗಿರುವ ಆರ್.ವಿ.ದೇಶಪಾಂಡೆ, ಎಚ್. ಕೆ. ಪಾಟೀಲ್, ಟಿ. ಬಿ. ಜಯಚಂದ್ರ ಹಾಗೂ ಶಾಮನೂರು ಶಿವಶಂಕರಪ್ಪ ಇದ್ದಾರೆ. ಇವರಿಗೆ ಸಚಿವ ಸ್ಥಾನ ಸಿಗುವುದು ಅನುಮಾನ ಎಂದೂ ಹೇಳಲಾಗುತ್ತಿದೆ. ಇವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲು ಸಹ ಚಿಂತನೆ ನಡೆಸಲಾಗುತ್ತಿದ್ದು ಹೇಗೆ ಮನವೊಲಿಸಬೇಕು ಎಂಬ ಕುರಿತು ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ನಾಯಕರ ಜೊತೆ ಮುಂದಿನ ಎರಡು ದಿನ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ.

ಉಳಿದಂತೆ, ಸಚಿವರಾಗುವವರ ಪಟ್ಟಿಯಲ್ಲಿ ಅತ್ಯಂತ ಪ್ರಮುಖವಾಗಿ ಕೇಳಿ ಬರುತ್ತಿರುವ ಹೆಸರುಗಳು ಇಂತಿವೆ. ಕೃಷ್ಣ ಬೈರೇಗೌಡ ಅಥವಾ ಎಂ. ಕೃಷ್ಣಪ್ಪ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಬಿ. ಕೆ. ಹರಿಪ್ರಸಾದ್, ಶಿವಾನಂದ ಪಾಟೀಲ್, ಶಿವರಾಜ ತಂಗಡಗಿ, ಕೆ. ಎನ್. ರಾಜಣ್ಣ, ಬಸವರಾಜ ರಾಯರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ರಾಘವೇಂದ್ರ ಹಿಟ್ನಾಳ್, ರಹೀಂ ಖಾನ್, ಎಚ್. ಸಿ. ಮಹದೇವಪ್ಪ, ನರೇಂದ್ರಸ್ವಾಮಿ, ಈಶ್ವರ್ ಖಂಡ್ರೆ, ಚೆಲುವರಾಯಸ್ವಾಮಿ, ವಿನಯ್ ಕುಲಕರ್ಣಿ, ಸಂತೋಷ್ ಲಾಡ್.

ವಿಧಾನಸಭೆ ಸ್ಪೀಕರ್ ಆಗಿ ಈಗಾಗಲೇ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ಉಪ ನಾಯಕನ ಸ್ಥಾನಕ್ಕೆ ಆರಕ್ಕೂ ಹೆಚ್ಚು ಶಾಸಕರು ಪೈಪೋಟಿ ನಡೆಸಿದ್ದು ಹೊಸಬರೇ ಇವರಲ್ಲಿ ಹೆಚ್ಚಾಗಿದ್ದಾರೆ ಎಂಬ ಮಾಹಿತಿ ಇದೆ. ಸಿದ್ದರಾಮಯ್ಯ ಆಪ್ತ ಶಾಸಕರಲ್ಲಿ ಒಬ್ಬರು ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾಗಿ ನೇಮಕಗೊಳ್ಳಲಿದ್ದಾರೆ. ಇದಲ್ಲದೆ ವಿಧಾನಸಭೆ ಉಪನಾಯಕನ ಆಯ್ಕೆಯೂ ಆಗಬೇಕಿದೆ. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಸಚಿವ ಸ್ಥಾನ ಆಕಾಂಕ್ಷೆಗಳ ಸಂಖ್ಯೆ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಇದ್ದು ಅವಕಾಶ ಸಿಗದವರ ಮನವೊಲಿಕೆ ಯಾವ ರೀತಿ ಆಗುತ್ತದೆ ಎಂಬ ಜಿಜ್ಞಾಸೆ ಮೂಡಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಸಿಎಂ, ಡಿಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್​ ಜೊತೆ ಚರ್ಚೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.