ETV Bharat / state

ಪಿಎಂ ಆವಾಸ್​ ಯೋಜನೆ: ಕಾಮಗಾರಿಗೆ ಅನುದಾನ ಪ್ರಸ್ತಾವನೆ ಸಲ್ಲಿಕೆಗೆ ಸಿಎಂ ಸೂಚನೆ

author img

By ETV Bharat Karnataka Team

Published : Dec 29, 2023, 10:35 PM IST

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಗಳಿಗೆ ಅನುದಾನ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್​ ತಿಳಿಸಿದ್ದಾರೆ.

Etv Bharatcm-siddaramaiah-instructions-for-submission-of-grant-proposal-over-pm-awas-scheme
ಪಿ.ಎಂ ಆವಾಸ್​ ಯೋಜನೆ: ಅನುದಾನ ಪ್ರಸ್ತಾವನೆ ಸಲ್ಲಿಕೆಗೆ ಸಿಎಂ ಸೂಚನೆ

ಬೆಂಗಳೂರು: "ರಾಜೀವ್ ಗಾಂಧಿ ವಸತಿ ನಿಗಮದಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗಾಗಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ನಿರ್ಮಿಸಲಾಗುತ್ತಿರುವ 52,189 ಮನೆಗಳ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಅಗತ್ಯವಾದ ಅನುದಾನ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ" ಎಂದು ವಸತಿ ಸಚಿವ ಜಮೀರ್ ಅಹ್ಮದ್​ ತಿಳಿಸಿದರು.

"ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ 52,189 ಮನೆಗಳ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ವಂತಿಗೆ 2,013 ಕೋಟಿ ರೂ. ಪಾವತಿ ಆಗಿಲ್ಲ. ಹೀಗಾಗಿ ಕಾಮಗಾರಿ ಪೂರ್ಣ ಗೊಳಿಸಲು 2,168 ಕೋಟಿ ರೂ. ಅಗತ್ಯ ಇರುವ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿ, ಅವರು ಹಂತ ಹಂತವಾಗಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ ಕುರಿತು ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ" ಎಂದರು.

"2013ರಿಂದ ಇದುವರೆಗೆ 52,189 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಫಲಾನುಭವಿಗಳ ವಂತಿಗೆ 2,013 ಕೋಟಿ ರೂ. ಬರಬೇಕಿದ್ದು, 134 ಕೋಟಿ ರೂ. ಮಾತ್ರ ಪಾವತಿ ಆಗಿದೆ. ಫಲಾನುಭವಿಗಳು ಬಡವರಾಗಿದ್ದು, 4 ಲಕ್ಷ ಪಾವತಿ ಕಷ್ಟ ಆಗಿದೆ. ಬ್ಯಾಂಕ್ ಗಳಿಂದಲೂ ಸಾಲ ಸಿಗುತ್ತಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೊಂಡಂತೆ ಫಲಾನುಭವಿಗಳು ಒಂದು ಲಕ್ಷ ರೂ. ಪಾವತಿಸಿ ಉಳಿದ ಹಣ ಸರ್ಕಾರ ಭರಿಸಿದರೆ ಮಾತ್ರ ಯೋಜನೆ ಪೂರ್ಣಗೊಂಡು ಬಡವರಿಗೆ ಮನೆ ನೀಡಲು ಸಾಧ್ಯ ವಾಗುತ್ತದೆ ಎಂದು ಮನವರಿಕೆ ಮಾಡಿಕೊಡಲಾಗಿ ಸಂಪುಟದ ಮುಂದೆ ಪ್ರಸ್ತಾವನೆ ತರುವಂತೆ ಸೂಚಿಸಿದ್ದಾರೆ" ಎಂದು ಹೇಳಿದರು.

"100 ಕೋಟಿ ರೂ. ಹಣ ನೀಡಿದರೆ ಫೆಬ್ರವರಿ ವೇಳೆಗೆ 5 ಸಾವಿರ ಮನೆ ನೀಡಬಹುದು. ಅದೇ ರೀತಿ ಹಂತ ಹಂತವಾಗಿ 1,879 ಕೋಟಿ ರೂ. ಫಲಾನು ಭವಿಗಳ ವಂತಿಗೆ ಮೊತ್ತ ಹಾಗೂ ಮೂಲ ಸೌಕರ್ಯಕ್ಕೆ 289 ಕೋಟಿ ರೂ. ಒಟ್ಟು 2,168 ಕೋಟಿ ರೂ. ನೀಡಿದರೆ ಮುಂದಿನ ಡಿಸೆಂಬರ್ ವೇಳೆಗೆ ಎಲ್ಲ ಮನೆಗಳ ಕಾಮಗಾರಿ ಪೂರ್ಣ ಗೊಳಿಸಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರಿಗೆ ತಿಳಿಸಲಾಗಿದೆ" ಎಂದರು.

ಯೋಜನೆಯಡಿಯಲ್ಲಿ ಪ್ರತಿ ಮನೆಗೆ 7.50 ಲಕ್ಷ ರೂ. ವೆಚ್ಚ ಆಗಲಿದ್ದು, 3.50 ಲಕ್ಷ ರೂ. ಸಬ್ಸಿಡಿ ಸಿಗಲಿದೆ 4 ಲಕ್ಷ ರೂ. ಫಲಾನುಭವಿ ಕಟ್ಟಬೇಕಿತ್ತು. ಇದೀಗ ಫಲಾನುಭವಿ ಒಂದು ಲಕ್ಷ ರೂ. ಕಟ್ಟಿದರೆ 3 ಲಕ್ಷ ರೂ. ಸರ್ಕಾರವೇ ಭರಿಸಲಿದೆ. ಇದೇ ಸಂದರ್ಭದಲ್ಲಿ ಸಂಪುಟದಲ್ಲಿ ಒಪ್ಪಿಗೆ ನೀಡಿರುವ ಕೊಳಗೇರಿ ಅಭಿವೃದ್ಧಿ ಮಂಡಳಿಯ 1.82 ಲಕ್ಷ ಮನೆಗಳನ್ನು ಪೂರ್ಣ ಗೊಳಿಸುವ ಸಂಬಂಧ 500 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಅವರು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ 1000 ಸಾವಿರ ಕೋಟಿ ರೂ. ಪ್ರಸ್ತಾವನೆ ಸಿದ್ದಪಡಿಸಲು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮೊತ್ತ 60 ಕೋಟಿ ರೂ. ಪೈಕಿ ಇಲಾಖೆ ಅನುದಾನದಲ್ಲಿ 40 ಕೋಟಿ ರೂ. ಬಳಕೆಗೆ ಸಭೆ ಸೂಚನೆ ನೀಡಲಾಯಿತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜನವರಿ ಕೊನೆಗೆ ಉದ್ಯೋಗ ಮೇಳ: ಸಿದ್ಧತೆಗೆ ಸಚಿವರ ತಂಡ ರಚನೆ

ಬೆಂಗಳೂರು: "ರಾಜೀವ್ ಗಾಂಧಿ ವಸತಿ ನಿಗಮದಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗಾಗಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ನಿರ್ಮಿಸಲಾಗುತ್ತಿರುವ 52,189 ಮನೆಗಳ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಅಗತ್ಯವಾದ ಅನುದಾನ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ" ಎಂದು ವಸತಿ ಸಚಿವ ಜಮೀರ್ ಅಹ್ಮದ್​ ತಿಳಿಸಿದರು.

"ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ 52,189 ಮನೆಗಳ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ವಂತಿಗೆ 2,013 ಕೋಟಿ ರೂ. ಪಾವತಿ ಆಗಿಲ್ಲ. ಹೀಗಾಗಿ ಕಾಮಗಾರಿ ಪೂರ್ಣ ಗೊಳಿಸಲು 2,168 ಕೋಟಿ ರೂ. ಅಗತ್ಯ ಇರುವ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿ, ಅವರು ಹಂತ ಹಂತವಾಗಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ ಕುರಿತು ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ" ಎಂದರು.

"2013ರಿಂದ ಇದುವರೆಗೆ 52,189 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಫಲಾನುಭವಿಗಳ ವಂತಿಗೆ 2,013 ಕೋಟಿ ರೂ. ಬರಬೇಕಿದ್ದು, 134 ಕೋಟಿ ರೂ. ಮಾತ್ರ ಪಾವತಿ ಆಗಿದೆ. ಫಲಾನುಭವಿಗಳು ಬಡವರಾಗಿದ್ದು, 4 ಲಕ್ಷ ಪಾವತಿ ಕಷ್ಟ ಆಗಿದೆ. ಬ್ಯಾಂಕ್ ಗಳಿಂದಲೂ ಸಾಲ ಸಿಗುತ್ತಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೊಂಡಂತೆ ಫಲಾನುಭವಿಗಳು ಒಂದು ಲಕ್ಷ ರೂ. ಪಾವತಿಸಿ ಉಳಿದ ಹಣ ಸರ್ಕಾರ ಭರಿಸಿದರೆ ಮಾತ್ರ ಯೋಜನೆ ಪೂರ್ಣಗೊಂಡು ಬಡವರಿಗೆ ಮನೆ ನೀಡಲು ಸಾಧ್ಯ ವಾಗುತ್ತದೆ ಎಂದು ಮನವರಿಕೆ ಮಾಡಿಕೊಡಲಾಗಿ ಸಂಪುಟದ ಮುಂದೆ ಪ್ರಸ್ತಾವನೆ ತರುವಂತೆ ಸೂಚಿಸಿದ್ದಾರೆ" ಎಂದು ಹೇಳಿದರು.

"100 ಕೋಟಿ ರೂ. ಹಣ ನೀಡಿದರೆ ಫೆಬ್ರವರಿ ವೇಳೆಗೆ 5 ಸಾವಿರ ಮನೆ ನೀಡಬಹುದು. ಅದೇ ರೀತಿ ಹಂತ ಹಂತವಾಗಿ 1,879 ಕೋಟಿ ರೂ. ಫಲಾನು ಭವಿಗಳ ವಂತಿಗೆ ಮೊತ್ತ ಹಾಗೂ ಮೂಲ ಸೌಕರ್ಯಕ್ಕೆ 289 ಕೋಟಿ ರೂ. ಒಟ್ಟು 2,168 ಕೋಟಿ ರೂ. ನೀಡಿದರೆ ಮುಂದಿನ ಡಿಸೆಂಬರ್ ವೇಳೆಗೆ ಎಲ್ಲ ಮನೆಗಳ ಕಾಮಗಾರಿ ಪೂರ್ಣ ಗೊಳಿಸಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರಿಗೆ ತಿಳಿಸಲಾಗಿದೆ" ಎಂದರು.

ಯೋಜನೆಯಡಿಯಲ್ಲಿ ಪ್ರತಿ ಮನೆಗೆ 7.50 ಲಕ್ಷ ರೂ. ವೆಚ್ಚ ಆಗಲಿದ್ದು, 3.50 ಲಕ್ಷ ರೂ. ಸಬ್ಸಿಡಿ ಸಿಗಲಿದೆ 4 ಲಕ್ಷ ರೂ. ಫಲಾನುಭವಿ ಕಟ್ಟಬೇಕಿತ್ತು. ಇದೀಗ ಫಲಾನುಭವಿ ಒಂದು ಲಕ್ಷ ರೂ. ಕಟ್ಟಿದರೆ 3 ಲಕ್ಷ ರೂ. ಸರ್ಕಾರವೇ ಭರಿಸಲಿದೆ. ಇದೇ ಸಂದರ್ಭದಲ್ಲಿ ಸಂಪುಟದಲ್ಲಿ ಒಪ್ಪಿಗೆ ನೀಡಿರುವ ಕೊಳಗೇರಿ ಅಭಿವೃದ್ಧಿ ಮಂಡಳಿಯ 1.82 ಲಕ್ಷ ಮನೆಗಳನ್ನು ಪೂರ್ಣ ಗೊಳಿಸುವ ಸಂಬಂಧ 500 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಅವರು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ 1000 ಸಾವಿರ ಕೋಟಿ ರೂ. ಪ್ರಸ್ತಾವನೆ ಸಿದ್ದಪಡಿಸಲು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮೊತ್ತ 60 ಕೋಟಿ ರೂ. ಪೈಕಿ ಇಲಾಖೆ ಅನುದಾನದಲ್ಲಿ 40 ಕೋಟಿ ರೂ. ಬಳಕೆಗೆ ಸಭೆ ಸೂಚನೆ ನೀಡಲಾಯಿತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜನವರಿ ಕೊನೆಗೆ ಉದ್ಯೋಗ ಮೇಳ: ಸಿದ್ಧತೆಗೆ ಸಚಿವರ ತಂಡ ರಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.