ETV Bharat / state

ಸಾಹಿತಿ ಕೆ.ಎಸ್.ನಿಸಾರ್ ಅಹ್ಮದ್ ನಿಧನ: ಸಿಎಂ ಯಡಿಯೂರಪ್ಪ, ಸಚಿವರ ಸಂತಾಪ

author img

By

Published : May 3, 2020, 3:51 PM IST

ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹ್ಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ರಾಜ್ಯ ಸಚಿವ ಸಂಪುಟ ಸಂತಾಪ ಸೂಚಿಸಿದೆ.

cm yadiyurappa and ministers condolences message of Nisar ahmed
ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರ ನಿಧನಕ್ಕೆ ಸಂತಾಪ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

cm yadiyurappa and ministers condolences message of Nisar ahmed
ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರ ನಿಧನಕ್ಕೆ ಸಂತಾಪ
ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. 2007 ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲ ಪ್ರಕಾರಗಳನ್ನು ಶ್ರೀಮಂತಗೊಳಿಸಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕೆ.ಎಸ್‌.ನಿಸಾರ್ ಅಹ್ಮದ್ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಸಂತಾಪ ಸೂಚಿಸಿದ್ದಾರೆ. ಮನಸು ಗಾಂಧಿಬಜಾರು ಕವನ ಸಂಕಲನ, ಬೆಣ್ಣೆ ಕದ್ದ ನಮ್ಮ ಕೃಷ್ಣದಂತಹ ಕವನ ನಮಗೆ ಕೊಟ್ಟು, ಜೋಗದ ಸಿರಿ ಬೆಳಕಿನ ಮೂಲಕ ನಿತ್ಯೋತ್ಸವವನ್ನು ವರ್ಣಿಸಿದ ಶ್ರೇಷ್ಠ ಕವಿ ಕೆ.ಎಸ್ ನಿಸಾರ್ ಅಹಮದ್ ಅವರ ನಿಧನದ ಸುದ್ದಿ ನನಗೆ ಅತ್ಯಂತ ದುಃಖ ತಂದಿದೆ. ಭಗವಂತ ಅವರ ಆತ್ಮಕ್ಕೆ ಸದ್ಗತಿ ನೀಡಲಿ,ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು‌ ಸಚಿವ ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.
ಮರೆಯಾದ ನಿತ್ಯೋತ್ಸವ ಕವಿಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಕಂಬನಿ ಮಿಡಿದಿದ್ದಾರೆ‌."ಕುರಿಗಳು ಸಾರ್ ||ಸಾಗಿದ್ದೇ ಗುರಿಗಳುಮಂದೆಯಲ್ಲಿ ಒಂದಾಗಿ ಸ್ವಂತತೆಯೇ ಬಂದಾಗಿಅದರ ಬಾಲ ಇದು ಮತ್ತೆ ಇದರ ಬಾಲ ಅದು ಮೂಸಿದನಿ ಕುಗ್ಗಿಸಿ ತಲೆ ತಗ್ಗಿಸಿ ಅಂಡಲೆಯುವ ನಾವು ನೀವು"ಜೋಗದ ಸಿರಿ ಬೆಳಕಿನಲ್ಲಿ" ಎಂದು ನಿತ್ಯೋತ್ಸವನ್ನು ಸಾಹಿತ್ಯದ ಮೂಲಕ ಹರಸಿ ನಾಡಿನ ಮನ-ಮನೆಗಳಲ್ಲಿ ನೆಲೆಸಿದ್ದ ನಿತ್ಯೋತ್ಸವ ಕವಿ ಡಾ.ನಿಸಾರ್ ಅಹ್ಮದ್ ಅವರ ನಿಧನ ಕನ್ನಡ ಸಾರಸ್ವತ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ನಿಸರ್ಗದ ರಮಣೀಯತೆಯನ್ನು ಸ್ವಚ್ಛ ಕನ್ನಡದಲ್ಲಿ ವರ್ಣಿಸುವ ಮೂಲಕ ಪ್ರಕೃತಿಯ ಸೌಂದರ್ಯವನ್ನು ಉಣಬಡಿಸಿದ್ದ ಸಾಹಿತ್ಯ ಶ್ರೇಷ್ಠರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೂ,ಸ್ನೇಹಿತರಿಗೂ, ಸಾಹಿತ್ಯಾಸಕ್ತರಿಗೂ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶ ಕಳಿಸಿದ್ದಾರೆ.

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

cm yadiyurappa and ministers condolences message of Nisar ahmed
ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರ ನಿಧನಕ್ಕೆ ಸಂತಾಪ
ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. 2007 ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲ ಪ್ರಕಾರಗಳನ್ನು ಶ್ರೀಮಂತಗೊಳಿಸಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕೆ.ಎಸ್‌.ನಿಸಾರ್ ಅಹ್ಮದ್ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಸಂತಾಪ ಸೂಚಿಸಿದ್ದಾರೆ. ಮನಸು ಗಾಂಧಿಬಜಾರು ಕವನ ಸಂಕಲನ, ಬೆಣ್ಣೆ ಕದ್ದ ನಮ್ಮ ಕೃಷ್ಣದಂತಹ ಕವನ ನಮಗೆ ಕೊಟ್ಟು, ಜೋಗದ ಸಿರಿ ಬೆಳಕಿನ ಮೂಲಕ ನಿತ್ಯೋತ್ಸವವನ್ನು ವರ್ಣಿಸಿದ ಶ್ರೇಷ್ಠ ಕವಿ ಕೆ.ಎಸ್ ನಿಸಾರ್ ಅಹಮದ್ ಅವರ ನಿಧನದ ಸುದ್ದಿ ನನಗೆ ಅತ್ಯಂತ ದುಃಖ ತಂದಿದೆ. ಭಗವಂತ ಅವರ ಆತ್ಮಕ್ಕೆ ಸದ್ಗತಿ ನೀಡಲಿ,ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು‌ ಸಚಿವ ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.
ಮರೆಯಾದ ನಿತ್ಯೋತ್ಸವ ಕವಿಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಕಂಬನಿ ಮಿಡಿದಿದ್ದಾರೆ‌."ಕುರಿಗಳು ಸಾರ್ ||ಸಾಗಿದ್ದೇ ಗುರಿಗಳುಮಂದೆಯಲ್ಲಿ ಒಂದಾಗಿ ಸ್ವಂತತೆಯೇ ಬಂದಾಗಿಅದರ ಬಾಲ ಇದು ಮತ್ತೆ ಇದರ ಬಾಲ ಅದು ಮೂಸಿದನಿ ಕುಗ್ಗಿಸಿ ತಲೆ ತಗ್ಗಿಸಿ ಅಂಡಲೆಯುವ ನಾವು ನೀವು"ಜೋಗದ ಸಿರಿ ಬೆಳಕಿನಲ್ಲಿ" ಎಂದು ನಿತ್ಯೋತ್ಸವನ್ನು ಸಾಹಿತ್ಯದ ಮೂಲಕ ಹರಸಿ ನಾಡಿನ ಮನ-ಮನೆಗಳಲ್ಲಿ ನೆಲೆಸಿದ್ದ ನಿತ್ಯೋತ್ಸವ ಕವಿ ಡಾ.ನಿಸಾರ್ ಅಹ್ಮದ್ ಅವರ ನಿಧನ ಕನ್ನಡ ಸಾರಸ್ವತ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ನಿಸರ್ಗದ ರಮಣೀಯತೆಯನ್ನು ಸ್ವಚ್ಛ ಕನ್ನಡದಲ್ಲಿ ವರ್ಣಿಸುವ ಮೂಲಕ ಪ್ರಕೃತಿಯ ಸೌಂದರ್ಯವನ್ನು ಉಣಬಡಿಸಿದ್ದ ಸಾಹಿತ್ಯ ಶ್ರೇಷ್ಠರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೂ,ಸ್ನೇಹಿತರಿಗೂ, ಸಾಹಿತ್ಯಾಸಕ್ತರಿಗೂ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಂದೇಶ ಕಳಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.