ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಸಿಎಂ ಯಡಿಯೂರಪ್ಪ ಇಂದು ತಮ್ಮ ಕಾವೇರಿ ನಿವಾಸದಲ್ಲಿ ವಿನಾಯಕನಿಗೆ ಪೂಜೆ ಸಲ್ಲಿಸಿದರು.
ಕುಟುಂಬಸ್ಥರ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಗೌರಿ-ಗಣೇಶ ಹಬ್ಬವನ್ನು ಆಚರಿಸಿದರು. ಸರ್ವರ ಒಳಿತಿಗಾಗಿ ಹಾಗೂ ಅನ್ನದಾತರ ಬದುಕು ಹಸನಾಗಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ವೇಳೆ ಪುತ್ರ ಬಿ.ವೈ.ವಿಜಯೇಂದ್ರ ಸೇರಿದಂತೆ ಸಿಎಂ ಪುತ್ರಿಯರು, ಮೊಮ್ಮಕ್ಕಳು ಗಣೇಶ ಚತುರ್ಥಿ ಹಬ್ಬದಲ್ಲಿ ಪಾಲ್ಗೊಂಡಿದ್ದರು.