ETV Bharat / state

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಕಿರುಕುಳ ನೀಡದೆ ಚಿಕಿತ್ಸೆ ನೀಡಿ: ಸಿಎಂ ಎಚ್ಚರಿಕೆ

author img

By

Published : Dec 11, 2019, 3:17 PM IST

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬರುವ ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಕಿರುಕುಳ ನೀಡದೆ ಸೂಕ್ತ ಚಿಕಿತ್ಸೆ ನೀಡಿ ಎಂದು ಸಿಎಂ ಯಡಿಯೂರಪ್ಪ ಕರೆ ನೀಡಿದರು.

cm
ಸಿಎಂ ಹೇಳಿಕೆ

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ 100 ಬೆಡ್​ಗಳ ಆಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನೆಗೆ ಸಿಎಂ ಯಡಿಯೂರಪ್ಪ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರೋಗಿಗಳೊಂದಿಗೆ ಸಹನೆ ಸಂಯಮದಿಂದ ನಡೆದುಕೊಳ್ಳುವಂತೆ ಕರೆ ನೀಡಿದರು.

ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಕೆಲಸ ಮಾಡುತ್ತಿವೆ. ಅದರಲ್ಲಿ ವಿಕ್ಟೋರಿಯಾ ಆಸ್ಪತ್ರೆಯೂ ಒಂದು, ದಯವಿಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು ಇಲ್ಲಿಗೆ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಿರುಕುಳ ನೀಡದೆ ಚಿಕಿತ್ಸೆ ನೀಡಿ ಎಂದು ಸರ್ಕಾರಿ ವೈದ್ಯರಲ್ಲಿ ಸಿಎಂ ಯಡಿಯೂರಪ್ಪ ಮನವಿ ಜೊತೆ ಎಚ್ಚರಿಕೆಯನ್ನು ನೀಡಿದರು.

ನಾವು ಈ ಕಟ್ಟಡವನ್ನು ಕಟ್ಟುವುದರಿಂದ ಸಮಸ್ಯೆ ಬಗ್ಗೆ ಹರಿಯುವುದಿಲ್ಲ. ನಾನು ಸರ್ಕಾರದಿಂದ ಹಣವನ್ನು ಮಂಜೂರು ಮಾಡುತ್ತೇನೆ. ಆದರೆ ಆಸ್ಪತ್ರೆಗಳಲ್ಲಿ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೋದರೆ ಏನು ಪ್ರಯೋಜನವಿಲ್ಲ. ಅದರಿಂದ ಸರ್ಕಾರಿ ವೈದ್ಯರು ಯಾವುದೇ ಆರೋಪಗಳಿಗೆ ಅವಕಾಶ ಕೊಡದೆ ಶ್ರದ್ಧೆಯಿಂದ ಒಳರೋಗಿಗಳಿಗೆ ಮಾನವೀಯತೆಯಿಂದ ಚಿಕಿತ್ಸೆ ನೀಡಿ ಎಂದು ಮನವಿ ಮಾಡಿದರು. ನಿಗದಿಯಾಗಿರುವಂತೆ 2012ಕ್ಕೆ ಈ ಕಟ್ಟಡದ ಕಾಮಗಾರಿ ಮುಗಿದು ಜನರ ಸೇವೆಗೆ ರೆಡಿಯಾಗಬೇಕು ಎಂದು ಸಿಎಂ ವೇದಿಕೆಯಲ್ಲೇ ಸಂಬಂಧಪಟ್ಟವರಿಗೆ ಸೂಚಿಸಿದರು.

ಸಿಎಂ ಹೇಳಿಕೆ


ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬೆಂಗಳೂರು ನಗರಕ್ಕೆ ಬಹಳಷ್ಟು ಅವಶ್ಯಕತೆ ಇದ್ದಂತಹ ಹೊರ ರೋಗಿಗಳ ಚಿಕಿತ್ಸೆಗೆ ಬೇಕಾದಂತಹ ಆಸ್ಪತ್ರೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿದೆ. ಆ ಸಮಸ್ಯೆಯನ್ನು ಪೂರೈಸುವುದಕ್ಕೆ ಇದು ಪೂರಕವಾಗಿದೆ. ಇದು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ಎಂದು ಹೇಳಬಹುದು. ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ಹೇಳಲು ಇಚ್ಚಿಸುತ್ತೇನೆ ಎಂದರು.

ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಲೆಹರ್ ಸಿಂಗ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್ ಹಾಗೂ ಸ್ಥಳೀಯ ಕಾರ್ಪೊರೇಟರ್​ಗಳು ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯ ಪದಾಧಿಕಾರಿಗಳು ವೈದ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ 100 ಬೆಡ್​ಗಳ ಆಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನೆಗೆ ಸಿಎಂ ಯಡಿಯೂರಪ್ಪ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರೋಗಿಗಳೊಂದಿಗೆ ಸಹನೆ ಸಂಯಮದಿಂದ ನಡೆದುಕೊಳ್ಳುವಂತೆ ಕರೆ ನೀಡಿದರು.

ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಕೆಲಸ ಮಾಡುತ್ತಿವೆ. ಅದರಲ್ಲಿ ವಿಕ್ಟೋರಿಯಾ ಆಸ್ಪತ್ರೆಯೂ ಒಂದು, ದಯವಿಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು ಇಲ್ಲಿಗೆ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಿರುಕುಳ ನೀಡದೆ ಚಿಕಿತ್ಸೆ ನೀಡಿ ಎಂದು ಸರ್ಕಾರಿ ವೈದ್ಯರಲ್ಲಿ ಸಿಎಂ ಯಡಿಯೂರಪ್ಪ ಮನವಿ ಜೊತೆ ಎಚ್ಚರಿಕೆಯನ್ನು ನೀಡಿದರು.

ನಾವು ಈ ಕಟ್ಟಡವನ್ನು ಕಟ್ಟುವುದರಿಂದ ಸಮಸ್ಯೆ ಬಗ್ಗೆ ಹರಿಯುವುದಿಲ್ಲ. ನಾನು ಸರ್ಕಾರದಿಂದ ಹಣವನ್ನು ಮಂಜೂರು ಮಾಡುತ್ತೇನೆ. ಆದರೆ ಆಸ್ಪತ್ರೆಗಳಲ್ಲಿ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೋದರೆ ಏನು ಪ್ರಯೋಜನವಿಲ್ಲ. ಅದರಿಂದ ಸರ್ಕಾರಿ ವೈದ್ಯರು ಯಾವುದೇ ಆರೋಪಗಳಿಗೆ ಅವಕಾಶ ಕೊಡದೆ ಶ್ರದ್ಧೆಯಿಂದ ಒಳರೋಗಿಗಳಿಗೆ ಮಾನವೀಯತೆಯಿಂದ ಚಿಕಿತ್ಸೆ ನೀಡಿ ಎಂದು ಮನವಿ ಮಾಡಿದರು. ನಿಗದಿಯಾಗಿರುವಂತೆ 2012ಕ್ಕೆ ಈ ಕಟ್ಟಡದ ಕಾಮಗಾರಿ ಮುಗಿದು ಜನರ ಸೇವೆಗೆ ರೆಡಿಯಾಗಬೇಕು ಎಂದು ಸಿಎಂ ವೇದಿಕೆಯಲ್ಲೇ ಸಂಬಂಧಪಟ್ಟವರಿಗೆ ಸೂಚಿಸಿದರು.

ಸಿಎಂ ಹೇಳಿಕೆ


ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬೆಂಗಳೂರು ನಗರಕ್ಕೆ ಬಹಳಷ್ಟು ಅವಶ್ಯಕತೆ ಇದ್ದಂತಹ ಹೊರ ರೋಗಿಗಳ ಚಿಕಿತ್ಸೆಗೆ ಬೇಕಾದಂತಹ ಆಸ್ಪತ್ರೆಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿದೆ. ಆ ಸಮಸ್ಯೆಯನ್ನು ಪೂರೈಸುವುದಕ್ಕೆ ಇದು ಪೂರಕವಾಗಿದೆ. ಇದು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ಎಂದು ಹೇಳಬಹುದು. ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ಹೇಳಲು ಇಚ್ಚಿಸುತ್ತೇನೆ ಎಂದರು.

ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಲೆಹರ್ ಸಿಂಗ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್ ಹಾಗೂ ಸ್ಥಳೀಯ ಕಾರ್ಪೊರೇಟರ್​ಗಳು ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯ ಪದಾಧಿಕಾರಿಗಳು ವೈದ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Intro:ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬರುವ ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಕಿರುಕುಳ ನೀಡದೆ ಸೂಕ್ತ ಚಿಕಿತ್ಸೆ ನೀಡಿ , 100 ರೋಗಿಗಳಲ್ಲಿ 50 ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರುಕುಳ ಆಗುತ್ತಿದೆ. ಸರ್ಕಾರಿ ಆಸ್ಪತ್ರೆಗಳ ವೈದ್ಯರು ಜನರು ಮೆಚ್ಚುವಂತೆ ರೋಗಿಗಳಿಗೆ ಚಿಕಿತ್ಸೆ ನೀಡಿ ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ರಾಜ್ಯದ ಸರ್ಕಾರಿ ವೈದ್ಯರಲ್ಲಿ ಮನವಿ ಮಾಡಿದ್ದಾರೆ. ಹೌದು ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ 100 ಬೆಡ್ ಗಳ ಆಸ್ಪತ್ರೆಯ ನೂತನ ಕಟ್ಟಡದ ಶಂಕುಸ್ಥಾಪನೆಯ ಗುದ್ದಲಿ ಪೂಜೆ ನೆರವೇರಿಸಿ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ. ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಅಂತರಾಷ್ಟ್ರೀಯ ಮಾತು ಮಟ್ಟದ ಖ್ಯಾತಿ ಪಡೆದು ಕೆಲಸ ಮಾಡುತ್ತಿವೆ. ಅದರಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಒಂದು. ದಯವಿಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು ಇಲ್ಲಿಗೆ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಿರುಕುಳ ನೀಡದೆ ಚಿಕಿತ್ಸೆ ನೀಡಿ ಎಂದು ಸರ್ಕಾರಿ ವೈದ್ಯರಲ್ಲಿ ಸಿಎಂ ಯಡಿಯೂರಪ್ಪ ಮನವಿ ಜೊತೆ ಎಚ್ಚರಿಕೆಯನ್ನು ನೀಡಿದರು. ನಾವು ಈ ಕಟ್ಟಡವನ್ನು ಕಟ್ಟುವುದರಿಂದ ಸಮಸ್ಯೆ ಬಗ್ಗೆ ಹೇರುವುದಿಲ್ಲ. ನಾನು ಸರ್ಕಾರದಿಂದ ಹಣವನ್ನು ಮಂಜೂರು ಮಾಡುತ್ತೇನೆ ಆದರೆ ಆಸ್ಪತ್ರೆಗಳಲ್ಲಿ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೋದರೆ ಏನು ಪ್ರಯೋಜನವಿಲ್ಲ. ಅದರಿಂದ ಸರ್ಕಾರಿ ವೈದ್ಯರು ಯಾವುದೇ ಆರೋಪಗಳಿಗೆ ಅವಕಾಶ ಕೊಡದೆ ಶ್ರದ್ಧೆಯಿಂದ ಒಳರೋಗಿಗಳಿಗೆ ಮಾನವೀಯತೆಯಿಂದ ಚಿಕಿತ್ಸೆ ನೀಡಿ ಎಂದು ಸಿಎಂ ಯಡಿಯೂರಪ್ಪ ಸರ್ಕಾರಿ ವೈದ್ಯರಿಗೆ ಎಚ್ಚರಿಕೆ ನೀಡಿದರು.


Body:ಅಲ್ಲದೆ ಈ ಆಸ್ಪತ್ರೆ 2021ಕ್ಕೆ ನಿಗದಿಯಾಗಿರುವ ಸಮಯಕ್ಕೆ ಕಟ್ಟಡ ಕಾಮಗಾರಿ ಸಂಪೂರ್ಣವಾಗಿ ಮುಗಿದು. ಜನರ ಸೇವೆಗೆ ರೆಡಿಯಾಗಬೇಕು ಎಂದು ಸಿಎಮ್ ವೇದಿಕೆಯಲ್ಲೇ ಸಂಬಂಧಪಟ್ಟವರಿಗೆ ಸೂಚಿಸಿದರು.ಇನ್ನು ಈ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾಕ್ಟರ್ ಅಶ್ವಥ್ ನಾರಾಯಣ್ ಬೆಂಗಳೂರು ನಗರಕ್ಕೆ ಬಹಳಷ್ಟು ಅವಶ್ಯಕತೆ ಇದ್ದಂತಹ ಹೊರರೋಗಿಗಳ ಚಿಕಿತ್ಸೆಗೆ ಬೇಕಾದಂತಹ ಆಸ್ಪತ್ರೆಯ ಕಟ್ಟಡ ಶಂಕುಸ್ಥಾಪನೆ ನೆರವೇರಿದೆ. ಆ ಸಮಸ್ಯೆಯನ್ನು ಪೂರೈಸುವುದಕ್ಕೆ ಇದು ಒಂದು ಪೂರಕವಾದಂತಹ ಪರಿಹಾರವಾಗಿದೆ. ಇಂದು ನೆರವೇರುವಂತೆ ಶಂಕುಸ್ಥಾಪನೆ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ಎಂದು ಹೇಳಬಹುದು. ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ಹೇಳಲು ಇಚ್ಚಿಸುತ್ತೇನೆ ಎಂದು ಡಿಸಿಎಮ್ ಹೇಳಿದರು. ಇನ್ನು ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಉಪಮುಖ್ಯಮಂತ್ರಿ ಡಾಕ್ಟರ್ ಸಿ ಅಶ್ವತ್ ನಾರಾಯಣ್ ವಿಧಾನಪರಿಷತ್ ಸದಸ್ಯರಾದ ಲೆಹರ್ ಸಿಂಗ್ , ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್ ಹಾಗೂ ಸ್ಥಳೀಯ ಕಾರ್ಪೊರೇಟರ್ ಗಳು ಜೊತೆಗೆ ವಿಕ್ಟೋರಿಯಾ ಆಸ್ಪತ್ರೆಯ ಪದಾಧಿಕಾರಿಗಳು ವೈದ್ಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸತೀಶ ಎಂಬಿ


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.