ಬೆಂಗಳೂರು: ಕೋವಿಡ್ ವೈರಸ್ ತಡೆಯಲು ಇಡೀ ದೇಶದಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ಮತ್ತಷ್ಟು ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿದ್ದು, ಕೋವಿಡ್-19 ಪರೀಕ್ಷೆ ಮಾಡುವ ಬೂತ್ಗೆ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು.
ಈ ಮೊಬೈಲ್ ಬೂತ್ ನಗರದ ಎಲ್ಲಾ ವಾರ್ಡ್ಗಳಿಗೆ ತೆರಳಿ ಸ್ಕ್ರೀನಿಂಗ್ ಮಾಡುವ ಜೊತೆಗೆ ಸ್ಯಾಂಪಲ್ಸ್ ಸಂಗ್ರಹಿಸಲಿದೆ. ಸಿಎಂ ಯಡಿಯೂರಪ್ಪ ವಾಹನ ಉದ್ಘಾಟನೆ ಬಳಿಕ ಸ್ಕ್ರೀನಿಂಗ್ ಮಾಡಿಸಿಕೊಂಡರು.