ETV Bharat / state

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

author img

By

Published : Jun 25, 2021, 6:35 PM IST

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಪ್ರಕರಣ ಸಂಬಂಧ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಡೆಲ್ಟಾ ವೈರಸ್ ಪ್ರಕರಣ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾದ ಬೆನ್ನಲ್ಲೇ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಉಸ್ತುವಾರಿ ಸಚಿವ ಡಿಸಿಎಂ ಅಶ್ವತ್ಥ ನಾರಾಯಣ​, ಸಚಿವ ಆರ್. ಅಶೋಕ, ಡಾ.ಸುಧಾಕರ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ನಿರ್ವಹಣೆಯಲ್ಲಿ ಸಕಾರಾತ್ಮಕ ಫಲಿತಾಂಶ ಬಂದಿದ್ದು, ಪಾಸಿಟಿವಿಟಿ ದರ ಶೇ 5ಕ್ಕಿಂತ ಕೆಳಗೆ ಕುಸಿದಿದೆ,. ಮರಣ ಪ್ರಮಾಣ ಹೆಚ್ಚಾಗಿದ್ದರೂ ಸದ್ಯ ಕೋವಿಡ್ ನಿಯಂತ್ರಣದಲ್ಲಿದೆ. ಆದರೆ 2ನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದಂತೆ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು, ಈ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ, ಬೆಂಗಳೂರಿನ ವ್ಯಕ್ತಿಯೊಬ್ಬರಲ್ಲೂ ಡೆಲ್ಟಾ ಪ್ಲಸ್ ಇರುವ ಅನುಮಾನ ವ್ಯಕ್ತವಾಗಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಜೆನೆಟಿಕ್ ಸೀಕ್ವೆನ್ಸ್ ಪರೀಕ್ಷೆಯನ್ನು ಎಲ್ಲಾ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಸಬೇಕು, ಡೆಲ್ಟಾ ಪ್ಲಸ್ ಸೋಂಕು ಕಂಡುಬಂದಲ್ಲಿ ಹೆಚ್ಚಿನ ನಿಗಾ ಇರಿಸಬೇಕು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು, ಮಹಾರಾಷ್ಟ್ರ ಹಾಗೂ ಕೇರಳ ಗಡಿಗೆ ಹೊಂದಿಕೊಂಡಂತೆ ಇರುವ ಪ್ರದೇಶಗಳಲ್ಲಿ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇದೇ ವೇಳೆ 2ನೇ ಅಲೆ ನಿಯಂತ್ರಣಕ್ಕೆ ಬಂದಿದೆ ಎಂದು ಮೈಮರೆಯಬಾರದು, ಅನ್​ಲಾಕ್ ಆರಂಭಿಸಿರುವ ಕಾರಣ ಮತ್ತೆ ಎಲ್ಲಾ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಹಾಗಾಗಿ ಎಚ್ಚರ ವಹಿಸಬೇಕು, ಔಷಧ, ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಹೆಚ್ಚಿನ ಪರೀಕ್ಷೆ ನಡೆಸಬೇಕು, ಕೋವಿಡ್ ನಿಯಮಾವಳಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಓದಿ: GOOD NEWS.. ಮುಂದಿನವಾರದಿಂದ ಪ್ರವಾಸಿ ತಾಣಗಳು ಪ್ರಾರಂಭ : ಸಚಿವ ಸಿ ಪಿ ಯೋಗೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾದ ಬೆನ್ನಲ್ಲೇ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಉಸ್ತುವಾರಿ ಸಚಿವ ಡಿಸಿಎಂ ಅಶ್ವತ್ಥ ನಾರಾಯಣ​, ಸಚಿವ ಆರ್. ಅಶೋಕ, ಡಾ.ಸುಧಾಕರ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ನಿರ್ವಹಣೆಯಲ್ಲಿ ಸಕಾರಾತ್ಮಕ ಫಲಿತಾಂಶ ಬಂದಿದ್ದು, ಪಾಸಿಟಿವಿಟಿ ದರ ಶೇ 5ಕ್ಕಿಂತ ಕೆಳಗೆ ಕುಸಿದಿದೆ,. ಮರಣ ಪ್ರಮಾಣ ಹೆಚ್ಚಾಗಿದ್ದರೂ ಸದ್ಯ ಕೋವಿಡ್ ನಿಯಂತ್ರಣದಲ್ಲಿದೆ. ಆದರೆ 2ನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದಂತೆ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು, ಈ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ, ಬೆಂಗಳೂರಿನ ವ್ಯಕ್ತಿಯೊಬ್ಬರಲ್ಲೂ ಡೆಲ್ಟಾ ಪ್ಲಸ್ ಇರುವ ಅನುಮಾನ ವ್ಯಕ್ತವಾಗಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಜೆನೆಟಿಕ್ ಸೀಕ್ವೆನ್ಸ್ ಪರೀಕ್ಷೆಯನ್ನು ಎಲ್ಲಾ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಸಬೇಕು, ಡೆಲ್ಟಾ ಪ್ಲಸ್ ಸೋಂಕು ಕಂಡುಬಂದಲ್ಲಿ ಹೆಚ್ಚಿನ ನಿಗಾ ಇರಿಸಬೇಕು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು, ಮಹಾರಾಷ್ಟ್ರ ಹಾಗೂ ಕೇರಳ ಗಡಿಗೆ ಹೊಂದಿಕೊಂಡಂತೆ ಇರುವ ಪ್ರದೇಶಗಳಲ್ಲಿ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇದೇ ವೇಳೆ 2ನೇ ಅಲೆ ನಿಯಂತ್ರಣಕ್ಕೆ ಬಂದಿದೆ ಎಂದು ಮೈಮರೆಯಬಾರದು, ಅನ್​ಲಾಕ್ ಆರಂಭಿಸಿರುವ ಕಾರಣ ಮತ್ತೆ ಎಲ್ಲಾ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಹಾಗಾಗಿ ಎಚ್ಚರ ವಹಿಸಬೇಕು, ಔಷಧ, ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಹೆಚ್ಚಿನ ಪರೀಕ್ಷೆ ನಡೆಸಬೇಕು, ಕೋವಿಡ್ ನಿಯಮಾವಳಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಓದಿ: GOOD NEWS.. ಮುಂದಿನವಾರದಿಂದ ಪ್ರವಾಸಿ ತಾಣಗಳು ಪ್ರಾರಂಭ : ಸಚಿವ ಸಿ ಪಿ ಯೋಗೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.