ಬೆಂಗಳೂರು : ಕೊರೊನಾ ಸೋಂಕಿಗೆ ಸಿಲುಕಿರುವ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾರೈಸಿದ್ದಾರೆ.

ಕಾನೂನು ಖಾತೆ ಸಚಿವ ಮತ್ತು ಆತ್ಮೀಯ ಜೆ ಸಿ ಮಾಧುಸ್ವಾಮಿ ಶೀಘ್ರ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಳ್ಳಲಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಗಳಲ್ಲಿ ನಿರತರಾಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ ಹಾರೈಸಿದ್ದಾರೆ.
ಮಾಜಿ ಸಚಿವರು, ಹಿರಿಯ ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಆದಷ್ಟು ಬೇಗನೆ ಕೊರೊನಾ ಸೋಂಕಿನಿಂದ ಗುಣಮುಖರಾಗಲಿ, ಮತ್ತೆ ತಮ್ಮ ಕರ್ತವ್ಯಗಳಲ್ಲಿ ಎಂದಿನಂತೆ ತೊಡಗಿಕೊಳ್ಳಲಿ ಎಂದು ಹಾರೈಸಿದ್ದಾರೆ.