ETV Bharat / state

ಶ್ರವಣ ದೋಷ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌; ಅನುದಾನದ ಕೊರತೆಯಿಂದ ಸ್ಥಗಿತವಾಗಿದೆ ಚಿಕಿತ್ಸೆ

author img

By

Published : Sep 18, 2019, 11:32 PM IST

ಜನಿಸುವಾಗಲೇ ಕಿವುಡತನವಿರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆಳಕು ನೀಡುವ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಬಾಲ ವಿಕಾಸ ಕಾರ್ಯಕ್ರಮವು ಅನುದಾನದ ಕೊರತೆಯಿಂದಾಗಿ ಸ್ಥಗಿತಗೊಂಡಿದೆ.

ಶ್ರವಣ ದೋಷ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌

ಬೆಂಗಳೂರು: ಜನಿಸುವಾಗಲೇ ಕಿವುಡತನವಿರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆಳಕು ನೀಡುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಬಾಲ ವಿಕಾಸ ಕಾರ್ಯಕ್ರಮವು ಅನುದಾನದ ಕೊರತೆಯಿಂದಾಗಿ ಸೇವೆಯನ್ನು ಸ್ಥಗಿತಗೊಂಡಿದೆ.

ಕಾಕ್ಲಿಯರ್‌ ಇಂಪ್ಲಾಂಟ್‌ ಅಳವಡಿಸುವ ಶಸ್ತ್ರ ಚಿಕಿತ್ಸೆಗೆ ಕನಿಷ್ಟ 7 ರಿಂದ 15 ಲಕ್ಷ ರೂ ಖರ್ಚಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಬಡವರಿಗಾಗಿ ರಾಷ್ಟ್ರೀಯ ಬಾಲ ವಿಕಾಸ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆಯ ಮೂಲಕ ಪ್ರತಿ ವರ್ಷ ಅಂದಾಜು 50 ಮಕ್ಕಳನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗುತ್ತಿತ್ತು.

ಶ್ರವಣ ದೋಷ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಉಚಿತವಾಗಿ ಕಾಕ್ಲಿಯರ್‌ ಇಂಪ್ಲಾಂಟ್ ಅಳವಡಿಸುವ ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕಳೆದ ಡಿಸೆಂಬರ್‌ನಿಂದ ಯೋಜನೆ ಸ್ಥಗಿತವಾಗಿದೆ. ಈವರೆಗೆ 46 ಮಕ್ಕಳಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಆದರೆ ನೋಂದಣಿಯಾಗಿದ್ದ 200ಕ್ಕೂ ಹೆಚ್ಚು ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ನಡೆಸಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ, 5 ವರ್ಷ ತುಂಬುವ ಮೊದಲೇ ಶಸ್ತ್ರ ಚಿಕಿತ್ಸೆ ನಡೆಸಬೇಕು. ಆ ನಂತರ ಕಾಕ್ಲಿಯರ್‌ ಇಂಪ್ಲಾಂಟ್‌ ಅಳವಡಿಸಿದರೂ ನಿಷ್ಪ್ರಯೋಜಕ. ಈಗಾಗಲೇ ಸಾಕಷ್ಟು ಮಕ್ಕಳು ವೇಟಿಂಗ್‌ ಲಿಸ್ಟ್ ನಲ್ಲಿ ಇದ್ದಾರೆ ಎಂದು ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಆರ್ ಭಾನುಮೂರ್ತಿ ತಿಳಿಸಿದ್ದಾರೆ. ಈ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಕೇಳಿದರೆ, ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡುವಂತೆ ಹೇಳಲಾಗುವುದು. ತಡವಾಗುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ಇಲಾಖೆಯ ಅಧಿಕಾರಿಗಳೊಡನೆ ಮಾತನಾಡಿ, ಚರ್ಚೆ ನಡೆಸಲಾಗುವುದು ಎಂದರು.

ಬೆಂಗಳೂರು: ಜನಿಸುವಾಗಲೇ ಕಿವುಡತನವಿರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆಳಕು ನೀಡುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಬಾಲ ವಿಕಾಸ ಕಾರ್ಯಕ್ರಮವು ಅನುದಾನದ ಕೊರತೆಯಿಂದಾಗಿ ಸೇವೆಯನ್ನು ಸ್ಥಗಿತಗೊಂಡಿದೆ.

ಕಾಕ್ಲಿಯರ್‌ ಇಂಪ್ಲಾಂಟ್‌ ಅಳವಡಿಸುವ ಶಸ್ತ್ರ ಚಿಕಿತ್ಸೆಗೆ ಕನಿಷ್ಟ 7 ರಿಂದ 15 ಲಕ್ಷ ರೂ ಖರ್ಚಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಬಡವರಿಗಾಗಿ ರಾಷ್ಟ್ರೀಯ ಬಾಲ ವಿಕಾಸ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆಯ ಮೂಲಕ ಪ್ರತಿ ವರ್ಷ ಅಂದಾಜು 50 ಮಕ್ಕಳನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗುತ್ತಿತ್ತು.

ಶ್ರವಣ ದೋಷ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಉಚಿತವಾಗಿ ಕಾಕ್ಲಿಯರ್‌ ಇಂಪ್ಲಾಂಟ್ ಅಳವಡಿಸುವ ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕಳೆದ ಡಿಸೆಂಬರ್‌ನಿಂದ ಯೋಜನೆ ಸ್ಥಗಿತವಾಗಿದೆ. ಈವರೆಗೆ 46 ಮಕ್ಕಳಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಆದರೆ ನೋಂದಣಿಯಾಗಿದ್ದ 200ಕ್ಕೂ ಹೆಚ್ಚು ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ನಡೆಸಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ, 5 ವರ್ಷ ತುಂಬುವ ಮೊದಲೇ ಶಸ್ತ್ರ ಚಿಕಿತ್ಸೆ ನಡೆಸಬೇಕು. ಆ ನಂತರ ಕಾಕ್ಲಿಯರ್‌ ಇಂಪ್ಲಾಂಟ್‌ ಅಳವಡಿಸಿದರೂ ನಿಷ್ಪ್ರಯೋಜಕ. ಈಗಾಗಲೇ ಸಾಕಷ್ಟು ಮಕ್ಕಳು ವೇಟಿಂಗ್‌ ಲಿಸ್ಟ್ ನಲ್ಲಿ ಇದ್ದಾರೆ ಎಂದು ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಆರ್ ಭಾನುಮೂರ್ತಿ ತಿಳಿಸಿದ್ದಾರೆ. ಈ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಕೇಳಿದರೆ, ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡುವಂತೆ ಹೇಳಲಾಗುವುದು. ತಡವಾಗುತ್ತಿರುವುದಕ್ಕೆ ಕಾರಣ ಏನು ಎಂಬುದನ್ನು ಇಲಾಖೆಯ ಅಧಿಕಾರಿಗಳೊಡನೆ ಮಾತನಾಡಿ, ಚರ್ಚೆ ನಡೆಸಲಾಗುವುದು ಎಂದರು.
Intro:ಶ್ರವಣ ದೋಷ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌; ಅನುದಾನದ ಕೊರತೆಯಿಂದ ಹಲವು ತಿಂಗಳಿಂದ ಸ್ಥಗಿತವಾಗಿರುವ ಚಿಕಿತ್ಸೆ...

ಬೆಂಗಳೂರು: ಜನಿಸುವಾಗಲೇ ಕಿವುಡತನವಿರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆಳಕು ನೀಡುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಬಾಲ ವಿಕಾಸ ಕಾರ್ಯಕ್ರಮವು ಅನುದಾನದ ಕೊರತೆಯಿಂದ ಸೇವೆ ಸ್ಥಗಿತಗೊಳಿಸಲಾಗಿದೆ.. ಕಾಕ್ಲಿಯರ್‌ ಇಂಪ್ಲಾಂಟ್‌ ಅಳವಡಿಸುವ ಶಸ್ತ್ರ ಚಿಕಿತ್ಸೆಗೆ ಕನಿಷ್ಠ ಅಂದರು 7 ರಿಂದ 15 ಲಕ್ಷ ರೂ ಖರ್ಚಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಬಡವರಿಗಾಗಿ ರಾಷ್ಟ್ರೀಯ ಬಾಲ ವಿಕಾಸ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆಯಲ್ಲಿ ಪ್ರತಿ ವರ್ಷಕ್ಕೆ ಅಂದಾಜು 50 ಮಕ್ಕಳಿಗೆ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗುತ್ತಿತ್ತು.

ರಾಜ್ಯದ ರಾಜಧಾನಿ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಉಚಿತವಾಗಿ ಕಾಕ್ಲಿಯರ್‌ ಇಂಪ್ಲಾಂಟ್ ಅಳವಡಿಸುವ ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಕಳೆದ ಡಿಸೆಂಬರ್‌ನಿಂದ ಯೋಜನೆ ಸ್ಥಗಿತವಾಗಿದೆ.

ಈವರೆಗೆ 46 ಮಕ್ಕಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆದರೆ ನೊಂದಣಿಯಾಗಿದ್ದ 200ಕ್ಕೂ ಹೆಚ್ಚು ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ನಡೆಸಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ 5 ವರ್ಷ ತುಂಬುವ ಮೊದಲೇ ಶಸ್ತ್ರ ಚಿಕಿತ್ಸೆ ನಡೆಸಬೇಕು. ಆ ನಂತರ
ಕಾಕ್ಲಿಯರ್‌ ಇಂಪ್ಲಾಂಟ್‌ ಅಳವಡಿಸಿದರೂ ನಿಷ್ಪ್ರಯೋಜಕ. ಈಗಾಗಲೇ ಸಾಕಷ್ಟು ಮಕ್ಕಳು ವೇಟಿಂಗ್‌ ಲಿಸ್ಟ್ ನಲ್ಲಿ ಇದ್ದಾರೆ ಅಂತ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಆರ್ ಭಾನುಮೂರ್ತಿ ತಿಳಿಸಿದ್ದರು..‌

ಇನ್ನು ಈ ಸಂಬಂಧ ಆರೋಗ್ಯ ಇಲಾಖೆಗೆ ಸಾಕಷ್ಟು ಸಲ ಪತ್ರ ಬರೆದಿದ್ದರು ಯಾವುದೇ ಪ್ರಯೋಜನವಾಗಿಲ್ಲ ಅಂತಾರೆ‌.. ಆದರೆ ಇದರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಇಲಾಖೆ ಅಧಿಕಾರಿಗಳನ್ನ‌ ಕೇಳಿದ್ದರೆ ಸರ್ಕಾರದಿಂದ ಅನುದಾನ ಬರುತ್ತಿಲ್ಲ. ನಾವು ಕೂಡ ಈ ಬಗ್ಗೆ ಪತ್ರ ಬರೆದು ಕೊಟ್ಟಿದ್ದೀವಿ.. ಅನುದಾನ ಸಿಕ್ಕಿದ ತಕ್ಷಣ ಸರ್ಜರಿಗಳನ್ನ ಶುರು ಮಾಡುವುದಾಗಿ ಮಾಹಿತಿ ನೀಡುತ್ತಾರೆ..‌

ಈ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನ ಕೇಳಿದರೆ, ಅದಷ್ಟು ಬೇಗ ಅನುದಾನ ಬಿಡುಗಡೆ ಮಾಡುವಂತೆ ಹೇಳಲಾಗುವುದು.. ತಡವಾಗುತ್ತಿರುವುದಕ್ಕೆ ಕಾರಣ ಏನು ಎಂಬುದನ್ನ ಇಲಾಖೆಯ ಅಧಿಕಾರಿಗಳೊಡನೆ ಮಾತಾನಾಡಿ, ಚರ್ಚೆ ನಡೆಸಲಾಗುವುದು ಅಂತ ತಿಳಿಸಿದರು..

ಒಟ್ಟಿನಲ್ಲಿ ಬಡವರಿಗೆ ಉಚಿತವಾಗಿ ಸಿಗುತ್ತಿದ್ದ
ಕಾಕ್ಲಿಯರ್‌ ಇಂಪ್ಲಾಂಟ್‌, ಅನುದಾನದ ಕೊರತೆಯಿಂದ ಸ್ಥಗಿತವಾಗಿದೆ.. ಆದರೆ ಸರ್ಕಾರ ತರುವಂತ ಇಂಥ ಹಲವಾರು ಯೋಜನೆಗಳು ಮಧ್ಯದಲ್ಲೇ ಹೀಗೆ ನಿಂತರೆ ಪ್ರಯೋಜನವೇನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ
ಕಾಡುತ್ತಿದೆ..‌

KN_BNG_02_cochlear implant_script_7201801

ಬೈಟ್ - ಭಾನುಮೂರ್ತಿ , ಕೆಸಿ ಜನರಲ್ ವೈದ್ಯಕೀಯ ಅಧೀಕ್ಷಕರು..
ಬೈಟ್- ಶ್ರೀ ರಾಮುಲು, ಆರೋಗ್ಯ ಸಚಿವ..
Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.