ETV Bharat / state

ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಆರೋಪ: ಲೇಖಕ ಗುಹಾ ವಿರುದ್ಧ ದೂರು - : ಲೇಖಕ ರಾಮಚಂದ್ರ ಗುಹಾ

ಲೇಖಕ ರಾಮಚಂದ್ರ ಗುಹಾ ಅವರ ‘India After Gandhi’ ಕೃತಿಯಲ್ಲಿ ಅವಹೇಳನಕಾರಿ ಅಂಶ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿ ಪ್ರಣವಾನಂದ ಸ್ವಾಮೀಜಿ ಅವರು ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

Complaint against writer Ramachandra Guha
ಲೇಖಕ ರಾಮಚಂದ್ರ ಗುಹಾ
author img

By

Published : Aug 22, 2021, 11:45 AM IST

Updated : Aug 22, 2021, 3:42 PM IST

ಬೆಂಗಳೂರು: ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು ದಾಖಲಾಗಿದೆ. ಆರ್ಯ ಈಡಿಗ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಮಾಡಿದ ಆರೋಪದಡಿ ದೂರು ನೀಡಲಾಗಿದೆ.

ಅವರ ‘India After Gandhi’ ಕೃತಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಮಾಡಲಾಗಿದೆ ಎಂದು ಪ್ರಣವಾನಂದ ಸ್ವಾಮೀಜಿ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಆರೋಪ

ಕೃತಿಯಲ್ಲಿ ಅವಹೇಳನಕಾರಿ ಅಂಶ ಪ್ರಸ್ತಾಪಿಸಿದ್ದಾರೆ. ಈ ಕೃತಿಯ ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು‌‌ ನೀಡಿದ್ದೇವೆ. ರಾಮಚಂದ್ರ ಗುಹಾ ಅವರನ್ನು ಬಂಧಿಸಬೇಕು. ಜೊತೆಗೆ ಆ ಪುಸ್ತಕ ಮುಟ್ಟುಗೋಲು ಹಾಕುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಪ್ರಣವಾನಂದ ಸ್ವಾಮೀಜಿ ಮಾಧ್ಯಮಗಳಿಗೆ ತಿಳಿಸಿದರು.

Complaint against writer Ramachandra Guha
ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು

ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು ದಾಖಲಾಗಿದೆ. ಆರ್ಯ ಈಡಿಗ ಮತ್ತು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಮಾಡಿದ ಆರೋಪದಡಿ ದೂರು ನೀಡಲಾಗಿದೆ.

ಅವರ ‘India After Gandhi’ ಕೃತಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಮಾಡಲಾಗಿದೆ ಎಂದು ಪ್ರಣವಾನಂದ ಸ್ವಾಮೀಜಿ ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಹೇಳನ ಆರೋಪ

ಕೃತಿಯಲ್ಲಿ ಅವಹೇಳನಕಾರಿ ಅಂಶ ಪ್ರಸ್ತಾಪಿಸಿದ್ದಾರೆ. ಈ ಕೃತಿಯ ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು‌‌ ನೀಡಿದ್ದೇವೆ. ರಾಮಚಂದ್ರ ಗುಹಾ ಅವರನ್ನು ಬಂಧಿಸಬೇಕು. ಜೊತೆಗೆ ಆ ಪುಸ್ತಕ ಮುಟ್ಟುಗೋಲು ಹಾಕುವಂತೆ ಒತ್ತಾಯಿಸುತ್ತಿದ್ದೇವೆ ಎಂದು ಪ್ರಣವಾನಂದ ಸ್ವಾಮೀಜಿ ಮಾಧ್ಯಮಗಳಿಗೆ ತಿಳಿಸಿದರು.

Complaint against writer Ramachandra Guha
ಲೇಖಕ ರಾಮಚಂದ್ರ ಗುಹಾ ವಿರುದ್ಧ ದೂರು

ಸದ್ಯ ಉಪ್ಪಾರಪೇಟೆ ಪೊಲೀಸ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Last Updated : Aug 22, 2021, 3:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.