ETV Bharat / state

ಸಿಎಂ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್, ಬಿಜೆಪಿ ಹಿಂದೇಟು: ಸಾರಥಿ ಇಲ್ಲದೇ ಚುನಾವಣೆ ಗೆಲ್ಲಲು ಕಸರತ್ತು!

author img

By

Published : Feb 1, 2023, 8:15 AM IST

ರಾಜ್ಯ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಭರ್ಜರಿ ಪ್ರಚಾರ ನಡೆಸಿವೆ. ಆದರೆ ಚುನಾವಣೆ ಸಾರಥಿಯನ್ನು ಘೋಷಿಸಲು ಹಿಂದೇಟು ಹಾಕುತ್ತಿವೆ. ಸಾಮೂಹಿಕ ನಾಯಕತ್ವದಲ್ಲೇ ರಾಷ್ಟ್ರೀಯ ಪಕ್ಷಗಳು ಚುನಾವಣೆ ಎದುರಿಸಲಿವೆ.

ಕರ್ನಾಟಕ ಚುನಾವಣೆ
ಕರ್ನಾಟಕ ಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಸುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಾರಥಿ ಯಾರು..? ಎನ್ನುವುದನ್ನು ಇದುವರೆಗೆ ಘೋಷಣೆ ಮಾಡಲು ಸಾಧ್ಯವಾಗಿಲ್ಲ. ಚುನಾವಣೆ ಪೂರ್ವದಲ್ಲಿ ಸಿಎಂ ಅಭ್ಯರ್ಥಿ ಪ್ರಕಟಿಸುವ ದಿಟ್ಟತನವನ್ನು ಪ್ರದರ್ಶಿಸಲು ಎರಡೂ ಪಕ್ಷಗಳು ಹಿಂದೇಟು ಹಾಕತೊಡಗಿವೆ. ಸಾರಥಿ ಇಲ್ಲದೇ ವಿಧಾನಸಭೆ ಚುನಾವಣೆ ಗೆಲ್ಲಲು ಕಸರತ್ತು ನಡೆಸಿವೆ.

ಸಿಎಂ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಹಿಂದೇಟು
ಸಿಎಂ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಹಿಂದೇಟು

ಬಿಜೆಪಿ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಕಾಂಗ್ರೆಸ್ ಪಕ್ಷವು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾರಥ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿರುವ ಈ ರಾಷ್ಟ್ರೀಯ ಪಕ್ಷಗಳಿಗೆ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಸಿಎಂ ಅಭ್ಯರ್ಥಿ ಘೋಷಣೆ ಮಾಡದಂತಹ ರಾಜಕೀಯ ಪರಿಸ್ಥಿತಿಗೆ ತಲುಪಿವೆ. ಸಾಮಾನ್ಯವಾಗಿ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯನ್ನು ಯಾರ ಸಾರಥ್ಯದಲ್ಲಿ ಎದುರಿಸಲಾಗುತ್ತದೆ.

ಚುನಾವಣೆಯಲ್ಲಿ ಗೆದ್ದು ಬಂದರೆ ಯಾರು ಪ್ರಧಾನಿಯಾಗುತ್ತಾರೆ..? ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವವರ ಹೆಸರನ್ನು ರಾಜಕೀಯ ಪಕ್ಷಗಳು ಚುನಾವಣೆಗೆ ಮೊದಲೇ ಘೋಷಣೆ ಮಾಡಿ ಅದರ ರಾಜಕೀಯ ಲಾಭವನ್ನು ಪಡೆಯುತ್ತವೆ. ಆದರೆ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಯಾರೆನ್ನುವ ಹೆಸರು ಹೇಳುವ ದಿಟ್ಟತನವನ್ನು ಬಿಜೆಪಿ ಮತ್ತು ಕಾಂಗ್ರೆಸ್ ತೋರಿಸುತ್ತಿಲ್ಲ.

ಸಿಎಂ ಅಭ್ಯರ್ಥಿ ಘೋಷಣೆಗೆ ಬಿಜೆಪಿ ಹಿಂದೇಟು
ಸಿಎಂ ಅಭ್ಯರ್ಥಿ ಘೋಷಣೆಗೆ ಬಿಜೆಪಿ ಹಿಂದೇಟು

ಇದನ್ನು ಓದಿ:ಬಿಜೆಪಿ ಪಾಲಿಗೆ ಕಬ್ಬಿಣದ ಕಡಲೆಯಾದ ಹಳೆ ಮೈಸೂರು: ಹೊಸ ಯೋಜನೆ ರೂಪಿಸಲು ಮುಂದಾದ ಅಮಿತ್ ಶಾ...

ಬಿಜೆಪಿ ಹೈಕಮಾಂಡ್ ಜಾಣ ನಡೆ: ಯಡಿಯೂರಪ್ಪನವರ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಾಗುತ್ತದೆ ಎಂದು 2008ರಲ್ಲಿ ಹೆಸರು ಪ್ರಕಟಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಸಾರ್ವಜನಿಕವಾಗಿ ಹೇಳುತ್ತಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ ಎಂದಷ್ಟೇ ತಿಳಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹಿಂದೊಮ್ಮೆ ಸಾರ್ವಜನಿಕ ಸಮಾರಂಭದ ವೇದಿಕೆಯಲ್ಲಿ ಹೇಳಿದ್ದ ಬಿಜೆಪಿಯ ಚಾಣಕ್ಯ ಕೇಂದ್ರ ಸಚಿವ ಅಮಿತ್ ಶಾ, ಚುನಾವಣೆ ಹತ್ತಿರವಾಗಿರುವಾಗ ಬಿಜೆಪಿ ನಾಯಕತ್ವದ ಬಗ್ಗೆ ಸ್ಪಷ್ಟವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೆಸರೇಳದೇ ಜಾಣ ಮೌನಕ್ಕೆ ಮೊರೆಹೋಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆಗೆ ಹೋದರೆ ಹೆಚ್ಚಿನ ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಬರಲು ಸಾಧ್ಯವೇ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿಯೇ ಸ್ಪಷ್ಟ ಉತ್ತರವಿಲ್ಲ. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಗಳಾಗಲು ಆಕಾಂಕ್ಷಿತರು ಹಲವರಿದ್ದಾರೆ. ಆದರೆ ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದರೆ ಅತ್ಯಧಿಕ ಕ್ಷೇತ್ರಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವೆನ್ನುವ ಉತ್ತರ ಪಕ್ಷದ ಮುಖಂಡರ ಬಳಿಯಿಲ್ಲ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್.ಸಂತೋಷ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕಂದಾಯ ಸಚಿವ ಆರ್ ಅಶೋಕ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಶಾಸಕ ಬಸನಗೌಡ ಯತ್ನಾಳ್, ಲೋಕಸಭೆ ಸದಸ್ಯ ಶಿವಕುಮಾರ ಉದಾಸಿ, ಮಾಜಿ ಸಚಿವ ಸುರೇಶ ಕುಮಾರ್, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಕಣ್ಣಿಟ್ಟಿದ್ದಾರೆ. ಆದರೆ ಇವರ ಮುಖಂಡತ್ವದಲ್ಲಿ ಚುನಾವಣೆಗೆ ಹೋದರೆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸ ಬಿಜೆಪಿ ಹೈಕಮಾಂಡ್​​ಗೆ ಇಲ್ಲವೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ರಾಜ್ಯದಲ್ಲಿ ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪನವರನ್ನು ಹೊರತುಪಡಿಸಿದರೆ ಜನ ಸಮೂಹದ ನಾಯಕರ ಕೊರತೆ ಇದ್ದಿದ್ದರಿಂದ ಸಾಮೂಹಿಕ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಪ್ರಧಾನಿ ಮೋದಿ ಅವರ ಹೆಸರನ್ನೇ ಪ್ರಧಾನವಾಗಿ ಬಳಸಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನು ಆಕರ್ಷಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಇರಾದೆ ಬಿಜೆಪಿಯದ್ದಾಗಿದೆ.

ಇದನ್ನು ಓದಿ:ಮುಂಬರುವ ಚುನಾವಣೆಗೆ ತಾರಾ ಮೆರುಗು ನೀಡಲು ಕಾಂಗ್ರೆಸ್ ಯತ್ನ.. ಸಿಗಲಿದೆಯಾ ಯಶಸ್ಸು?

ಕಾಂಗ್ರೆಸ್​​ನಲ್ಲಿ ಸಿಎಂ ಅಭ್ಯರ್ಥಿ ಗೊಂದಲ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲ ಬಿಜೆಪಿಗಿಂತ ಭಿನ್ನವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಆಗಲು ಭಾರೀ ಪೈಪೋಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಸಹ ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ವಿಫಲವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸದ್ಯದ ಪರಿಸ್ಥಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇವರಿಬ್ಬರಲ್ಲಿ ಯಾರೊಬ್ಬರ ವಿರೋಧವನ್ನೂ ಕಟ್ಟಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ಸಾಮೂಹಿಕ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಶಾಸಕರ ಅಭಿಪ್ರಾಯ ಆಧರಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದೆ.

ವಿಧಾನಸಭೆ ಚುನಾವಣೆಗೆ ಮುನ್ನವೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರೂ ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್​​ನಲ್ಲಿ ಇಲ್ಲದ ಗೊಂದಲ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್​​ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಇರುವ ಗೊಂದಲಗಳು ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳದಲ್ಲಿ ಇಲ್ಲ. ಜೆಡಿಎಸ್ ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸಲಾಗುತ್ತದೆ ಎಂದು ಪ್ರಕಟಿಸಿದೆ. ಕುಮಾರಸ್ವಾಮಿಯೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಚುನಾವಣೆ ಪ್ರಚಾರದ ವೇಳೆ ಸಾರಲಾಗುತ್ತಿದೆ.

ಇದನ್ನು ಓದಿ: ಕೇಂದ್ರ​ ಬಜೆಟ್ 2023: 1860 ರಿಂದ ಇಲ್ಲಿಯವರೆಗಿನ ಬಜೆಟ್​ ಇತಿಹಾಸ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಸುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಾರಥಿ ಯಾರು..? ಎನ್ನುವುದನ್ನು ಇದುವರೆಗೆ ಘೋಷಣೆ ಮಾಡಲು ಸಾಧ್ಯವಾಗಿಲ್ಲ. ಚುನಾವಣೆ ಪೂರ್ವದಲ್ಲಿ ಸಿಎಂ ಅಭ್ಯರ್ಥಿ ಪ್ರಕಟಿಸುವ ದಿಟ್ಟತನವನ್ನು ಪ್ರದರ್ಶಿಸಲು ಎರಡೂ ಪಕ್ಷಗಳು ಹಿಂದೇಟು ಹಾಕತೊಡಗಿವೆ. ಸಾರಥಿ ಇಲ್ಲದೇ ವಿಧಾನಸಭೆ ಚುನಾವಣೆ ಗೆಲ್ಲಲು ಕಸರತ್ತು ನಡೆಸಿವೆ.

ಸಿಎಂ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಹಿಂದೇಟು
ಸಿಎಂ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಹಿಂದೇಟು

ಬಿಜೆಪಿ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಕಾಂಗ್ರೆಸ್ ಪಕ್ಷವು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾರಥ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿರುವ ಈ ರಾಷ್ಟ್ರೀಯ ಪಕ್ಷಗಳಿಗೆ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಸಿಎಂ ಅಭ್ಯರ್ಥಿ ಘೋಷಣೆ ಮಾಡದಂತಹ ರಾಜಕೀಯ ಪರಿಸ್ಥಿತಿಗೆ ತಲುಪಿವೆ. ಸಾಮಾನ್ಯವಾಗಿ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯನ್ನು ಯಾರ ಸಾರಥ್ಯದಲ್ಲಿ ಎದುರಿಸಲಾಗುತ್ತದೆ.

ಚುನಾವಣೆಯಲ್ಲಿ ಗೆದ್ದು ಬಂದರೆ ಯಾರು ಪ್ರಧಾನಿಯಾಗುತ್ತಾರೆ..? ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವವರ ಹೆಸರನ್ನು ರಾಜಕೀಯ ಪಕ್ಷಗಳು ಚುನಾವಣೆಗೆ ಮೊದಲೇ ಘೋಷಣೆ ಮಾಡಿ ಅದರ ರಾಜಕೀಯ ಲಾಭವನ್ನು ಪಡೆಯುತ್ತವೆ. ಆದರೆ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಯಾರೆನ್ನುವ ಹೆಸರು ಹೇಳುವ ದಿಟ್ಟತನವನ್ನು ಬಿಜೆಪಿ ಮತ್ತು ಕಾಂಗ್ರೆಸ್ ತೋರಿಸುತ್ತಿಲ್ಲ.

ಸಿಎಂ ಅಭ್ಯರ್ಥಿ ಘೋಷಣೆಗೆ ಬಿಜೆಪಿ ಹಿಂದೇಟು
ಸಿಎಂ ಅಭ್ಯರ್ಥಿ ಘೋಷಣೆಗೆ ಬಿಜೆಪಿ ಹಿಂದೇಟು

ಇದನ್ನು ಓದಿ:ಬಿಜೆಪಿ ಪಾಲಿಗೆ ಕಬ್ಬಿಣದ ಕಡಲೆಯಾದ ಹಳೆ ಮೈಸೂರು: ಹೊಸ ಯೋಜನೆ ರೂಪಿಸಲು ಮುಂದಾದ ಅಮಿತ್ ಶಾ...

ಬಿಜೆಪಿ ಹೈಕಮಾಂಡ್ ಜಾಣ ನಡೆ: ಯಡಿಯೂರಪ್ಪನವರ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಾಗುತ್ತದೆ ಎಂದು 2008ರಲ್ಲಿ ಹೆಸರು ಪ್ರಕಟಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಸಾರ್ವಜನಿಕವಾಗಿ ಹೇಳುತ್ತಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ ಎಂದಷ್ಟೇ ತಿಳಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹಿಂದೊಮ್ಮೆ ಸಾರ್ವಜನಿಕ ಸಮಾರಂಭದ ವೇದಿಕೆಯಲ್ಲಿ ಹೇಳಿದ್ದ ಬಿಜೆಪಿಯ ಚಾಣಕ್ಯ ಕೇಂದ್ರ ಸಚಿವ ಅಮಿತ್ ಶಾ, ಚುನಾವಣೆ ಹತ್ತಿರವಾಗಿರುವಾಗ ಬಿಜೆಪಿ ನಾಯಕತ್ವದ ಬಗ್ಗೆ ಸ್ಪಷ್ಟವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೆಸರೇಳದೇ ಜಾಣ ಮೌನಕ್ಕೆ ಮೊರೆಹೋಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆಗೆ ಹೋದರೆ ಹೆಚ್ಚಿನ ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಬರಲು ಸಾಧ್ಯವೇ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿಯೇ ಸ್ಪಷ್ಟ ಉತ್ತರವಿಲ್ಲ. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಗಳಾಗಲು ಆಕಾಂಕ್ಷಿತರು ಹಲವರಿದ್ದಾರೆ. ಆದರೆ ಯಾರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದರೆ ಅತ್ಯಧಿಕ ಕ್ಷೇತ್ರಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವೆನ್ನುವ ಉತ್ತರ ಪಕ್ಷದ ಮುಖಂಡರ ಬಳಿಯಿಲ್ಲ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್.ಸಂತೋಷ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕಂದಾಯ ಸಚಿವ ಆರ್ ಅಶೋಕ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಶಾಸಕ ಬಸನಗೌಡ ಯತ್ನಾಳ್, ಲೋಕಸಭೆ ಸದಸ್ಯ ಶಿವಕುಮಾರ ಉದಾಸಿ, ಮಾಜಿ ಸಚಿವ ಸುರೇಶ ಕುಮಾರ್, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಕಣ್ಣಿಟ್ಟಿದ್ದಾರೆ. ಆದರೆ ಇವರ ಮುಖಂಡತ್ವದಲ್ಲಿ ಚುನಾವಣೆಗೆ ಹೋದರೆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸ ಬಿಜೆಪಿ ಹೈಕಮಾಂಡ್​​ಗೆ ಇಲ್ಲವೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ರಾಜ್ಯದಲ್ಲಿ ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪನವರನ್ನು ಹೊರತುಪಡಿಸಿದರೆ ಜನ ಸಮೂಹದ ನಾಯಕರ ಕೊರತೆ ಇದ್ದಿದ್ದರಿಂದ ಸಾಮೂಹಿಕ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಪ್ರಧಾನಿ ಮೋದಿ ಅವರ ಹೆಸರನ್ನೇ ಪ್ರಧಾನವಾಗಿ ಬಳಸಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಮತಗಳನ್ನು ಆಕರ್ಷಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಇರಾದೆ ಬಿಜೆಪಿಯದ್ದಾಗಿದೆ.

ಇದನ್ನು ಓದಿ:ಮುಂಬರುವ ಚುನಾವಣೆಗೆ ತಾರಾ ಮೆರುಗು ನೀಡಲು ಕಾಂಗ್ರೆಸ್ ಯತ್ನ.. ಸಿಗಲಿದೆಯಾ ಯಶಸ್ಸು?

ಕಾಂಗ್ರೆಸ್​​ನಲ್ಲಿ ಸಿಎಂ ಅಭ್ಯರ್ಥಿ ಗೊಂದಲ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲ ಬಿಜೆಪಿಗಿಂತ ಭಿನ್ನವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಆಗಲು ಭಾರೀ ಪೈಪೋಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಸಹ ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ವಿಫಲವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸದ್ಯದ ಪರಿಸ್ಥಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇವರಿಬ್ಬರಲ್ಲಿ ಯಾರೊಬ್ಬರ ವಿರೋಧವನ್ನೂ ಕಟ್ಟಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ಸಾಮೂಹಿಕ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಶಾಸಕರ ಅಭಿಪ್ರಾಯ ಆಧರಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದೆ.

ವಿಧಾನಸಭೆ ಚುನಾವಣೆಗೆ ಮುನ್ನವೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರೂ ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್​​ನಲ್ಲಿ ಇಲ್ಲದ ಗೊಂದಲ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್​​ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಇರುವ ಗೊಂದಲಗಳು ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳದಲ್ಲಿ ಇಲ್ಲ. ಜೆಡಿಎಸ್ ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಯಕತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸಲಾಗುತ್ತದೆ ಎಂದು ಪ್ರಕಟಿಸಿದೆ. ಕುಮಾರಸ್ವಾಮಿಯೇ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಚುನಾವಣೆ ಪ್ರಚಾರದ ವೇಳೆ ಸಾರಲಾಗುತ್ತಿದೆ.

ಇದನ್ನು ಓದಿ: ಕೇಂದ್ರ​ ಬಜೆಟ್ 2023: 1860 ರಿಂದ ಇಲ್ಲಿಯವರೆಗಿನ ಬಜೆಟ್​ ಇತಿಹಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.