ETV Bharat / state

ನಾಳೆ ಕಾಂಗ್ರೆಸ್​ ಕರೆ ನೀಡಿದ್ದ ಕರ್ನಾಟಕ ಬಂದ್​ ರದ್ದು

author img

By

Published : Mar 8, 2023, 12:29 PM IST

Updated : Mar 8, 2023, 12:59 PM IST

ಭ್ರಷ್ಟಾಚಾರ ವಿರೋಧಿಸಿ ನಾಳೆ ಕಾಂಗ್ರೆಸ್​ನಿಂದ ಕರೆ ನೀಡಲಾಗಿದ್ದ ಕರ್ನಾಟಕ ಬಂದ್​ ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Etv Bharat
ನಾಳೆ ಕಾಂಗ್ರೆಸ್​ ಕರೆ ನೀಡಿದ್ದ ಕರ್ನಾಟಕ ಬಂದ್​ ರದ್ದು
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿಕೆ

ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ನಾಳಿನ ಕರ್ನಾಟಕ ಬಂದ್ ರದ್ದುಗೊಂಡಿದೆ. ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ಮಾರ್ಚ್​ 9ರ ಬೆಳಗ್ಗೆ 9ರಿಂದ 11 ಗಂಟೆಯವರೆಗೆ ಬಂದ್ ನಡೆಸುವ ಬಗ್ಗೆ ಕಾಂಗ್ರೆಸ್​ನಿಂದ ಕರೆ ನೀಡಲಾಗಿತ್ತು.

"ನಾಳೆ ನಡೆಯಲಿರುವ ಬಂದ್ ರದ್ದು ಮಾಡಲು ನಿರ್ಧರಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಮನವಿ ಮೇರೆಗೆ ಕಾಂಗ್ರೆಸ್ ಘೋಷಿಸಿದ್ದ ಬಂದ್​ ರದ್ದುಗೊಂಡಿದೆ. ಶಿಕ್ಷಣ ಸಂಸ್ಥೆಗಳು ತೊಂದರೆ ಆಗುತ್ತೆ ಎಂದು ಮನವಿ ಮಾಡಿದ್ದು ಅವರಿಗೆ ಬೆಲೆ ಕೊಟ್ಟು ನಿರ್ಧಾರ ಕೈಗೊಂಡಿದ್ದೇವೆ" ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, "ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಾಹನಗಳಿಗೆ ಅಡ್ಡಿಪಡಿಸದೇ ಅಂಗಡಿ ಮುಂಗಟ್ಟು ಮಾತ್ರ ಮುಚ್ಚಿ ಬಂದ್ ನಡೆಸಲು ಈ ಮುನ್ನ ತೀರ್ಮಾನಿಸಲಾಗಿತ್ತು. ಆದರೆ, ಪರೀಕ್ಷೆ ಬರೆಯುವವರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ರಾಜ್ಯ ಬಂದ್ ಕರೆಯನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ" ಎಂದು ತಿಳಿಸಿದ್ದಾರೆ.

ಬಂದ್ ಬೇಡ ಎಂದು ಶಾಲಾ ಸಂಸ್ಥೆಗಳ ಒತ್ತಡ: "ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಮೂಲಕ ಕರೆ ಮಾಡಿದ್ದರು. ಸ್ಕ್ರೀನಿಂಗ್ ಕಮಿಟಿ ಆಗುವ ವೇಳೆ ಎಲ್ಲಾ ನಾಯಕರು ಸೇರಿ ಈ ನಿರ್ಧಾರ ಹೇಳಿದ್ದಾರೆ. ಹೀಗಾಗಿ ನಾಳೆ ಬಂದ್ ಇರುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಶಾಲಾ ಸಂಸ್ಥೆಗಳು ಬಂದ್ ಬೇಡ ಎಂದು ಒತ್ತಡ ಹೇರಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ನಾಯಕರು ಬಂದ್ ಮುಂದೂಡಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಸಭೆ ಇದೆ, ಮುಗಿದ ಬಳಿಕ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಡಿಕೆಶಿ ಸೂಚನೆ ಮೇರೆಗೆ ಬಂದ್ ಹಿಂಪಡೆದಿದ್ದೇವೆ" ಎಂದರು.

"ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ. ನ್ಯಾಯಾಂಗದ ಪ್ರಕ್ರಿಯೆ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಸರ್ಕಾರದ ಬೆಂಬಲ ಇಲ್ಲದೆ ಒಂದೇ ದಿನದಲ್ಲಿ ಜಾಮೀನು ಸಿಗುವುದಿಲ್ಲ. ಪ್ರತಿಪಕ್ಷದವರಿಗೆ ಈ ರೀತಿ ಬೇಲ್ ಸಿಗಲ್ಲ. ಮಾಡಾಳ್​ಗೆ ಜಾಮೀನು ಸಿಗುವ ವಿಚಾರವಾಗಿ ಸರ್ಕಾರ ಶಾಮೀಲಾಗಿದೆ" ಎಂದು ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದರು.

ಸರ್ಕಾರದ ವಿರುದ್ಧ ರಾಮಲಿಂಗಾರೆಡ್ಡಿ ಆರೋಪ: "ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ 8 ಕೋಟಿ ಸಿಕ್ಕಿದೆ, ಇದು ಎಲ್ಲರಿಗೂ ಗೊತ್ತಿದೆ. ಆದರೂ ಶಾಸಕರಿಗೆ ನಿನ್ನೆ ಬೇಲ್ ಕೂಡ ಸಿಕ್ಕಿದೆ. ಒಂದೇ ದಿನಕ್ಕೆ ಬೇಲ್ ಹೇಗೆ ಸಿಗುತ್ತೆ? ಸರ್ಕಾರದ ಮತ್ತು ಸರ್ಕಾರಿ ವಕೀಲರ ಬೆಂಬಲ ಸಿಕ್ಕಿದೆ ? ಶಾಸಕರಿಗೆ ಜಾಮೀನು ಕೊಡಿಸುವಲ್ಲಿ ಸರ್ಕಾರದ ಪಾತ್ರವಿದೆ. ಬಿಜೆಪಿ ಸರ್ಕಾರದ ನಾಲ್ಕು ವರ್ಷದ ಅನೇಕಭ್ರ ಷ್ಟಾಚಾರದ ಮುಖವಾಡವು ಹೊರಗೆ ಬಂದಿದೆ. ವಿವಿಧ ಭಾಗಗಳಲ್ಲಿ ಸರ್ಕಾರ ಅಕ್ರಮ ನಡೆದಿದೆ. ನಾನು ಮನೆಯಲ್ಲಿಯೇ ಇದ್ದೆ ಎಂದು ಮಾಡಾಳ್ ಅವರೇ ಹೇಳಿದ್ದಾರೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಎಷ್ಟು ನಿಷ್ಕ್ರಿಯವಾಗಿದೆ ಮತ್ತು ಪೊಲೀಸ್ ಇಲಾಖೆಯನ್ನು ನಿಷ್ಕ್ರಿಯ ಮಾಡಲಾಗಿದೆ ಎಂಬುದು ಇದರಿಂದ ತಿಳಿಯುತ್ತದೆ. ಇವರ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ವಿಧಾನ ಪರಿಷತ್​ ಸದಸ್ಯ ವಿಶ್ವನಾಥ್, ಗೂಳಿಹಟ್ಟಿ ಶೇಖರ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಅನೇಕ ಮಠಗಳ ಸ್ವಾಮೀಜಿಗಳೂ ಹೇಳಿದ್ದಾರೆ ಎಂದು ಅವರ ಹೇಳಿಕೆಗಳ ವಿಚಾರ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು" ಎಂದು ರಾಮಲಿಂಗಾರೆಡ್ಡಿ ಒತ್ತಾಯಿಸಿದರು.

ಡಿಕೆಶಿ ಹೇಳಿಕೆ : ದ್ವಿತೀಯ ಪಿಯುಸಿ ಪರೀಕ್ಷೆ ಸೇರಿ ರಾಜ್ಯಾದ್ಯಂತ ಶಾಲಾ, ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ. 9ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು. ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್​ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗುವ ಸಾಧ್ಯತೆ

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿಕೆ

ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ನಾಳಿನ ಕರ್ನಾಟಕ ಬಂದ್ ರದ್ದುಗೊಂಡಿದೆ. ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ಮಾರ್ಚ್​ 9ರ ಬೆಳಗ್ಗೆ 9ರಿಂದ 11 ಗಂಟೆಯವರೆಗೆ ಬಂದ್ ನಡೆಸುವ ಬಗ್ಗೆ ಕಾಂಗ್ರೆಸ್​ನಿಂದ ಕರೆ ನೀಡಲಾಗಿತ್ತು.

"ನಾಳೆ ನಡೆಯಲಿರುವ ಬಂದ್ ರದ್ದು ಮಾಡಲು ನಿರ್ಧರಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಮನವಿ ಮೇರೆಗೆ ಕಾಂಗ್ರೆಸ್ ಘೋಷಿಸಿದ್ದ ಬಂದ್​ ರದ್ದುಗೊಂಡಿದೆ. ಶಿಕ್ಷಣ ಸಂಸ್ಥೆಗಳು ತೊಂದರೆ ಆಗುತ್ತೆ ಎಂದು ಮನವಿ ಮಾಡಿದ್ದು ಅವರಿಗೆ ಬೆಲೆ ಕೊಟ್ಟು ನಿರ್ಧಾರ ಕೈಗೊಂಡಿದ್ದೇವೆ" ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, "ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಾಹನಗಳಿಗೆ ಅಡ್ಡಿಪಡಿಸದೇ ಅಂಗಡಿ ಮುಂಗಟ್ಟು ಮಾತ್ರ ಮುಚ್ಚಿ ಬಂದ್ ನಡೆಸಲು ಈ ಮುನ್ನ ತೀರ್ಮಾನಿಸಲಾಗಿತ್ತು. ಆದರೆ, ಪರೀಕ್ಷೆ ಬರೆಯುವವರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ರಾಜ್ಯ ಬಂದ್ ಕರೆಯನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ" ಎಂದು ತಿಳಿಸಿದ್ದಾರೆ.

ಬಂದ್ ಬೇಡ ಎಂದು ಶಾಲಾ ಸಂಸ್ಥೆಗಳ ಒತ್ತಡ: "ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಮೂಲಕ ಕರೆ ಮಾಡಿದ್ದರು. ಸ್ಕ್ರೀನಿಂಗ್ ಕಮಿಟಿ ಆಗುವ ವೇಳೆ ಎಲ್ಲಾ ನಾಯಕರು ಸೇರಿ ಈ ನಿರ್ಧಾರ ಹೇಳಿದ್ದಾರೆ. ಹೀಗಾಗಿ ನಾಳೆ ಬಂದ್ ಇರುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಶಾಲಾ ಸಂಸ್ಥೆಗಳು ಬಂದ್ ಬೇಡ ಎಂದು ಒತ್ತಡ ಹೇರಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ನಾಯಕರು ಬಂದ್ ಮುಂದೂಡಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಸಭೆ ಇದೆ, ಮುಗಿದ ಬಳಿಕ ಯಾವ ರೀತಿ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಡಿಕೆಶಿ ಸೂಚನೆ ಮೇರೆಗೆ ಬಂದ್ ಹಿಂಪಡೆದಿದ್ದೇವೆ" ಎಂದರು.

"ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಸಂಘವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ. ನ್ಯಾಯಾಂಗದ ಪ್ರಕ್ರಿಯೆ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಸರ್ಕಾರದ ಬೆಂಬಲ ಇಲ್ಲದೆ ಒಂದೇ ದಿನದಲ್ಲಿ ಜಾಮೀನು ಸಿಗುವುದಿಲ್ಲ. ಪ್ರತಿಪಕ್ಷದವರಿಗೆ ಈ ರೀತಿ ಬೇಲ್ ಸಿಗಲ್ಲ. ಮಾಡಾಳ್​ಗೆ ಜಾಮೀನು ಸಿಗುವ ವಿಚಾರವಾಗಿ ಸರ್ಕಾರ ಶಾಮೀಲಾಗಿದೆ" ಎಂದು ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದರು.

ಸರ್ಕಾರದ ವಿರುದ್ಧ ರಾಮಲಿಂಗಾರೆಡ್ಡಿ ಆರೋಪ: "ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿ 8 ಕೋಟಿ ಸಿಕ್ಕಿದೆ, ಇದು ಎಲ್ಲರಿಗೂ ಗೊತ್ತಿದೆ. ಆದರೂ ಶಾಸಕರಿಗೆ ನಿನ್ನೆ ಬೇಲ್ ಕೂಡ ಸಿಕ್ಕಿದೆ. ಒಂದೇ ದಿನಕ್ಕೆ ಬೇಲ್ ಹೇಗೆ ಸಿಗುತ್ತೆ? ಸರ್ಕಾರದ ಮತ್ತು ಸರ್ಕಾರಿ ವಕೀಲರ ಬೆಂಬಲ ಸಿಕ್ಕಿದೆ ? ಶಾಸಕರಿಗೆ ಜಾಮೀನು ಕೊಡಿಸುವಲ್ಲಿ ಸರ್ಕಾರದ ಪಾತ್ರವಿದೆ. ಬಿಜೆಪಿ ಸರ್ಕಾರದ ನಾಲ್ಕು ವರ್ಷದ ಅನೇಕಭ್ರ ಷ್ಟಾಚಾರದ ಮುಖವಾಡವು ಹೊರಗೆ ಬಂದಿದೆ. ವಿವಿಧ ಭಾಗಗಳಲ್ಲಿ ಸರ್ಕಾರ ಅಕ್ರಮ ನಡೆದಿದೆ. ನಾನು ಮನೆಯಲ್ಲಿಯೇ ಇದ್ದೆ ಎಂದು ಮಾಡಾಳ್ ಅವರೇ ಹೇಳಿದ್ದಾರೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಎಷ್ಟು ನಿಷ್ಕ್ರಿಯವಾಗಿದೆ ಮತ್ತು ಪೊಲೀಸ್ ಇಲಾಖೆಯನ್ನು ನಿಷ್ಕ್ರಿಯ ಮಾಡಲಾಗಿದೆ ಎಂಬುದು ಇದರಿಂದ ತಿಳಿಯುತ್ತದೆ. ಇವರ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ವಿಧಾನ ಪರಿಷತ್​ ಸದಸ್ಯ ವಿಶ್ವನಾಥ್, ಗೂಳಿಹಟ್ಟಿ ಶೇಖರ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಅನೇಕ ಮಠಗಳ ಸ್ವಾಮೀಜಿಗಳೂ ಹೇಳಿದ್ದಾರೆ ಎಂದು ಅವರ ಹೇಳಿಕೆಗಳ ವಿಚಾರ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು" ಎಂದು ರಾಮಲಿಂಗಾರೆಡ್ಡಿ ಒತ್ತಾಯಿಸಿದರು.

ಡಿಕೆಶಿ ಹೇಳಿಕೆ : ದ್ವಿತೀಯ ಪಿಯುಸಿ ಪರೀಕ್ಷೆ ಸೇರಿ ರಾಜ್ಯಾದ್ಯಂತ ಶಾಲಾ, ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ. 9ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು. ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್​ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗುವ ಸಾಧ್ಯತೆ

Last Updated : Mar 8, 2023, 12:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.