ETV Bharat / state

ಇಂದು ಕಾಂಗ್ರೆಸ್ ಬೂತ್ ಮಟ್ಟದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ - ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

2023ರ ವಿಧಾನಸಭೆ ಚುನಾವಣೆಯನ್ನು ಅತ್ಯಂತ ಪ್ರಮುಖವಾಗಿಟ್ಟುಕೊಂಡು ತಳಮಟ್ಟದ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್ ಪಕ್ಷ ಇಂದು ಸದಸ್ಯತ್ವ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದೆ.

congress-booth-level-membership-registration-campaign-today
ಕಾಂಗ್ರೆಸ್ ಬೂತ್ ಮಟ್ಟದ ಸದಸ್ಯತ್ವ ನೋಂದಣಿ ಅಭಿಯಾನ
author img

By

Published : Dec 11, 2021, 6:06 AM IST

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯಾದ್ಯಂತ ಪ್ರತಿಯೊಂದು ಬೂತ್ ಮಟ್ಟದಲ್ಲಿ ಇಂದು ಏಕಕಾಲಕ್ಕೆ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ಸದಸ್ಯತ್ವ ನೊಂದಣಿಗೆ ಜೂಮ್ ವಿಡಿಯೋ ಸಂವಾದದ ಮೂಲಕ ಚಾಲನೆ ನೀಡಿ, ವೀಕ್ಷಿಸಲಿದ್ದಾರೆ.

ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಮುಖ್ಯಸ್ಥ ಮಧುಸೂಧನ್ ಮಿಸ್ತ್ರಿ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ಮೈಸೂರಿನಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಸುಮಾರು 2,000 ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯುವ ಈ ಅಭಿಯಾನದಲ್ಲಿ ಆಯಾ ಭಾಗದ ಪಕ್ಷದ ಮುಖಂಡರು ಭಾಗವಹಿಸುವರು.

2023ರ ವಿಧಾನಸಭೆ ಚುನಾವಣೆಯನ್ನು ಅತ್ಯಂತ ಪ್ರಮುಖವಾಗಿಟ್ಟುಕೊಂಡು ತಳಮಟ್ಟದ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್ ಪಕ್ಷ ಈ ಸದಸ್ಯತ್ವ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದೆ. ಸದಸ್ಯತ್ವ ನೋಂದಣಿಯಲ್ಲಿ ಉತ್ತಮ ಸಾಧನೆ ಮಾಡುವವರಿಗೆ ಪಕ್ಷದ ಪ್ರಮುಖ ಸ್ಥಾನಮಾನಗಳನ್ನು ನೀಡುವ ಭರವಸೆಯನ್ನು ಸಹ ನೀಡಲಾಗಿದೆ. ಮತ್ತೊಮ್ಮೆ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಕಾಂಗ್ರೆಸ್ 2013ರ ಮಾದರಿಯಲ್ಲೇ 2023ರಲ್ಲಿ ಅಧಿಕಾರಕ್ಕೆ ಬರಲು ಸಿದ್ಧತೆ ಕೈಗೊಂಡಿದೆ.

ಇದನ್ನೂ ಓದಿ: ತೆರಿಗೆ ಬಾಕಿ ಪ್ರಕರಣ: ಮಂತ್ರಿ ಮಾಲ್​ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯಾದ್ಯಂತ ಪ್ರತಿಯೊಂದು ಬೂತ್ ಮಟ್ಟದಲ್ಲಿ ಇಂದು ಏಕಕಾಲಕ್ಕೆ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ಸದಸ್ಯತ್ವ ನೊಂದಣಿಗೆ ಜೂಮ್ ವಿಡಿಯೋ ಸಂವಾದದ ಮೂಲಕ ಚಾಲನೆ ನೀಡಿ, ವೀಕ್ಷಿಸಲಿದ್ದಾರೆ.

ದೆಹಲಿಯಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಮುಖ್ಯಸ್ಥ ಮಧುಸೂಧನ್ ಮಿಸ್ತ್ರಿ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ಮೈಸೂರಿನಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಸುಮಾರು 2,000 ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯುವ ಈ ಅಭಿಯಾನದಲ್ಲಿ ಆಯಾ ಭಾಗದ ಪಕ್ಷದ ಮುಖಂಡರು ಭಾಗವಹಿಸುವರು.

2023ರ ವಿಧಾನಸಭೆ ಚುನಾವಣೆಯನ್ನು ಅತ್ಯಂತ ಪ್ರಮುಖವಾಗಿಟ್ಟುಕೊಂಡು ತಳಮಟ್ಟದ ಪಕ್ಷ ಸಂಘಟನೆಗೆ ಮುಂದಾಗಿರುವ ಕಾಂಗ್ರೆಸ್ ಪಕ್ಷ ಈ ಸದಸ್ಯತ್ವ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದೆ. ಸದಸ್ಯತ್ವ ನೋಂದಣಿಯಲ್ಲಿ ಉತ್ತಮ ಸಾಧನೆ ಮಾಡುವವರಿಗೆ ಪಕ್ಷದ ಪ್ರಮುಖ ಸ್ಥಾನಮಾನಗಳನ್ನು ನೀಡುವ ಭರವಸೆಯನ್ನು ಸಹ ನೀಡಲಾಗಿದೆ. ಮತ್ತೊಮ್ಮೆ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಕಾಂಗ್ರೆಸ್ 2013ರ ಮಾದರಿಯಲ್ಲೇ 2023ರಲ್ಲಿ ಅಧಿಕಾರಕ್ಕೆ ಬರಲು ಸಿದ್ಧತೆ ಕೈಗೊಂಡಿದೆ.

ಇದನ್ನೂ ಓದಿ: ತೆರಿಗೆ ಬಾಕಿ ಪ್ರಕರಣ: ಮಂತ್ರಿ ಮಾಲ್​ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.