ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ 6ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.
ಇಂದು ಬೆಳಗ್ಗೆ ಗೆಲ್ಲುವ ವಿಶ್ವಾಸದಿಂದ ಮಲ್ಯ ರಸ್ತೆಯಲ್ಲಿರುವ ಸೇಂಟ್ ಜೊಸೇಫ್ ಹೈಸ್ಕೂಲ್ನ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದರು. ಸುಮಾರು 11 ಗಂಟೆವರೆಗೂ ಮತ ಎಣಿಕೆ ಕೇಂದ್ರದಲ್ಲಿದ್ದ ಅವರು, ತಮಗೆ ಹಿನ್ನಡೆಯಾಗುತ್ತಿದ್ದಂತೆ ಬೇಸರದಿಂದ ಹೊರ ನಡೆದಿದ್ದಾರೆ.
ಇನ್ನು ಏಳನೇ ಸುತ್ತು ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್ 36,954, ಕಾಂಗ್ರೆಸ್ ಎಂ.ನಾರಾಯಣಸ್ವಾಮಿ 14,312 ಹಾಗೂ ಜೆಡಿಎಸ್ ಅಭ್ಯರ್ಥಿಗೆ 430 ಮತಗಳು ಸಿಕ್ಕಿವೆ.