ETV Bharat / state

ಆಸ್ತಿ ತೆರಿಗೆ ಪಾವತಿಸುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸಿ.. ದಿನೇಶ್ ಗುಂಡೂರಾವ್ ಪತ್ರ

author img

By

Published : Apr 24, 2021, 7:52 AM IST

ಜನರು ಕೋವಿಡ್ ಎರಡನೇ ಅಲೆಯ ಕಾರಣ ಕಳೆದ ಎರಡು ತಿಂಗಳಿಂದ ವ್ಯಾಪಾರ ವಹಿವಾಟು ಸಮರ್ಪಕವಾಗಿ ನಡೆಯದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಆಸ್ತಿ ತೆರಿಗೆ ಪಾವತಿಸಲು ನಿಗದಿಪಡಿಸಿರುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಖ್ಯ ಕಾರ್ಯದರ್ಶಿ ರವಿಕುಮಾರ್​ಗೆ ಪತ್ರ ಬರೆದಿದ್ದಾರೆ.

Congress leader Dinesh Gundurao letter to  Chief Secretary Ravikumar
ದಿನೇಶ್ ಗಂಡೂರಾವ್ ಪತ್ರ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸಲು ನಿಗದಿಪಡಿಸಿರುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸುವಂತೆ ಆದೇಶ ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಮುಖ್ಯ ಕಾರ್ಯದರ್ಶಿ ರವಿಕುಮಾರ್​ಗೆ ಪತ್ರ ಬರೆದಿದ್ದಾರೆ.

Congress leader Dinesh Gundurao letter to  Chief Secretary Ravikumar
ದಿನೇಶ್ ಗುಂಡೂರಾವ್ ಪತ್ರ

ಪತ್ರದಲ್ಲಿ ಬಿಬಿಎಂಪಿ ಆಸ್ತಿ ತೆರಿಗೆಯನ್ನು ಪಾವತಿಸಲು ಪ್ರತಿ ವರ್ಷದಂತೆ ಏಪ್ರಿಲ್ 30 ಕೊನೆಯ ದಿನಾಂಕವಾಗಿರುತ್ತದೆ. ಪ್ರತಿ ವರ್ಷ ಏಪ್ರಿಲ್ 30 ರೊಳಗೆ ಪಾವತಿಸುವವರಿಗೆ ಶೇ.5 ರಷ್ಟು ರಿಯಾಯಿತಿ ಸಹ ನೀಡಲಾಗುತ್ತಿರುತ್ತದೆ. ಆದರೆ ಕಳೆದ ವರ್ಷದಿಂದ ಕೋವಿಡ್ ಸೋಂಕಿನ ಕಾರಣ ಮಹಾನಗರದ ಎಲ್ಲ ವರ್ಗದ ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಿದ್ದು, ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುತ್ತಾರೆ. ಅಲ್ಲದೇ ಈಗ ಪ್ರಸ್ತುತ ಕೋವಿಡ್ ಎರಡನೇ ಅಲೆಯ ಕಾರಣ ಕಳೆದ ಎರಡು ತಿಂಗಳಿಂದಲೂ ಸಹ ವ್ಯಾಪಾರ ವಹಿವಾಟು ಸಮರ್ಪಕವಾಗಿ ನಡೆಯದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುತ್ತಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಓದಿ:ಸರ್ಕಾರಿ ಕೋಟಾದಡಿ ದಾಖಲಾದ್ರೂ ಪ್ಲಾಸ್ಮಾ, ರೆಮ್ಡಿಸಿವಿರ್ ಹೆಸರಲ್ಲಿ ಸೋಂಕಿತರಿಂದ ಹಣ ವಸೂಲಿ

ಇದರಿಂದ ಪ್ರತಿ ಪಾವತಿಸಬೇಕಾಗಿರುವ ಆಸ್ತಿ ತೆರಿಗೆಯನ್ನು ಪಾವತಿಸಲು ನಿಗದಿಪಡಿಸಲಾಗಿರುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸಿ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಬೇಕೆಂದು ಪತ್ರದ ಮೂಲಕ ಕೋರಿದ್ದಾರೆ.

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸಲು ನಿಗದಿಪಡಿಸಿರುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸುವಂತೆ ಆದೇಶ ನೀಡಬೇಕೆಂದು ಕೋರಿ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಮುಖ್ಯ ಕಾರ್ಯದರ್ಶಿ ರವಿಕುಮಾರ್​ಗೆ ಪತ್ರ ಬರೆದಿದ್ದಾರೆ.

Congress leader Dinesh Gundurao letter to  Chief Secretary Ravikumar
ದಿನೇಶ್ ಗುಂಡೂರಾವ್ ಪತ್ರ

ಪತ್ರದಲ್ಲಿ ಬಿಬಿಎಂಪಿ ಆಸ್ತಿ ತೆರಿಗೆಯನ್ನು ಪಾವತಿಸಲು ಪ್ರತಿ ವರ್ಷದಂತೆ ಏಪ್ರಿಲ್ 30 ಕೊನೆಯ ದಿನಾಂಕವಾಗಿರುತ್ತದೆ. ಪ್ರತಿ ವರ್ಷ ಏಪ್ರಿಲ್ 30 ರೊಳಗೆ ಪಾವತಿಸುವವರಿಗೆ ಶೇ.5 ರಷ್ಟು ರಿಯಾಯಿತಿ ಸಹ ನೀಡಲಾಗುತ್ತಿರುತ್ತದೆ. ಆದರೆ ಕಳೆದ ವರ್ಷದಿಂದ ಕೋವಿಡ್ ಸೋಂಕಿನ ಕಾರಣ ಮಹಾನಗರದ ಎಲ್ಲ ವರ್ಗದ ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಿದ್ದು, ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುತ್ತಾರೆ. ಅಲ್ಲದೇ ಈಗ ಪ್ರಸ್ತುತ ಕೋವಿಡ್ ಎರಡನೇ ಅಲೆಯ ಕಾರಣ ಕಳೆದ ಎರಡು ತಿಂಗಳಿಂದಲೂ ಸಹ ವ್ಯಾಪಾರ ವಹಿವಾಟು ಸಮರ್ಪಕವಾಗಿ ನಡೆಯದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುತ್ತಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಓದಿ:ಸರ್ಕಾರಿ ಕೋಟಾದಡಿ ದಾಖಲಾದ್ರೂ ಪ್ಲಾಸ್ಮಾ, ರೆಮ್ಡಿಸಿವಿರ್ ಹೆಸರಲ್ಲಿ ಸೋಂಕಿತರಿಂದ ಹಣ ವಸೂಲಿ

ಇದರಿಂದ ಪ್ರತಿ ಪಾವತಿಸಬೇಕಾಗಿರುವ ಆಸ್ತಿ ತೆರಿಗೆಯನ್ನು ಪಾವತಿಸಲು ನಿಗದಿಪಡಿಸಲಾಗಿರುವ ದಿನಾಂಕವನ್ನು ಮೂರು ತಿಂಗಳವರೆಗೆ ವಿಸ್ತರಿಸಿ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಬೇಕೆಂದು ಪತ್ರದ ಮೂಲಕ ಕೋರಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.