ETV Bharat / state

ಕುಮಾರಕೃಪಾ ಅತಿಥಿಗೃಹದತ್ತ ಕಾಂಗ್ರೆಸ್‌ ನಾಯಕರು.. ಸಿಎಂ ಜೊತೆ ಮಹತ್ವದ ಸಭೆ - undefined

ಇಂದು ಕುಮಾರಕೃಪಾ ಅಥಿತಿಗೃಹದಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದು, ಉಪಮುಖ್ಯಮಂತ್ರಿ ಡಾ .ಜಿ .ಪರಮೇಶ್ವರ್, ಗೃಹ ಸಚಿವ ಎಂಬಿ ಪಾಟೀಲ್, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಇದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಭಾಗವಹಿಸಿದ್ದಾರೆ.

ಬೆಂಗಳೂರು
author img

By

Published : Jul 14, 2019, 6:24 PM IST

ಬೆಂಗಳೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಬಿ.ನಾಗೇಂದ್ರ ಭೇಟಿ ಮಾಡಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿದ್ದು, ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸುತ್ತಿರುವ ನಾಯಕರು

ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಬಿಜೆಪಿ ನಿರಂತರವಾಗಿ ಬಿ.ನಾಗೇಂದ್ರ ಜತೆಗೆ ಸಂಪರ್ಕದಲ್ಲಿದ್ದಾರೆ. ಇವರನ್ನೂ ಕಳೆದುಕೊಳ್ಳಬಾರದೆಂಬ ಉದ್ದೇಶದಿಂದ ಸಿಎಂ ಇಂದು ಶಾಸಕ ಬಿ.ನಾಗೇಂದ್ರ ಭೇಟಿ ಮಾಡಿದ್ದಾರೆಂಬ ಮಾಹಿತಿ ಇದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಬೆಂಗಳೂರಿಗೆ ಮರಳಿದ್ದು, ಕೆಲವೇ ಸಮಯಗಳಲ್ಲಿ ಕುಮಾರಕೃಪ ಅತಿಥಿಗೃಹಕ್ಕೆ ಆಗಮಿಸಲಿದ್ದಾರೆ.

ಸಿಎಂ ಆಗಮನಕ್ಕೂ ಮುನ್ನ ಕುಮಾರಕೃಪ ಅತಿಥಿಗೃಹದಲ್ಲಿ ಸಚಿವ ಡಿಕೆಶಿ ಮಾತನಾಡಿ, ಎಂಟಿಬಿ ನಾಗರಾಜ್ ನಿನ್ನೆ ತಮ್ಮ ನೋವು, ಕಷ್ಟವನ್ನು ಹೇಳಿಕೊಂಡಿದ್ದಾರೆ. ಯಾರು ಯಾರು ಒತ್ತಡ ಹಾಕಿದ್ದಾರೆ ಎಂಬುದರ ಬಗ್ಗೆ ಹೇಳಿಕೊಂಡಿದ್ದಾರೆ. ನಾಳೆ ವಿಶ್ವಾಸಮತ ಹಾಕಲು ಬರುತ್ತಾರಾ ಎಂಬುದಕ್ಕೆ ಬರುತ್ತಾರೀ, ಯಾರಾದರೂ ಮೆಂಬರ್​ಶಿಪ್​ ಕಳೆದುಕೊಳ್ಳಲು ಬಯಸುತ್ತಾರಾ.. ಖಂಡಿತಾ ನಮಗೆ ವಿಶ್ವಾಸ ಇದೆ. ಯಾರು ಯಾರು ಒತ್ತಡ ಹಾಕಿದ್ದಾರೆ. ಯಾವೆಲ್ಲ ಸಮಸ್ಯೆಗಳಿವೆ, ಯಾವ ಇಲಾಖೆಯಿಂದ ಒತ್ತಡ ಬಂದಿದೆ ಎಂಬುದರ ಕುರಿತು ಹೇಳಿಕೊಂಡಿದ್ದಾರೆ. ಯಾವ ಒತ್ತಡ ಎನ್ನುವುದನ್ನೂ ಈಗ ಹೇಳೋದು ಬೇಡ ಎಂದರು.

ಸೋಮವಾರವೇ ವಿಶ್ವಾಸಮತ ಸಾಬೀತುಪಡಿಸಲಿ. ಬುಧವಾರದವರೆಗೆ ಯಾಕೆ ಕಾಯಬೇಕು ಎಂಬ ಬಿಎಸ್‌ವೈ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು‌ ಮೊದಲು ಬಿಸ್ನೆಸ್ ಅಡ್ವೈಸರಿ ಕಮಿಟಿ ಮೀಟಿಂಗ್​ಗೆ ಬರಲಿ. ಮೀಟಿಂಗ್​ಗೆ ಬಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರೂಲ್​ಬುಕ್​ನ ನೋಡಲಿ. ಹಿಂದೆ ಮೀಟಿಂಗ್‌ನ ಅವರು ಬಹಿಷ್ಕರಿಸಿದ್ದರು. ರೂಲ್ ಪುಸ್ತಕದ ಬಗ್ಗೆ ಅವರಿಗೆ ಗೌರವವಿಲ್ಲ. ಮೊದಲು ಅವರು ಕಾನೂನಿಗೆ ಗೌರವ ಕೊಡುವ ಕೆಲಸವನ್ನ ಬಿಜೆಪಿಯವರು ಮಾಡಲಿ ಎಂದರು.

ಬೆಂಗಳೂರು
ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿರುವ ಸಿದ್ದರಾಮಯ್ಯ

ನಾಯಕರ ಸಭೆ :

ಸದ್ಯ ಕುಮಾರಕೃಪ ಅತಿಥಿಗೃಹದಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಗೃಹ ಸಚಿವ ಎಂ ಬಿ ಪಾಟೀಲ್, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್‌ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದ್ದಾರೆ. ವೇಣುಗೋಪಾಲ್ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು
ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿರುವ ಮಲ್ಲಿಕಾರ್ಜುನ ಖರ್ಗೆ

ಸಿಎಂ ಆಗಮನ:
ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಸಹ ಕುಮಾರಕೃಪಾದಲ್ಲಿ ನಡೆಯಲಿರುವ ಸಭೆಗೆ ಆಗಮಿಸಿದ್ದು, ಎಂಟಿಬಿ ನಾಗರಾಜ್ ವಾಪಸ್ ತೆರಳಿದ ನಂತರವೂ ಸರ್ಕಾರವನ್ನು ಉಳಿಸಿಕೊಳ್ಳುವ ಹಾಗೂ ವಿಶ್ವಾಸ ಮತ ಗಳಿಸುವ ವಿಚಾರದಲ್ಲಿ ಈಗಲೂ ಕಾಂಗ್ರೆಸ್, ಜೆಡಿಎಸ್ ನಾಯಕರು ವಿಶ್ವಾಸವನ್ನು ಹೊಂದಿರುವುದು ಅಚ್ಚರಿ ಮೂಡಿಸುತ್ತಿದೆ.

ಬೆಂಗಳೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಬಿ.ನಾಗೇಂದ್ರ ಭೇಟಿ ಮಾಡಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿದ್ದು, ನಾಯಕರ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸುತ್ತಿರುವ ನಾಯಕರು

ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಬಿಜೆಪಿ ನಿರಂತರವಾಗಿ ಬಿ.ನಾಗೇಂದ್ರ ಜತೆಗೆ ಸಂಪರ್ಕದಲ್ಲಿದ್ದಾರೆ. ಇವರನ್ನೂ ಕಳೆದುಕೊಳ್ಳಬಾರದೆಂಬ ಉದ್ದೇಶದಿಂದ ಸಿಎಂ ಇಂದು ಶಾಸಕ ಬಿ.ನಾಗೇಂದ್ರ ಭೇಟಿ ಮಾಡಿದ್ದಾರೆಂಬ ಮಾಹಿತಿ ಇದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಬೆಂಗಳೂರಿಗೆ ಮರಳಿದ್ದು, ಕೆಲವೇ ಸಮಯಗಳಲ್ಲಿ ಕುಮಾರಕೃಪ ಅತಿಥಿಗೃಹಕ್ಕೆ ಆಗಮಿಸಲಿದ್ದಾರೆ.

ಸಿಎಂ ಆಗಮನಕ್ಕೂ ಮುನ್ನ ಕುಮಾರಕೃಪ ಅತಿಥಿಗೃಹದಲ್ಲಿ ಸಚಿವ ಡಿಕೆಶಿ ಮಾತನಾಡಿ, ಎಂಟಿಬಿ ನಾಗರಾಜ್ ನಿನ್ನೆ ತಮ್ಮ ನೋವು, ಕಷ್ಟವನ್ನು ಹೇಳಿಕೊಂಡಿದ್ದಾರೆ. ಯಾರು ಯಾರು ಒತ್ತಡ ಹಾಕಿದ್ದಾರೆ ಎಂಬುದರ ಬಗ್ಗೆ ಹೇಳಿಕೊಂಡಿದ್ದಾರೆ. ನಾಳೆ ವಿಶ್ವಾಸಮತ ಹಾಕಲು ಬರುತ್ತಾರಾ ಎಂಬುದಕ್ಕೆ ಬರುತ್ತಾರೀ, ಯಾರಾದರೂ ಮೆಂಬರ್​ಶಿಪ್​ ಕಳೆದುಕೊಳ್ಳಲು ಬಯಸುತ್ತಾರಾ.. ಖಂಡಿತಾ ನಮಗೆ ವಿಶ್ವಾಸ ಇದೆ. ಯಾರು ಯಾರು ಒತ್ತಡ ಹಾಕಿದ್ದಾರೆ. ಯಾವೆಲ್ಲ ಸಮಸ್ಯೆಗಳಿವೆ, ಯಾವ ಇಲಾಖೆಯಿಂದ ಒತ್ತಡ ಬಂದಿದೆ ಎಂಬುದರ ಕುರಿತು ಹೇಳಿಕೊಂಡಿದ್ದಾರೆ. ಯಾವ ಒತ್ತಡ ಎನ್ನುವುದನ್ನೂ ಈಗ ಹೇಳೋದು ಬೇಡ ಎಂದರು.

ಸೋಮವಾರವೇ ವಿಶ್ವಾಸಮತ ಸಾಬೀತುಪಡಿಸಲಿ. ಬುಧವಾರದವರೆಗೆ ಯಾಕೆ ಕಾಯಬೇಕು ಎಂಬ ಬಿಎಸ್‌ವೈ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು‌ ಮೊದಲು ಬಿಸ್ನೆಸ್ ಅಡ್ವೈಸರಿ ಕಮಿಟಿ ಮೀಟಿಂಗ್​ಗೆ ಬರಲಿ. ಮೀಟಿಂಗ್​ಗೆ ಬಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರೂಲ್​ಬುಕ್​ನ ನೋಡಲಿ. ಹಿಂದೆ ಮೀಟಿಂಗ್‌ನ ಅವರು ಬಹಿಷ್ಕರಿಸಿದ್ದರು. ರೂಲ್ ಪುಸ್ತಕದ ಬಗ್ಗೆ ಅವರಿಗೆ ಗೌರವವಿಲ್ಲ. ಮೊದಲು ಅವರು ಕಾನೂನಿಗೆ ಗೌರವ ಕೊಡುವ ಕೆಲಸವನ್ನ ಬಿಜೆಪಿಯವರು ಮಾಡಲಿ ಎಂದರು.

ಬೆಂಗಳೂರು
ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿರುವ ಸಿದ್ದರಾಮಯ್ಯ

ನಾಯಕರ ಸಭೆ :

ಸದ್ಯ ಕುಮಾರಕೃಪ ಅತಿಥಿಗೃಹದಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಗೃಹ ಸಚಿವ ಎಂ ಬಿ ಪಾಟೀಲ್, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್‌ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದ್ದಾರೆ. ವೇಣುಗೋಪಾಲ್ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು
ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿರುವ ಮಲ್ಲಿಕಾರ್ಜುನ ಖರ್ಗೆ

ಸಿಎಂ ಆಗಮನ:
ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಸಹ ಕುಮಾರಕೃಪಾದಲ್ಲಿ ನಡೆಯಲಿರುವ ಸಭೆಗೆ ಆಗಮಿಸಿದ್ದು, ಎಂಟಿಬಿ ನಾಗರಾಜ್ ವಾಪಸ್ ತೆರಳಿದ ನಂತರವೂ ಸರ್ಕಾರವನ್ನು ಉಳಿಸಿಕೊಳ್ಳುವ ಹಾಗೂ ವಿಶ್ವಾಸ ಮತ ಗಳಿಸುವ ವಿಚಾರದಲ್ಲಿ ಈಗಲೂ ಕಾಂಗ್ರೆಸ್, ಜೆಡಿಎಸ್ ನಾಯಕರು ವಿಶ್ವಾಸವನ್ನು ಹೊಂದಿರುವುದು ಅಚ್ಚರಿ ಮೂಡಿಸುತ್ತಿದೆ.

Intro:newsBody:ಕುಮಾರ ಕೃಪಾ ಅತಿಥಿಗೃಹ ದತ್ತ ಕೈ ನಾಯಕರ ಆಗಮನ, ಸಿಎಂ ಜತೆ ಮಹತ್ವದ ಸಭೆ


ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ನಾಗೇಂದ್ರ ಭೇಟಿಗೆ ತೆರಳುವ ಮಾರ್ಗದಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿ ತೆರಳಿದರು.
ಮಾಜಿ ಪ್ರಧಾನಿ ದೇವೇಗೌಡರ ಪದ್ಮನಾಭನಗರದ ನಿವಾಸದಿಂದ ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಅವರು ಭೇಟಿ ನೀಡಿದರು. ಇವರ ಆಗಮನದ ನಿರೀಕ್ಷೆ ಹಿನ್ನೆಲೆ ಸಚಿವ ಡಿಕೆ ಶಿವಕುಮಾರ್ ಇಲ್ಲಿ ಆಗಮಿಸಿ ಕೆಲ ಹೊತ್ತು ಕಾದು ನಂತರ ಸಿಎಂ ಜೊತೆ ಹೆಬ್ಬಾಳದತ್ತ ಪ್ರಯಾಣ ಬೆಳೆಸಿದರು.
ಸಿಎಂ ಎಚ್.ಡಿ. ಕುಮಾರಸ್ವಾಮಿ ಕೂಡ ಸಭೆಗೆ ಆಗಮಿಸುವ ಸಾಧ್ಯತೆ ಇದೆ. ಸಾಲು ಸಾಲು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಬಿಜೆಪಿ ನಿರಂತರವಾಗಿ ನಾಗೇಂದ್ರ ಸಂಪರ್ಕದಲ್ಲಿದ್ದು ಇವರನ್ನು ಕೂಡ ಕಳೆದುಕೊಳ್ಳಬಾರದು ಎಂಬ ಉದ್ದೇಶದಿಂದ ಸಿಎಂ ಭೇಟಿ ಮಾಡಿದ್ದಾರೆ ಎಂಬ ಮಾಹಿತಿ ಇದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಕೆಲ ನಿಮಿಷಗಳ ಮಟ್ಟಿಗೆ ಇಲ್ಲಿಗೆ ಭೇಟಿ ನೀಡಿದ್ದರು. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಬೆಂಗಳೂರಿಗೆ ಮರಳಿದ್ದು ಕೆಲವು ಸಮಯಗಳಲ್ಲಿ ಕುಮಾರ ಕೃಪ ಅತಿಥಿಗೃಹಕ್ಕೆ ಆಗಮಿಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ನಿವಾಸದಲ್ಲಿ ಇದು ಸಂಜೆಯ ನಂತರ ಇಲ್ಲಿ ಸಭೆ ಸೇರುವ ಸಾಧ್ಯತೆ ಇದೆ.
ಸಿಎಂ ಆಗಮನಕ್ಕೂ ಮುನ್ನ ಕುಮಾರಕೃಪ ಅತಿಥಿಗೃಹದಲ್ಲಿ ಮಾತನಾಡಿದ ಸಚಿವ ಡಿಕೆ ಶಿವಕುಮಾರ್, ಎಂಟಿಬಿ ನಾಗರಾಜ್ ನಿನ್ನೆ ತಮ್ಮ‌ ನೋವನ್ನು, ಕಷ್ಟವನ್ನು ಹೇಳಿಕೊಂಡಿದ್ದಾರೆ. ಯಾರ್ಯಾರ ಒತ್ತಡ ಅನ್ನೋದನ್ನು ಹೇಳಿಕೊಂಡಿದ್ದಾರೆ. ಯಾವ ಒತ್ತಡ ಅನ್ನೋದನ್ನ ಹೇಳೋದು ಈಗ ಬೇಡ ಎಂದರು.
ಸೋಮವಾರವೇ ವಿಶ್ವಾಸಮತ ಸಾಬೀತು ಪಡಿಸಬೇಕು ಎಂಬ ಬಿಎಸ್ ವೈ ಹೇಳಿಕೆ ಹಿನ್ನೆಲೆ, ಅವರು‌ ಮೊದಲು ಬಿಸ್ನೆಸ್ ಅಡ್ವೈಸರಿ ಕಮಿಟಿ ಮೀಟಿಂಗ್ ಗೆ ಬರಲಿ. ಮೀಟಿಂಗ್ ಗೆ ಬಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರೂಲ್ ಬುಕ್ ನ ನೋಡಲಿ. ಹಿಂದೆ ಮೀಟಿಂಗ್ ಅನ್ನು ಅವರು ಬಹಿಷ್ಕರಿಸಿದ್ದರು. ರೂಲ್ ಪುಸ್ತಕದ ಬಗ್ಗೆ ಅವರಿಗೆ ಗೌರವವಿಲ್ಲ. ಮೊದಲು ಅವರು ಕಾನೂನಿಗೆ ಗೌರವ ಕೊಡುವ ಕೆಲಸವನ್ನ ಬಿಜೆಪಿಯವರು ಮಾಡಲಿ ಎಂದರು.
ನಾಯಕರ ಸಭೆ
ಸದ್ಯ ಕುಮಾರಕೃಪ ಅತಿಥಿಗೃಹದಲ್ಲಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಗೃಹ ಸಚಿವ ಎಂಬಿ ಪಾಟೀಲ್, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಂಕ ಖರ್ಗೆ ಇದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಮಿಸಿದ್ದಾರೆ.
ಸಿಎಂ ಜೊತೆ ಖಾಸಗಿ ಆಸ್ಪತ್ರೆಗೆ ತೆರಳಿರುವ ಸಚಿವ ಡಿಕೆ ಶಿವಕುಮಾರ್ ಕೂಡ ಆಗಮಿಸಲಿದ್ದು, ವೇಣುಗೋಪಾಲ್ ಆಗಮನದ ನಂತರ ಮಹತ್ವದ ಸಭೆ ನಡೆಯಲಿದೆ.
ಸಿಎಂ ಆಗಮನ
ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಹ ಕುಮಾರಕೃಪಾ ದಲ್ಲಿ ನಡೆಯಲಿರುವ ಸಭೆಗೆ ಆಗಮಿಸಿದ್ದಾರೆ. ಎಂಟಿಬಿ ನಾಗರಾಜ್ ವಾಪಸ್ ತೆರಳಿದ ನಂತರವೂ ಸರ್ಕಾರವನ್ನು ಉಳಿಸಿಕೊಳ್ಳುವ ಹಾಗೂ ವಿಶ್ವಾಸ ಮತ ಗಳಿಸುವ ವಿಚಾರದಲ್ಲಿ ಈಗಲೂ ಕಾಂಗ್ರೆಸ್, ಜೆಡಿಎಸ್ ನಾಯಕರು ವಿಶ್ವಾಸವನ್ನು ಹೊಂದಿರುವುದು ಅಚ್ಚರಿ ಮೂಡಿಸುತ್ತಿದೆ.Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.